ಬಾಗಲಕೋಟೆ: ಬಾವಿಯಲ್ಲಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದಲ್ಲಿ ನಡೆದಿದೆ.
ಕವಿತಾ ಬ್ಯಾಡಗಿ(24) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಗೃಹಿಣಿ. ಕಲಬುರಗಿ ಜಿಲ್ಲೆ ಅಪ್ಜಲ್ಪುರ ತಾಲೂಕಿನ ಚಿಕ್ಕಸಂಗಿ ಗ್ರಾಮದ ನಿವಾಸಿಯಾಗಿರುವ ಕವಿತಾ ಆರು ವರ್ಷದ ಹಿಂದೆ ಕಾಡಪ್ಪ ಎಂಬಾತನನ್ನು ಮದುವೆ ಮಾಡಿಕೊಂಡರು.
ಮೃತ ಕವಿತಾಳ ಪೋಷಕರು ಇದು ಕೊಲೆ ಎಂದು ಆರೋಪ ಮಾಡುತ್ತಿದ್ದಾರೆ. ಪದೇ ಪದೇ ವರದಕ್ಷಿಣೆ ತರುವಂತೆ ಕಾಡಪ್ಪ, ಕವಿತಾಳ ಮೇಲೆ ಹಲ್ಲೆ ಮಾಡುತ್ತಿದ್ದರು. ಈಗ ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.
ವರದಕ್ಷಿಣೆ ತಾರದ ಹಿನ್ನೆಲೆಯಲ್ಲಿ ಕವಿತಾಳನ್ನು ಕೊಲೆ ಮಾಡಿ ಬಾವಿಗೆ ಎಸೆಯಲಾಗಿದೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಕುಟುಂಬಸ್ಥರು ಕವಿತಾಳ ಪತಿ ಕಾಡಪ್ಪ, ಅತ್ತೆ ಬಾಗವ್ವ, ಮೈದುನ, ನಾದಿನಿ ಸೇರಿದಂತೆ ಆರು ಜನರ ವಿರುದ್ಧ ಆರೋಪ ಮಾಡುತ್ತಿದ್ದಾರೆ.
ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.