Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | 2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ

Dakshina Kannada

2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ

Public TV
Last updated: October 30, 2019 4:14 pm
Public TV
Share
2 Min Read
mng cyclone 1 copy
SHARE

ಮಂಗಳೂರು: ವಿಪರೀತ ಮಳೆ ಹಾಗೂ ಕ್ಯಾರ್ ಚಂಡಮಾರುತದಿಂದ ಕಂಗೆಟ್ಟಿದ್ದ ಕರಾವಳಿ ಭಾಗದ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಕರಾವಳಿಗೆ ಮತ್ತೆ ಚಂಡಮಾರುತ ಅಪ್ಪಳಿಸುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತದ ಮುನ್ಸೂಚನೆ ಸಿಕ್ಕಿದೆ. ಎರಡು ದಿನಗಳಲ್ಲಿ ‘ಮಹಾ’ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MNG CYCLONE WARNING AV 1

ಕ್ಯಾರ್ ಚಂಡಮಾರುತದ ಬಳಿಕ ಚೇತರಿಕೆ ಕಂಡಿದ್ದ ಕರಾವಳಿ ಭಾಗದಲ್ಲಿ ಇದೀಗ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಹಾಗೂ ಚಂಡಮಾರುತದಿಂದ ಕೃಷಿಕರು ಈಗಾಗಲೇ ತತ್ತರಿಸಿದ್ದು, ಇದೀಗ ಮತ್ತೆ ಮಹಾ ಚಂಡಮಾರುತದ ಭಯ ಕಾಡುತ್ತಿದೆ. ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಇಂದು ರಾತ್ರಿ ವೇಳೆಗೆ ಚಂಡಮಾರುತದ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕ್ಯಾರ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಭಾಗದ ಜನರು ತತ್ತರಿಸಿ ಹೋಗಿದ್ದರು. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಕ್ಯಾರ್ ಚಂಡಮಾರುತದಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು. ಕಡಲ ತೀರ ಪ್ರದೇಶದಲ್ಲಿ ಬೃಹತ್ ಗಾತ್ರದ ಅಲೆಗಳು ನುಗ್ಗಿ ಬಂದಿದ್ದರಿಂದ ಹಲವು ಮನೆಗಳಿಗೆ ನೀರು ನುಗ್ಗಿ ಜನರು ಒಂದೆಡೆ ಪರದಾಡಿದ್ದರು. ಅಲ್ಲದೆ ಅಲೆಗಳ ಅಬ್ಬರಕ್ಕೆ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ವಿಪರೀತ ಮಳೆಗೆ ಉಡುಪಿಯ ಕುಂಜಾರುಗಿರಿ ಶಂಖತೀರ್ಥದಲ್ಲಿ ಸುಲೋಚನಾ(42) ಸಾವನ್ನಪ್ಪಿದ್ದರು.

MNG CYCLONE WARNING AV 2

ಕ್ಯಾರ್ ಚಂಡಮಾರುತ ಉತ್ತರ ಭಾಗಕ್ಕೆ ಚಲಿಸಿದ್ದ ಕಾರಣ ಅದರ ದೊಡ್ಡ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಭಾಗಕ್ಕೆ ತಟ್ಟಿರಲಿಲ್ಲ. ಮಹಾರಾಷ್ಟ್ರ, ಗೋವಾ ಭಾಗದ ಕರಾವಳಿಗೆ ಹೆಚ್ಚು ಪರಿಣಾಮ ಬೀರಿತ್ತು.

ಕ್ಯಾರ್ ಚಂಡಮಾರುತ ಕೇಂದ್ರ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಿಂದ 240 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. ನಂತರ ಉತ್ತರ ಭಾಗದತ್ತ ಚಲಿಸಿ, ಆಫ್ರಿಕಾ ಖಂಡದ ಒಮಾನ್ ದೇಶದತ್ತ ಚಲಿಸಿತ್ತು. ಹೀಗಾಗಿ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಕರಾವಳಿಗೆ ಹೆಚ್ಚು ತಟ್ಟಿರಲಿಲ್ಲ. ಹೀಗಿದ್ದರೂ, ಮಂಗಳೂರಿನ ಆಸುಪಾಸಿನಲ್ಲಿ ಸಮುದ್ರ ಅಬ್ಬರಿಸಿತ್ತು. ಉಳ್ಳಾಲದ ಸೋಮೇಶ್ವರ, ಮುಕ್ಕಚ್ಚೇರಿ, ಸುರತ್ಕಲ್ ಬಳಿಯಲ್ಲಿ ಕಡಲು ಭೋರ್ಗರೆದಿತ್ತು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

MNG CYCLONE WARNING AV 3

ಕೇವಲ ಕಾರವಾರ ಮಾತ್ರವಲ್ಲದೇ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರ, ಕೇಣಿ, ಗಾಂವಕರ್ ವಾಡ, ಬೇಲೆಕೇರಿ, ಹಾರವಾಡ, ಕುಮಟಾ ತಾಲೂಕಿನ ಗೋಕರ್ಣ, ತದಡಿ, ಕುಡ್ಲೆ ಕಡಲ ತೀರ, ಮುರಡೇಶ್ವರದ ಕಡಲ ತೀರ ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಬಹುತೇಕ ತೀರ ಪ್ರದೇಶದಲ್ಲಿ ಜನರು ಪರದಾಡಿದ್ದರು. ಹಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಅಪಾರ ಪ್ರಮಾಣದ ಹಾನಿ ಸಹ ಸಂಭವಿಸಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಚಂಡಮಾರುತ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದರಿಂದ ಕಡಲ ಮಕ್ಕಳು ಆತಂಕ್ಕೆ ಒಳಗಾಗಿದ್ದರು. ಈ ವರ್ಷ ಜೂನ್ ತಿಂಗಳಿನಿಂದಲೂ ಹವಾಮಾನ ವೈಪರಿತ್ಯದಿಂದ ಮೀನುಗಾರರು ಸರಿಯಾಗಿ ಮೀನುಗಾರಿಕೆಯೇ ಮಾಡದಂತಾಗಿದೆ.

kwr kyarr cyclone 2

TAGGED:coastaldakshina kannadamaha CycloneMangalorePublic TVweather departmentಕರಾವಳಿದಕ್ಷಿಣ ಕನ್ನಡಪಬ್ಲಿಕ್ ಟಿವಿಮಂಗಳೂರುಮಹಾ ಚಂಡಮಾರುತಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
32 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
43 minutes ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
1 hour ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?