ಕೆ.ಆರ್ ಪೇಟೆಯಲ್ಲಿ ತ್ರಿಕೋನ ಸ್ಪರ್ಧೆ- ಕೈ, ದಳಕ್ಕೆ ಬಿಜೆಪಿ ಟಕ್ಕರ್

Public TV
1 Min Read
Congress BJP JDS

ಮಂಡ್ಯ: ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವೆ ಮಾತ್ರ ನೇರ ಹಣಾಹಣಿ ನಡೆಯುತ್ತಿತ್ತು. ಆದರೆ ಈಗ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಈ ಎರಡು ಪಕ್ಷಗಳಿಗೆ ಬಿಜೆಪಿ ಸಾಕಷ್ಟು ಪೈಪೋಟಿ ನೀಡುತ್ತಿದೆ. ಹೀಗಾಗಿ ಈ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಕೆ.ಆರ್.ಪೇಟೆ ಉಪಚುನಾವಣೆ ಅಖಾಡ ರಂಗೇರಿದೆ. ಗೆಲುವಿಗಾಗಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದುವರೆಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಮಾತ್ರ ನೇರ ಹಣಾಹಣಿ ಇತ್ತು. 1994ರಲ್ಲಿ ಬಿಜೆಪಿ ಅಭ್ಯರ್ಥಿ ಕೆಂಗೇಗೌಡ ಮಾತ್ರ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದರು. ಅದನ್ನು ಹೊರತು ಪಡಿಸಿದರೆ ಮತ್ತೆ ಈ ಕ್ಷೇತ್ರದಲ್ಲಿ ಬಿಜೆಪಿ ಸದ್ದೇ ಮಾಡಿರಲಿಲ್ಲ. ಆದರೆ ಈ ಬಾರಿ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಕಣದಲ್ಲಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಟಕ್ಕರ್ ನೀಡಲು ಸಜ್ಜಾಗಿದೆ.

mnd vijayendra

ಸಿಎಂ ಯಡಿಯೂರಪ್ಪ ಅವರ ಹುಟ್ಟುರೂ ಕ್ಷೇತ್ರವಾದ ಕೆ.ಆರ್ ಪೇಟೆಯಲ್ಲಿ ಕಮಲವನ್ನು ಅರಳಿಸಲು ಚತುರೋಪಾಯಗಳನ್ನೇ ನಡೆಸಿದ್ದಾರೆ. ಕಳೆದ ಒಂದು ವಾರದಿಂದ ಸಿಎಂ ಪುತ್ರ ವಿಜಯೇಂದ್ರ ಕೆ.ಆರ್ ಪೇಟೆ ಕ್ಷೇತ್ರದಲ್ಲೇ ವಾಸ್ತವ್ಯ ಹೂಡಿ ನಾರಾಯಣಗೌಡ ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇದಲ್ಲದೆ ಈ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳ ಪ್ರಾಬಲ್ಯ ಇರುವುದರಿಂದ ಬಿಜೆಪಿಯ ಒಕ್ಕಲಿಗ ಮುಖಂಡರನ್ನೇ ಹಾಕಿಕೊಂಡು ಪ್ರಚಾರ ನಡೆಸುತ್ತಿದೆ.

BJP BSY

ಕೆ.ಆರ್ ಪೇಟೆ ಇತಿಹಾಸದಲ್ಲಿ ನಡೆದ ಚುನಾವಣೆಗಳಲ್ಲಿ ಅಬ್ಬರ ಮಾಡದ ಬಿಜೆಪಿ, ಇದೀಗ ಉಪ ಕದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಮೂರು ಪಕ್ಷದ ಅಭ್ಯರ್ಥಿಗಳ ಪೈಕಿ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಅನ್ನೋದನ್ನ ಕಾದುನೋಡಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *