Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಿಕ್ಷಕಿಯ ಕಡ್ಡಾಯ ವರ್ಗಾವಣೆ ರದ್ದು

Public TV
Last updated: December 12, 2019 12:16 am
Public TV
Share
2 Min Read
rcr teacher transfer collage copy 1
SHARE

– ಕೊಟ್ಟ ಮಾತು ಉಳಿಸಿಕೊಂಡ ಶಿಕ್ಷಣ ಸಚಿವರು
– ತಪ್ಪನ್ನ ತಿದ್ದಿಕೊಂಡ ಶಿಕ್ಷಣ ಇಲಾಖೆ

ರಾಯಚೂರು: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ವರ್ಗಾವಣೆ ರದ್ದು ಕೋರಿ ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದ ರಾಯಚೂರಿನ ಶಿಕ್ಷಕಿ ಶಾಂತಲಕ್ಷ್ಮಿ ಅವರ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಮೂಲಕ ಅವರ ಕಷ್ಟಕ್ಕೆ ಕೊನೆಗೂ ಪರಿಹಾರ ಸಿಕ್ಕಿದೆ.

Public Tv IMPACT ನಗರದ ಜಹಿರಾಬಾದ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ಶಿಕ್ಷಣ ಸಚಿವರ ಭರವಸೆಯಂತೆ ಕಡ್ಡಾಯ ವರ್ಗಾವಣೆ ರದ್ದಾಗಿದ್ದು, ಹಾಲಿ ಸ್ಥಳದಲ್ಲೇ ಮುಂದುವರಿಯುವ ಅವಕಾಶ ಸಿಕ್ಕಿದೆ. ಬುದ್ಧಿಮಾಂದ್ಯ ಮಗಳನ್ನು ಕರೆದುಕೊಂಡು ಅಧಿಕಾರಿಗಳ ಬಳಿ ತನ್ನ ಕಷ್ಟ ಹೇಳಿಕೊಂಡು ಸಾಕಾಗಿದ್ದ ಶಾಂತಲಕ್ಷ್ಮಿ ಕುರಿತು ಪಬ್ಲಿಕ್ ಟಿವಿ ವರದಿಯನ್ನ ಪ್ರಸಾರ ಮಾಡಿತ್ತು. ವರದಿಗೆ ಎಚ್ಚೆತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ವತಃ ಶಿಕ್ಷಕಿಯ ಜೊತೆ ದೂರವಾಣಿಯಲ್ಲಿ ಮಾತನಾಡಿ ಅವರ ಕಷ್ಟವನ್ನ ಆಲಿಸಿ, ವರ್ಗಾವಣೆ ರದ್ದುಗೊಳಿಸುವ ಬಗ್ಗೆ ಭರವಸೆಯನ್ನ ನೀಡಿದ್ದರು. ಇದನ್ನೂ ಓದಿ: ಬುದ್ಧಿಮಾಂದ್ಯ ಮಗಳ ಆರೈಕೆಗಾಗಿ ಶಿಕ್ಷಕಿ ಪರದಾಟ – ವರ್ಗಾವಣೆ ರದ್ದು ಮಾಡದೆ ಸತಾಯಿಸ್ತಿರುವ ಶಿಕ್ಷಣ ಇಲಾಖೆ

collage rcr teacher 1

ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರ್ಗಿ ಅಪರ ಆಯುಕ್ತ ನಳಿನ್ ಅತುಲ್ ಕೂಡಲೇ ವರ್ಗಾವಣೆ ರದ್ದುಗೊಳಿಸಿ ಹಿಂದಿನ ಸ್ಥಳದಲ್ಲೇ ಶಿಕ್ಷಕಿ ಶಾಂತಲಕ್ಷ್ಮಿ ಅವರನ್ನು ಮುಂದುವರಿಸುವಂತೆ ಆದೇಶಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು ಉಪನಿರ್ದೇಶಕರಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಮೂಲಕ ನಿಯಮಬಾಹಿರವಾಗಿ ವರ್ಗಾವಣೆಯ ಶಿಕ್ಷೆಗೆ ಗುರಿಯಾಗಿದ್ದ ಶಿಕ್ಷಕಿ ಶಾಂತಲಕ್ಷ್ಮಿ ಅವರಿಗೆ ನ್ಯಾಯ ದೊರಕಿದೆ. ಇದನ್ನೂ ಓದಿ: ಶಿಕ್ಷಕಿಗೆ ಕರೆ ಮಾಡಿ ಕಷ್ಟ ಆಲಿಸಿದ ಸುರೇಶ್

