Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

Public TV
Last updated: November 13, 2019 3:45 pm
Public TV
Share
2 Min Read
PRAKASH RAJ
SHARE

ಬೆಂಗಳೂರು: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ನಟ ಪ್ರಕಾಶ್ ರಾಜ್, ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ. ಹೀಗಾಗಿ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ಪ್ರಕಾಶ್ ರಾಜ್, ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು ಎನ್ನುವ ರೀತಿ ತೀರ್ಪು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

prakash rai

ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು ‘ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.

ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

“ಹಾವೂ ಸಾಯ್ಬಾರ್ದು..ಕೋಲೂ ಮುರೀಬಾರ್ದು “ಎನ್ನುವ ತೀರ್ಪಿನ ಆಶೀರ್ವಾದ ಪಡಕೊಂಡು “ತ್ರಪ್ತ”ಶಾಸಕರು ..ಕೊಂಕಣ ಸುತ್ಕೊಂಡು ಮ್ಯಲಾರಕ್ ಬಂದವೆ ..ಓಳ್ಳೇದೆ ಆಯ್ತು ..ಸ್ವಾಭಿಮಾನಿ ಕನ್ನಡಿಗರೆ .. ಇವುಗಳು ..ಜನ್ಮ ಜನ್ಮಕ್ಕೂ ಮರೀದೆ ಇರೋ ತೀರ್ಪು ಕೊಡೋದು ಈಗ ನಮ್ಮ ಜವಾಬ್ದಾರಿ ..#justAsking

— Prakash Raj (@prakashraaj) November 13, 2019

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಕೆಲವರು ಸ್ಪಷ್ಟಪಡಿಸಿದ್ದಾರೆ.

Rebel MLAs C 1

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.

TAGGED:Disqualified MLAsPrakash RajPublic TVSupreme Courtverdictಅನರ್ಹ ಶಾಸಕರುಉಪ ಚುನಾವಣೆಪಬ್ಲಿಕ್ ಟಿವಿಪ್ರಕಾಶ್ ರಾಜ್ಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
17 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
29 minutes ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
34 minutes ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
45 minutes ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
1 hour ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
1 hour ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?