ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ: ಈಶ್ವರಪ್ಪ

Public TV
1 Min Read
K.S.Eshwarappa Siddu

ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ತಿರುಕನ ಕನಸು ಕಾಣುತ್ತಿದ್ದಾರೆ. ಬಿಜೆಪಿ ಕೆಜೆಪಿ ಆಗಲಿಲ್ಲ ಅಂದಿದ್ದರೆ ಸಿದ್ದರಾಮಯ್ಯ ಎಲ್ಲಿ ಸಿಎಂ ಆಗುತ್ತಿದ್ದರು ಎಂದು ಹೇಳುವ ಮೂಲಕ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯಗೆ ಟಾಂಗ್ ನೀಡಿದರು.

Modi

ಸಿದ್ದರಾಮಯ್ಯ ಏನೂ ಸಾಧನೆ ಮಾಡದೇ ಹಿಂದುಳಿದವರಿಗೆ, ದಲಿತರಿಗೆ ಉದ್ದಾರ ಮಾಡಿದೆ ಎನ್ನುತ್ತಾರೆ. ಹಾಗಾದರೆ ಮತ್ತೆ ಕಾಂಗ್ರೆಸ್ ಯಾಕೆ ಕಳೆದ ಬಾರಿ 78 ಸೀಟು ಪಡೆದುಕೊಂಡಿತು. ಸಿದ್ದರಾಮಯ್ಯ ಯಾಕೆ ಚಾಮುಂಡೇಶ್ವರಿಯಲ್ಲಿ 36 ಸಾವಿರ ಮತಗಳಿಂದ ಸೋತರು. ಮೋದಿ ಎರಡನೇ ಬಾರಿ ಪ್ರಧಾನಿ ಆಗಿದ್ದಾರೆ ಅಂದರೆ ಒಳ್ಳೆಯ ಜನಪರ ಕೆಲಸ ಮಾಡಿದ್ದಾರೆ ಅದಕ್ಕೆ ಆಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಎರಡನೇ ಬಾರಿ ಸಿಎಂ ಆಗಬೇಕಿತ್ತಲ್ಲ ಯಾಕೆ ಆಗಲಿಲ್ಲ ಎಂದು ಪ್ರಶ್ನೆ ಮಾಡಿದರು.

ಇದೇ ವೇಳೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯ ಬಗ್ಗೆ ಕೇಳಿದಾಗ, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರಕ್ಕೆ ಬರುತ್ತೆ. ಎರಡು ರಾಜ್ಯದಲ್ಲಿ ಮತ್ತೆ ನಾವು ಅಧಿಕಾರ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *