Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಶ್ವನಾಥ್, ಮಹೇಶ್ ವಾರ್- ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ವಿಶ್ವನಾಥ್, ಮಹೇಶ್ ವಾರ್- ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ

Karnataka

ವಿಶ್ವನಾಥ್, ಮಹೇಶ್ ವಾರ್- ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ

Public TV
Last updated: October 16, 2019 1:14 pm
Public TV
Share
3 Min Read
S R Mahesh h vishwanath
SHARE

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಹಾಗೂ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ಪ್ರಸಂಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಾರಾ ಮಹೇಶ್ ಸವಾಲು ಸ್ವೀಕರಿಸಿದ ವಿಶ್ವನಾಥ್ ಗುರುವಾರ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ ಮಾಡಲು ಒಪ್ಪಿಕೊಂಡಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಸಾರಾ ಮಹೇಶ್ ಸುದ್ದಿಗೋಷ್ಠಿ ನಡೆಸಿ, ನಾಳೆ ನಾನು ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ. ವಿಶ್ವನಾಥ್ ಅವರು ಚಾಮುಂಡಿ ದೇವಿ ಮುಂದೆ ನಿಂತು ನಾನು ಯಾವುದೇ ಆಸೆ ಅಮಿಷಕ್ಕೆ ಒಳಗಾಗಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಅನರ್ಹ ಶಾಸಕ ಎಚ್.ವಿಶ್ವನಾಥ್ ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟಕ್ಕೆ ಮಾಗಮಿಸಿ ಈ ಕುರಿತು ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ವಿಶ್ವನಾಥ್ ಅವರು ಚಾಮುಂಡಿ ದೇವಿ ಮುಂದೆ ನಿಂತು ನಾನು ಯಾವುದೇ ಆಸೆ ಅಮಿಷಕ್ಕೆ ಒಳಗಾಗಿಲ್ಲ ಎಂದು ಪ್ರಮಾಣ ಮಾಡಿದರೆ ಅಲ್ಲೇ ನಾನು ನಾಡಿನ ಜನರ ಮುಂದೆ ಬೇಷರತ್ ಕ್ಷಮೆ ಕೇಳುತ್ತೇನೆ. ಹುಣಸೂರಿಗೆ ಹೊಸ ಡಿವೈಎಸ್ಪಿ ಹಾಕಿಸಿಕೊಂಡಿದ್ದೀರಿ, ಅದಕ್ಕೆ ಎಷ್ಟು ಹಣ ಪಡೆದಿದ್ದೀರಿ. ಕುಮಾರಣ್ಣನ ಮುಂದೆ ಎಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದೀರಿ, ಎಲ್ಲವನ್ನೂ ನಾನು ಚಾಮುಂಡಿ ಸನ್ನಿಧಿಯಲ್ಲೇ ಹೇಳುತ್ತೇನೆ ಎಂದರು.

REBEL MLA

ಚಾಮುಂಡಿ ಮುಂದೆ ಪ್ರಮಾಣ ಮಾಡಲು ವಿಶ್ವನಾಥ್ ಬರಲಿ. ಅವರೊಂದಿಗೆ ಪತ್ರಕರ್ತ ಮರಂಕಲ್ ಅವರನ್ನೂ ಕರೆತರಲಿ, ಅವರಿಗೆ ಸತ್ಯ ಗೊತ್ತಿದೆ. ಶರಣಗೌಡ ಪಾಟೀಲ್ ವಿಚಾರದಲ್ಲೂ ಅವರ ಮರಂಕಲ್ ಪಾತ್ರ ಇತ್ತು. ಇದರಲ್ಲೂ ಅವರ ಪಾತ್ರ ಇದೆ. ಹೀಗಾಗಿ ನಾಳೆ ಬೆಟ್ಟಕ್ಕೆ ಮರಂಕಲ್ ಅವರನ್ನು ಕರೆದುಕೊಂಡು ಬರಲಿ, ಅವರಿಗೆ ಸತ್ಯ ಗೊತ್ತಿದೆ. ಮರಂಕಲ್ ಮುಂದೆಯೇ ವಿಶ್ವನಾಥ್ ಚಾಮುಂಡಿ ತಾಯಿ ಬಳಿ ಪ್ರಮಾಣ ಮಾಡಲಿ. ಚಾಮುಂಡಿ ಪಾದ ಬೇಡ ಗೋಪುರದ ಬಳಿಯೇ ಪ್ರಮಾಣ ಮಾಡಲಿ ಸಾಕು ಎಂದು ಸವಾಲು ಹಾಕಿದ್ದಾರೆ.

