Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ತಂತ್ರಜ್ಞಾನದ ಜೊತೆ ಕೌಶಲ್ಯಗಳನ್ನು ಬಳಸಿಕೊಳ್ಳಿ – ಸಿಎ ವಿದ್ಯಾರ್ಥಿಗಳಿಗೆ ಐಐಎಂ ಮುಖ್ಯಸ್ಥ  ಪ್ರೊ. ಕೆ. ಕುಮಾರ್ ಸಲಹೆ

Public TV
Last updated: December 20, 2019 10:21 pm
Public TV
Share
2 Min Read
chartered accountant conference 2
SHARE

– ಚಾರ್ಟೆಡ್ ಆಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ ಅಭ್ಯುದಯ 2019

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ತಂತ್ರಜ್ಞಾನ ಬದಲಾಗುತ್ತಿದ್ದಂತೆ ಲೆಕ್ಕಪರಿಶೋಧಕರು ಕೂಡ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆಗ ಉದ್ಯಮ ಮತ್ತು ವ್ಯವಹಾರಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಐಐಎಂನ ಮುಖ್ಯಸ್ಥ ಪ್ರೊ.ಕೆ. ಕುಮಾರ್ ಅಭಿಪ್ರಾಯಪಟ್ಟರು.

ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ) ಮತ್ತು ದಕ್ಷಿಣ ಭಾರತ ಲೆಕ್ಕಪರಿಶೋಧಕರ ವಿದ್ಯಾರ್ಥಿ ಸಂಘ ಬೆಂಗಳೂರು (ಎಸ್‍ಐಸಿಎಎಸ್‍ಎ) ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಚಾರ್ಟೆಡ್ ಆಕೌಂಟೆಂಟ್ ವಿದ್ಯಾರ್ಥಿ ಸಮ್ಮೇಳನ ಅಭ್ಯುದಯ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೆಕ್ಕ ಪರಿಶೋಧಕರು ಆರ್ಧಿಕ ಚಟುವಟಿಕೆಗಳನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಉದ್ಯಮಗಳಲ್ಲಿ ಉಂಟಾಗುವಂತಹ ಸವಾಲುಗಳನ್ನು ಬಗೆಹರಿಸುವಂತಹ ಜವಾಬ್ದಾರಿ ಕೂಡ ಲೆಕ್ಕ ಪರಿಶೋಧಕರ ಮೇಲಿದೆ ಎಂದು ಅವರು ಹೇಳಿದ್ರು.

ವಿದ್ಯಾರ್ಥಿಗಳು ಕೇವಲ ಅಂಕಗಳಿಸಿ ಉತ್ತೀರ್ಣರಾಗುವುದಲ್ಲ. ಉತ್ತಮ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಕೂಡ ಮೈಗೂಡಿಸಿಕೊಳ್ಳಬೇಕು. ಇಂತಹ ಶಿಕ್ಷಣವನ್ನು ಪಾಧ್ಯಾಪಕರು ತಮ್ಮ ವೃತ್ತಿ ಬದುಕಿನ ಸವಾಲು ಮತ್ತು ಅನುಭವಗಳನ್ನು ವಿದ್ಯಾರ್ಥಿಗಳಿಗೆ ಭೋಧನೆ ಮಾಡಿ ವೃತ್ತಿಪರರನ್ನಾಗಿ ಮಾಡಿ ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕು ಎಂದರು. ಲೆಕ್ಕ ಪರಿಶೋಧಕರು ಸಮಾಜದಲ್ಲಿ ಪ್ರತಿಷ್ಠಿತ ಸ್ಥಾನಮಾನಗಳನ್ನು ಹೊಂದಿದ್ದಾರೆ. ಬ್ಯಾಂಕಿಂಗ್, ಕಾರ್ಪೊರೇಟ್ ಸೆಕ್ಟರ್, ಎಂಎನ್‍ಸಿ ಕಂಪನಿ ಸೇರಿದಂತೆ ವಿವಿಧ ಉದ್ಯಮ, ವ್ಯವಹಾರಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಹೀಗಾಗಿ ಪ್ರತಿ ದಿನವೂ ಇಲ್ಲಿ ಹೊಸತನವನ್ನು ಕಲಿಯಬೇಕಾಗುತ್ತದೆ. ಹೊಸ ಹೊಸ ಯೋಜನೆಗಳತ್ತ ಗಮನ ಕೂಡ ಹರಿಸಬೇಕಾಗುತ್ತದೆ ಎಂದರು.

