Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ಮೆಕ್ಯಾನಿಕಲ್ ಎಂಜಿನಿಯರ್ ನೆರವಿನಿಂದ ವಿಕ್ರಮ್ ಲ್ಯಾಂಡರ್ ತ್ಯಾಜ್ಯ ಪತ್ತೆ ಹಚ್ಚಿದ ನಾಸಾ

Public TV
Last updated: December 3, 2019 1:08 pm
Public TV
Share
3 Min Read
shanmuga subramanian
SHARE

ಚೆನ್ನೈ: ಬಹು ನಿರೀಕ್ಷಿತ ಚಂದ್ರಯಾನ-2ನ ವಿಕ್ರಮ್ ಲ್ಯಾಂಡರ್ ಪತನಗೊಂಡ ನಂತರ ಹೇಗಾಯಿತು, ಏನಾಯಿತು ಎಂಬುದರ ಕುರಿತು ಇಸ್ರೋ, ನಾಸಾ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದರು. ಆದರೆ ಕಂಡು ಹಿಡಿಯುವುದು ಕಷ್ಟದ ಕೆಲಸವಾಗಿತ್ತು. ಇದೀಗ ನಾಸಾ ವಿಕ್ರಮ್ ಲ್ಯಾಂಡರ್ ನ ತ್ಯಾಜ್ಯ ಪತ್ತೆ ಹಚ್ಚಿದ್ದು, ವಿಶೇಷವೆಂದರೆ ನಾಸಾಗೆ ತಮಿಳುನಾಡಿನ ಎಂಜಿನಿಯರ್ ಸಹಾಯ ಮಾಡಿದ್ದಾರೆ.

ಈ ಕುರಿತು ಸ್ವತಃ ನಾಸಾ ಸ್ಪಷ್ಟಪಡಿಸಿದ್ದು, ತಮಿಳುನಾಡಿನ 33 ವರ್ಷದ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಷಣ್ಮುಗ ಸುಬ್ರಹ್ಮಣಿಯನ್ ಅವರ ಸಹಾಯದಿಂದ ನಾವು ವಿಕ್ರಮ್ ಲ್ಯಾಂಡರ್ ಪತನವಾಗಿರುವುದನ್ನು ಪತ್ತೆ ಹಚ್ಚಲು ಸಾಧ್ಯವಾಯಿತು ಎಂದು ಹೇಳಿದೆ. ಪತ್ತೆ ಹಚ್ಚಲು ಸಹಕರಿಸಿದ್ದಕ್ಕೆ ಷಣ್ಮುಗ ಅವರಿಗೆ ಇ-ಮೇಲ್ ಮೂಲಕ ನಾಸಾ ಧನ್ಯವಾದ ತಿಳಿಸಿದೆ.

ಪ್ರತಿಷ್ಠಿತ ನಾಸಾ ಸಂಸ್ಥೆಯೇ ವಿಕ್ರಮ್ ಲ್ಯಾಂಡ್‍ನ ಸುಳಿವು ಕಂಡುಹಿಡಿಯಲು ವಿಫಲವಾಯಿತಲ್ಲ ಎಂಬ ವಿಷಯ ಷಣ್ಮುಗ ಅವರಲ್ಲಿ ಕುತೂಹಲ ಕೆರಳಿಸಿತು. ಹೀಗಾಗಿ ಈ ಕುರಿತು ಸಂಶೋಧನೆ ನಡೆಸಲು ಪ್ರಾರಂಭಿಸಿದರು. ಸಿಕ್ಕ ಮಾಹಿತಿಯನ್ನು ಇ-ಮೇಲ್ ಹಾಗೂ ಟ್ವಿಟ್ಟರ್ ಮೂಲಕ ನಾಸಾದೊಂದಿಗೆ ಹಂಚಿಕೊಳ್ಳಲು ಪ್ರಾರಂಭಿಸಿದರು. ಇದು ನಾಸಾ ವಿಕ್ರಮ್ ಲ್ಯಾಂಡರ್ ಪತನವನ್ನು ಪತ್ತೆಹಚ್ಚಲು ಸಹಕಾರಿಯಾಯಿತು. ವಿಕ್ರಮ್ ಲ್ಯಾಂಡರ್ ಪತನದ ಕುರಿತು ಮೊದಲ ಬಾರಿಗೆ ಸಕಾರಾತ್ಮಕ ಗುರುತನ್ನು ಷಣ್ಮುಗ ಪತ್ತೆ ಹಚ್ಚಿ ನಾಸಾಗೆ ತಿಳಿಸಿದ್ದರು.

@NASA has credited me for finding Vikram Lander on Moon's surface#VikramLander #Chandrayaan2@timesofindia @TimesNow @NDTV pic.twitter.com/2LLWq5UFq9

— Shan (Shanmuga Subramanian) (@Ramanean) December 2, 2019

ನಾನು ಪದೇ ಪದೆ ವಿಕ್ರಮ್ ಲ್ಯಾಂಡರ್ ಪತನವಾಗಿದ್ದ ಸ್ಥಳದ ಹಳೆಯ ಚಿತ್ರಗಳು ಹಾಗೂ ನಾಸಾ ಹೊಸತಾಗಿ ಬಿಡುಗಡೆ ಮಾಡಿದ ಚಿತ್ರಗಳನ್ನು ಹೋಲಿಕೆ ಮಾಡಿ ನೋಡುತ್ತಿದ್ದೆ. ಇದನ್ನು ನಾನು ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್ ಹಾಗೂ ರೆಡ್ಡಿಟ್ ಮೂಲಕ ಹಂಚಿಕೊಳ್ಳುತ್ತಿದ್ದೆ ಎಂದು ಷಣ್ಮುಗ ಮಾಹಿತಿ ನೀಡಿದ್ದಾರೆ.

ವಿಕ್ರಮ್ ಲ್ಯಾಂಡರ್ ಕುರಿತ ಸುಳಿವನ್ನು ಕಂಡುಹಿಡಿಯುವುದು ತುಂಬಾ ಕಷ್ಟದ ಕೆಲಸವಾಗಿತ್ತು. ಆದರೂ ನಾನು ಪ್ರಯತ್ನವನ್ನು ಬಿಡಲಿಲ್ಲ. ಅಂತಿಮವಾಗಿ ನಾನು ಸಂಶೋಧಿಸಿದ ಚಿತ್ರಗಳನ್ನು ಅಕ್ಟೋಬರ್ 3ರಂದು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡೆ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ನಾನು ನೀಡಿದ ಸುಳಿವಿನ ಆಧಾರದ ಮೇಲೆ ಅದೇ ಸ್ಥಳದಲ್ಲಿ ನಾಸಾ ಹೆಚ್ಚು ಹುಡುಕಾಟವನ್ನು ನಡೆಸಿತು. ಕಂಡುಹಿಡಿದ ಎರಡು ತಿಂಗಳ ನಂತರ ಅಧಿಕೃತವಾಗಿ ನಾಸಾ ಘೋಷಣೆ ಮಾಡಿತು. ಸಾರ್ವಜನಿಕರ ಮುಂದೆ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಅವರು ಸಂಪೂರ್ಣವಾಗಿ ಖಚಿತಪಡಿಸಿಕೊಳ್ಳುತ್ತಾರೆ. ಹೀಗಾಗಿ ತಡವಾಗಿ ಘೋಷಣೆ ಮಾಡಿದೆ. ಹೀಗಾಗಿ ನಾನೂ ಅದೇ ರೀತಿ ಮಾಡಿದೆ ಎಂದು ಷಣ್ಮುಗ ತಿಳಿಸಿದರು.

