Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ

Bengaluru City

ಇಡಿ ವಿಚಾರಣೆಗೆ ಡಿಕೆಶಿ ತಾಯಿ ಗೈರು – ಬೆಂಗ್ಳೂರಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ

Public TV
Last updated: October 15, 2019 12:05 pm
Public TV
Share
4 Min Read
DK SHIVAKUMAR copy
SHARE

ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಡಿ.ಕೆ.ಶಿವಕುಮಾರ್ ತಾಯಿ ಹಾಗೂ ಪತ್ನಿಗೆ ಸಮನ್ಸ್ ನೀಡಿತ್ತು. ಆದರೆ ವಿಚಾರಣೆಗೆ ಅತ್ತೆ ಗೈರಾಗಿದ್ದು, ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಅತ್ತೆ, ಸೊಸೆ ಮನವಿ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಇಡಿ ಅಧಿಕಾರಿಗಳಿಗೆ ಈ ಕುರಿತು ಮನವಿ ಮಾಡಿದ್ದು, ಅನಾರೋಗ್ಯದ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪತ್ರ ಬರೆದಿದ್ದಾರೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಗೌರಮ್ಮಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಅನಾರೋಗ್ಯ ಹಿನ್ನೆಲೆ ದೆಹಲಿಗೆ ಆಗಮಿಸಲು ಸಾಧ್ಯವಿಲ್ಲ ಎಂದು ಗೌರಮ್ಮ ಅವರು ಸಮನ್ಸ್ ಗೆ ಉತ್ತರ ನೀಡಿದ್ದಾರೆ. ಅಲ್ಲದೆ, ಅನಾರೋಗ್ಯದ ಕಾರಣ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.

dkshi mother

ಡಿ.ಕೆ.ಶಿವಕುಮಾರ್ ಪತ್ನಿಯಿಂದಲೂ ಇದೇ ರೀತಿ ಮನವಿ ಮಾಡಲಾಗಿದ್ದು, ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಅಕ್ಟೋಬರ್ 17ಕ್ಕೆ ವಿಚಾರಣೆಗೆ ಹಾಜರಾಗುವಂತೆ ಉಷಾ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಇದೀಗ ಸಮನ್ಸ್ ಗೆ ಗೌರಮ್ಮ ಹಾಗೂ ಉಷಾ ಅವರು ಉತ್ತರಿಸಿದ್ದು, ಈ ಕುರಿತು ಇಡಿ ಅಧಿಕಾರಿಗಳು ಇನ್ನು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಅಕ್ರಮ ಹಣ ವರ್ಗಾವಣೆ ಪ್ರರಕಣದಲ್ಲಿ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಮತ್ತಷ್ಟು ವಿಚಾರಣೆಗೆ ನಡೆಸಿರುವ ಇಡಿ ಡಿಕೆಶಿ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಡಿಕೆ ಶಿವಕುಮಾರ್ ಅವರ ಕುಟುಂಬವನ್ನು ಬಿಟ್ಟು ಬಿಡದಂತೆ ಕಾಡುತ್ತಿರುವ ಇಡಿ ಅಧಿಕಾರಿಗಳು ನಾಳೆಯೇ ವಿಚಾರಣೆ ಹಾಜರಾಗುವಂತೆ ಸೋಮವಾರ ತಾಯಿ ಗೌರಮ್ಮ ಅವರಿಗೆ ಸೂಚಿಸಿದ್ದರು. ಉಷಾ ಅವರಿಗೆ ನೀಡಲಾಗಿರುವ ನೋಟಿಸ್‍ನಲ್ಲಿ ಗುರುವಾರ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಲು ಕುಟುಂಬ ಸದಸ್ಯರ ನಡುವೆ ನಡೆದಿರುವ ಹಣದ ವ್ಯವಹಾರವೇ ಕಾರಣ ಎನ್ನಲಾಗಿದ್ದು, ತಾಯಿ-ಮಗನಿಗೆ, ಮಗ-ತಾಯಿಗೆ, ಪತಿ-ಪತ್ನಿಗೆ, ಮಾವನಿಂದ ಸೊಸೆಗೆ ಸಾಲದ ವ್ಯವಹಾರ ನಡೆದಿರುವ ಕುರಿತು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

