Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

Latest

ನೋಟು ನಿಷೇಧದ ಬಳಿಕ ಬಂಗಾರದ ಮೇಲೆ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್

Public TV
Last updated: October 30, 2019 8:14 pm
Public TV
Share
3 Min Read
pm modi gold
SHARE

– ಬಂಗಾರದ ಮೇಲೆ ಬೀಳುತ್ತೆ ಭಾರೀ ದಂಡ
– ಕಪ್ಪುಹಣ ನಿಯಂತ್ರಣಕ್ಕೆ ಸರ್ಕಾರದ ಕ್ರಮ

ನವದೆಹಲಿ: ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ.

ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನು ನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ.

Gold Markert

ಆದಾಯ ತೆರಿಗೆ ಅಮ್ನೆಸ್ಟಿ ಸ್ಕೀಂ ಮಾದರಿಯಲ್ಲಿ ಕೇಂದ್ರ ಸರ್ಕಾರವು ಗೋಲ್ಡ್ ಅಮ್ನೆಸ್ಟಿ ಸ್ಕೀಮ್ ತರಲಿದೆ. ಈ ಸ್ಕೀಂ ಪ್ರಕಾರ ದಾಖಲೆ ಇಲ್ಲದ ಚಿನ್ನ ಅಕ್ರಮವಾಗಿದ್ದು ಈ ಚಿನ್ನವನ್ನು ಇಂತಿಷ್ಟು ಬೆಲೆ ತೆತ್ತು ಸಕ್ರಮ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಆರ್ಥಿಕ ವ್ಯವಹಾರಗಳ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ರೂಪಿಸಿದ್ದು ಆರಂಭದಲ್ಲಿ ಸರ್ಕಾರ ಚಿನ್ನ ಸಂಗ್ರಹಕ್ಕೆ ಒಂದು ಮಿತಿಯನ್ನು ನಿಗದಿ ಪಡಿಸುತ್ತದೆ. ಈ ಪ್ರಮಾಣಕ್ಕಿಂತ ಕಡಿಮೆ ಚಿನ್ನವನ್ನು ಹೊಂದಿದ್ದರೆ ಅದರ ವಿವರವನ್ನು ತೋರಿಸುವ ಅಗತ್ಯವಿಲ್ಲ. ಆದರೆ ಆ ಮಿತಿಗಿಂತ ಜಾಸ್ತಿ ಪ್ರಮಾಣದಲ್ಲಿ ಚಿನ್ನ ಸಂಗ್ರಹ ಇದ್ದರೆ ಮೂಲವನ್ನು ತಿಳಿಸಬೇಕಾಗುತ್ತದೆ. ಆಭರಣ ಖರೀದಿಸಿದ ರಸೀದಿಯನ್ನು ನೀಡಬೇಕಾಗುತ್ತದೆ. ಒಂದು ವೇಳೆ ದಾಖಲೆಯಿಲ್ಲದ ಚಿನ್ನವಿದ್ದರೆ ಅದರ ವಿವರವನ್ನು ಸರ್ಕಾರಕ್ಕೆ ತೋರಿಸಬೇಕಾಗುತ್ತದೆ. ನಂತರ ಸರ್ಕಾರವೇ ನಿಗದಿಪಡಿಸಿದ ದಂಡವನ್ನು ತೆತ್ತು ಈ ಚಿನ್ನವನ್ನು ಸಕ್ರಮ ಮಾಡಿಕೊಳ್ಳಬೇಕಾಗುತ್ತದೆ.

Gold

ಅಕ್ಟೋಬರ್ ಎರಡನೇ ವಾರದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಧಾರ ಪ್ರಕಟವಾಗಬೇಕಿತ್ತು. ಆದರೆ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿಗದಿಯಾಗಿದ್ದರಿಂದ ಕ್ಯಾಬಿನೆಟ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

