Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನರಭಕ್ಷಕ ಹುಲಿ ಸೆರೆ ಸಿಕ್ಕಿದ್ದಕ್ಕೆ ಹರಕೆ ತೀರಿಸಿದ ಅರಣ್ಯ ಇಲಾಖೆ ಸಿಬ್ಬಂದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ನರಭಕ್ಷಕ ಹುಲಿ ಸೆರೆ ಸಿಕ್ಕಿದ್ದಕ್ಕೆ ಹರಕೆ ತೀರಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Chamarajanagar

ನರಭಕ್ಷಕ ಹುಲಿ ಸೆರೆ ಸಿಕ್ಕಿದ್ದಕ್ಕೆ ಹರಕೆ ತೀರಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
Last updated: October 15, 2019 5:55 pm
Public TV
Share
3 Min Read
klr tiger pooja
SHARE

ಚಾಮರಾಜನಗರ: ನರಭಕ್ಷಕ ಹುಲಿ ಬಂಡಿಪುರದಲ್ಲಿ ಸೆರೆ ಸಿಕ್ಕ ಹಿನ್ನಲೆ ಅರಣ್ಯ ಇಲಾಖೆ ಹಾಗೂ ಸುತ್ತಲಿನ ಗ್ರಾಮಸ್ಥರು ಹುಂಡೀಪುರದ ಮಾಳಿಗಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ.

ಹುಲಿ ಸೆರೆ ಸಿಕ್ಕರೆ ವಿಶೇಷ ಪೂಜೆ ಸಲ್ಲಿಸುವುದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹರಕೆ ಹೊತ್ತುಕೊಂಡಿದ್ದರು. ಅದರಂತೆ ಇಂದು ಹುಂಡೀಪುರದ ಮಾಳಿಗಮ್ಮನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹುಲಿ ಸೆರೆಯಾದ ಎರಡು ದಿನಗಳ ನಂತರ ದೇವಿಗೆ ಪೂಜೆ ಸಲ್ಲಿಸಿದ್ದು, ಪ್ರತಿ ಮಂಗಳವಾರ ಪೂಜೆ ಸಲ್ಲಿಸಲು ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ನಿರ್ಧರಿಸಿದ್ದಾರೆ. ಅರಣ್ಯ ಇಲಾಖೆಯ ಪೂಜೆಗೆ ಗ್ರಾಮಸ್ಥರು ಸಹ ಸಾಥ್ ನೀಡುತ್ತಿದ್ದಾರೆ.

vlcsnap 2019 10 15 17h45m59s026 e1571142108783

ವಿಶೇಷ ಪೂಜೆಗಾಗಿ ಗ್ರಾಮಸ್ಥರು ಪ್ರತಿ ಮನೆಯಿಂದ ಚಂದಾ ಎತ್ತಿದ್ದು, ಹುಂಡಿಪುರ, ಚೌಡಹಳ್ಳಿ, ಹುಲ್ಲೇಪುರ ಮತ್ತು ಶಿವಪುರ ಗ್ರಾಮಸ್ಥರು ವಿಜೃಂಭಣೆಯಿಂದ ಪೂಜೆ ನಡೆಸಿದ್ದಾರೆ. ಪೂಜೆಯ ಅಂಗವಾಗಿ ಸಾವಿರಾರು ಮಂದಿಗೆ ಅನ್ನ ಸಂತರ್ಪಣೆ ಮಾಡುತ್ತಿದ್ದಾರೆ. ವಿಶೇಷವೆಂದರೆ ಹರಕೆ ಹೊತ್ತ ಮರು ದಿನವೇ ಭಾನುವಾರ ಸಂಜೆ ಹುಲಿ ಸೆರೆಯಾಗಿತ್ತು. ಹರಕೆ ಹೊತ್ತ ಕಾರಣದಿಂದಲೇ ಹುಲಿ ಸೆರೆಯಾಗಿದೆ ಎಂದು ಭಾವಿಸಿ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.

ಸೆರೆಯಾಗಿದ್ದು ಹೇಗೆ?
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ನರಹಂತಕನ ದಾಳಿಯಿಂದ ಚೌಡಹಳ್ಳಿ ಗ್ರಾಮದ ಶಿವಮಾದಯ್ಯ ಮತ್ತು ಶಿವಮಾದಪ್ಪ ಎಂಬುವರು ಬಲಿಯಾಗಿದ್ದರು. ಎಷ್ಟೇ ಕಸರತ್ತು ನಡೆಸಿದರೂ ಸಹ ಹುಲಿ ಸೆರೆ ಸಿಕ್ಕಿರಲಿಲ್ಲ, ಕೊನೆಗೆ ಹರಸಾಹಸ ಪಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದರು.

