Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅಯೋಧ್ಯೆ ರಾಮನಿಗೆ ಸಿಗಲು ‘ಸ್ಕಂದ’ ಕಾರಣ

Public TV
Last updated: November 10, 2019 8:01 pm
Public TV
Share
3 Min Read
Ayodhya Rama Temple 8
SHARE

– ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಲ್ಲಿ?
– ವಾಲ್ಮೀಕಿ ರಾಮಾಯಣದಲ್ಲಿ ಜಾಗದ ಬಗ್ಗೆ ಉಲ್ಲೇಖ ಇಲ್ಲ
– ಸ್ಕಂದ ಪುರಾಣದ ಶ್ಲೋಕಕ್ಕೂ ಸ್ಥಳಕ್ಕೆ ತಾಳೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದಾನೆ ಎನ್ನುವುದು ಹಿಂದೂಗಳ ನಂಬಿಕೆ. ಆದರೆ ಅಯೋಧ್ಯೆಯಲ್ಲಿ ಹುಟ್ಟಿದ್ದು ಎಲ್ಲಿ ಎನ್ನುವ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸ್ಕಂದ ಪುರಾಣದಲ್ಲಿ ಉತ್ತರ ಕಂಡುಕೊಂಡಿದೆ.

ಹೌದು, 1045 ಪುಟಗಳ ಸುದೀರ್ಘ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಪುರಾತತ್ವ ಇಲಾಖೆಯ ಸಾಕ್ಷ್ಯಗಳು, ಬ್ರಿಟಿಷ್ ಮತ್ತು ಭಾರತ ಸರ್ಕಾರದ ಗೆಜೆಟ್‍ಗಳು, ವಿದೇಶಿ ವ್ಯಕ್ತಿಗಳು ಬರೆದ ಗ್ರಂಥಗಳು, ಮೌಖಿಕ ಹೇಳಿಕೆಯ ಜೊತೆಗೆ ಸ್ಕಂದ ಪುರಾಣವನ್ನು ಉಲ್ಲೇಖಿಸಿದೆ.

ayodhya skanda purana

40 ದಿನಗಳ ದೀರ್ಘ ವಿಚಾರಣೆಯ ಸಮಯದಲ್ಲಿ ರಾಮ ಅಯೋಧ್ಯೆಯಲ್ಲಿ ಹುಟ್ಟಿಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ವಾದ ಮಂಡಿಸಿರಲಿಲ್ಲ. 2.77 ಎಕ್ರೆ ವಿವಾದಿತ ಜಾಗದಲ್ಲಿ ರಾಮ ಜನಿಸಿರಲಿಲ್ಲ. ಅಲ್ಲಿ ದೇವಾಲಯ ಕೆಡವಿ ಮಸೀದಿ ನಿರ್ಮಾಣಗೊಂಡಿಲ್ಲ ಎನ್ನುವುದಷ್ಟೇ ಅವರ ವಾದವಾಗಿತ್ತು. ಆದರೆ ರಾಮಲಲ್ಲಾ ಪರ ವಾದ ಮಂಡಿಸಿದ ವಕೀಲರು ವಿವಾದಿತ ಸ್ಥಳದಲ್ಲೇ ರಾಮ ಜನಿಸಿದ್ದ. ಹೀಗಾಗಿ ಈ ಜಾಗ ನಮಗೆ ನೀಡಬೇಕು ಎಂದು ವಾದಿಸಿದ್ದರು.  ಇದನ್ನೂ ಓದಿ: ಅಂದು ಹೇಳಿದಾಗ ಟೀಕೆ ಬಂದಿತ್ತು, ಇಂದು ನನ್ನ ಸಾಕ್ಷ್ಯ ಆಧಾರಿಸಿ ತೀರ್ಪು ಬಂದಿದೆ- ಕೆ.ಕೆ.ಮೊಹಮ್ಮದ್ ಸಂತಸ