ಎಚ್.ವಿಶ್ವನಾಥ್ ನನ್ನ ಮೇಲೆ ಮಾಡಿದ ಕೀಳು ಮಟ್ಟದ ಆರೋಪದಿಂದ ಅತೀವ ಬೇಸರವಾಗಿತ್ತು. ಹೀಗಾಗಿ ಸೆಪ್ಟೆಂಬರ್ 18ರಂದು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೆ. ಆಗ ಸ್ಪೀಕರ್ ಹೊರ ದೇಶದಲ್ಲಿದ್ದರು. ಸ್ಪೀಕರ್ ಹೊರ ದೇಶದಿಂದ ಬಂದ ನಂತರ ನನ್ನನ್ನು ಕರೆಸಿ ಸ್ಪೀಕರ್ ಮನವೊಲಿಸಿದ್ದರು. ಹೀಗಾಗಿ ರಾಜೀನಾಮೆ ನೀಡಲಿಲ್ಲ, ಇನ್ನೂ ನನ್ನ ರಾಜೀನಾಮೆ ಪತ್ರ ಸ್ಪೀಕರ್ ಕಚೇರಿಯಲ್ಲಿಯೇ ಇದೆ ಎಂದು ಇದೇ ವೇಳೆ ತಿಳಿಸಿದರು.

sara mahesh

ಎಚ್.ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ಸೋನಿಯಾಗಾಂಧಿಗೆ ಪತ್ರ ಬರೆದಿದ್ದರು. ಎಸ್.ಎಂ. ಕೃಷ್ಣ ವಿರುದ್ಧ ಪುಸ್ತಕ ಬರೆದಿದ್ದರು. ಕೊನೆಗೆ ಮಾಜಿ ಪ್ರಧಾನಿ ದೇವೇಗೌಡ ಮುಂದೆ ಕೈ ಮುಗಿದು ನನ್ನನ್ನು ಒಂದು ಬಾರಿ ಶಾಸಕರಾಗಿ ಮಾಡಿ ಎಂದು ಕೇಳಿದ್ದರು. ಇಂದು ದೇವರಾಜ ಅರಸು ಹೆಸರು ಹೇಳುತ್ತಾರೆ. ಆದರೆ ದೇವರಾಜ ಅರಸು ಮಗಳ ರಾಜಕೀಯವನ್ನು ಹೇಗೆ ವಿಶ್ವನಾಥ್ ಮುಗಿಸಿದರು ಎಂದು ಜಿಲ್ಲೆಯ ಜನತೆಗೆ ಗೊತ್ತಿದೆ. ವಿಶ್ವನಾಥ್ ನಂಬಿಕೆಗೆ ಅರ್ಹ ಅಲ್ಲ, ಅವರನ್ನು ನಂಬ ಬೇಡ, ಅವರು ಒಳ್ಳೆಯವರಲ್ಲ ಎಂದು ಜಿಟಿಡಿ ನನಗೆ ಅವತ್ತೇ ಹೇಳಿದ್ದರು. ಆದರೆ ನಾನು ಜಿಟಿಡಿ ಮಾತು ಕೇಳಲಿಲ್ಲ ಎಂದರು.

ಹುಣಸೂರಲ್ಲಿ ಎಚ್.ವಿಶ್ವನಾಥ್ ಆಗಲಿ ಅವರ ಕುಟುಂಬದರಾಗಲಿ ಚುನಾವಣೆಗೆ ನಿಲ್ಲುವುದಿಲ್ಲ. ಅಲ್ಲಿನ ಟಿಕೆಟ್ ಬೇರೆಯವರಿಗೆ ನಿರ್ಧಾರವಾಗಿದೆ. ಆದರೆ ನ್ಯಾಯಾಲಯದ ಆದೇಶ ಬಂದ ಮೇಲೆ ಅವರು ಈ ಜಿಲ್ಲೆ ಉಸ್ತುವಾರಿ ಸಚಿವರಾಗುತ್ತಾರೆ ಎಂದು ಟಾಂಗ್ ನೀಡಿದರು.

