Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

15ರ ಬಾಲಕಿ ಮೇಲೆ ರೇಪ್ – ಮಗುವನ್ನೇ ಮಾರಿ ಸಂತ್ರಸ್ತೆಗೆ ಪರಿಹಾರ ನೀಡಲು ಆದೇಶ

Public TV
Last updated: November 12, 2019 3:38 pm
Public TV
Share
3 Min Read
rape
SHARE

ಪಾಟ್ನಾ: 15 ವರ್ಷದ ಬಾಲಕಿ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿದ್ದಾಳೆ. ಇದಕ್ಕೆ ಪರಿಹಾರ ಕೇಳಿದರೆ ಮಗುವನ್ನು ಮಾರಿ ಸಂತ್ರಸ್ತೆಗೆ ಪರಿಹಾರ ನೀಡಿ ಎಂದು ಅಲ್ಲಿನ ಸ್ಥಳೀಯ ಪಂಚಾಯಿತಿ ಆರೋಪಿಗಳಿಗೆ ಆದೇಶಿಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ಬಿಹಾರದ ಮುಜಫರ್ಪುರದ ಕತ್ರಾದಲ್ಲಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿ ಮೇಲೆ ಮೌಲಾನಾ ಮಕ್ಬೂಲ್ ಹಾಗೂ ಮಹಮ್ಮದ್ ಶೋಯೆಬ್ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಗರ್ಭಿಣಿಯಾಗಿದ್ದಾಳೆ. ಇದಕ್ಕೆ ಪರಿಹಾರ ಕೇಳಲು ಅಲ್ಲಿನ ಸಮುದಾಯ ಪಂಚಾಯಿತಿ ಮೊರೆ ಹೋದರೆ, ಅದೇ ಮಗುವನ್ನು ಮಾರಾಟ ಮಾಡಿ ಬಂದ ಹಣವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡುವಂತೆ ಆದೇಶಿಸಿದೆ.

ಸಮುದಾಯ ಪಂಚಾಯಿತಿಯಲ್ಲಿ ನ್ಯಾಯ ಸಿಗದ ಕಾರಣ ಬಾಲಕಿ ಮುಜಾಫರ್ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದ್ದು, ಆರೋಪಿಗಳಾದ ಮೌಲಾನಾ ಮಕ್ಬೂಲ್ ಹಾಗೂ ಮಹಮ್ಮದ್ ಶೋಯೆಬ್ ಬಂಧಿಸಲು ಪೊಲೀಸರು ದಾಳಿ ನಡೆಸುತ್ತಿದ್ದಾರೆ.

UP Rape

ಕತ್ರ ಮಸೀದಿ ಸಮಿತಿಯ ಸದಸ್ಯ ಮುಹಮ್ಮದ್ ಸದ್ರೆ ಈ ಕುರಿತು ಮಾಹಿತಿ ನೀಡಿ, ಈ ವರ್ಷದ ಆರಂಭದಿಂದಲೂ ಸಮುದಾಯ ಪಂಚಾಯಿತಿಯಲ್ಲಿ ಈ ಪ್ರಕರಣ ವಿಚಾರಣೆ ನಡೆಯುತ್ತಿದ್ದು, ಅತ್ಯಾಚಾರ ನಡೆದಿರುವ ಕುರಿತು ಅಪ್ರಾಪ್ತ ಬಾಲಕಿ ನ್ಯಾಯ ಕೇಳುತ್ತಿದ್ದಾಳೆ. ಕಳೆದ ತಿಂಗಳು ಅವಳು ಮಗುವಿಗೆ ಜನ್ಮ ನೀಡಿದ್ದಾಳೆ. ಈ ದುಃಸ್ಥಿತಿಗೆ ನಮ್ಮ ಸಮುದಾಯ ಪಂಚಾಯಿತಿಯೇ ಕಾರಣ. ಮಗುವನ್ನು ಮಾರಿ ಬಂದ ಹಣವನ್ನು ಅವಳಿಗೆ ನೀಡುವಂತೆ ಆದೇಶಿಸಿದೆ ಎಂದರು.

ಸಮಸ್ತಿಪುರ ಜಿಲ್ಲೆಯ ತಾಜ್‍ಪುರದಲ್ಲಿ ಈ ಕುರಿತು ಕುಟುಂಬದವರೊಂದಿಗೆ ಮಾತುಕತೆ ನಡೆಸಲಾಯಿತು. ಮಗುವನ್ನು ಒಂದು ಲಕ್ಷಕ್ಕೆ ಅವರಿಗೆ ಮಾರಾಟ ಮಾಡಬೇಕಾಗಿತ್ತು. ಆದರೆ ನಾನು ಅದರಲ್ಲಿ ಮಧ್ಯ ಪ್ರವೇಶಿಸಲಿಲ್ಲ. ಮಗುವನ್ನು ಮಾರಾಟ ಮಾಡಿರುವ ಕುರಿತು ನನಗೆ ತಿಳಿದಿಲ್ಲ ಎಂದು ಮಾಹಿತಿ ನೀಡಿದರು.