ಪುರಾತತ್ವ ಇಲಾಖೆ ಹಿಂದೂ ದೇವಾಲಯ ಕೆಡವಿ ಮಸೀದಿ ನಿರ್ಮಾಣವಾಗಿದೆ. ಹಿಂದೂ ದೇವಾಲಯಗಳಲ್ಲಿ ಬಳಸುವ ಕಲ್ಲು, ಪ್ರಾಣಿಗಳು ಸಿಕ್ಕಿವೆ ಎಂದು ಆಧಾರ ನೀಡಿದರೂ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದಾನೆ ಎನ್ನುವುದಕ್ಕೆ ಆಧಾರ ಸಿಗದ ಕಾರಣ ಪ್ರಕರಣ ಜಟಿಲವಾಗಿತ್ತು. ಅಷ್ಟೇ ಅಲ್ಲದೇ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವುದು ಸುನ್ನಿ ವಕ್ಫ್ ಬೋರ್ಡ್ ವಾದವಾಗಿದ್ದರಿಂದ ಹಾಗಾದರೆ ರಾಮ ಜನಿಸಿದ್ದು ಎಲ್ಲಿ ಎನ್ನುವ ಕಠಿಣ ಪ್ರಶ್ನೆ ಎದ್ದಿತ್ತು.

Ayodhya Rama Temple 1

 

ಅಯೋಧ್ಯೆಯಲ್ಲಿ ರಾಮ ಜನಿಸಿಯೇ ಇಲ್ಲ ಎಂದು ವಾದಿಸಿದ್ದರೆ ಪ್ರಕರಣ ಬೇರೆ ರೀತಿಯ ತಿರುವು ಪಡೆದುಕೊಳ್ಳುತಿತ್ತು. ಆದರೆ ಇಲ್ಲಿ ವಿವಾದಿತ ಸ್ಥಳದಲ್ಲಿ ರಾಮ ಜನಿಸಿಲ್ಲ ಎನ್ನುವ ವಾದಕ್ಕೆ ಮಾತ್ರ ಆಕ್ಷೇಪ ಇದ್ದ ಕಾರಣ ರಾಮ ಅಯೋಧ್ಯೆಯಲ್ಲೇ ಜನಿಸಿದ್ದ ಎನ್ನುವ ಅಂಶ ದೃಢವಾಯಿತು.

ಈಗ ವಿವಾದಕ್ಕೆ ಕಾರಣವಾಗಿರುವ ಜಾಗದಲ್ಲೇ ರಾಮ ಹುಟ್ಟಿದ್ದಾನೆ ಎಂದು ತಿಳಿದುಕೊಳ್ಳುವುದು ಹೇಗೆ? ಈ ಎರಡನೇ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನ್ಯಾಯಾಧೀಶರು ವಾಲ್ಮೀಕಿ ರಾಮಾಯಣ ಮತ್ತು ಸ್ಕಂದ ಪುರಾಣದ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ರಕ್ತದಲ್ಲಿ ಬರೆದು ಸುಪ್ರೀಂ ತೀರ್ಪು ಸ್ವಾಗತಿಸಿದ ಮುಸ್ಲಿಂ ವ್ಯಕ್ತಿ

