Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ – ನ.8ರಂದು ಸಿಎಂ ಶಂಕುಸ್ಥಾಪನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ – ನ.8ರಂದು ಸಿಎಂ ಶಂಕುಸ್ಥಾಪನೆ

Bengaluru City

ಸಿದ್ದಗಂಗಾ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣ – ನ.8ರಂದು ಸಿಎಂ ಶಂಕುಸ್ಥಾಪನೆ

Public TV
Last updated: November 4, 2019 12:23 pm
Public TV
Share
2 Min Read
SHIVAKUMAR SRI
SHARE

ನೆಲಮಂಗಲ: ಸಿದ್ದಗಂಗಾ ಶ್ರೀ ಶಿವಕುಮಾರ ಶ್ರೀಗಳ 111 ಅಡಿ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ತಯಾರಿ ಜೋರಾಗಿ ನಡೆದಿದೆ.

ಶ್ರೀಗಳ ಹುಟ್ಟೂರು ಮಾಗಡಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ಭೂಮಿ ನಿಗದಿ ಪಡಿಸಲಾಗಿದ್ದು, ನವೆಂಬರ್ 8 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

03.11NML SWAMIJI PUTTALI

ವೀರಾಪುರ ಗ್ರಾಮದಲ್ಲಿ ಈಗಾಗಲೇ ಸರ್ಕಾರದಿಂದ ಭೂಮಿ ನಿಗದಿಯಾಗಿದೆ. ಇದೆ ನ.8ರ ಶುಕ್ರವಾರದಂದು ಸಿಎಂ ಯಡಿಯೂರಪ್ಪ ಹಾಗೂ ಡಿಸಿಎಂ ಅಶ್ವಥ್ ನಾರಾಯಣ ಅವರಿಂದ ಶಂಕುಸ್ಥಾಪನೆ ಕಾರ್ಯ ನಡೆಯಲಿದೆ.

ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ನಾನಾ ರೂಪುರೇಷೆಗಳು ಸಿದ್ಧವಾಗಿದ್ದು, ಸಿದ್ದಗಂಗಾ ಶ್ರೀಗಳ ಬೃಹತ್ ಪುತ್ಥಳಿಯ ನೀಲಿ ನಕ್ಷೆ ಕೂಡ ಅನಾವರಣಗೊಂಡಿದೆ. ಈ ಮೂಲಕ ಸಾಕಷ್ಟು ವರ್ಷಗಳಿಂದ ನಿರ್ಲಕ್ಷಿಸಲ್ಪಟ್ಟಿದ್ದ ಶಿವಕುಮಾರ ಶ್ರೀಗಳ ಹುಟ್ಟೂರು ವೀರಾಪುರ ಗ್ರಾಮಕ್ಕೆ ಇದೀಗ ಹೊಸ ರೂಪ ಬರಲಿದ್ದು, ಕಾರ್ಯಕ್ರಮದ ಸಿದ್ಧತೆಗಳು ಬರದಿಂದ ಸಾಗುತ್ತಿದೆ.

03.11NML SWAMIJI PUTTALI 1

25 ವರ್ಷಗಳ ಕಾಲ ಕಾಲಿಟ್ಟಿರಲಿಲ್ಲ:
ನಡೆದಾಡುವ ದೇವರು, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ತಮ್ಮ ಹುಟ್ಟೂರಿಗೆ 25 ವರ್ಷಗಳ ಕಾಲ ಕಾಲಿಟ್ಟಿರಲಿಲ್ಲ. ಹೌದು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರದ ಪಟೇಲ್ ಹೊನ್ನಪ್ಪ ಅವರಿಗೆ ಮಗ ಶಿವಣ್ಣ (ಶಿವಕುಮಾರ ಸ್ವಾಮೀಜಿ) ಉನ್ನತ ಅಧಿಕಾರಿ ಆಗಬೇಕು ಎನ್ನುವ ಆಸೆಯಿತ್ತು. ಇತ್ತ ಉದ್ಧಾನ ಶಿವಯೋಗಿಗಳು, ಬಿ.ಎ. ವ್ಯಾಸಂಗ ಪೂರ್ಣಗೊಳಿಸಿದ್ದ ಶಿವಣ್ಣ ಸನ್ಯಾಸತ್ವ ಸ್ವೀಕರಿಸಬೇಕು. ಜಗತ್ತಿಗೆ ಬೆಳಕಾಗಬೇಕು ಎಂಬ ಮಹದಾಸೆಯನ್ನು ಹೊಂದಿದ್ದರು.

ಶಿವಣ್ಣ ಸನ್ಯಾಸತ್ವ ಸ್ವೀಕರಿಸಿದ್ದಾನೆ ಎನ್ನುವುದನ್ನು ದು:ಖದಲ್ಲಿರುವ ಹೊನ್ನಪ್ಪ ಹಾಗೂ ಗಂಗಮ್ಮ ದಂಪತಿಗೆ ಸಾಂತ್ವಾನ ಹೇಳಲು ಶಿವಯೋಗಿಗಳು ಖುದ್ದಾಗಿ ವೀರಾಪುರಕ್ಕೆ ಹೋಗಿದ್ದರು. ಆದರೆ ಹೊನ್ನಪ್ಪ ಶಿವಯೋಗಿಗಳಿಗೆ ಭೇಟಿಯಾಗಬಾರದು ಅಂತ ಮನೆಯಿಂದ ಆಚೆ ಹೋಗಿದ್ದರು. ಇದರಿಂದಾಗಿ ಮನನೊಂದ ಶಿವಯೋಗಿಗಳು ಅಲ್ಲಿಂದ ನಡೆದುಕೊಂಡೇ ಮಠಕ್ಕೆ ಮರಳಿದ್ದರು.

