Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಲ ವಿವಾದದಲ್ಲಿ ಬಿಜೆಪಿ ರಾಜಕೀಯ: 8 ವಕೀಲರನ್ನು ಕೈಬಿಟ್ಟು ಬೆಂಗ್ಳೂರಿನಿಂದ ಇಬ್ಬರ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಲ ವಿವಾದದಲ್ಲಿ ಬಿಜೆಪಿ ರಾಜಕೀಯ: 8 ವಕೀಲರನ್ನು ಕೈಬಿಟ್ಟು ಬೆಂಗ್ಳೂರಿನಿಂದ ಇಬ್ಬರ ನೇಮಕ

Districts

ಜಲ ವಿವಾದದಲ್ಲಿ ಬಿಜೆಪಿ ರಾಜಕೀಯ: 8 ವಕೀಲರನ್ನು ಕೈಬಿಟ್ಟು ಬೆಂಗ್ಳೂರಿನಿಂದ ಇಬ್ಬರ ನೇಮಕ

Public TV
Last updated: November 1, 2019 5:35 pm
Public TV
Share
2 Min Read
KSR BJP
SHARE

– ಕೃಷ್ಣಾ ವ್ಯಾಜ್ಯದ ಅಂತಿಮ ವಿಚಾರಣೆಯಲ್ಲಿ ಬದಲಾವಣೆ
– ಹಿರಿಯ ವಕೀಲರಿಂದ ಅಸಮಾಧಾನ

ನವದೆಹಲಿ: ರಾಜ್ಯ ಬಿಜೆಪಿ ಸರ್ಕಾರಕ್ಕೆ ನದಿ ನೀರಿನ ವಿಚಾರದಲ್ಲೂ ರಾಜಕೀಯ ಬೇಕಿತ್ತಾ? ನೆಲ-ಜಲಕ್ಕಿಂತ ಬಿಜೆಪಿ ಸರ್ಕಾರಕ್ಕೆ ರಾಜಕೀಯ ಮುಖ್ಯವಾಯಿತೇ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಹೌದು. ಜಲ ವಿವಾದ ಸಂಬಂಧ ಹಲವು ವರ್ಷಗಳಿಂದ ಕರ್ನಾಟಕ ಪರ ವಾದ ಮಂಡಿಸುತ್ತಿದ್ದ 8 ವಕೀಲರನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವ ನಡೆಯಿಂದಾಗಿ ಈ ಪ್ರಶ್ನೆ ಎದ್ದಿದೆ.

KRS 2

ಕೃಷ್ಣಾ, ಮಹದಾಯಿ ಹಾಗೂ ಕಾವೇರಿ ವಿವಾದದಲ್ಲಿ ರಾಜ್ಯದ ಪರ ವರ್ಷಗಳಿಂದ ವಾದ ಮಂಡಿಸುತ್ತಿದ್ದ ವಕೀಲರನ್ನು ಎತ್ತಂಗಡಿ ಮಾಡಲಾಗಿದೆ. ಯಾವುದೇ ಚರ್ಚೆ ನಡೆಸದೇ 8 ಜನ ವಕೀಲರನ್ನು ಕೈಬಿಟ್ಟು ಬೆಂಗಳೂರಿಂದ ಇಬ್ಬರು ವಕೀಲರ ನೇಮಕ ಮಾಡಲಾಗಿದೆ. ರಾಜ್ಯದ ಸರ್ಕಾರದ ಈ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ.

ಹಿರಿಯ ಸುಪ್ರೀಂ ಕೋರ್ಟ್ ವಕೀಲರಾದ ಶಾಮ್ ದಿವಾನ್, ಮೋಹನ್ ಕಾತರಕಿ ಹಾಗೂ ಫಾಲಿ ನಾರಿಮನ್ ಅವರನ್ನು ಮಾತ್ರ ಮುಂದುವರಿಸಲಾಗಿದೆ. ಆದರೆ ಸರ್ಕಾರ ದೀಢಿರ್ ಎಂಬಂತೆ ವಕೀಲರನ್ನು ಬದಲಿಸಿ, ಬೆಂಗಳೂರಿನ ಅಶ್ವಿನ್ ಚಿಕ್ಕಮಠ, ರಾಜೇಶ್ವರ್ ಅವರಿಗೆ ಹೊಸ ಜವಾಬ್ದಾರಿ ನೀಡಿದೆ.

supreme court

ಈ ಹಂತದಲ್ಲಿ ವಕೀಲರ ಬದಲಾವಣೆ ಬೇಕಿತ್ತಾ? ಜಲ ವಿವಾದದಲ್ಲಿ ವಕೀಲರ ಬದಲಾವಣೆ ಪ್ರಯೋಗ ಬೇಕಿತ್ತಾ? ಹಾಗೂ ಯಾರೊಂದಿಗೂ ಚರ್ಚಿಸದೇ ಸರ್ಕಾರ ನಿರ್ಧಾರ ಸರೀನಾ ಎನ್ನುವ ಪ್ರಶ್ನೆ ಶುರುವಾಗಿದೆ.