Ayodhya Judge 1

ರಾಮಾಯಣದ ಮೂಲ ಕೃತಿಯಾದ ವಾಲ್ಮೀಕಿ ರಾಮಾಯಣದ 10ನೇ ಶ್ಲೋಕದಲ್ಲಿ ಕೌಸಲ್ಯೆಯು ಮಗನೊಬ್ಬನಿಗೆ ಜನ್ಮ ನೀಡಿದ್ದಳು. ರಾಮನ ಆಗಮನದಿಂದ ಅಯೋಧ್ಯೆ ಪಾವನಗೊಂಡಿತು. ಮುಂದೆ ಆತ ವಿಶ್ವಕ್ಕೆ ದೇವರಾದ ಎನ್ನುವ ಉಲ್ಲೇಖವಿದೆ. ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎನ್ನುವುದಕ್ಕೆ ಉಲ್ಲೇಖ ಇದ್ದರೂ ವಾಲ್ಮೀಖಿ ರಾಮಾಯಣದಲ್ಲಿ ವಿವಾದಿತ ಜಾಗದಲ್ಲೇ ರಾಮ ಜನಿಸಿದ್ದ ಎನ್ನುವುದಕ್ಕೆ ಯಾವುದೇ ದಾಖಲೆಗಳಿರಲಿಲ್ಲ. ಹೀಗಾಗಿ ನ್ಯಾಯಾಧೀಶರು ಸ್ಕಂದ ಪುರಾಣವನ್ನು ಅಧ್ಯಯನ ಮಾಡಿದ್ದಾರೆ.

ಸ್ಕಂದ ಪುರಾಣದಲ್ಲಿರುವ ವೈಷ್ಣವಕಾಂಡದಲ್ಲಿ ಅಯೋಧ್ಯಾ ಮಹಾತ್ಮ ಅಧ್ಯಾಯದಲ್ಲಿ ರಾಮನ ಜನ್ಮಸ್ಥಾನದ ಉಲ್ಲೇಖದ ಬಗ್ಗೆ ಶ್ಲೋಕವಿದೆ. ಈ ಶ್ಲೋಕದ ಪ್ರಕಾರ ಇಲ್ಲಿಂದ ಈಶಾನ್ಯ ದಿಕ್ಕಿನಲ್ಲಿರುವ ಜಾಗವೇ ರಾಮಜನ್ಮ ಸ್ಥಾನ. ಮೋಕ್ಷ ಸ್ಥಾನವಾಗಿರುವ ಈ ಸ್ಥಳವು ವಿಘ್ನೇಶ್ವರದ ಪೂರ್ವ ದಿಕ್ಕಿನಲ್ಲಿದ್ದು, ವಶಿಷ್ಠದ ಉತ್ತರ ದಿಕ್ಕಿನಲ್ಲಿದೆ ಲಾವ್ಮಾಸಾ ಆಶ್ರಮದ ಪಶ್ಚಿಮ ದಿಕ್ಕಿನಲ್ಲಿದೆ ಎಂದು ಹೇಳುತ್ತದೆ.

ayodhya skanda purana 2

 

ಈ ಶ್ಲೋಕದಲ್ಲಿ ತಿಳಿಸಿದ ಅಂಶ ರಾಮಲಲ್ಲಾ ಕಡೆಯವರ ವಾದಕ್ಕೂ ತಾಳೆಯಾಗುತ್ತದೆಯೇ ಎನ್ನುವುದನ್ನು ಕೋರ್ಟ್ ಅಧ್ಯಯನ ಮಾಡಿದೆ. ಈ ಶ್ಲೋಕದಲ್ಲಿರುವ ಸ್ಥಳಗಳು ವಿವಾದಿತ ಪ್ರದೇಶದಲ್ಲಿರುವ ಸ್ಥಳಗಳಿಗೂ ತಾಳೆಯಾಗುತ್ತಾ ಎನ್ನುವುದನ್ನು ಪರಿಶೀಲಿಸಿದಾಗ, ಶ್ಲೋಕದಲ್ಲಿ ಉಲ್ಲೇಖಿಸಿರುವ ದಿಕ್ಕಿನಲ್ಲಿಯೇ ರಾಮಮಂದಿರವಿದ್ದು ಈಗಲೂ ಈ ಸ್ಥಳಗಳು ಇವೆ. ನಾವು ಈ ಸ್ಥಳಕ್ಕೆ ಭೇಟಿ ನೀಡಿದ್ದೇವೆ ಎನ್ನುವುದನ್ನು ಹಲವು ವ್ಯಕ್ತಿಗಳು ಮೌಖಿಕ ಸಾಕ್ಷ್ಯ ನುಡಿದಿದ್ದಾರೆ ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