vlcsnap 2019 10 15 17h45m37s684

ಬಂಡೀಪುರ ಅರಣ್ಯ ವ್ಯಾಪ್ತಿಯ ಮಗುವಿನಳ್ಳಿ ಬಳಿಯ ಸಿದ್ದಿಕಿ ಜಮೀನಿನಲ್ಲಿ ಭಾನುವಾರ ನರಭಕ್ಷಕ ಹುಲಿ ಕಾಣಿಸಿಕೊಂಡಿತ್ತು. ತಕ್ಷಣವೇ ಅಭಿಮನ್ಯು, ಜಯಪ್ರಕಾಶ್ ಗೋಪಾಲಸ್ವಾಮಿ ನೇತೃತ್ವದ ಸಾಕಾಣೆ ಆನೆ ತಂಡಗಳ ಸಹಾಯದಿಂದ ಅರಣ್ಯ ಇಲಾಖೆ ಹಾಗೂ ವೈದ್ಯರು ಸಿದ್ದಿಕಿ ಜಮೀನನ್ನು ಸುತ್ತುವರಿದಿದ್ದರು. ಈ ವೇಳೆ ಹುಲಿ ಇದ್ದ ಜಾಗದಿಂದ ಸ್ವಲ್ಪ ದೂರದಲ್ಲಿ ನಿಂತಿದ್ದ ವೈದ್ಯರು ಅರವಳಿಕೆ ಗನ್‍ನಿಂದ ಶೂಟ್ ಮಾಡಿದರು. ಆದರೆ ಅರವಳಿಕೆ ಸೂಜಿ ನೇರವಾಗಿ ಚುಚ್ಚಿದ್ದರೂ ನರಭಕ್ಷಕ ವ್ಯಾಘ್ರ ಪ್ರಜ್ಞೆ ಕಳೆದುಕೊಂಡಿರಲಿಲ್ಲ.

ಹುಲಿ ಪೊದೆಯೊಳಗೆ ಅಡಗಿ ಕುಳಿತಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ, ವೈದ್ಯರು ವ್ಯಾಘ್ರವನ್ನು ಸುತ್ತುವರಿದು ನಿಂತಿದ್ದರು. ಬಳಿಕ ರಾಣಾ ಹೆಸರಿನ ನಾಯಿ ಸಹಾಯದಿಂದ ಹುಲಿ ಎಲ್ಲಿ ಅಡಗಿ ಕುಳಿತಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತ ಪಡಿಸಿಕೊಂಡರು. ಹುಲಿ ಸೆರೆ ಕಾರ್ಯಾಚರಣೆ ನೋಡಲು ಸ್ಥಳೀಯ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಹ ಬಂದಿದ್ದರು. ಅಭಿಮನ್ಯು ನೇತೃತ್ವದ ಸಾಕಾನೆ ನೇತೃತ್ವದಲ್ಲಿ ಹುಲಿ ಬಳಿಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ವ್ಯಾಘ್ರನನ್ನು ಬೋನಿಗೆ ಹಾಕಿದ್ದರು.

CNG Tiger

ಬಂಡೀಪುರ ಅರಣ್ಯ ವ್ಯಾಪ್ತಿಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ರೈತ ಶಿವಲಿಂಗಪ್ಪ ಅಕ್ಟೋಬರ್ 7ರಂದು ಹಸು ಮೇಯಿಸಲು ಹೋಗಿದ್ದಾಗ ಹುಲಿ ತಿಂದು ಹಾಕಿತ್ತು. ಇದಾದ ಬಳಿಕ ಚೌಡಹಳ್ಳಿ ಸಮೀಪದ ಮೂರ್ಕಲ್ಲು ಗುಡ್ಡದ ಬಳಿ ಹುಲಿ ದಾಳಿಗೆ ಹಸು ಬಲಿಯಾಗಿತ್ತು. ಇದರಿಂದ ಭಯಗೊಂಡ ಗ್ರಾಮಸ್ಥರು ಹುಲಿ ಸೆರೆಹಿಡಿಯುವಂತೆ ಪ್ರತಿಭಟನೆ ಮಾಡಿದ್ದರು. ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ಅರಣ್ಯ ಇಲಾಖೆಯ ಎಪಿಸಿಸಿಎಫ್ ಜಗತ್ ರಾಂ ಹುಲಿಯ ಶೂಟೌಟ್‍ಗೆ ಆದೇಶ ಹೊರಡಿಸಿದ್ದರು. ಹುಲಿ ಶೂಟೌಟ್ ಆದೇಶ ನೀಡಿದ ಬೆನ್ನಲ್ಲೇ ವನ್ಯ ಪ್ರಿಯರು ಟ್ವಿಟ್ಟರ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದರು.

ಹುಲಿಯನ್ನು ಶೂಟ್ ಮಾಡಬಾರದು. ಬದಲಿಗೆ ಅದನ್ನು ಸೆರೆಹಿಡಿಯಬೇಕು ಎಂದು ಪ್ರಾಣಿ ಪ್ರಿಯರು ಆಗ್ರಹ ಮಾಡಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಕೂಡ ಚರ್ಚೆಯಾಗಿತ್ತು. ಇದರಿಂದ ಎಚ್ಚೆತ್ತ ಬೆಂಗಳೂರು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಹುಲಿಯನ್ನು ಶೂಟ್ ಮಾಡದೇ ಸೆರೆಹಿಡಿಯುವಂತೆ ಸೂಚನೆ ನೀಡಿದ್ದರು.

Huli Sere A 1

ಹುಲಿಯ ಚಲನವಲನ ಪತ್ತೆಗೆ ಬಂಡೀಪುರ, ಕೆಬ್ಬೇಪುರ, ಮಕ್ಕಳಮಲ್ಲಪ್ಪ ದೇವಸ್ಥಾನದ ಸುತ್ತಮುತ್ತ ಅರಣ್ಯದಲ್ಲಿ 224 ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿತ್ತು. ಇದರ ಜೊತೆಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಅರಣ್ಯ ಇಲಾಖೆ ತೀರ್ಮಾನ ಮಾಡಿತ್ತು.

TAGGED:chamarajanagarforest departmentPublic TVtigerworshipಅರಣ್ಯ ಇಲಾಖೆಚಾಮರಾಜನಗರಪಬ್ಲಿಕ್ ಟಿವಿಪೂಜೆಹುಲಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
10 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
52 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
56 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?