dk shivakumar mother gowramma 2

ಅಜ್ಜಿ-ಮೊಮ್ಮಗಳ ವ್ಯವಹಾರ: ಡಿಕೆಶಿ ಕುಟುಂಬದಲ್ಲಿ ನಡೆದಿರುವ ಹಣಕಾಸಿನ ವ್ಯವಹಾರ ಬಗ್ಗೆ ಇಡಿ ಅಧಿಕಾರಿಗಳು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದು, ಡಿಕೆಶಿ ತಾಯಿ ಗೌರಮ್ಮ ಅವರು ಮೊಮ್ಮಗಳ ನಡುವೆ ಕೋಟಿ ರೂ. ವ್ಯವಹಾರ ನಡೆದಿದೆ. ಮೊದಲಿಗೆ ಮೊಮ್ಮಗಳು ಐಶ್ವರ್ಯ ಅವರ ಖಾತೆಗೆ 2018 ಜೂನ್ ತಿಂಗಳಿನಲ್ಲಿ ಅಜ್ಜಿ ಗೌರಮ್ಮ ಅವರು 3 ಕೋಟಿ ರೂ.ಗಳನ್ನು ಜಮೆ ಮಾಡಿದ್ದಾರೆ. ಅಲ್ಲದೇ ಐಶ್ವರ್ಯಾ ಹೆಸರಿಗೆ 2001 ರಲ್ಲಿ ಉತ್ತರಹಳ್ಳಿಯಲ್ಲಿದ್ದ 3 ಎಕ್ರೆ ಭೂಮಿಯನ್ನು ಗಿಫ್ಟ್ ನೀಡಿ ಬರೆದುಕೊಟ್ಟಿದ್ದರು. ಆ ಬಳಿಕ 2002ರಲ್ಲಿ ಹೊಸಕೆರೆಹಳ್ಳಿಯ 3 ಎಕರೆ ಭೂಮಿಯನ್ನು ಗಿಫ್ಟ್ ನೀಡಿದ್ದರು. ಇದರ ನಡುವೆಯೇ ಐಶ್ವರ್ಯಾಗೆ ಮೂರು ನಿವೇಶನಗಳನ್ನು ಗೌರಮ್ಮ ನೀಡಿದ್ದರು. ಒಟ್ಟು 193 ಕೋಟಿ ರೂ.ಗಳನ್ನು ಐಶ್ವರ್ಯಾ ಅವರ ಖಾತೆಗೆ ಜಮೆ ಮಾಡಿದ್ದರು.

ಅಮ್ಮ-ಮಕ್ಕಳ ನಡುವಿನ ವ್ಯವಹಾರ: ಮೊಮ್ಮಗಳಿಗೆ ಭೂಮಿ ಹಾಗೂ ಹಣವನ್ನು ನೀಡಿದ್ದ ಗೌರಮ್ಮ ಅವರು ಪುತ್ರ ಡಿಕೆ ಶಿವಕುಮಾರ್ ಅವರಿಂದ ಎರಡು ಹಂತದಲ್ಲಿ 22.11 ಕೋಟಿ ರೂ. ಹಾಗೂ 15 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ ಮತ್ತೆ ಡಿಕೆಶಿ ಅವರಿಗೆ 35 ಲಕ್ಷ ರೂ. ಗಳನ್ನು ಗೌರಮ್ಮ ಸಾಲ ನೀಡಿದ್ದಾರೆ. ಅಲ್ಲದೇ ಮತ್ತೊಬ್ಬ ಪುತ್ರ ಡಿಕೆ ಸುರೇಶ್‍ರಿಂದ ಗೌರಮ್ಮ ಅವರಿಗೆ 4.89 ಕೋಟಿ ರೂ. ಸಾಲ ನೀಡಲಾಗಿದೆ.

DKSHI Daughter Aishwarya Shivakumar 2 copy

ಬೇನಾಮಿ ಆಸ್ತಿ ತನಿಖೆ: ಕುಟುಂಬದ ಸದಸ್ಯರ ನಡುವೆಯೇ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸಿದೆ. ಅಲ್ಲದೇ ಇಡಿ ಅಧಿಕಾರಿಗಳಿಗೆ ಗೌರಮ್ಮರ ಹೆಸರಲ್ಲಿ 273 ಕೋಟಿ ರೂ. ಬೇನಾಮಿ ಆಸ್ತಿ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಡಿಕೆಶಿ, ಡಿಕೆ ಸುರೇಶ್, ಗೌರಮ್ಮ ನಡುವೆ ಒಟ್ಟು 43 ಕೋ. ರೂ. ಸಾಲ ವ್ಯವಹಾರ ನಡೆದಿದೆ. 2005ರಲ್ಲಿ ಹೊಸಕೆರೆಹಳ್ಳಿಯಲ್ಲಿ 1 ಕೋಟಿ ರೂ. ಗಳಿಗೆ 4.9 ಗುಂಟೆ ಜಮೀನನ್ನು ಗೌರಮ್ಮ ಹೆಸರಲ್ಲಿ ಖರೀದಿ ಮಾಡಲಾಗಿದ್ದು, ಆದರೆ ಆದಾದ 2ನೇ ವರ್ಷದಲ್ಲಿ ಅಂದರೆ 2007ರಲ್ಲಿ ಇದೇ ಜಮೀನನ್ನು 11 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಉಳಿದಂತೆ ಗೌರಮ್ಮ ಅವರ ಹೆಸರಿನಲ್ಲಿ ಯಲಹಂಕದಲ್ಲಿ 20 ಎಕರೆ 9 ಗುಂಟೆ ಜಮೀನು, ಉತ್ತರಹಳ್ಳಿಯಲ್ಲಿ 1.7 ಗುಂಟೆ ಜಮೀನು, ಕನಕಪುರದಲ್ಲಿ 3 ಕಲ್ಲಿನ ಕ್ವಾರಿ, 23 ಗ್ರಾನೈಟ್ ಬ್ಯುಸಿನೆಸ್ ಸಂಸ್ಥೆಗಳಿಗೆ.