ಸ್ಕಂದ ಪುರಾಣದ ಆಧಾರ ಮತ್ತು ಖಾಲಿ ಜಾಗದಲ್ಲಿ ಮಸೀದಿ ನಿರ್ಮಾಣವಾಗಿಲ್ಲ. ಹಿಂದೂ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಾಣವಾಗಿದೆ ಎನ್ನುವ ಭಾರತೀಯ ಪುರಾತತ್ವ ಇಲಾಖೆ ಸಾಕ್ಷ್ಯಗಳನ್ನು ಗಂಭೀರ ಪರಿಗಣಿಸಿದ ಕೋರ್ಟ್ ಅಂತಿಮವಾಗಿ ವಿವಾದಿತ 2.77 ಎಕ್ರೆ ಜಾಗ ರಾಮಲಲ್ಲಾಗೆ ಸೇರಬೇಕೆಂದು ಷರಾ ಬರೆದು ವಿವಾದವಾಗಿದ್ದ ಪ್ರಕರಣಕ್ಕೆ ಪೂರ್ಣ ವಿ’ರಾಮ’ ಹಾಕಿದೆ.

TAGGED:Ayodhyakannada newsRama TempleSkanda PuranaSuprme Courtಅಯೋಧ್ಯೆಅಯೋಧ್ಯೆ ಪ್ರಕರಣಬಾಬ್ರಿ ಮಸೀದಿರಾಮ ಮಂದಿರರಾಮಲಲ್ಲಾಸ್ಕಂದ ಪುರಾಣಹಿಂದೂ ದೇವಾಲಯ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್‌ ಹಾಸನ್‌ಗೆ ಮತ್ತೆ ಶಾಕ್‌ – ತುರ್ತು ವಿಚಾರಣೆ ನಡೆಸಲ್ಲ ಎಂದ ಸುಪ್ರೀಂ ಕೋರ್ಟ್‌
21 hours ago
Chitradurga Renukaswamy Father
ಮಗನ ಸಾವಿನ ನೋವು ನಿರಂತರವಾಗಿ ಕಾಡ್ತಿದೆ – ಮೃತ ರೇಣುಕಾಸ್ವಾಮಿ ತಂದೆ
2 days ago
virat kohli sumalatha ambareesh
ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ: ಸುಮಲತಾ ಬೇಸರ
2 days ago
madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
3 days ago

You Might Also Like

Shubhanshu Shukla 2
Latest

ನಾಳೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

Public TV
By Public TV
3 minutes ago
rahul gandhi siddaramaiah dk shivakumar
Bengaluru City

ಸಿದ್ದು ಸಂಪುಟಕ್ಕೆ ನಡೆಯುತ್ತಾ ಮೇಜರ್‌ ಸರ್ಜರಿ? – 10 ಸಚಿವರಿಗೆ ಕೊಕ್‌ ಸಾಧ್ಯತೆ

Public TV
By Public TV
15 minutes ago
E Khata BBMP
Bengaluru City

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – ಜುಲೈ 1ರಿಂದ ಬಿಬಿಎಂಪಿಯ ಹೊಸ ರೂಲ್ಸ್ ಜಾರಿ

Public TV
By Public TV
33 minutes ago
Nelamangala School Bus Overturn
Bengaluru City

Nelamangala | 2 ಸ್ಕೂಲ್ ಬಸ್‌ಗಳ ನಡುವೆ ಅಪಘಾತ – ಮಕ್ಕಳಿಗೆ ಸಣ್ಣಪುಟ್ಟ ಗಾಯ

Public TV
By Public TV
40 minutes ago
Weather 1
Bengaluru City

ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ – ಇಂದು ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

Public TV
By Public TV
1 hour ago
Chikkamagaluru
Chikkamagaluru

ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ಮೆಡಿಕಲ್ ವಿದ್ಯಾರ್ಥಿಗಳು – 6 ಗಂಟೆ ಬಳಿಕ ಪತ್ತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?