ಅಯೋಧ್ಯೆ ಮೇಲ್ಮನವಿ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

Public TV
1 Min Read
rama mandir supreme court

ನವದೆಹಲಿ: ಅಯೋಧ್ಯೆ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 18 ಮೇಲ್ಮನವಿ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಸೇರಿದಂತೆ ಐವರು ನ್ಯಾಯಮೂರ್ತಿಗಳ ಪೀಠ ಇಂದು ಈ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿತು.

ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ನಿರ್ಮೋಹಿ ಅಖರಾ ಸೇರಿದಂತೆ 40 ಮಂದಿ ನಾಗರಿಕ ಹಕ್ಕುಗಳ ಕಾರ್ಯಕರ್ತರಿಗೆ ಪ್ರಕರಣದ ಮೂಲ ಕಕ್ಷಿದಾರರು ಅಲ್ಲ ಎಂದು ಕೋರ್ಟ್ ಮೇಲ್ಮನವಿ ಸಲ್ಲಿಸಲು ಅವಕಾಶವನ್ನು ನಿರಾಕರಿಸಿತು. ಪ್ರಕರಣದ ಮೂಲ ಕಕ್ಷಿದಾರರು ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ನ.9 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪನ್ನು ಪ್ರಶ್ನೆ ಮಾಡಿ ಒಟ್ಟು 18 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸುವಂತೆ ಹಾಗೂ ಮುಸ್ಲಿಮರಿಗೆ ಪ್ರತ್ಯೇಕವಾಗಿ 5 ಎಕರೆ ಜಾಗವನ್ನು ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಕೋರ್ಟ್ ಆದೇಶವನ್ನು ಸಲ್ಲಿಕೆಯಾಗಿದ್ದ ಆ ಅರ್ಜಿಗಳಲ್ಲಿ ಕೆಲವರು ರಾಮಮಂದಿತ ವಿವಾದಿತ ಸ್ಥಳದಲ್ಲೇ 5 ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡಲು ಅರ್ಜಿ ಸಲ್ಲಿಕೆ ಮಾಡಿದ್ದರೆ, ಕೆಲ ಹಿಂದೂ ಪರ ಸಂಘಟನೆಗಳು ಮುಸ್ಲಿಮರಿಗೆ 5 ಎಕರೆ ಜಾಗ ನೀಡಿರುವುದನ್ನು ವಿರೋಧಿಸಿ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಅರ್ಜಿಗಳು ವಜಾಗೊಂಡಿದ್ದು ರಾಮಮಂದಿರ ನಿರ್ಮಾಣಕ್ಕೆ ಇದ್ದ ಎಲ್ಲ ಅಡೆ ತಡೆಗಳು ನಿವಾರಣೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *