Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ

Karnataka

ಮಡಿಕೇರಿಯಲ್ಲಿ ನಿರಾಶ್ರಿತರಿಗೆ 35 ಆಶ್ರಯ ಮನೆಗಳ ಹಸ್ತಾಂತರ

Public TV
Last updated: October 25, 2019 2:18 pm
Public TV
Share
2 Min Read
mdk home eshwarappa
SHARE

ಕೊಡಗು: ಕಳೆದ ವರ್ಷ ಪ್ರಾಕೃತಿಕ ವಿಕೋಪಕ್ಕೆ ಸಿಕ್ಕಿ ಮನೆಗಳನ್ನು ಕಳೆದುಕೊಂಡವರಿಗ ಕಡೆಗೂ ಸೂರಿನ ಭಾಗ್ಯ ಸಿಕ್ಕಿದ್ದು, ಕರ್ಣಂಗೇರಿಯಲ್ಲಿ ಇಂದು 35 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಮಡಿಕೇರಿ ತಾಲೂಕಿನ ಕರ್ಣಂಗೇರಿಯಲ್ಲಿ ಕಳೆದ ಬಾರಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ನಿರಾಶ್ರಿತರಿಗೆ ಸರ್ಕಾರದ ವತಿಯಿಂದ ನಿರ್ಮಿಸಿದ್ದ 35 ಆಶ್ರಯ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಉಸ್ತುವಾರಿ ಸಚಿವ ವಿ.ಸೋಮಣ್ಣ ಹಸ್ತಾಂತರಿಸಿದರು.

vlcsnap 2019 10 25 14h08m19s740

ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕೊಡಗು ಜಿಲ್ಲಾ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೆಯೇ ನೆರೆ ಸಂತ್ರಸ್ತರಿಗೆ ಮನೆಗಳ ಹಸ್ತಾಂತರಿಸುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈಗಾಗಲೇ ಕರ್ಣಂಗೇರಿಯಲ್ಲಿ 35 ಮನೆಗಳು ನಿರ್ಮಾಣವಾಗಿದ್ದು, ಮನೆಗಾಗಿ 100 ಅರ್ಜಿಗಳನ್ನು ಹಾಕಲಾಗಿದೆ.

ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕೋಲಾರದಲ್ಲಿ ಕಳೆದ ಸಂಸತ್ ಚುನಾವಣೆಯಲ್ಲಿ ನನ್ನ ಸೋಲಿಗೆ ರಮೇಶ್ ಕುಮಾರ್ ಕಾರಣವೆಂದು ಪರಾಭವಗೊಂಡ ಸ್ವಪಕ್ಷದ ಕೆ.ಎಚ್.ಮುನಿಯಪ್ಪ ಅವರೇ ಹೇಳುತ್ತಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಬೇರೆಯವರ ಬಗ್ಗೆ ಮಾತನಾಡುತ್ತಾರೆ. ಇದು ರಾಜ್ಯಕ್ಕೆ ಬಂದಿರುವ ದುರ್ದೈವ ಎಂದು ಟೀಕಿಸಿದರು.

vlcsnap 2019 10 25 14h08m13s626

ಯಾವುದೇ ಹೇಳಿಕೆಗಳನ್ನು ನೀಡುವ ಮೊದಲು ವೈಯಕ್ತಿಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ತಾವೇ ಪ್ರಶ್ನೆಗಳನ್ನು ಹಾಕಿಕೊಳ್ಳಲಿ. ಅವರೇ ಒಬ್ಬರು ಪಕ್ಷಾಂತರಿಯಾಗಿದ್ದುಕೊಂಡು ಪಕ್ಷಾಂತರ ಶಾಸಕರ ಬಗ್ಗೆ ಮಾತನಾಡುತ್ತಾರೆ. ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಬಿಜೆಪಿ-ಕೆಜೆಪಿ ವಿಭಜನೆಯಾದ ನಂತರ ಆಕಸ್ಮಿಕವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಆ ಅವಧಿಯಲ್ಲಿ 5 ವರ್ಷಗಳು ಸಿಎಂ ಆಗಿದ್ದಾಗ ಸಿದ್ದರಾಮಯ್ಯ ನಾವು ಹಿಂದುಳಿದವರು ಹಾಗೂ ದಲಿತರ ಪರ ಇದ್ದೇವೆ ಎಂದು ಬರೀ ಭಾಷಣವನ್ನಷ್ಟೇ ಮಾಡಿದ್ದು ಬಿಟ್ಟರೆ ಬೆರೇನು ಮಾಡಲಿಲ್ಲ ಎಂದು ಕುಟುಕಿದರು.

ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರದ ಹೀನಾಯ ಸ್ಥಿತಿಗೆ ಸಿದ್ದರಾಮಯ್ಯನವರೇ ಕಾರಣ. ಹಿಂದುಳಿದ ವರ್ಗಗಳ ಜಾತಿ ಜನಗಣತಿಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ 188 ಕೋಟಿ ರೂ. ವ್ಯಯ ಮಾಡಿದರು. ಜಾತಿ ಗಣತಿಯ ವರದಿ ಸಿದ್ಧವಾಗಿದ್ದು ಸಿಎಂ ಅನುಮತಿ ಕೊಟ್ಟರೆ ಬಿಡುಗಡೆ ಮಾಡುತ್ತೇವೆ ಎಂದು ಆ ಸಂಸ್ಥೆಯ ಅಧ್ಯಕ್ಷರಾಗಿದ್ದ ಕಾಂತರಾಜು ಅವರೇ ಒಮ್ಮೆ ನನಗೆ ಹೇಳಿದ್ದರು. ವಿಧಾನ ಪರಿಷತ್‍ನಲ್ಲೂ ಜಾತಿ ಗಣತಿಯನ್ನು ನಾಳೆ, ನಾಡಿದ್ದು ಬಿಡುಗಡೆ ಮಾಡುತ್ತೇವೆ ಎನ್ನಲಾಗಿತ್ತು. ಹೀಗೆ ಹೇಳಿದ್ದು ಬಿಟ್ಟರೆ ಅದನ್ನು ಬಿಡುಗಡೆ ಮಾಡಲೇ ಇಲ್ಲ. ಇದೀಗ ಹಿಂದುಳಿದವರ ಬಗ್ಗೆ ಜೋರಾಗಿ ಮಾತನಾಡುತ್ತಿದ್ದು, ಹಿಂದುಳಿದವರ ಪರವಾಗಿ ಬಿಜೆಪಿ ಸರ್ಕಾರ ಇಲ್ಲ ಎಂದು ಆರೋಪಿಸುತ್ತಾ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.

siddaramaiah 1

ಮಹಾರಾಷ್ಟ್ರ ಹಾಗೂ ಹರ್ಯಾಣ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ವರ್ಚಸ್ಸು ಕಡಿಮೆಯಾಗುತ್ತಿದೆ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಕಾಂಗ್ರೆಸ್‍ನಲ್ಲಿ ರಾಹುಲ್ ಗಾಂಧಿ ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಅವರೇ ರಾಷ್ತ್ರೀಯ ಅಧ್ಯಕ್ಷರಾ? ಹಾಗಿದ್ದರೆ ಅವರೇ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗಬೇಕಿತ್ತು. ಸಮರ್ಥ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಆಗದ ಇವರಿಗೆಲ್ಲ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಯಾವ ಯೋಗ್ಯತೆ, ಅಧಿಕಾರವಿದೆ ಎಂದು ಪ್ರಶ್ನಿಸಿ ಟಾಂಗ್ ನೀಡಿದರು.

TAGGED:eshwarappafloodhomemadikeriPublic TVReliefsiddaramaiahV.Somannaಈಶ್ವರಪ್ಪಪಬ್ಲಿಕ್ ಟಿವಿಪರಿಹಾರಪ್ರವಾಹಮಡಿಕೇರಿಮನೆವಿ.ಸೋಮಣ್ಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
11 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
20 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
53 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
54 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?