ಚಿನ್ನದ ಮೇಲೆ ತೆರಿಗೆ ಯಾಕೆ?
ನೋಟು ನಿಷೇಧದ ಬಳಿಕ ಹಣಕಾಸು ವ್ಯವಹಾರಗಳಿಗೆ ಕಠಿಣ ನೀತಿಯನ್ನು ತರಲಾಗಿದ್ದು ಬ್ಯಾಂಕಿನಿಂದ ನಗದು ಡ್ರಾ ಮಾಡಲು ಮಿತಿ ಹೇರಲಾಗಿದೆ. ಅಷ್ಟೇ ಅಲ್ಲದೇ ಆನ್‍ಲೈನ್ ವ್ಯವಹಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ವ್ಯವಹಾರಗಳು ದಾಖಲಾಗುತ್ತದೆ. ಇದರಿಂದ ಪಾರಾಗಲು ಕಪ್ಪು ಕುಳಗಳು ಭಾರೀ ಪ್ರಮಾಣದಲ್ಲಿ ಚಿನ್ನ ಖರೀದಿಸುತ್ತಿದ್ದಾರೆ. ಚಿನ್ನದ ಬೆಲೆ ವರ್ಷ ವರ್ಷ ಜಾಸ್ತಿ ಆಗುತ್ತಿರುವ ಕಾರಣ ಮತ್ತು ಇದನ್ನು ಸುಲಭವಾಗಿ ತೆಗೆದುಕೊಂಡು ಹೋಗಬಹುದಾದ ಆಸ್ತಿ ಆಗಿದ್ದರಿಂದ ಇದರ ಮೇಲೆಯೇ ಹೆಚ್ಚಿನ ಹಣವನ್ನು ಹೂಡಿಕೆ ಮಾಡಿ ಚಿನ್ನದ ಆಭರಣ/ ಬಾರ್ ಗಳನ್ನು ಖರೀದಿಸುತ್ತಿದ್ದಾರೆ. ಚಿನ್ನ ನೀಡುವುದರ ಮೂಲಕವೂ ಭ್ರಷ್ಟಾಚಾರ ನಡೆಯುತ್ತದೆ. ಯಾರ ಬಳಿ ಎಷ್ಟು ಚಿನ್ನ ಇದೆ ಎನ್ನುವ ಮಾಹಿತಿಯೂ ಸರ್ಕಾರದ ಬಳಿ ಇಲ್ಲದ ಕಾರಣ ಕಪ್ಪು ಕುಳಗಳು ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಸಂಗ್ರಹಿಸುತ್ತಿದ್ದಾರೆ. ಅದರಲ್ಲೂ ರಾಜಕಾರಣಿಗಳು ಮತ್ತು ಸರ್ಕಾರಿ ಉದ್ಯೋಗಿಗಳ ಮನೆ ಮೇಲೆ ದಾಳಿ ನಡೆದಾಗ ಕೆಜಿಗಟ್ಟಲೇ ಚಿನ್ನ ಇರುವುದು ಪತ್ತೆಯಾಗುತ್ತದೆ. ಹೀಗಾಗಿ ಅಕ್ರಮವಾಗಿ ಬಂದಿರುವ ಚಿನ್ನದ ಮೇಲೆ ನಿಗಾ ಇಡಲು ಸರ್ಕಾರ ಈಗ ತೆರಿಗೆ ಹೇರಲು ಮುಂದಾಗುತ್ತಿದೆ.

GOLD 1

ಗೊಂದಲವೂ ಇದೆ:
ಹಿರಿಯರಿಂದ ಬಳುವಳಿಯಾಗಿ ಬಂದಿದ್ದ ಚಿನ್ನ ಸರ್ಕಾರ ನಿಗದಿ ಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿದ್ದರೆ ಅದು ಸಕ್ರಮವೋ? ಅಕ್ರಮವೋ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಸದ್ಯ ಸರ್ಕಾರ ಚಿನ್ನದ ಮೇಲೆ ತೆರಿಗೆ ವಿಧಿಸಲು ಮುಂದಾಗುತ್ತಿದೆ ಎನ್ನುವ ವಿಚಾರ ಮಾತ್ರ ಪ್ರಕಟವಾಗಿದ್ದು, ಈ ಗೋಲ್ಡ್ ಅಮ್ನೆಸ್ಟಿ ಸ್ಕೀಂ ಯಾವ ರೀತಿ ಇರುತ್ತದೆ ಎನ್ನುವ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಎಲ್ಲ ಮಾಹಿತಿಗಳನ್ನು ನೀಡುವ ಮೂಲಕ ಎದ್ದಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆಯಿದೆ.

TAGGED:black moneygoldnarendra modisurgical striketaxಕಪ್ಪು ಹಣಚಿನ್ನತೆರಿಗೆನರೇಂದ್ರ ಮೋದಿಬಂಗಾರಸರ್ಜಿಕಲ್ ಸ್ಟ್ರೈಕ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
4 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
4 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
4 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
5 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
5 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?