ವಿಶ್ವಕಪ್ ಫೈನಲಿನಲ್ಲಿ ಶತಕ ವಂಚಿತನಾಗಲು ಧೋನಿಯೇ ಕಾರಣ: ಸತ್ಯ ಬಿಚ್ಚಿಟ್ಟ ಗಂಭೀರ್

Public TV
3 Min Read
Gambhir MS Dhoni

ನವದೆಹಲಿ: ನಾನು 2011ರ ವಿಶ್ವಕಪ್‍ನ ಫೈನಲ್ ಪಂದ್ಯದಲ್ಲಿ ಶತಕ ವಂಚಿತನಾಗಲು ಮಹೇಂದ್ರ ಸಿಂಗ್ ಧೋನಿ ಕಾರಣ ಎಂದು ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಆರೋಪಿಸಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ 2011ರ ಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ ಬರೋಬ್ಬರಿ 28 ವರ್ಷದ ನಂತರ ವಿಶ್ವಕಪ್ ಅನ್ನು ಎತ್ತಿಹಿಡಿದಿತ್ತು. ಈ ಪಂದ್ಯದಲ್ಲಿ ಕೇವಲ ಮೂರು ರನ್‍ಗಳಿಂದ ಶತಕ ವಂಚಿತರಾಗಿದ್ದ ಗೌತಮ್ ಗಂಭೀರ್ ಅವರು, ನಾನು ಶತಕ ವಂಚಿತನಾಗಲು ಅಂದಿನ ನಾಯಕ ಎಂ.ಎಸ್ ಧೋನಿ ಅವರು ಕಾರಣ ಎಂದು ಹೇಳಿದ್ದಾರೆ.

dhoni gambhir

ಈ ವಿಚಾರವಾಗಿ ಮಾತನಾಡಿರುವ ಗಂಭೀರ್ ಅವರು, ನಾನು ಎಲ್ಲೇ ಹೋದರೂ ಯುವಕರು ಆ ದಿನ ನೀವು ಯಾಕೆ ಶತಕ ಹೊಡೆದಿಲ್ಲ ಎಂದು ಪ್ರಶ್ನಿಸುತ್ತಾರೆ. ನನಗೂ ಯಾವಗಲೂ ಅನ್ನಿಸುತ್ತದೆ. ಆ ಶತಕ ಸಿಡಿಸಿದ್ದರೆ ನನ್ನ ಕ್ರಿಕೆಟ್ ಜೀವನ ಇನ್ನೂ ಚೆನ್ನಾಗಿ ಇರುತಿತ್ತು. ಆದರೆ ನನ್ನ ವೈಯಕ್ತಿಕ ಸ್ಕೋರ್ ಅನ್ನು ಹಚ್ಚಿಸಿಕೊಳ್ಳುವ ಬರದಲ್ಲೇ ನಾನು ಅವತ್ತು ಶತಕ ವಂಚಿತನಾದೆ ಎಂದು ಹೇಳಿದ್ದಾರೆ.

ಆ ಪಂದ್ಯದ ವೇಳೆ ನನಗೆ ನಾನು 97 ರನ್ ಹೊಡೆದಿದ್ದೇನೆ ಎಂಬ ಅರಿವೇ ಇರಲಿಲ್ಲ. ಕೇವಲ ನನ್ನ ಗುರಿ ಶ್ರೀಲಂಕಾ ನೀಡಿದ 275 ರನ್‍ಗಳನ್ನು ಬೆನ್ನಟ್ಟವುದು ಆಗಿತ್ತು. ಆದರೆ ಆ ಓವರಿನ ಮಧ್ಯದಲ್ಲಿ ನನ್ನ ಬಳಿಗೆ ಬಂದ ಧೋನಿ ಅವರು, ನೀನು ಈಗ 97 ರನ್ ಹೊಡೆದಿದ್ದಿ. ಇನ್ನು ಮೂರು ರನ್ ಹೊಡೆದರೆ ಶತಕ ಆಗುತ್ತದೆ ಎಂದು ಹೇಳಿ ನನ್ನ ಗಮನಕ್ಕೆ ತಂದರು. ಆಗ ನನಗೆ ನನ್ನ ವೈಯಕ್ತಿಕ ಸ್ಕೋರ್ ಮೇಲೆ ಗಮನ ಹೆಚ್ಚಾಯ್ತು. ಆದ್ದರಿಂದ ನಾನು ಅಂದು ಔಟ್ ಆದೆ. ಧೋನಿ ಅವರು ಅದನ್ನು ನೆನಪಿಸದೆ ಇದ್ದರೆ ಅವತ್ತು ನಾನು ಶತಕ ಸಿಡಿಸುತ್ತಿದ್ದೆ ಎಂದು ನೆನಪಿಸಿಕೊಂಡರು.

