Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿಶ್ವದಾಖಲೆ ಬರೆದ ರೋಹಿತ್- ಪಾದಾರ್ಪಣೆ ಪಂದ್ಯದಲ್ಲೇ ಎಡವಿದ ಶಿವಂ

Public TV
Last updated: November 3, 2019 9:12 pm
Public TV
Share
2 Min Read
Cricket
SHARE

– ಬಾಂಗ್ಲಾ ಪಡೆಗೆ 149 ರನ್ ಗುರಿ ನೀಡಿದ ಟೀಂ ಇಂಡಿಯಾ

ನವದೆಹಲಿ: ಅತಿಥಿ ಬಾಂಗ್ಲಾ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 148 ರನ್ ಗಳ ಗುರಿ ನೀಡಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಭಾನುವಾರ ನಡೆದ ಮೂರು ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಶಿಖರ್ ಧವನ್ 41 ರನ್, ಶ್ರೇಯಸ್ ಅಯ್ಯರ್ 22 ರನ್, ರಿಷಭ್ ಪಂತ್ 27 ರನ್ ಸಹಾಯದಿಂದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 148 ರನ್ ಪೇರಿಸಿತು.

ಟಾಸ್ ಗೆದ್ದ ಬಾಂಗ್ಲಾ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇನ್ನಿಂಗ್ಸ್ ನ ಮೊದಲ ಓವರ್ ನಲ್ಲಿಯೇ ಬಾಂಗ್ಲಾ ಬೌಲರ್ ಶಫಿಯುಲ್ ಇಸ್ಲಾಮ್ ಟೀಂ ಇಂಡಿಯಾಗೆ ಆಘಾತ ನೀಡಿದರು. 5 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ ಎರಡು ಬೌಂಡರಿ ಸೇರಿ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಮೈದಾನಕ್ಕಿಳಿದ ಕನ್ನಡಿಗ ಕೆ.ಎಲ್.ರಾಹುಲ್ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲರಾದರು. 17 ಎಸೆತಗಳನ್ನು ಎದುರಿಸಿದ ಕೆ.ಎಲ್.ರಾಹುಲ್ ಎರಡು ಬೌಂಡರಿ ಸಹಾಯದಿಂದ 15 ರನ್ ಗಳಿಸಲು ಶಕ್ತರಾದರು.

ಶ್ರೇಯಸ್ ಅಯ್ಯರ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಏರಿಸಿದರು. ಆದರೆ ಸಿಕ್ಸ್ ಸಿಡಿಸಲು ಹೋಗಿ ವಿಕೆಟ್ ಒಪ್ಪಿಸಿದರು. 13 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 2 ಸಿಕ್ಸರ್, ಒಂದು ಬೌಂಡರಿ ಸಹಾಯದಿಂದ 22 ರನ್ ಸಿಡಿಸಿದರು. ಈ ಬೆನ್ನಲ್ಲೇ ಆರಂಭಿಕ ಆಟಗಾರ ಶಿಖರ್ ಧವನ್ ಕೂಡ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ತೆರಳಿದರು. ಶಿಖರ್ ದವನ್ 42 ಎಸೆತಗಳಲ್ಲಿ ಒಂದು ಸಿಕ್ಸ್, 3 ಬೌಂಡರಿ ಸೇರಿ 41 ರನ್ ದಾಖಲಿಸಿದರು. ಟೀಂ ಇಂಡಿಯಾ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ 15 ರನ್ ಹಾಗೂ ವಾಷಿಂಗ್ಟನ್ ಸುಂದರ್ 14 ಸಿಡಿಸುವ ಮೂಲಕ ತಂಡದ ಮೊತ್ತವನ್ನು ಕೊನೆಯ ಹಂತದಲ್ಲಿ ಏರಿಸಿದರು. ಈ ಮೂಲಕ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 148 ರನ್ ದಾಖಲಿಸಿತು.

INDM1 677

ರೋಹಿತ್ ವಿಶ್ವದಾಖಲೆ:
ಬಾಂಗ್ಲಾ ವಿರುದ್ಧದ ಮೂರು ಪಂದ್ಯಗಳ ಟಿ-20 ಟೂರ್ನಿಯಲ್ಲಿ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ಈ ಹಿಂದೆ 2,450 ರನ್ ಗಳಿರುವ ವಿರಾಟ್ ಕೊಹ್ಲಿ ನಂ.1 ಪಟ್ಟದಲ್ಲಿದ್ದರು. ಆದರೆ ಬಾಂಗ್ಲಾ ವಿರುದ್ಧದ ಮೊದಲ ಪಂದ್ಯದಲ್ಲಿ 9 ರನ್ ಗಳಿಸಿದ ಹಿಟ್‌ಮ್ಯಾನ್ ಒಟ್ಟು 2,452 ರನ್ ಗಳೊಂದಿಗೆ ನಂ.1 ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಪರಿಣಾಮ ಕೊಹ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

ಎಡವಿದ ಶಿವಂ:
ಮುಂಬೈ ಮೂಲದ ಶಿವಂ ದುಬೇ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಹಾಗೂ ಇಂಡಿಯನ್ ಪ್ರಿಮಿಯರ್ ಲೀಗ್‌ನಲ್ಲಿ ಭರ್ಜರಿ ಮಿಂಚಿದ್ದ ಆಲ್‌ರೌಂಡರ್ ಶಿವಂ ಬಾಂಗ್ಲಾ ವಿರುದ್ಧದ ಸರಣಿಯ ಮೊದಲ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.


ಪಂದ್ಯಕ್ಕೂ ಮುನ್ನ ಶಿವಂ ದುಬೇ ನೆಟ್ ಅಭ್ಯಾಸ ನಡೆಸುವ ವೇಳೆ ಭರ್ಜರಿಯಾಗಿ ಬ್ಯಾಟ್ ಬೀಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಶಿವಂ ದುಬೇ ಬ್ಯಾಟಿಂಗ್ ನೋಡಿದ ಕ್ರಿಕೆಟ್ ಅಭಿಮಾನಿಗಳು ಜೂನಿಯರ್ ಯುವರಾಜ್ ಸಿಂಗ್ ಎಂದೇ ಕರೆಯಲಾರಂಭಿಸಿದ್ದರು. ಆದರೆ ಮೊದಲ ಪಂದ್ಯದಲ್ಲೇ ದುಬೈ ಕೇವಲ 1 ರನ್ ಗಳಿಸಿ, ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.

TAGGED:bangladeshindiaPublic TVRohit SharmaShivam dubeಅರುಣ್ ಜೇಟ್ಲಿ ಮೈದಾನಕ್ರಿಕೆಟ್ಟೀಂ ಇಂಡಿಯಾರೋಹಿತ್ ಶರ್ಮಾಶಿವಂ ದುಬೇ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
3 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
12 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

ahemadabad plane crash
Latest

ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

Public TV
By Public TV
2 minutes ago
bike taxi
Bengaluru City

ಜೂ.16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಬಂದ್

Public TV
By Public TV
7 minutes ago
Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
1 hour ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
2 hours ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
2 hours ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?