ಕತ್ರಾ ಪಂಚಾಯತ್‍ನ ಚುನಾಯಿತ ಸದಸ್ಯ ಅರುಣ್ ಕುಮಾರ್ ಈ ಕುರಿತು ಮಾಹಿತಿ ನೀಡಿ, ನಾನು ಈ ಕುರಿತು ಮಧ್ಯ ಪ್ರವೇಶಿಸಿ ನ್ಯಾಯ ಕೊಡಿಸಬೇಕೆಂದು ಬಾಲಕಿ ನನ್ನನ್ನು ಸಂಪರ್ಕಿಸಿದಳು. ಇಂತಹ ಅಪರಾಧಗಳು ಪಂಚಾಯಿತಿಗಳಿಂದ ಇತ್ಯರ್ಥವಾಗುವುದಿಲ್ಲ. ಪೊಲೀಸರಿಗೆ ಈ ಕುರಿತು ದೂರು ನೀಡುಂತೆ ಸಲಹೆ ನೀಡಿದೆ. ಅಲ್ಲದೆ ಪೊಲೀಸರಿಗೆ ಬರೆಯುವ ಅರ್ಜಿ ಎಲ್ಲಿ ಸಿಗುತ್ತದೆ ಎಂಬುದನ್ನು ಸಹ ಅವಳಿಗೆ ಹೇಳಿದ್ದೆ ಎಂದು ತಿಳಿಸಿದರು. ಆದರೂ ಅವರು ಮಸೀದಿಯ ಸಮಿತಿಯನ್ನು ಸಂಪರ್ಕಿಸಲು ನಿರ್ಧರಿಸಿದರು. ಸಮಸ್ಯೆ ಬಗೆಹರಿಸಲು ಸಮಿತಿ ಒಂದೆರಡು ಬಾರಿ ಪಂಚಾಯಿತಿ ನಡೆಸಿತು. ಆದರೆ ಪ್ರಯೋಜನವಾಗಲಿಲ್ಲ ಎಂದು ತಿಳಿಸಿದರು.

rape

ಮಗುವನ್ನು ಮಾರಾಟ ಮಾಡಲು ಪಂಚಾಯಿತಿ ಆದೇಶ ನೀಡಿದ ನಂತರ ಬಾಲಕಿ ಜಿಲ್ಲಾ ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾಳೆ. ಮೌಲಾನಾ ಮಕ್ಬೂಲ್‍ಗೆ ಅಲ್ಲಿನ ಕುಟುಂಬದ ಸದಸ್ಯರು ಆಹಾರವನ್ನು ಕಳುಹಿಸುತ್ತಿದ್ದರು. ಕೆಲವೊಮ್ಮೆ ಕುಟುಂಬಗಳು ಹುಡುಗಿಯರ ಬಳಿ ಅವನಿಗೆ ಆಹಾರ ಕಳುಹಿಸುತ್ತಿದ್ದರು. ಅದೆ ರೀತಿ ಬಾಲಕಿ ಆಹಾರ ನೀಡಲು ತೆರಳಿದಾಗ ಆರೋಪಿ ಮಾದಕ ವಸ್ತುಗಳನ್ನು ಲೇಪಿಸಿದ ಸಿಹಿ ತಿಂಡಿಯನ್ನು ನೀಡಿದ್ದ. ಆಹಾರ ನೀಡಿ ಹೊರ ಬರುತ್ತಿದ್ದಂತೆಯೇ ಅವಳ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂಬುದಾಗಿ ದೂರು ದಾಖಲಾಗಿದೆ ಎಂಧು ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಎಸಗಿದ ನಂತರ ಎರಡು ತಿಂಗಳುಗಳ ಕಾಲ ಬಾಲಕಿಗೆ ಆರೋಪಿ ಬೆದರಿಕೆ ಒಡ್ಡಿದ್ದು, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಸ್ಥಳೀಯ ಯುವಕ ಶೋಯೆಬ್ ಪರಿಸ್ಥಿತಿಯ ಬಗ್ಗೆ ತಿಳಿದಿದ್ದು, ಅವನೂ ಸಹ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಸವಿತಾ ದೇವಿ ತಿಳಿಸಿದ್ದಾರೆ.

ಪರಿಹಾರದ ಎಲ್ಲ ಬಾಗಿಲುಗಳು ಮುಚ್ಚಿದ ನಂತರ ಬಾಲಕಿ ನಮ್ಮ ಬಳಿ ಬಂದಿದ್ದಾಳೆ. ಈ ಕುರಿತು ಐಪಿಸಿ ಮತ್ತು ಪೋಕ್ಸೋ ಕೇಸ್ ಅಡಿ ಪ್ರಕರಣ ದಾಖಲಿಸಿದ್ದೇವೆ. ಹಳ್ಳಿಯಲ್ಲಿ ಮೂರು ಬಾರಿ ದಾಳಿ ನಡೆಸಲಾಗಿದ್ದು, ಆರೋಪಿಗಳು ಪತ್ತೆಯಾಗಿಲ್ಲ. ಆರೋಪಿಗಳ ಮಾಹಿತಿ ನೀಡುವಂತೆ ಪೋಸ್ಟರ್ ಅಂಟಿಸುತ್ತೇವೆ ಎಂದು ತಿಳಿಸಿದ್ದಾರೆ.

Police Jeep

ಮಗುವಿನ ಹುಟ್ಟಿಗೆ ಇಬ್ಬರಲ್ಲಿ ಕಾರಣ ಯಾರು ಎಂಬುದನ್ನು ತಿಳಿಯಲು ಡಿಎನ್‍ಎ ಪರೀಕ್ಷೆ ಮಾಡಿಸುತ್ತಿದ್ದೇವೆ ಎಂದು ಹಿರಿಯ ಅಧೀಕಾರಿಗಳು ಮಾಹಿತಿ ನೀಡಿದ್ದಾರೆ.

TAGGED:BihargirlsPanchayatpolicePublic TVrapeಅತ್ಯಾಚಾರಪಂಚಾಯಿತಿಪಬ್ಲಿಕ್ ಟಿವಿಪೊಲೀಸರುಬಾಲಕಿಬಿಹಾರ
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
34 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
40 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
57 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?