ಬುದ್ಧಿಮಾಂದ್ಯ ಮಗಳ ಆರೈಕೆ ಹಾಗೂ ವಿಧವೆಯಾಗಿರುವ ಕಾರಣ ನಿಯಮಾನುಸಾರ ಕಡ್ಡಾಯ ವರ್ಗಾವಣೆಯಲ್ಲಿ ಶಿಕ್ಷಕಿ ಹೆಸರು ನಮೂದಿಸಬಾದರಿತ್ತು. ಶಿಕ್ಷಕಿಗೆ ಆದ ಅನಾನೂಕೂಲ ಪರಿಗಣೆನೆಗೆ ತೆಗೆದುಕೊಂಡು ಮೂಲ ಶಾಲೆಯಲ್ಲಿ ಮುಂದುವರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಆದೇಶಿಸಿದ್ದಾರೆ. ತೆರವಾದ ಸ್ಥಳಕ್ಕೆ ಹಾಜರಾದ ಶಿಕ್ಷಕಿ ಶ್ರೀದೇವಿ ಅವರನ್ನ ನಿಮ್ಮ ಹಂತದಲ್ಲೇ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಿ ಅಂತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಳೀನ್ ಅತುಲ್ ಸೂಚಿಸಿದ್ದಾರೆ.

rcr teacher transfer

ಏನಿದು ವರ್ಗಾವಣೆ ಪ್ರಕರಣ.?
ಶಿಕ್ಷಕಿ ಶಾಂತಾಲಕ್ಷ್ಮಿ ಅವರನ್ನ ರಾಯಚೂರಿನಿಂದ ಸುಮಾರು 25 ಕಿ.ಮೀ ದೂರದ ಮಟಮಾರಿ ಗ್ರಾಮಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಪತಿಯನ್ನು ಕಳೆದುಕೊಂಡ ಶಿಕ್ಷಕಿ ವೃತ್ತಿ ಮಾಡುತ್ತಲೇ ಮಾನಸಿಕ ಅಸ್ವಸ್ಥ ಮಗಳನ್ನು ಸಾಕುತ್ತಿದ್ದಾರೆ. ಈಗ ಏಕಾಏಕಿ ವರ್ಗಾವಣೆಯನ್ನ ವಿರೋಧಿಸಿ, ವರ್ಗಾವಣೆ ರದ್ದುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು.

ಅಲ್ಲದೆ ಕಡ್ಡಾಯ ವರ್ಗಾವಣೆ ಮಾಡಬೇಕಾದರೂ ಒಂದೇ ಜಾಗದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿರಬೇಕು. ಆದ್ರೆ ಶಾಂತಲಕ್ಷ್ಮಿ 8 ವರ್ಷಗಳಿಂದ ಸೇವೆ ಮಾಡುತ್ತಿದ್ದು, ಎರಡು ವರ್ಷ ಬಾಕಿಯಿರುವಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿ ವರ್ಗಾವಣೆ ಮಾಡಿರುವುದು ಸರಿಯಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದರು.

ನಗರ ಪ್ರದೇಶದಿಂದ ನಿಯಮ ಉಲ್ಲಂಘಿಸಿ ಗ್ರಾಮೀಣ ಭಾಗಕ್ಕೆ ವರ್ಗಾವಣೆ ಮಾಡಿದ್ದರ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದನ್ನ ಗಮನಿಸಿದ ಶಿಕ್ಷಣ ಸಚಿವ ಕೂಡಲೇ ಸ್ಪಂದಿಸಿ ವರ್ಗಾವಣೆ ರದ್ದುಗೊಳಿಸುವ ಭರವಸೆ ನೀಡಿದ್ದರು.

ಈಗ ತಾನೆ ಶಿಕ್ಷಕಿ ಶ್ರೀಮತಿ ಶಾಂತಲಕ್ಷ್ಮಿಯವರ ಜೊತೆ ಮಾತನಾಡಿದೆ.

ಅವರು ಎದುರಿಸುತ್ತಿರುವ ಕಷ್ಟಗಳ ಕುರಿತು ವಿಚಾರಿಸಿದೆ.

ದಯವಿಟ್ಟು ವಿವರಗಳನ್ನು ನನಗೆ ಕಳಿಸಿ ಎಂದು ತಿಳಿಸಿದ್ದೇನೆ,

ಅವರ ಕಷ್ಟವನ್ನು ದೂರ ಮಾಡಿ ಅವರು ಬಯಸಿರುವ ಸ್ಥಳಕ್ಕೇ ಅವರನ್ನು ಉಳಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದೇನೆ.https://t.co/6Fe3vOosKF

— S.Suresh Kumar (@nimmasuresh) December 7, 2019

TAGGED:Department of EducationPublic TVraichursuresh kumarteachertransferಇಂಪ್ಯಾಕ್ಟ್ಪಬ್ಲಿಕ್ ಟಿವಿಪ್ರಾಥಮಿಕ ಶಿಕ್ಷಣ ಸಚಿವರುರಾಯಚೂರುಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories
Kiara Adwani
ಯಶ್ ನಾಯಕಿ ಕಿಯಾರಾ ಫಸ್ಟ್ ಲುಕ್.. ಅಬ್ಬಬ್ಬಾ ಬೆಂಕಿ !
Cinema Latest Sandalwood Top Stories
jodettu chikkanna
ಹೊಸ ವರ್ಷಕ್ಕೆ ಚಿಕ್ಕಣ್ಣ ನಟನೆಯ ‘ಜೋಡೆತ್ತು’ ಶೂಟಿಂಗ್ ಶುರು
Cinema Latest Sandalwood Top Stories

You Might Also Like

ISRO 2
Latest

ಮೊಬೈಲ್‌ಗೆ ನೇರ ಇಂಟರ್‌ನೆಟ್ ಸೌಲಭ್ಯ – ಮತ್ತೊಂದು ಪರಾಕ್ರಮಕ್ಕೆ ಸಜ್ಜಾದ ಇಸ್ರೋ

Public TV
By Public TV
55 minutes ago
DKSHI HDK
Hassan

ಡಿಕೆಶಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಹೆಚ್‌ಡಿಕೆ

Public TV
By Public TV
1 hour ago
Draupadi Murmu
Latest

ವಿಕಸಿತ ಭಾರತ ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

Public TV
By Public TV
2 hours ago
Namma Metro Greenline
Bengaluru City

ಮಾದಾವರ-ತುಮಕೂರು ಮೆಟ್ರೋ; ಆರ್‌ವಿ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಲಿಮಿಟೆಡ್‌ಗೆ DPR ಹೊಣೆ

Public TV
By Public TV
2 hours ago
ozempic
Explainer

PublicTV Explainer: ಮಧುಮೇಹಿಗಳು, ಸ್ಥೂಲಕಾಯರಿಗೆ ಗುಡ್ ನ್ಯೂಸ್; ಭಾರತಕ್ಕೆ ಬಂತು ಓಝೆಂಪಿಕ್ – ಏನಿದು ಔಷಧಿ?

Public TV
By Public TV
3 hours ago
U19 Asia Cup Pakistan
Cricket

U19 Asia Cup Final: ಭಾರತ ಮಣಿಸಿ 2ನೇ ಬಾರಿಗೆ ಏಷ್ಯಾ ಕಪ್‌ ಗೆದ್ದ ಪಾಕಿಸ್ತಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?