@NASA @LRO_NASA @isro
This might be Vikram lander's crash site (Lat:-70.8552 Lon:21.71233 ) & the ejecta that was thrown out of it might have landed over here https://t.co/8uKZv7oXQa (The one on the left side was taken on July 16th & one on the right side was from Sept 17) pic.twitter.com/WNKOUy2mg1

— Shan (Shanmuga Subramanian) (@Ramanean) November 17, 2019

ಚಂದ್ರಯಾನ-2 ಮಿಷನ್ ಯಶಸ್ವಿಯಾಗಿದೆ ಎಂದು ನಾನು ಭಾವಿಸುತ್ತೇನೆ. ವಿಕ್ರಮ್ ಲ್ಯಾಂಡರ್ ಕ್ರ್ಯಾಶ್ ಆಗಿದ್ದು ದುರಂತ. ಆದರೆ ಜನ ಇಸ್ರೋ ಹಾಗೂ ವಿಕ್ರಮ್ ಲ್ಯಾಂಡರ್ ಬಗ್ಗೆ ಹೆಚ್ಚು ಚರ್ಚೆ ಮಾಡುವಂತಾಯಿತು, ಸಂಶೋಧನೆಗೆ ತೊಡಗುವಂತೆ ಮಾಡಿತು. ಅದೇ ಇದರ ಸಕಾರಾತ್ಮಕತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಸಾ ನನ್ನ ಕೊಡುಗೆಯನ್ನು ಸ್ವೀಕರಿಸಿದ್ದಕ್ಕೆ ಸಂತೋಷವಾಗಿದೆ. ನನ್ನ ಸಂಶೋಧನೆಗಾಗಿ ನಾಸಾದ ಲೂನಾರ್ ರೆಕನೈಸನ್ಸ್ ಆರ್ಬಿಟರ್(ಎಲ್‍ಆರ್‍ಒ) ಚಿತ್ರಗಳನ್ನು ಬಳಸಿದ್ದೆ. ನಂತರ ಎಲ್‍ಆರ್‍ಒ ಯೋಜನೆಯನ್ನು ಶಿಲಾಖಂಡಗಳ ಸಕಾರಾತ್ಮಕ ಗುರುತುಗಳೊಂದಿಗೆ ಸಂಪರ್ಕಿಸಿದ್ದೆ. ಚಂದ್ರನಲ್ಲಿ ಈ ತ್ಯಾಜ್ಯವನ್ನು ಹುಡುಕುವುದು ತುಂಬಾ ಕಷ್ಟದ ಕೆಲಸ, ನಾನು ಕೇವಲ ಒಂದು ತುಂಡು ತ್ಯಾಜ್ಯವನ್ನು ಮಾತ್ರ ಪತ್ತೆಹಚ್ಚಿದ್ದೆ ಎಂದು ವಿವರಿಸಿದ್ದಾರೆ.

ನಾಸಾದಿಂದ ಚಿತ್ರ ಬಿಡುಗಡೆ
ಇಸ್ರೋ ಕನಸಿನ ಕೂಸಾಗಿದ್ದ ಚಂದ್ರಯಾನ 2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ನಾಸಾದ ಪತ್ತೆ ಹಚ್ಚಿದ್ದು, ಪತನವಾದ ಸ್ಥಳದ ಫೋಟೋವನ್ನು ನಾಸಾ ಹಂಚಿಕೊಂಡಿದೆ.

ನಾಸಾದ ಲೂನಾರ್ ರೆಕನೈಸನ್ಸ್ ಆರ್ಬಿಟರ್(ಎಲ್‍ಆರ್‍ಒ) ಮೂಲಕ ತೆಗೆದ ಚಿತ್ರವೊಂದನ್ನು ಬಿಡುಗಡೆ ಮಾಡಿದ್ದು, ಅದು ವಿಕ್ರಮ್ ಲ್ಯಾಂಡರ್ ಪತನಗೊಂಡ ಸ್ಥಳವನ್ನು ಮತ್ತು ಅದಕ್ಕೆ ಸಂಬಂಧಿತ ಶಿಲಾಖಂಡರಾಶಿಗಳ ಕ್ಷೇತ್ರವನ್ನು ಪತ್ತೆಮಾಡಿದೆ. ಅಲ್ಲದೆ ವಿಕ್ರಮ್ ಲ್ಯಾಂಡರ್ ನ ಭಾಗಗಳು ಹಲವಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಸುಮಾರು ಎರಡು ಡಜನ್ ಸ್ಥಳಗಳಲ್ಲಿ ಹರಡಿಕೊಂಡಿವೆ ಎಂದು ತಿಳಿಸಿದೆ.