Gambhir Hero

2011 ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 275 ರನ್‍ಗಳ ಮೊತ್ತವನ್ನು ಬೆನ್ನಟ್ಟಲು ಹೋಗಿ ಅಲ್ಪ ಮೊತ್ತಕ್ಕೆ ಮೊದಲ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟ ಸಿಲುಕಿದ್ದ ಭಾರತವನ್ನು ಗೌತಮ್ ಗಂಭೀರ್ ಅವರ ತಾಳ್ಮೆಯ ಆಟವಾಡಿ 3 ರನ್ ಗಳಿಂದ ಶತಕದಿಂದ ವಂಚಿತರಾದರು. ಲಂಕಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ್ದ ಗೌತಮ್ 97 ರನ್(122 ಎಸೆತ, 9 ಬೌಂಡರಿ) ಹೊಡೆದು ಔಟಾದರು. ಶತಕಕ್ಕೆ ಮೂರು ರನ್‍ಗಳ ಅವಶ್ಯಕತೆ ಇದ್ದಾಗ ಥಿಸರಾ ಪೆರೆರಾ ಅವರಿಗೆ ಬೌಲ್ಡ್ ಆಗಿದ್ದರು.

2011 ಏಪ್ರಿಲ್ 2 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 275 ರನ್ ಗಳ ಗುರಿ ಹೊಂದಿತ್ತು. ಆದರೆ ಸಚಿನ್ ತೆಂಡೂಲ್ಕರ್ ಹಾಗೂ ವೀರೇಂದ್ರ ಸೆಹ್ವಾಗ್ ಅವರು ಮಾಲಿಂಗ ಅವರ ಬೌಲಿಂಗ್ ಗೆ ಬೇಗ ಔಟಾದರು. ಈ ವೇಳೆ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ಜೋಡಿಯಾಗಿ 83 ರನ್ ಗಳ ಕೊಡುಗೆ ನೀಡಿದ್ದರು. ಆದರೆ 22ನೇ ಓವರ್ ಬಳಿಕ ಶ್ರೀಲಂಕಾ ತಂಡ ಮೇಲುಗೈ ಸಾಧಿಸುತ್ತಿತ್ತು. ಈ ವೇಳೆ ವಿರಾಟ್ ಕೊಹ್ಲಿ ಔಟಾಗುತ್ತಿದಂತೆ ಧೋನಿ ಬ್ಯಾಟಿಂಗ್ ಇಳಿದಿದ್ದರು.

post image ca258e5

ಈ ವೇಳೆ ಗಂಭೀರ್ ಜೊತೆ ಉತ್ತಮ ಶತಕದ ಜೊತೆಯಾಟವಾಡಿದ ಧೋನಿ 4 ವಿಕೆಟಿಗೆ 109 ರನ್ ಗಳ ಜೊತೆಯಾಟವಾಡಿದರು. ಈ ಬಳಿಕ ಜೊತೆಯಾದ ಯುವರಾಜ್ ಸಿಂಗ್ ಮತ್ತು ಧೋನಿ ಮುರಿಯದ 5ನೇ ವಿಕೆಟಿಗೆ 54 ರನ್ ಜೊತೆಯಾಟವಾಡಿ 48.2 ಓವರ್ ಗಳಲ್ಲಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಧೋನಿ 79 ಎಸೆತಗಳಲ್ಲಿ 91 ರನ್ (8 ಬೌಂಡರಿ, 2 ಸಿಕ್ಸರ್) ಹೊಡೆದು ಕೊನೆಗೆ ಸಿಕ್ಸರ್ ಸಿಡಿಸಿ ಭಾರತಕ್ಕೆ ಕಪ್ ಗೆದ್ದುಕೊಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *