Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

Public TV
Last updated: November 10, 2019 8:01 pm
Public TV
Share
3 Min Read
Ayodhya Rama Temple 8
SHARE

– ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಲ್ಲಿ?
– ವಾಲ್ಮೀಕಿ ರಾಮಾಯಣದಲ್ಲಿ ಜಾಗದ ಬಗ್ಗೆ ಉಲ್ಲೇಖ ಇಲ್ಲ
– ಸ್ಕಂದ ಪುರಾಣದ ಶ್ಲೋಕಕ್ಕೂ ಸ್ಥಳಕ್ಕೆ ತಾಳೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದಾನೆ ಎನ್ನುವುದು ಹಿಂದೂಗಳ ನಂಬಿಕೆ. ಆದರೆ ಅಯೋಧ್ಯೆಯಲ್ಲಿ ಹುಟ್ಟಿದ್ದು ಎಲ್ಲಿ ಎನ್ನುವ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸ್ಕಂದ ಪುರಾಣದಲ್ಲಿ ಉತ್ತರ ಕಂಡುಕೊಂಡಿದೆ.

ಹೌದು, 1045 ಪುಟಗಳ ಸುದೀರ್ಘ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪುರಾತತ್ವ ಇಲಾಖೆಯ ಸಾಕ್ಷ್ಯಗಳು, ಬ್ರಿಟಿಷ್ ಮತ್ತು ಭಾರತ ಸರ್ಕಾರದ ಗೆಜೆಟ್‍ಗಳು, ವಿದೇಶಿ ವ್ಯಕ್ತಿಗಳು ಬರೆದ ಗ್ರಂಥಗಳು, ಮೌಖಿಕ ಹೇಳಿಕೆಯ ಜೊತೆಗೆ ಸ್ಕಂದ ಪುರಾಣವನ್ನು ಉಲ್ಲೇಖಿಸಿದೆ.

ayodhya skanda purana

40 ದಿನಗಳ ದೀರ್ಘ ವಿಚಾರಣೆಯ ಸಮಯದಲ್ಲಿ ರಾಮ ಅಯೋಧ್ಯೆಯಲ್ಲಿ ಹುಟ್ಟಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ವಾದ ಮಂಡಿಸಿರಲಿಲ್ಲ. 2.77 ಎಕ್ರೆ ವಿವಾದಿತ ಜಾಗದಲ್ಲಿ ರಾಮ ಜನಿಸಿರಲಿಲ್ಲ. ಅಲ್ಲಿ ದೇವಾಲಯ ಕೆಡವಿ ಮಸೀದಿ ನಿರ್ಮಾಣಗೊಂಡಿಲ್ಲ ಎನ್ನುವುದಷ್ಟೇ ಅವರ ವಾದವಾಗಿತ್ತು. ಆದರೆ ರಾಮಲಲ್ಲಾ ಪರ ವಾದ ಮಂಡಿಸಿದ ವಕೀಲರು ವಿವಾದಿತ ಸ್ಥಳದಲ್ಲೇ ರಾಮ ಜನಿಸಿದ್ದ. ಹೀಗಾಗಿ ಈ ಜಾಗ ನಮಗೆ ನೀಡಬೇಕು ಎಂದು ವಾದಿಸಿದ್ದರು.  ಇದನ್ನೂ ಓದಿ: ಅಂದು ಹೇಳಿದಾಗ ಟೀಕೆ ಬಂದಿತ್ತು, ಇಂದು ನನ್ನ ಸಾಕ್ಷ್ಯ ಆಧಾರಿಸಿ ತೀರ್ಪು ಬಂದಿದೆ- ಕೆ.ಕೆ.ಮೊಹಮ್ಮದ್ ಸಂತಸ

ಪುರಾತತ್ವ ಇಲಾಖೆ ಹಿಂದೂ ದೇವಾಲಯ ಕೆಡವಿ ಮಸೀದಿ ನಿರ್ಮಾಣವಾಗಿದೆ. ಹಿಂದೂ ದೇವಾಲಯಗಳಲ್ಲಿ ಬಳಸುವ ಕಲ್ಲು, ಪ್ರಾಣಿಗಳು ಸಿಕ್ಕಿವೆ ಎಂದು ಆಧಾರ ನೀಡಿದರೂ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದಾನೆ ಎನ್ನುವುದಕ್ಕೆ ಆಧಾರ ಸಿಗದ ಕಾರಣ ಪ್ರಕರಣ ಜಟಿಲವಾಗಿತ್ತು. ಅಷ್ಟೇ ಅಲ್ಲದೇ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವುದು ಸುನ್ನಿ ವಕ್ಫ್ ಬೋರ್ಡ್ ವಾದವಾಗಿದ್ದರಿಂದ ಹಾಗಾದರೆ ರಾಮ ಜನಿಸಿದ್ದು ಎಲ್ಲಿ ಎನ್ನುವ ಕಠಿಣ ಪ್ರಶ್ನೆ ಎದ್ದಿತ್ತು.

Ayodhya Rama Temple 1

 

ಅಯೋಧ್ಯೆಯಲ್ಲಿ ರಾಮ ಜನಿಸಿಯೇ ಇಲ್ಲ ಎಂದು ವಾದಿಸಿದ್ದರೆ ಪ್ರಕರಣ ಬೇರೆ ರೀತಿಯ ತಿರುವು ಪಡೆದುಕೊಳ್ಳುತಿತ್ತು. ಆದರೆ ಇಲ್ಲಿ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವ ವಾದಕ್ಕೆ ಮಾತ್ರ ಆಕ್ಷೇಪ ಇದ್ದ ಕಾರಣ ರಾಮ ಅಯೋಧ್ಯೆಯಲ್ಲೇ ಜನಿಸಿದ್ದ ಎನ್ನುವ ಅಂಶ ದೃಢವಾಯಿತು.

ಈಗ ವಿವಾದಕ್ಕೆ ಕಾರಣವಾಗಿರುವ ಜಾಗದಲ್ಲೇ ರಾಮ ಹುಟ್ಟಿದ್ದಾನೆ ಎಂದು ತಿಳಿದುಕೊಳ್ಳುವುದು ಹೇಗೆ? ಈ ಎರಡನೇ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನ್ಯಾಯಾಧೀಶರು ವಾಲ್ಮೀಕಿ ರಾಮಾಯಣ ಮತ್ತು ಸ್ಕಂದ ಪುರಾಣದ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ರಕ್ತದಲ್ಲಿ ಬರೆದು ಸುಪ್ರೀಂ ತೀರ್ಪು ಸ್ವಾಗತಿಸಿದ ಮುಸ್ಲಿಂ ವ್ಯಕ್ತಿ

Ayodhya Judge 1

ರಾಮಾಯಣದ ಮೂಲ ಕೃತಿಯಾದ ವಾಲ್ಮೀಕಿ ರಾಮಾಯಣದ 10ನೇ ಶ್ಲೋಕದಲ್ಲಿ ಕೌಸಲ್ಯೆಯು ಮಗನೊಬ್ಬನಿಗೆ ಜನ್ಮ ನೀಡಿದ್ದಳು. ರಾಮನ ಆಗಮನದಿಂದ ಅಯೋಧ್ಯೆ ಪಾವನಗೊಂಡಿತು. ಮುಂದೆ ಆತ ವಿಶ್ವಕ್ಕೆ ದೇವರಾದ ಎನ್ನುವ ಉಲ್ಲೇಖವಿದೆ. ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎನ್ನುವುದಕ್ಕೆ ಉಲ್ಲೇಖ ಇದ್ದರೂ ವಾಲ್ಮೀಖಿ ರಾಮಾಯಣದಲ್ಲಿ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದ ಎನ್ನುವುದಕ್ಕೆ ಯಾವುದೇ ದಾಖಲೆಗಳಿರಲಿಲ್ಲ. ಹೀಗಾಗಿ ನ್ಯಾಯಾಧೀಶರು ಸ್ಕಂದ ಪುರಾಣವನ್ನು ಅಧ್ಯಯನ ಮಾಡಿದ್ದಾರೆ.