ಯಾರಿಗೆ ಕೊಕ್?:
ಕೃಷ್ಣಾ ನದಿ ವ್ಯಾಜ್ಯದಲ್ಲಿ ವಾದ ಮಂಡಿಸುತ್ತಿದ್ದ ವಕೀಲರಾದ ಕನ್ನಡಿಗರಾದ ಶರತ್ ಜವಳಿ, ಉತ್ತರ ಭಾರತ ಮೂಲದ ಅಂಕೋಲೆಕರ್, ಅಜೀಂ ಕಾಳೆಬುದ್ದಿ ಹಾಗೂ ರಣವೀರ್ ಸಿಂಗ್ ಅವರಿಗೆ ಕೊಕ್ ನೀಡಲಾಗಿದೆ. ಮಹದಾಯಿ ವ್ಯಾಜ್ಯದಲ್ಲಿ ರಾಜ್ಯದ ಪರ ವಾದ ಮಂಡಿಸುತ್ತಿದ್ದ ವಕೀಲರಾದ ಬೆಳಗಾವಿ ಮೂಲದ ಎಂ.ಬಿ ಜಿರಳಿ, ಮಂಗಳೂರು ಮೂಲದ ಅನಿತಾ ಶಣೈ ಮತ್ತು ಉತ್ತರ ಭಾರತ ಮೂಲದ ಥಾಸಿ ವಿಶ್ವೇಶ್ವರ್ ಅವರಿಗೆ ಗೇಟ್‍ಪಾಸ್ ನೀಡಲಾಗಿದೆ.

mahadayi 1

ಕಾವೇರಿ ವ್ಯಾಜ್ಯದಲ್ಲಿ ವಾದ ಮಂಡಿಸುತ್ತಿದ್ದ ಕೊಡಗು ಮೂಲದ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ, ವಕೀಲರಾದ ಕನ್ನಡಿಗ ಶರತ್ ಜವಳಿ, ಉತ್ತರಭಾರತ ಮೂಲದ ಅಜೀಂ ಕಾಳೆಬುದ್ದಿ ಅವರನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಕೀಲರು ಬೇಸರ ವ್ಯಕ್ತಪಡಿಸಿದ್ದಾರೆ. ಕೃಷ್ಣಾ ವ್ಯಾಜ್ಯದ ಅಂತಿಮ ವಿಚಾರಣೆ ವೇಳೆ ರಾಜ್ಯ ಸರ್ಕಾರ ನಿರ್ಧಾರ ಸರಿಯಲ್ಲ. ಕೃಷ್ಣಾ ನದಿ ನೀರು ಹಂಚಿಕೆ ವಿವಾದದ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನವೆಂಬರ್ 15ಕ್ಕೆ ನಡೆಯಲಿದೆ. ಹಲವು ವರ್ಷಗಳಿಂದ ಕೆಲಸ ಮಾಡಿದರೂ ಏಕಾಏಕಿ ತೆಗೆದರೆ ಅಂತಿಮ ವಿಚಾರಣೆಗೆ ತೊಂದರೆ ಆಗಬಹುದು. ಮುಖ್ಯಮಂತ್ರಿ, ಜಲ ಸಂಪನ್ಮೂಲ ಇಲಾಖೆಯಿಂದ ಯಾವುದೇ ಸಭೆಗಳನ್ನು ಮಾಡುತ್ತಿಲ್ಲ. ಹೀಗಾಗಿ ಪೂರ್ಣ ಬೆಂಬಲ ಸಿಗುತ್ತಿಲ್ಲ ಎಂದು ಹಿರಿಯ ವಕೀಲರು ಅಸಮಾಧಾನ ಹೊರ ಹಾಕಿದ್ದಾರೆ.

krishna 1

ಕಿರಿಯ ವಕೀಲರ ಕೈಬಿಟ್ಟ ವಿಚಾರವಾಗಿ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪ್ರತಿಕ್ರಿಯಿಸಿ, ಜಲವಾದಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ. ಹಿರಿಯ ವಕೀಲರಾದ ಶಾಮ್ ದಿವಾನ್, ಮೋಹನ್ ಕಾತರಕಿ ಹಾಗೂ ಫಾಲಿ ನಾರಿಮನ್ ಮುಂದುವರಿಯಲಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆ ಆಗುವುದಿಲ್ಲ. ನದಿ ವಿಚಾರಕ್ಕೆ ಸಂಬಂಧಿಸಿದಂತೆ ಎಂದಿನಂತೆ ಕರ್ನಾಟಕದ ವಾದ ಮುಂದುವರಿಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

TAGGED:kaveriKrishnamahadayiPublic TVState lawyers teamWater disputeಕಾವೇರಿಕೃಷ್ಣಾಜಲ ವಿವಾದಪಬ್ಲಿಕ್ ಟಿವಿಮಹದಾಯಿರಾಜ್ಯ ಬಿಜೆಪಿ ಸರ್ಕಾರವಕೀಲರುಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
15 minutes ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
51 minutes ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
58 minutes ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
1 hour ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
1 hour ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?