Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಾವಳಿಯಂದು ಎಣ್ಣೆ ಸ್ನಾನ ಮಾಡೋದು ಯಾಕೆ? ನರಕಕ್ಕೆ ಹೋಗಲ್ಲ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೀಪಾವಳಿಯಂದು ಎಣ್ಣೆ ಸ್ನಾನ ಮಾಡೋದು ಯಾಕೆ? ನರಕಕ್ಕೆ ಹೋಗಲ್ಲ ಯಾಕೆ?

Bengaluru City

ದೀಪಾವಳಿಯಂದು ಎಣ್ಣೆ ಸ್ನಾನ ಮಾಡೋದು ಯಾಕೆ? ನರಕಕ್ಕೆ ಹೋಗಲ್ಲ ಯಾಕೆ?

Public TV
Last updated: October 26, 2019 1:13 pm
Public TV
Share
4 Min Read
deepavali oil bath
SHARE

ದೀಪಾವಳಿ ಹಿಂದೂಗಳೆಲ್ಲ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬವಾಗಿದ್ದು, ಉಳಿದ ಹಬ್ಬಗಳಿಗಿಂತ ವಿಶಿಷ್ಟವಾಗಿ ಹಬ್ಬವನ್ನು ಆಚರಿಸಲಾಗುತ್ತದೆ. ಎಣ್ಣೆನೀರು, ಹೊಸ ಬಟ್ಟೆ, ದೇವರ ಪೂಜೆ, ದೀಪಾಲಂಕಾರ ಹೊಸ ಅಳಿಯನನ್ನು ಹಬ್ಬಕ್ಕೆ ಬರಮಾಡಿಕೊಂಡು ಸತ್ಕರಿಸುವುದು ದೀಪಾವಳಿಯ ವಿಶೇಷತೆ.

ಮುಂಗಾರು ಬೆಳೆ ಕೊಯ್ಲಿಗೆ ಬರುವ ಕಾಲದಲ್ಲಿ ಈ ಹಬ್ಬ ಬರುತ್ತದೆ. ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೇ ದಿನ ಹಬ್ಬ ನಡೆಯುತ್ತದೆ. ಉತ್ತರ ಭಾರತದಲ್ಲಿ ಇನ್ನೂ ಎರಡು ದಿನ ಹೆಚ್ಚಾಗಿಯೇ ಒಟ್ಟು 5 ದಿನಗಳ ಕಾಲ ಹಬ್ಬ ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಇದನ್ನು ದಿವಾಲಿ ಎಂದು ಕರೆಯುತ್ತಾರೆ. ಇದನ್ನೂ ಓದಿ: ದೀಪಾವಳಿಯ ದೀಪಾರಾಧನೆ-ಮನೆಯ ಮುಂಭಾಗ ಇರಿಸುವ ದೀಪಗಳೆಷ್ಟಿರಬೇಕು?

DEEPAVALI 9

ದೀಪಾವಳಿಯು ದೀಪಗಳ, ಅರ್ಥಾತ್ ಬೆಳಕಿನ ಹಬ್ಬ. ಕತ್ತಲೆಯನ್ನು ಹೋಗಲಾಡಿಸುವ ಹಬ್ಬ. ಮನೆ ಮನೆಯ, ಮನ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟುಮಾಡುವ ಹಬ್ಬ. ದೀಪಾವಳಿ ನರಕ ಚತುರ್ದಶಿಯಿಂದ ಪ್ರಾರಂಭವಾಗುತ್ತದೆ. ನರಕ ಚತುರ್ದಶಿಯಂದು ಎಣ್ಣೆ ಸ್ನಾನ ಮಾಡಲಾಗುತ್ತದೆ. ಎಣ್ಣೆ ಸ್ನಾನ ಮಾಡುವ ಮಂದಿಗೆ ಯಾಕೆ ಈ ದಿನ ಎಣ್ಣೆ ಸ್ನಾನ ಮಾಡಲಾಗುತ್ತದೆ? ಬೇರೆ ಹಬ್ಬದ ದಿನದಂದು ಯಾಕೆ ಎಣ್ಣೆ ಸ್ನಾನ ಇಲ್ಲ ಎನ್ನುವ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಶ್ರೀಮದ್ಭಾಗವತ ಪುರಾಣ ಕಥೆಯಲ್ಲಿ ಸಿಗುತ್ತದೆ. ಶ್ರೀ ಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ಇದನ್ನೂ ಓದಿ: ದೀಪಾವಳಿಗೆ ರುಚಿ ರುಚಿಯಾದ ಕುಂಬಳಕಾಯಿ ಇಡ್ಲಿ ಮಾಡೋದು ಹೇಗೆ?

