ಸ್ಮಶಾನ ಸೇರಬೇಕಾದ ಶವ ಆಸ್ಪತ್ರೆಗೆ

Public TV
1 Min Read
CNG Deadbody

ಚಾಮರಾಜನಗರ: ಶವಸಂಸ್ಕಾರಕ್ಕೆ ಸಿದ್ಧವಾಗಿದ್ದ ಮೃತದೇಹವನ್ನು ಪೊಲೀಸರು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ.

ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಮಲ್ಲಳ್ಳಿಮಾಳ ಗ್ರಾಮದ 40 ವರ್ಷದ ನಿಂಗರಾಜು ಮೃತಪಟ್ಟಿದ್ದರು. ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಿದ್ದರು. ನಿಂಗರಾಜು ಸಾವು ಸಹಜ ಅಲ್ಲ. ಅದೊಂದು ಕೊಲೆ ಇರಬಹುದು ಎಂದು ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಗ್ರಾಮಕ್ಕೆ ಆಗಮಿಸಿದ ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿದ್ದಾರೆ. ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಮರಣೋತ್ತರ ಶವ ಪರೀಕ್ಷೆಗಾಗಿ ಮೃತದೇಹವನ್ನ ಆಸ್ಪತ್ರೆಗೆ ರವಾನಿಸಿದ್ದಾರೆ.

ಪೊಲೀಸದ ದಿಢೀರ ಎಂಟ್ರಿಯಿಂದ ಗ್ರಾಮಸ್ಥರೆಲ್ಲ ಅಚ್ಚರಿಗೊಳಗಾಗಿದ್ದಾರೆ. ನಿಂಗರಾಜು ಕುತ್ತಿಗೆ ಭಾಗದಲ್ಲಿ ನೇಣು ಬಿಗಿದು ಗುರುತು ಪತ್ತೆಯಾಗಿದೆ. ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಅನುಮಾನಾಸ್ಪದವಾದ ಸೀರೆಯೊಂದನ್ನು ವಶಪಡಿಸಿಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆ ನಂತರ ತನಿಖೆ ಚುರುಕುಗೊಳ್ಳಲಿದೆ.

Share This Article
Leave a Comment

Leave a Reply

Your email address will not be published. Required fields are marked *