ಸ್ಕಂದ ಪುರಾಣದಲ್ಲಿರುವ ವೈಷ್ಣವಕಾಂಡದಲ್ಲಿ ಅಯೋಧ್ಯಾ ಮಹಾತ್ಮ ಅಧ್ಯಾಯದಲ್ಲಿ ರಾಮನ ಜನ್ಮಸ್ಥಾನದ ಉಲ್ಲೇಖದ ಬಗ್ಗೆ ಶ್ಲೋಕವಿದೆ. ಈ ಶ್ಲೋಕದ ಪ್ರಕಾರ ಇಲ್ಲಿಂದ ಈಶಾನ್ಯ ದಿಕ್ಕಿನಲ್ಲಿರುವ ಜಾಗವೇ ರಾಮಜನ್ಮ ಸ್ಥಾನ. ಮೋಕ್ಷ ಸ್ಥಾನವಾಗಿರುವ ಈ ಸ್ಥಳವು ವಿಘ್ನೇಶ್ವರದ ಪೂರ್ವ ದಿಕ್ಕಿನಲ್ಲಿದ್ದು, ವಶಿಷ್ಠದ ಉತ್ತರ ದಿಕ್ಕಿನಲ್ಲಿದೆ ಲಾವ್ಮಾಸಾ ಆಶ್ರಮದ ಪಶ್ಚಿಮ ದಿಕ್ಕಿನಲ್ಲಿದೆ ಎಂದು ಹೇಳುತ್ತದೆ.

ayodhya skanda purana 2

 

ಈ ಶ್ಲೋಕದಲ್ಲಿ ತಿಳಿಸಿದ ಅಂಶ ರಾಮಲಲ್ಲಾ ಕಡೆಯವರ ವಾದಕ್ಕೂ ತಾಳೆಯಾಗುತ್ತದೆಯೇ ಎನ್ನುವುದನ್ನು ಕೋರ್ಟ್ ಅಧ್ಯಯನ ಮಾಡಿದೆ. ಈ ಶ್ಲೋಕದಲ್ಲಿರುವ ಸ್ಥಳಗಳು ವಿವಾದಿತ ಪ್ರದೇಶದಲ್ಲಿರುವ ಸ್ಥಳಗಳಿಗೂ ತಾಳೆಯಾಗುತ್ತಾ ಎನ್ನುವುದನ್ನು ಪರಿಶೀಲಿಸಿದಾಗ, ಶ್ಲೋಕದಲ್ಲಿ ಉಲ್ಲೇಖಿಸಿರುವ ದಿಕ್ಕಿನಲ್ಲಿಯೇ ರಾಮಮಂದಿರವಿದ್ದು ಈಗಲೂ ಈ ಸ್ಥಳಗಳು ಇವೆ. ನಾವು ಈ ಸ್ಥಳಕ್ಕೆ ಭೇಟಿ ನೀಡಿದ್ದೇವೆ ಎನ್ನುವುದನ್ನು ಹಲವು ವ್ಯಕ್ತಿಗಳು ಮೌಖಿಕ ಸಾಕ್ಷ್ಯ ನುಡಿದಿದ್ದಾರೆ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಸ್ಕಂದ ಪುರಾಣದ ಆಧಾರ ಮತ್ತು ಖಾಲಿ ಜಾಗದಲ್ಲಿ ಮಸೀದಿ ನಿರ್ಮಾಣವಾಗಿಲ್ಲ. ಹಿಂದೂ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಾಣವಾಗಿದೆ ಎನ್ನುವ ಭಾರತೀಯ ಪುರಾತತ್ವ ಇಲಾಖೆ ಸಾಕ್ಷ್ಯಗಳನ್ನು ಗಂಭೀರ ಪರಿಗಣಿಸಿದ ಕೋರ್ಟ್ ಅಂತಿಮವಾಗಿ ವಿವಾದಿತ 2.77 ಎಕ್ರೆ ಜಾಗ ರಾಮಲಲ್ಲಾಗೆ ಸೇರಬೇಕೆಂದು ಷರಾ ಬರೆದು ವಿವಾದವಾಗಿದ್ದ ಪ್ರಕರಣಕ್ಕೆ ಪೂರ್ಣ ವಿ’ರಾಮ’ ಹಾಕಿದೆ.

TAGGED:Ayodhyakannada newsRama TempleSkanda PuranaSuprme Courtಅಯೋಧ್ಯೆಅಯೋಧ್ಯೆ ಪ್ರಕರಣಬಾಬ್ರಿ ಮಸೀದಿರಾಮ ಮಂದಿರರಾಮಲಲ್ಲಾಸ್ಕಂದ ಪುರಾಣಹಿಂದೂ ದೇವಾಲಯ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
7 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
10 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
10 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
43 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
49 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
1 hour ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
2 hours ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?