DEEPAVALI 7

ನರಕಾಸುರನ ಹುಟ್ಟು ಸಾಮಾನ್ಯದ್ದಲ್ಲ. ಶ್ರೀಮನ್ನಾರಾಯಣನು ವರಹಾವತಾರವನ್ನೆತ್ತಿ ಭೂಮಿಯನ್ನು ಉದ್ಧರಿಸಿದ ಬಳಿಕ ಆತನ ಶರೀರದಿಂದ ಬಿದ್ದ ಒಂದು ತೊಟ್ಟು ಬೆವರು ಅಸುರಾಕೃತಿಯನ್ನು ಪಡೆಯಿತು. ಈ ಅಕೃತಿಯೇ ಮುಂದೆ ನರಕಾಸುರನಾಗಿ ಬದಲಾಯಿತು.

ಪ್ರಾಗ್ಜ್ಯೋತಿಷಪುರದಲ್ಲಿ ನರಕಾಸುರ(ಭೌಮಾಸುರ) ರಾಜ್ಯವಾಳುತ್ತಿದ್ದ. ಈತ ದುರುಳತೆಗೂ ಹೆಸರಾದವನು. ಈತನಿಗೆ ಒಮ್ಮೆ ತನ್ನ ಆಯುಸ್ಸು ಹೆಚ್ಚಿಸಿಕೊಳ್ಳಬೇಕು ಎಂಬ ಆಸೆಯಾಯ್ತು. ಬ್ರಹ್ಮನ ಕುರಿತು ತಪಸ್ಸು ಮಾಡಿದ. ಬ್ರಹ್ಮ ಪ್ರತ್ಯಕ್ಷನಾದಾಗ, “ನನಗೆ ಚಿರಂಜೀವತ್ವದ ವರ ಬೇಡ. ನಾನು ಭೂಮಿ ತಾಯಿಯಿಂದ ಜನಿಸಿದವನು. ನನಗೆ ಆ ತಾಯಿಯಿಂದಲೇ ಸಾವು ಬರುವ ಹಾಗೆ ಮಾಡು” ಎಂದ. ಪ್ರತ್ಯಕ್ಷನಾದ ಬ್ರಹ್ಮ ಈತನ ಬೇಡಿಕೆಯನ್ನು ಈಡೇರಿಸಿ ತಥಾಸ್ತು ಎಂದ. ಇದನ್ನೂ ಓದಿ: ದೀಪಾವಳಿ ಸಂಭ್ರಮಕ್ಕೆ ಜೊತೆಯಾಗಲಿದೆ ಪರಿಸರ ಸ್ನೇಹಿ ಹಸಿರು ಪಟಾಕಿ

DEEPAVALI 2

ಭೂಮಿಯ ಅರಸರನ್ನು ಸೋಲಿಸಿ ಅವರ ಸಂಪತ್ತನ್ನು ದೋಚಿದ ನರಕಾಸುರ ದೇವಲೋಕದ ಸ್ತ್ರೀಯರನ್ನೆಲ್ಲ ತನ್ನ ಜೊತೆಗೆ ಬಲವಂತವಾಗಿ ಸೆಳೆದೊಯ್ದ. ಈ ವೇಳೆ ತಾಯಿ ಅದಿತೀ ದೇವಿಯ ಕರ್ಣಾಭರಣಗಳು ಆತನನ್ನು ಆಕರ್ಷಿಸಿದವು. ಅದನ್ನು ಕತ್ತರಿಸಿ ತನ್ನ ವಶಕ್ಕೆ ತೆಗೆದುಕೊಂಡು ಹೋದ. ಇತ್ತ ಖಾಲಿ ಕಿವಿಯಲ್ಲಿ ಅಳುತ್ತಾ ಅದಿತಿಯು ಸತ್ಯಭಾಮೆ ಇರುವಲ್ಲಿಗೆ ಬಂದು ತನ್ನ ತಮ್ಮವರ ವ್ಯಥೆಯನ್ನು ಹೇಳುತ್ತಾಳೆ.