chartered accountant conference 1

ಚಾರ್ಟೆಡ್ ಆಕೌಂಟೆಂಟ್ ಕೋರ್ಸ್ ಗೆ ಸೇರುವುದೇ ದೊಡ್ಡ ಕೆಲಸ. ಇಲ್ಲಿ ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲ ಮತ್ತು ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಅಲ್ಲದೆ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು, ವೃತ್ತಿಪರತೆಯನ್ನು ಕಾಯ್ದುಕೊಂಡು ಸುಂದರ ಜೀವನವನ್ನು ರೂಪಿಸಿಕೊಳ್ಳಿ ಎಂದು ಚಾರ್ಟೆಡ್ ಆಕೌಂಟೆಂಟ್ ಕೋರ್ಸ್ ಗೆ ಸೇರಿರುವ ವಿದ್ಯಾರ್ಥಿಗಳಿಗೆ ಪ್ರೊ. ಕೆ. ಕುಮಾರ್ ಸಲಹೆ ನೀಡಿದರು.

ಸಮ್ಮೇಳನದ ಮುಖ್ಯ ಅತಿಥಿಯಾಗಿದ್ದ ಗೋಲ್ಡ್ಮ್ಯಾನ್ ಸಾಚ್ಸ್ನ ಎಂ.ಡಿ. ಸಾತಿಯಾ ಪದ್ಮನಾಭನ್ ಅವರು ಸಿಎ ವಿದ್ಯಾರ್ಥಿಗಳೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಕಠಿಣ ಶ್ರಮ, ಏಕಾಗ್ರತೆ ಮತ್ತು ಬದ್ಧತೆಯಿಂದ ಓದಿದ್ರೆ ಮಾತ್ರ ಲೆಕ್ಕ ಪರಿಶೋಧಕನಾಗಬಹುದು. ನಾನು 14ನೇ ಪ್ರಯತ್ನದಲ್ಲಿ ಚಾರ್ಟೆಡ್ ಆಕೌಂಟೆಂಟ್ ಪರೀಕ್ಷೆಯನ್ನು ಪಾಸ್ ಮಾಡಿದ್ದೇನೆ ಎಂದರು.

ಇನ್ನೊಬ್ಬ ಮುಖ್ಯ ಅತಿಥಿಯಾಗಿದ್ದ ಐಸಿಎಐನ ಮಾಜಿ ಅಧ್ಯಕ್ಷ ಕೆ. ರಘು ಮಾತನಾಡಿ, ಲೆಕ್ಕ ಪರಿಶೋಧಕರಿಗೆ ಸಮಾಜದಲ್ಲಿ ಅತ್ಯುನ್ನತ ಗೌರವ ಇದೆ. ಹಾಗೇ ಬೇರೆ ಬೇರೆ ದೇಶಗಳಲ್ಲಿ ಲೆಕ್ಕಪರಿಶೋಧಕರಿಗೆ ಹೆಚ್ಚಿನ ಬೇಡಿಕೆಯೂ ಇದೆ. ಹೀಗಾಗಿ ಸಿಎ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು. ಸಿಎ ಪರೀಕ್ಷೆ ತುಂಬಾ ಕಠಿಣವಾಗಿರುತ್ತದೆ. ಆದರೆ ಬದ್ಧತೆ ಮತ್ತು ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಸಿಎ ಪರೀಕ್ಷೆಯನ್ನು ಪಾಸ್ ಮಾಡಬಹುದು ಎಂದು ಹೇಳಿದ್ರು.

