Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭ – ಅನರ್ಹರಿಗೆ ಶುರುವಾಗಿದೆ ಸುಪ್ರೀಂ ಟೆನ್ಶನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭ – ಅನರ್ಹರಿಗೆ ಶುರುವಾಗಿದೆ ಸುಪ್ರೀಂ ಟೆನ್ಶನ್

Bengaluru City

15 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭ – ಅನರ್ಹರಿಗೆ ಶುರುವಾಗಿದೆ ಸುಪ್ರೀಂ ಟೆನ್ಶನ್

Public TV
Last updated: November 11, 2019 7:19 am
Public TV
Share
3 Min Read
by election final
SHARE

– ಕಾಂಗ್ರೆಸ್, ಬಿಜೆಪಿಯಲ್ಲಿ ಬಂಡಾಯದ್ದೇ ತಲೆನೋವು

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮೈತ್ರಿ ಸರ್ಕಾರ ಕೆಡವಿದ್ದ 17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ ಆರ್‍ಆರ್ ನಗರ, ಮಸ್ಕಿ ಹೊರತುಪಡಿಸಿ 15 ಕ್ಷೇತ್ರಗಳ ಉಪಚುನಾವಣೆಗೆ ಇಂದು ಅಧಿಸೂಚನೆ ಹೊರಬೀಳಲಿದೆ. ಅಥಣಿ, ಕಾಗವಾಡ, ಗೋಕಾಕ್, ಎಲ್ಲಾಪುರ, ಹಿರೇಕೇರೂರು, ರಾಣೆಬೆನ್ನೂರು, ವಿಜಯ್ ನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಇಂದಿನಿಂದ ನೀತಿ ಸಂಹಿತೆ ಜಾರಿಗೆ ಬರಲಿದೆ.

ನವೆಂಬರ್ 11ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ.18 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ನ.19ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನ.21 ರಂದು ನಾಮಪತ್ರ ವಾಪಸ್‍ಗೆ ಕಡೆಯ ದಿನವಾಗಿದೆ. ಡಿಸೆಂಬರ್ 5 ರಂದು ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಡಿ.9 ರಂದು ಮತ ಎಣಿಕೆ ಹಾಗೂ ಫಲಿತಾಂಶ ಹೊರಬೀಳಲಿದೆ.

by election 8

ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ..!
ಉಪಸಮರದಲ್ಲಿ ಹೆಚ್ಚಿನ ಸ್ಥಾನ ಗೆದ್ದು, ಗದ್ದುಗೆ ಗಟ್ಟಿ ಮಾಡಿಕೊಳ್ಳಲು ಕಸರತ್ತು ನಡೆಸ್ತಿರುವ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಅಯೋಧ್ಯೆ ಎಂಬ ಹೊಸ ಅಸ್ತ್ರ ಸಿಕ್ಕಿದೆ. ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಹಸಿರುನಿಶಾನೆ ತೋರಿಸಿದ್ದನ್ನು ಪ್ರಸ್ತಾಪಿಸಿ, ರಾಮನಾಮ ಜಪಿಸುತ್ತಾ ಬಿಜೆಪಿ ನಾಯಕರು ಜನರ ಮುಂದೆ ಹೋಗುವ ಸಾಧ್ಯತೆಗಳು ಹೆಚ್ಚಿವೆ. ರಾಮ ಜಪ ಮಾಡಿದರೆ ಹೆಚ್ಚಿನ ಮತ ಫಸಲು ಬರುತ್ತದೆ ಎಂದು ನಂಬಿರುವ ರಾಜ್ಯ ಬಿಜೆಪಿ ನಾಯಕರು, ಅನುಮತಿಗಾಗಿ ಹೈಕಮಾಂಡ್‍ನತ್ತ ಚಿತ್ತ ಹರಿಸಿದ್ದಾರೆ.