ಹದಿನಾರು ಸಾವಿರಕ್ಕೂ ಹೆಚ್ಚು ರಾಜ ಕನ್ಯೆಯರನ್ನು ಅಪಹರಿಸಿ ತಂದು, ಅವರನ್ನು ಸೆರೆಮನೆಯಲ್ಲಿ ಇಟ್ಟು, ಅವರನ್ನು ಮದುವೆಯಾಗಲು ಮುಂದಾದನು. ಇದರಿಂದ ಎಲ್ಲೆಡೆ ಹಾಹಾಕಾರವಾಗತೊಡಗಿತು. ನರಕಾಸುರ ದುಷ್ಟ ಕೃತ್ಯವನ್ನು ಸತ್ಯಭಾಮೆ ಕೃಷ್ಣನಿಗೆ ತಿಳಿಸುತ್ತಾಳೆ. ವಿಷಯ ತಿಳಿದು ಕೃಷ್ಣ ನರಕಾಸುರನ ವಿರುದ್ಧ ಯುದ್ಧ ಸಾರುತ್ತಾನೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ 5 ದಿನ ದೀಪಾವಳಿ – ಯಾವ ದಿನ ಯಾವ ಹಬ್ಬ?

Naraka Chaturdashi

ಯುದ್ಧಕ್ಕೆ ಹೋಗುವ ಮೊದಲು ಸತ್ಯಭಾಮೆ ಬಳಿ ಕೃಷ್ಣ, “ಈ ಹಿಂದೆ ನಾನು ಯುದ್ಧಕ್ಕೆ ಹೋಗುತ್ತಿದ್ದಾಗ ನೀನು ಸಹ ನನ್ನ ಜೊತೆ ಬರುತ್ತೇನೆ ಎಂದು ಹಂಬಲಿಸಿದ್ದೆ. ಇಲ್ಲಿಯವರೆಗೆ ಆ ಅವಕಾಶ ಸಿಕ್ಕಿರಲಿಲ್ಲ. ಈಗ ಆ ಸುಯೋಗ ಬಂದಿದೆ. ನಾವಿಬ್ಬರೂ ಜೊತೆಯಾಗಿ ಹೋಗೋಣ” ಎಂದು ಹೇಳುತ್ತಾನೆ. ಕೃಷ್ಣನ ಮಾತಿಗೆ ಒಪ್ಪಿ ಸತ್ಯಭಾಮೆಯೂ ಯುದ್ಧಕ್ಕೆ ಧುಮುಕಿದಳು. ಭಯಕಂಕರ ಕಾದಾಟದಲ್ಲಿ ನರಕಾಸುರ ಬಿಟ್ಟ ಬಾಣಕ್ಕೆ ಕೃಷ್ಣ ಪ್ರಜ್ಞೆ ತಪ್ಪಿ ಬೀಳುತ್ತಾನೆ. ಕೃಷ್ಣ ಕೆಳಗಡೆ ಬಿದ್ದಿರುವುದನ್ನು ನೋಡಿ ದಿಕ್ಕು ತೋಚದೆ ಸತ್ಯಭಾಮೆಯೇ ಹೋರಾಟ ಮಾಡಿ ಬಾಣ ಪ್ರಯೋಗಿಸಿ ನರಕಾಸುರನನ್ನು ಕೊಲ್ಲುತ್ತಾಳೆ.

ತನ್ನ ಕೊನೆಯುಸಿರು ಎಳೆಯುವಾಗ ನರಕಾಸುರನು ಶ್ರೀ ಕೃಷ್ಣನಲ್ಲಿ ಒಂದು ವರವನ್ನು ಕೇಳುತ್ತಾನೆ. ‘ಈ ದಿನ ಯಾರು ಅಭ್ಯಂಗ ಸ್ನಾನವನ್ನು ಮಾಡುತ್ತಾರೋ ಅವರಿಗೆ ನರಕ ಪ್ರಾಪ್ತಿಯಾಗಬಾರದು’ ಎಂದು ಕೇಳಿಕೊಳ್ಳುತ್ತಾನೆ.