NML SWAMIJI PUTTALI 8 e1572849635643

ಶ್ರೀಗಳು ಮಠಕ್ಕೆ ಮರಳಿದಾಗ ನಡೆದ ಘಟನೆಯನ್ನು ಶಿಷ್ಯ ಶಿವಕುಮಾರ ಸ್ವಾಮೀಜಿಗಳಿಗೆ ವಿವರಿಸಿದರಂತೆ. ಗುರುಗಳ ಮೇಲೆ ಅಪಾರ ಭಕ್ತಿ ಹೊಂದಿದ್ದ ಶಿವಕುಮಾರ ಶ್ರೀಗಳಿಗೆ ತಂದೆ ನಡೆದುಕೊಂಡಿದ್ದು ಸರಿಯಲ್ಲ ಅನಿಸಿತ್ತು. ಇದರಿಂದಾಗಿ ಹುಟ್ಟೂರು ವೀರಾಪುರ ಗ್ರಾಮಕ್ಕೆ ಹೋಗುವುದನ್ನೇ ನಿಲ್ಲಿಸಿಬಿಟ್ಟಿದ್ದರು.

ಗ್ರಾಮಕ್ಕೆ ಕಾಲಿಟ್ಟಿದ್ದು ಹೇಗೆ?:
ಸಿದ್ದಗಂಗಾ ಮಠದ ಜವಾಬ್ದಾರಿ ಹೊತ್ತ ಶ್ರೀಗಳು, ಮಕ್ಕಳು ಶಿಕ್ಷಣ, ದಾಸೋಹ, ಸಮಾಜಿಕ ಸೇವೆ, ಇಷ್ಟಲಿಂಗ ಪೂಜೆ, ಓದು, ಭಕ್ತರ ಭೇಟಿ, ಪ್ರವಚನದಲ್ಲಿ ನಿರತರಾಗಿದ್ದರು. ಈ ನಡುವೆ ತಮ್ಮ ಗ್ರಾಮಕ್ಕೆ ಬರುವಂತೆ ವೀರಾಪುರ ಜನರು 1930ರಿಂದ 1955ರ ವರೆಗೂ ಮನವಿ ಮಾಡಿಕೊಳ್ಳುತ್ತಿದ್ದರು. ಆದರೆ ಶ್ರೀಗಳು ಮಾತ್ರ ಭಕ್ತರಿಗೆ ನಗುಮುಗದಿಂದಲೇ ಬರಲು ಆಗುವುದಿಲ್ಲ ಅಂತ ಹೇಳುತ್ತಿದ್ದರು.

NML SWAMIJI PUTTALI 4 e1572849726791

ಶಿವಕುಮಾರ ಶ್ರೀಗಳ ಪೂರ್ವಾಶ್ರಮದ ಅಣ್ಣನ ಮಗ ಸಿದ್ದಗಂಗಾ ಮಠಕ್ಕೆ ಬಂದು, ನೂತನ ಗೃಹ ಪ್ರವೇಶಕ್ಕೆ ನೀವು ಬರಬೇಕು ಅಂತ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಶಿವಯೋಗಿಗಳ ಕೃಪೆಯಿಂದ ದೂರವಾಗಿರುವ ಆ ಮನೆಗೆ ನಾನು ಬರುವುದಿಲ್ಲ ಅಂತ ತಿಳಿಸಿದ್ದರು.

ನಿಮ್ಮ ಅಪ್ಪಣೆಯಂತೆ ಆಗಲಿ. ನೀವು ಬಂದು ಗೃಹ ಪ್ರವೇಶ ಮಾಡಬೇಕು ಎನ್ನುವುದು ನಮ್ಮ ಸಂಕಲ್ಪ. ಒಂದು ವೇಳೆ ನೀವು ಬರದೇ ಹೋದರೆ ಮನೆ ಹಾಳುಬಿದ್ದರೂ ನಾವು ಗೃಹಪ್ರವೇಶ ಮಾಡುವುದಿಲ್ಲ ಎಂದು ಶ್ರೀಗಳಿಗೆ ನಮ್ಮ ಮನವಿ ಒಪ್ಪಿಸಿ ಗ್ರಾಮಕ್ಕೆ ತೆರಳಿದರು.

NML SWAMIJI PUTTALI 6 e1572849677799

ಭಕ್ತನ ಭಕ್ತಿ ದೊಡ್ಡದು, ಅದಕ್ಕೂ ಶಕ್ತಿಯಿದೆ ಅಂತ ಅರಿತಿದ್ದ ಶ್ರೀಗಳು ಭಕ್ತರ ಸಂಕಲ್ಪಕ್ಕೆ ಕರಗಿ ಗೃಹಪ್ರವೇಶಕ್ಕೆ ಬರುವುದಾಗಿ ತಿಳಿಸಿದ್ದರು. ಈ ಮೂಲಕ 25 ವರ್ಷದ ಬಳಿಕ 1955ರಲ್ಲಿ ಶ್ರೀಗಳು ಹುಟ್ಟೂರಿಗೆ ಕಾಲಿಟ್ಟಿದ್ದರು.

TAGGED:111 ft Putthali111 ಅಡಿ ಪುತ್ಥಳಿPublic TVShivakumara ShreeVeerapuraYediyurappaಪಬ್ಲಿಕ್ ಟಿವಿಯಡಿಯೂರಪ್ಪವೀರಾಪುರಶಿವಕುಮಾರ ಶ್ರೀ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
17 minutes ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
29 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
1 hour ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
1 hour ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
1 hour ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?