ಹುಣಸೂರಿನಲ್ಲಿ ಈ ಜಿಲ್ಲೆಯವರಂತೂ ಸ್ಪರ್ಧಿಸಲ್ಲ. ಹೊರ ಜಿಲ್ಲೆಯವರು ಬಂದು ಸ್ಪರ್ಧೆ ಮಾಡುತ್ತಾರೆ. ಅದಕ್ಕೆ ಬೇರೆ ರೀತಿಯ ಒಪ್ಪಂದ ಆಗಿದೆ. ಆ ಒಪ್ಪಂದ ಏನು ಎನ್ನುವುದನ್ನು ಹೇಳೋಕೆ ಅವರು ಮತ್ತೆ ದೇವರ ಮುಂದೆ ಬರಬೇಕು. ಅವೆಲ್ಲವನ್ನು ಆಮೇಲೆ ಮಾತಾಡೋಣ ಎಂದು ಯಾರು ಸ್ಪರ್ಧಿಸುತ್ತಾರೆ ಎಂಬುದನ್ನು ಹೇಳಲು ನಿರಾಕರಿಸಿದರು.

siddu 1

ವಿಶ್ವನಾಥ್ ಹೇಳಿದ್ದೇನು?
ಮೈಸೂರು ಜಿಲ್ಲೆ ವಿಭಜನೆಗೆ ಪಟ್ಟು ಹಿಡಿದು ಕುಳಿತಿರುವ ಅನರ್ಹ ಶಾಸಕ ಹೆಚ್ ವಿಶ್ವನಾಥ್, ವಿಭಜನೆ ವಿರೋಧಿಸಿದವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ನನ್ನೊಬ್ಬನ ಆಶಯ ಅಲ್ಲ. ಕಿ.ಮೀ. ಲೆಕ್ಕವೂ ಅಲ್ಲ ಎಂದು ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದರು. ಕಿ.ಮೀ. ಬಗ್ಗೆ ಮಾತಾಡುವ ಸಿದ್ದರಾಮಯ್ಯ ಅಧ್ಯಯನ ಮಾಡೋದು ಒಳಿತು. ಸಿದ್ದರಾಮಯ್ಯ ಡಿಸಿಎಂ ಆಗಿದ್ದಾಗ ಚಾಮರಾಜನಗರ ಜಿಲ್ಲೆ ಆಗಿಲ್ಲವೇ ಎಂದು ಪ್ರಶ್ನಿಸಿದ್ದರು.

ಜಿಲ್ಲೆ ಒಡೆಯುವುದು ಚುನಾವಣೆ ಗಿಮಿಕ್ ಎಂದ ಸಾರಾ ಮಹೇಶ್ ಅವರಿಗೂ ವಿಶ್ವನಾಥ್ ತಿರುಗೇಟು ನೀಡಿದ್ದರು. ನನ್ನನ್ನು 25 ಕೋಟಿ ರೂ.ಗೆ ಮಾರಿಕೊಂಡವನು ಎಂದು ಸಾ.ರಾ ಮಹೇಶ್ ಹೇಳಿದಾಗಲೆಲ್ಲಾ ನನ್ನ ಮನಸ್ಸಿಗೆ ತುಂಬಾ ನೋವಾಗುತ್ತಿದೆ. ನನ್ನನ್ನು ಯಾರು ಕೊಂಡುಕೊಂಡಿದ್ದಾರೆ ಎಂದು ಗುರುವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಬಂದು ಹೇಳಲಿ. ನಾನು ಕೂಡ ಅಲ್ಲಿಗೆ ಹೋಗುತ್ತೇನೆ ಎಂದು ಸಾರಾ ಮಹೇಶ್‍ಗೆ ಸವಾಲ್ ಹಾಕಿದ್ದರು.

TAGGED:h vishwanathjdsKumaraswamymysuruPublic TVSara Maheshಎಚ್ ವಿಶ್ವನಾಥ್ಕುಮಾರಸ್ವಾಮಿಜೆಡಿಎಸ್ಪಬ್ಲಿಕ್ ಟಿವಿಮೈಸೂರುಸಾರಾ ಮಹೇಶ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
29 seconds ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
8 minutes ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
60 minutes ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
2 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
2 hours ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?