ಡಿಕೆಶಿ ಪತ್ನಿಗೆ ಸಮನ್ಸ್ ಯಾಕೆ?
ಮೊಮ್ಮಗಳು ಹಾಗೂ ಇಬ್ಬರ ಪುತ್ರರ ನಡುವೆ ತಾಯಿ ಗೌರಮ್ಮ ಅವರು ನಡೆಸಿರುವ ವ್ಯವಹಾರದಂತೆಯೇ ಡಿಕೆಶಿ ಪತ್ನಿ ಉಷಾ ಅವರ ಹೆಸರಿನಲ್ಲೂ ಹಣದ ವ್ಯವಹಾರ ನಡೆದಿದೆ. ಪತಿ ಡಿಕೆ ಶಿವಕುಮಾರ್ ಅವರಿಗೆ ಪತ್ನಿ ಉಷಾ ಅವರು 2.60 ಕೋಟಿ ರೂ. ಸಾಲ ನೀಡಿದ್ದಾರೆ. ಮಾವ ಕೆಂಪೇಗೌಡರಿಂದ 5.42 ಕೋಟಿ ರೂ. ಹಾಗೂ ಅತ್ತೆ ಗೌರಮ್ಮರಿಂದ 15.86 ಕೋಟಿ ಸಾಲ ಪಡೆದಿದ್ದಾರೆ.

dk shivakumar it raid 9

ಉಳಿದಂತೆ ಪುತ್ರಿ ಐಶ್ವರ್ಯಾ ಅವರಿಗೆ 2.70 ಕೋಟಿ ರೂ. ಹಾಗೂ ಪತಿಯ ಸಹೋದರ ಡಿಕೆ ಸುರೇಶ್‍ಗೆ 11 ಕೋಟಿ ಸಾಲ ನೀಡಿದ್ದಾರೆ. ಅಲ್ಲದೇ 13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಖರೀದಿಯನ್ನು ಉಷಾ ಅವರು ಮಾಡಿದ್ದು, ಶ್ರೀರಾಮ್ ಪ್ರಾಪರ್ಟೀಸ್‍ನಿಂದ ದಾಖಲೆ ಇಲ್ಲದ 5 ಕೋಟಿ ರೂ. ಹಣವನ್ನು ಸ್ವೀಕಾರ ಮಾಡಿದ್ದಾರೆ. ಶೋಭಾ ಡೆವಲಪರ್ಸ್, ಇಂದ್ರಪ್ರಸ್ತ ಡೆವಲಪರ್ಸ್ ನಲ್ಲಿ ಶೇ.40ರಷ್ಟು ಷೇರು ಖರೀದಿ ಸೇರಿದಂತೆ ಸಲಾರ್ಪುರಿಯಾ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಪಾಲು ಹೊಂದಿದ್ದಾರೆ. ಉಳಿದಂತೆ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಮನೆ ನಿರ್ಮಾಣಕ್ಕೆ ಫೆಡರಲ್ ಬ್ಯಾಂಕ್‍ನಿಂದ 7.61 ಕೋಟಿ ರೂ. ಹಾಗೂ ಆರ್.ಟಿ.ನಗರ ಫೆಡರಲ್ ಬ್ಯಾಂಕ್‍ನಲ್ಲಿ 4 ಕೋಟಿ 25 ಲಕ್ಷ ಮನೆ ಸಾಲ. ಶೋಭಾ ಡೆವಲಪರ್ಸ್‍ನಿಂದ 8.48 ಕೋಟಿ ರೂ.ಗಳನ್ನು ಉಷಾ ಅವರು ಸಾಲ ಪಡೆದಿದ್ದಾರೆ. ಈ ಹಣಕಾಸಿನ ವ್ಯವಹಾರ ಬಗ್ಗೆಯೂ ಇಡಿ ಅಧಿಕಾರಿಗಳು ವಿಚಾರಣೆ ವೇಳೆ ಮಾಹಿತಿ ಪಡೆಯುವ ಸಾಧ್ಯತೆ ಇದೆ.

TAGGED:DK ShivakumarEDGaurammaInquiryPublic TVsummonsushaಇಂಡಿಉಷಾಗೌರಮ್ಮಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿವಿಚಾರಣೆಸಮನ್ಸ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
2 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
2 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
2 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
2 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?