image 1

ಚತುರ್ದಶಿಯಂದು ನರಕಾಸುರನನ್ನು ವಧಿಸಿ, ಆವನ ರಕ್ತವನ್ನು ತನ್ನ ಹಣೆಗೆ ಹಚ್ಚಿಕೊಂಡು ಮನೆಗೆ ಮರಳಿದ ಶ್ರೀಕೃಷ್ಣನಿಗೆ ಅಭ್ಯಂಗ ಸ್ನಾನ ಮಾಡಿಸಲಾಯಿತು. ಸ್ತ್ರೀಯರೆಲ್ಲರೂ ದೀಪಗಳ ಆರತಿಯನ್ನು ಬೆಳಗಿ ಆನಂದವನ್ನು ವ್ಯಕ್ತಪಡಿಸಿದರು. ಆದುದರಿಂದ ಆಶ್ವಯುಜ ಕೃಷ್ಣ ಚತುರ್ದಶಿಯು ನರಕ ಚತುರ್ದಶಿ ಎಂದು ಆಚರಿಸಲ್ಪಡುತ್ತದೆ, ಜನರು ಈ ದಿನದಂದು ಸೂರ್ಯೋದಯವಾಗುವ ಮುಂಚೆ ಅಭ್ಯಂಗ ಸ್ನಾನವನ್ನು ಮಾಡುತ್ತಾರೆ.

ಎಣ್ಣೆ ಸ್ನಾನ ಮಾಡುವಾಗ ಸಪ್ತ ಚಿರಂಜೀವಿಗಳ (ಅಶ್ವತ್ಥಾಮ, ಬಲೀಂದ್ರ, ವೇದವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ ಮತ್ತು ಪರಶುರಾಮ) ಹೆಸರು ಹೇಳುತ್ತಾರೆ. ಕಾರಣ ಮನೆಯಲ್ಲಿರುವ ಮಕ್ಕಳು ಮತ್ತು ಕುಟುಂಬದ ಸದಸ್ಯರ ಆರೋಗ್ಯ ಆಯುಷ್ಯ ಚೆನ್ನಾಗಿರಲಿ ಎಂದು ಸ್ನಾನದ ಸಮಯದಲ್ಲಿ ಚಿರಂಜೀವಿಗಳ ಹೆಸರು ಇರುವ ಶ್ಲೋಕವಾದ ಅಶ್ವತ್ಥಾಮೋ ಬಲಿವ್ರ್ಯಾಸೋ ಹನೂಮಾಂಶ್ಚ ವಿಭೀಷಣಃ |.ಕೃಪಃ ಪರಶುರಾಮಶ್ಚ ಸಪ್ತೈತೇ ಚಿರಜೀವಿನಃ || ಹೇಳಿ ಪ್ರಾರ್ಥಿಸಲಾಗುತ್ತದೆ.

deepavali

ಸ್ನಾನ ಮಾಡುವ ಮುನ್ನ ಎಣ್ಣೆಯನ್ನು ಏಳು ಚುಕ್ಕಿಗಳಾಗಿ ನಿಮ್ಮ ಉಂಗುರ ಬೆರಳಿನ ಮೂಲಕ ಇರಿಸಿ. ನಂತರ ಶ್ಲೋಕ ಹೇಳುತ್ತಾ, ಏಳು ಚುಕ್ಕಿಗಳನ್ನು ಉಂಗುರು ಬೆರಳಿನ ಮೂಲಕ ಅಳಿಸಿ, ಎಣ್ಣೆಯನ್ನು ನಿಮ್ಮ ತಲೆಯಲ್ಲಿರುವ ಸುಳಿಗೆ ಹಚ್ಚಿಕೊಂಡು ಸ್ನಾನ ಮಾಡಬೇಕು. ನಂತರ ಮಡಿಯಿಂದ ನಿಮ್ಮ ನಿಮ್ಮ ಕುಲದೇವತೆಗಳನ್ನು ಪ್ರಾರ್ಥನೆ ಮಾಡಬೇಕು.

ಕಾರ್ತಿಕ ಮಾಸದಲ್ಲಿ ನಿರಂತರವಾಗಿ ಒಂದು ತಿಂಗಳು ದೀಪಾರಾಧನೆ ಮಾಡಬೇಕು. ಒಂದು ತಿಂಗಳ ದೀಪಾರಾಧನೆಯಿಂದ ನಿಮ್ಮ ಅಭಿವೃದ್ಧಿ ಜ್ಯೋತಿಯಂತೆ ಬೆಳಗುತ್ತದೆ.

https://www.youtube.com/watch?v=bdq-b9Difjs

TAGGED:DiwalihellNaraka Chaturdashinarakasuraoil bathPublic TVಎಣ್ಣೆ ಸ್ನಾನದೀಪಾವಳಿನರಕನರಕ ಚತುರ್ದಶಿನರಕಾಸುರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
12 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
13 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
51 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
54 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?