ಅಭ್ಯುದಯ ಸಿಎ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಲೆಕ್ಕಪರಿಶೋಧಕರ ಪಾತ್ರ, ಸಿಎ ವೃತ್ತಿ ಭವಿಷ್ಯ ಮತ್ತು ತಂತ್ರಜ್ಞಾನ, ಭಾರತದ ಅರ್ಥಿಕತೆಗೆ ಜಿಎಸ್‍ಟಿಯ ಪರಿಣಾಮಗಳು, ಲೆಕ್ಕಪರಿಶೋಧಕ ವೃತ್ತಿಯ ಮೌಲ್ಯಗಳು, ಕಂಪೆನಿ ಕಾನೂನು ಮತ್ತು ಇತ್ತೀಚಿನ ಕಾಯ್ದೆಗಳ ಬಗ್ಗೆ ತಜ್ಞರಿಂದ ಮಾಹಿತಿ ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಎಸ್.ಐ.ಆರ್.ಸಿನ ಮುಖ್ಯಸ್ಥ ಜೋಮನ್ ಕೆ. ಜಾರ್ಜ್, ಎಸ್.ಐ.ಆರ್.ಸಿ ಪದಾಧಿಕಾರಿಗಳಾದ ಎಸ್. ಪನ್ನಾ ರಾಜ್, ಎ.ಬಿ. ಗೀತಾ, ಎಸ್.ಐ.ಆರ್.ಸಿ ಬೆಂಗಳೂರು ವಿಭಾಗದ ಚೇರ್ಮೆನ್ ಶಿವರಾಮ್ ಶಂಕರ್ ಭಟ್, ಎಸ್‍ಐಸಿಎಎಸ್‍ಎನ ಅಧ್ಯಕ್ಷೆ ಎಸ್.ದಿವ್ಯಾ ಮೊದಲಾದವರು ಉಪಸ್ಥಿತರಿದ್ದರು. ಸಿಎ ವಿದ್ಯಾರ್ಥಿ ಸಮ್ಮೇಳನದಲ್ಲಿ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

TAGGED:benagluruChartered AccountantProf. K KumarPublic TVStudent Conferenceಚಾರ್ಟೆಡ್ ಆಕೌಂಟೆಂಟ್ಪಬ್ಲಿಕ್ ಟಿವಿಪ್ರೊ.ಕೆ. ಕುಮಾರ್ಬೆಂಗಳೂರುವಿದ್ಯಾರ್ಥಿ ಸಮ್ಮೇಳನ
Share This Article
Facebook Whatsapp Whatsapp Telegram

You Might Also Like

big bulletin 07 July 2025 part 2
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-2

Public TV
By Public TV
5 minutes ago
big bulletin 07 July 2025 part 3
Big Bulletin

ಬಿಗ್‌ ಬುಲೆಟಿನ್‌ 07 July 2025 ಭಾಗ-3

Public TV
By Public TV
7 minutes ago
Raichuru Heart Attack Death
Crime

ಏಕಾಏಕಿ ಕಾಣಿಸಿಕೊಂಡ ಎದೆನೋವು – ಚಿಕಿತ್ಸೆ ಸಿಗದೆ ನರಳಾಡಿ ಪ್ರಾಣಬಿಟ್ಟ ವ್ಯಕ್ತಿ

Public TV
By Public TV
9 minutes ago
EGG
Bengaluru City

ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

Public TV
By Public TV
34 minutes ago
Punjab Mini Bus Overturn
Crime

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

Public TV
By Public TV
1 hour ago
Smart Meter
Districts

ಸ್ಮಾರ್ಟ್ ಮೀಟರ್ ಅಳವಡಿಕೆ ವಿಚಾರ – ಜು.9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?