The #Chandrayaan2 Vikram lander has been found by our @NASAMoon mission, the Lunar Reconnaissance Orbiter. See the first mosaic of the impact site https://t.co/GA3JspCNuh pic.twitter.com/jaW5a63sAf

— NASA (@NASA) December 2, 2019

ಸೆ. 26ರಂದು ನಾಸಾ ವಿಕ್ರಮ್ ಲ್ಯಾಂಡರ್ ಪತನಗೊಂಡ ಸ್ಥಳದ ಮೊಸಾಕ್ ಚಿತ್ರವನ್ನು ಬಿಡುಗಡೆ ಮಾಡಿತ್ತು. ಷಣ್ಮುಗ ಸುಬ್ರಹ್ಮಣ್ಯಂ ಅವರು ಎಲ್‍ಆರ್‍ಒ ಯೋಜನೆಯನ್ನು ಶಿಲಾಖಂಡಗಳ ಸಕಾರಾತ್ಮಕ ಗುರುತುಗಳೊಂದಿಗೆ ಸಂಪರ್ಕಿಸಿದರು. ಆಗ ವಿಕ್ರಮ್ ಲ್ಯಾಂಡರ್ ಪತನಗೊಂಡ ಸ್ಥಳದಿಂದ ವಾಯುವ್ಯ ದಿಕ್ಕಿನಲ್ಲಿ ಸುಮಾರು 750 ಮೀ. ದೂರದಲ್ಲಿ ಅದರ ಕೆಲ ಭಾಗಗಳು ಪತ್ತೆಯಾಗಿತ್ತು ಎಂದು ನಾಸಾ ಹೇಳಿದೆ.

3.84 ಲಕ್ಷ ಕಿ.ಮೀ ಕ್ರಮಿಸಿ ಚಂದ್ರನ ಅಂಗಳ ತಲುಪಬೇಕಿದ್ದ ಲ್ಯಾಂಡರ್ ನಿಗದಿತ ಪಥದಲ್ಲೇ ಸಾಗುತಿತ್ತು. ಕೌಂಟ್ ಡೌನ್ ಆರಂಭಗೊಂಡ ಬಳಿಕ ಲ್ಯಾಂಡರ್ ನಿಗದಿತ ಪಥದಲ್ಲಿ ಹೋಗುವುದನ್ನು ಗಮನಿಸಿದ ವಿಜ್ಞಾನಿಗಳು ಸಂತೋಷದಲ್ಲಿದ್ದರು. ಸೆಪ್ಟೆಂಬರ್ 7ರ ನಸುಕಿನ ಜಾವ 1.50ರ ವೇಳಗೆ ಚಂದ್ರನ ದಕ್ಷಿಣ ಧ್ರುವದಿಂದ 2.1 ಕಿ.ಮೀ ಎತ್ತರದಲ್ಲಿದ್ದಾಗ ಸಂಪರ್ಕ ಕಳೆದುಕೊಂಡಿತ್ತು.

TAGGED:Chandrayaan 2ISRONASAPublic TVShanmuga SubramanianVikram Landerಇಸ್ರೋಚಂದ್ರಯಾನ-2ನಾಸಾಪಬ್ಲಿಕ್ ಟಿವಿವಿಕ್ರಮ್ ಲ್ಯಾಂಡರ್ಷಣ್ಮುಗ ಸುಬ್ರಹ್ಮಣ್ಯಂ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
9 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
10 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
45 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
54 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?