ಹೀಗೆ ರಾಮನಾಮ ಪಠಣದ ಉಮೇದಿನಲ್ಲಿದ್ದ ಬಿಜೆಪಿಗೆ ಇದೀಗ ಬಂಡಾಯದ ಬಿಸಿ ತಾಗಲು ಶುರುವಾಗುತ್ತಿದೆ. ಹೊಸಕೋಟೆಯಲ್ಲಿ ತಮ್ಮ ರಾಜಕೀಯ ಎದುರಾಳಿ ಎಂಟಿಬಿಗೆ ಬಿಜೆಪಿ ಮಣೆ ಹಾಕಲು ಸಿದ್ಧತೆ ನಡೆಸ್ತಿರೋದನ್ನು ಅರಗಿಸಿಕೊಳ್ಳದ ಶರತ್ ಬಚ್ಚೇಗೌಡ ರೆಬೆಲ್ ಆಗಿದ್ದಾರೆ. ಪಕ್ಷೇತರರಾಗಿ ಇದೇ 15ರಂದು ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ತಮ್ಮನ್ನು ಬೆಂಬಲಿಸುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

by election 6 e1573436653946

ಈ ನಡುವೆ, ಸಿಎಂ ಯಡಿಯೂರಪ್ಪ, ಕೆಆರ್ ಪೇಟೆ ಕ್ಷೇತ್ರದಲ್ಲಿ ನಡೆದ ಯಾದವ ಸಮಾವೇಶದಲ್ಲಿ ಪಾಲ್ಗೊಂಡು ಯಾದವ ಸಮುದಾಯದ ಮತಗಳಿಗೆ ಗಾಳ ಹಾಕಲು ನೋಡಿದ್ದಾರೆ. ಇತ್ತ ಬೆಳಗಾವಿ ಬಿಜೆಪಿಯಲ್ಲಿ ಎದ್ದಿರುವ ಬಂಡಾಯದ ಬೇಗೆ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ಕಾಗವಾಡದಲ್ಲಿ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್‍ಗೆ ಬಿಜೆಪಿ ಮಣೆ ಹಾಕಲು ಮುಂದಾಗಿರೋದನ್ನು ವಿರೋಧಿಸಿ ಮಾಜಿ ಶಾಸಕ ರಾಜು ಕಾಗೆ ಬಂಡಾಯ ಎದ್ದಿದ್ದಾರೆ. ಕಾಂಗ್ರೆಸ್‍ನತ್ತ ಚಿತ್ತ ಹರಿಸಿದ್ದಾರೆ. ಇದರ ಭಾಗವಾಗಿ ರಾಜು ಕಾಗೆ, ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಸಿದ್ದುಗೆ ಸಾಥ್ ಕೊಡ್ತಾರಾ ಡಿಕೆ..?
ಹೈಕಮಾಂಡ್ ಮಟ್ಟದಲ್ಲಿ ಭಾರೀ ಲಾಬಿ ನಡೆಸಿ, ಕಷ್ಟಪಟ್ಟು ವಿಪಕ್ಷ ನಾಯಕನ ಸ್ಥಾನ ಗಿಟ್ಟಿಸಿಕೊಂಡ ಸಿದ್ದರಾಮಯ್ಯಗೆ ಈಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಬೇಕಾದ ಒತ್ತಡದಲ್ಲಿದ್ದಾರೆ. ಇದಕ್ಕೆ ಬೇಕಾದ ಪ್ರಯತ್ನಗಳನ್ನು ಮಾಡ್ತಿದ್ದಾರೆ. ಏಕಾಂಗಿಯಾಗಿ ಕಣಕ್ಕೆ ಧುಮುಕಿದ್ರೆ ಕಷ್ಟ ಎಂಬುದನ್ನು ಅರಿತಿರೋ ಸಿದ್ದರಾಮಯ್ಯ, ಈಗ ಸಾಮೂಹಿಕ ನಾಯಕತ್ವದ ಮಂತ್ರ ಪಠಣ ಮಾಡ್ತಿದ್ದಾರೆ. ಎಲೆಕ್ಷನ್‍ನಲ್ಲಿ ಜಂಟಿ ಪ್ರಚಾರ ನಡೆಸೋಣ ಎಂದು ಡಿಕೆಶಿಗೆ ಆಫರ್ ಕೊಟ್ಟಿದ್ದಾರೆ. ಆದರೆ ಇದಕ್ಕೆ ಇನ್ನೂ ಡಿಕೆಶಿ ಯಾವುದೇ ರಿಯಾಕ್ಷನ್ ಕೊಟ್ಟಿಲ್ಲ. ಜೊತೆಗೆ ಮೂಲ ಕಾಂಗ್ರೆಸ್ಸಿಗರು ಕೂಡ ಸಿದ್ದರಾಮಯ್ಯಗೆ ಕೈಕೊಡುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ. ಈಗಾಗಲೇ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿರುವ ಕೈ ಪಾಳಯ ಇಂದು ಉಳಿದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಅಂತಿಮಗೊಳಿಸುವ ಸಂಭವ ಇದೆ.

by election 3 e1573436684714

ಆದರೆ ಗೋಕಾಕ್ ಪಾಲಿಟಿಕ್ಸ್ ನಲ್ಲಿ ಡಿಕೆಶಿ ಮತ್ತೆ ಮೂಗು ತೂರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಒಂದೆಡೆ, ರಮೇಶ್ ಜಾರಕಿಹೊಳಿ ವಿರುದ್ಧ ಲಖನ್ ಜಾರಕಿಹೊಳಿ ಕಣಕ್ಕಿಳಿಸಲು ಸಿದ್ದು ಆಪ್ತ ಸತೀಶ್ ಸಿದ್ಧತೆ ನಡೆಸಿದ್ದಾರೆ. ಈ ಹೊತ್ತಲ್ಲೇ ಮತ್ತೊಬ್ಬ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಬಿಜೆಪಿಯ ಅಶೋಕ್ ಪೂಜಾರಿ, ಡಿಕೆಶಿಯನ್ನು ಇವತ್ತು ಮೀಟ್ ಮಾಡಿ ಚರ್ಚೆ ನಡೆಸಿದ್ದಾರೆ. ಅಶೋಕ್ ಪೂಜಾರಿ ಪರ ಡಿಕೆ ಲಾಬಿ ನಡೆಸುವ ಸಂಭವವೂ ಇದೆ. ಆದರೆ ಲಖನ್ ಬಿಟ್ಟು ಬೇರೆಯವರಿಗೆ, ಟಿಕೆಟ್ ಕೊಟ್ರೆ ಕಷ್ಟ ಎಂದಿದ್ದಾರೆ.

ಇತ್ತ, ಸುಪ್ರೀಂಕೋರ್ಟ್ ಬುಧವಾರ ನೀಡಲಿರುವ ತೀರ್ಪಿನತ್ತ ಚಿತ್ತ ಹರಿಸಿರೋ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್‍ಗೆ ಮೋಸ ಮಾಡಿ ಹೋಗುವಾಗ, ಹಾಕಿದ್ದು ಚೂರಿನೋ ಚಾಕುನೋ.. ನೀವು ಮಾಡಿದು ಮೋಸ ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಂದ್ಕಡೆ ಆನಂದ್ ಸಿಂಗ್ ಕೂಡ ಸದ್ದಿಲ್ಲದೇ ಪ್ರಚಾರಕ್ಕೆ ಮುಂದಾಗಿದ್ದಾರೆ. ವಿಜಯನಗರ ಶೀಘ್ರ ಜಿಲ್ಲೆ ಆಗಲಿದೆ ಎಂದು ವೀಡಿಯೋ ಹರಿದುಬಿಟ್ಟಿದ್ದಾರೆ. ಅನರ್ಹರು ಏನೇ ತಯಾರಿ ನಡೆಸಿದ್ರೂ, ಬಿಜೆಪಿ ಏನೆಲ್ಲಾ ಕಸರತ್ತು ನಡೆಸಿದ್ರೂ ಅವ್ರಿಗೆ ಸುಪ್ರೀಂ ತೀರ್ಪಿನ ಆತಂಕವಂತೂ ಇದ್ದೇ ಇದೆ. ಬುಧವಾರ ಏನಾಗುತ್ತೆ ಎಂಬುದನ್ನು ಕಾದುನೋಡಬೇಕಿದೆ.

by election 5 e1573436698320

TAGGED:bengaluruby electionPublic TVಉಪ ಚುನಾವಣೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
1 minute ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
8 minutes ago
Strait Of Malacca US
Latest

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ?

Public TV
By Public TV
36 minutes ago
Vachananand Swamiji Harihara Panchamasali Peetha
Davanagere

ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ

Public TV
By Public TV
36 minutes ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
9 hours ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?