Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ

Districts

ಬೇಸಿಗೆ ಮುನ್ನವೇ ಜೀವಜಲಕ್ಕಾಗಿ ಹಾಹಾಕಾರ

Public TV
Last updated: December 28, 2019 8:10 am
Public TV
Share
3 Min Read
kpl drinking water collage
SHARE

ಕೊಪ್ಪಳ: ಬೇಸಿಗೆ ಕಾಲದ ಮುನ್ನವೇ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ 15 ದಿನಗಳಿಂದ ನೀರು ಬಾರದ ಕಾರಣ ಗ್ರಾಮಸ್ಥರು ಹೊಲದಲ್ಲಿರುವ ಕೃಷಿಹೊಂಡಗಳ ನೀರನ್ನು ಕುಡಿದು ಬದುಕು ಸಾಗಿಸುತ್ತಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕಿನ ಭಟಪ್ಪನಹಳ್ಳಿ ಎಂಬ ಪುಟ್ಟ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಬೋರ್ ವೇಲ್ ನೀರು ಸ್ಥಗಿತಗೊಂಡ ಕಾರಣ, ಗ್ರಾಮಸ್ಥರು ದೂರದಲ್ಲಿರುವ ಕೃಷಿ ಹೊಂಡಗಳಿಗೆ ಹೋಗಿ ನೀರು ತರುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಮಂಡಲಗಿರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮದಲ್ಲಿ ಸುಮಾರು 300 ಕುಟುಂಬಗಳಿವೆ. ಜನತೆಗೆ ನೀರು ಪೂರೈಕೆ ಮಾಡಬೇಕಾದ ಗ್ರಾ.ಪಂಯವರು 15 ದಿನಗಳಾದರೂ ಮಷಿನ್ ದುರಸ್ತಿಗೊಳಿಸಿಲ್ಲ. ಪರಿಣಾಮ ಈ ಗ್ರಾಮಸ್ಥರು ಬೆಳಗ್ಗೆಯಿಂದ ಸಂಜೆ ತನಕ ಹೊಲದಲ್ಲಿ ನಿರ್ಮಿಸಿರುವ ರೈತರ ಕೃಷಿಹೊಂಡಗಳನ್ನು ಹುಡುಕಿಕೊಂಡು ಹೋಗಿ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

kpl drinking water 3

ಮೈಲುಗಟ್ಟಲೇ ನಡೆದು ಹೋದರೆ ಮಾತ್ರ ನೀರು ಗ್ರಾಮಕ್ಕೆ ಪೂರೈಕೆಯಾಗುತ್ತಿದ್ದ ಪಂಪ್‍ಸೆಟ್ ಕಳೆದ 15 ದಿನಗಳ ಹಿಂದೆ ಕೈಕೊಟ್ಟಿದೆ. ಇಂದು ರಿಪೇರಿ ಮಾಡಿಸುತ್ತಾರೆ. ನಾಳೆ ರಿಪೇರಿ ಮಾಡಿಸುತ್ತಾರೆ ಎಂದು ಗ್ರಾಮಸ್ಥರು ದೊಡ್ಡ ಮನಸ್ಸು ಮಾಡಿ, ಮೈಲುಗಟ್ಟಲೇ ನಡೆದುಕೊಂಡು ಹೋಗಿ ಕೃಷಿ ಹೊಂಡಗಳಲ್ಲಿ ಸಂಗ್ರಹವಾಗಿರುವ ಮಳೆ ನೀರನ್ನೇ ಕುಡಿದು ಬಾಯಾರಿಕೆ ನೀಗಿಸಿಕೊಳ್ಳುತ್ತಿದ್ದಾರೆ. ಆದರೆ ಗ್ರಾ.ಪಂ.ಯವರು ಮಾತ್ರ ಇದುವರೆಗೂ ಮಷಿನ್ ರಿಪೇರಿ ಮಾಡಿಸಿಲ್ಲ ಎಂದು ಹೇಳಲಾಗುತ್ತಿದೆ. ಗ್ರಾಮದ ಮತ್ತೊಬ್ಬರು ಹೇಳುವ ಪ್ರಕಾರ, ಮಷಿನ್ ರಿಪೇರಿ ಮಾಡಿಸಿದ್ದಾರೆ. ಆದರೆ ಪೈಪ್‍ಲೈನ್ ಒಡೆದು ನೀರು ಸೋರಿಕೆಯಾಗುತ್ತಿದೆ. ಹೀಗಾಗಿ ನಮ್ಮ ಊರಿಗೆ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಹೇಳುತ್ತಿದ್ದಾರೆ.

kpl drinking water 5

ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ ನೀರು ತರಬೇಕು. ದೂರದಲ್ಲಿರುವ ಕೃಷಿಹೊಂಡಗಳಿಗೆ ಸುಡು ಬಿಸಿಲಿನಲ್ಲಿ ನಡೆದುಕೊಂಡು ಹೋಗಿ ತಲೆ ಮೇಲೆ ಕೊಡ ಹೊತ್ತುಕೊಂಡು ವಿದ್ಯಾರ್ಥಿಗಳು ನೀರು ತರುತ್ತಿರುವ ದೃಶ್ಯವಂತೂ ಪ್ರಜ್ಞಾವಂತರ ಕರಳು ಕಿತ್ತು ಬರುವುಂತಿದೆ. ತುಂಬಿದ ಕೊಡಗಳನ್ನು ಹೊತ್ತುಕೊಂಡು ಪುಟ್ಟಪುಟ್ಟ ಮಕ್ಕಳು ನಡುರಸ್ತೆಯಲ್ಲಿ ಭಾರವನ್ನು ತಾಳದೇ ಮುಖ ಕಿವಿಚಿಕೊಂಡು ಮನೆ ಕಡೆ ದಾವಿಸುತ್ತಿರುವಾಗ, ಜನಪ್ರತಿನಿಧಿಗಳ ಹಾಗೂ ಗ್ರಾ.ಪಂ. ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ನೀರಿನ ರಾಜಕೀಯಕ್ಕೆ ಹೆಸರಾದ ತಾಲೂಕು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಈ ಯಲಬುರ್ಗಾ ವಿಧಾನಸಭಾ ಕ್ಷೇತ್ರವು ನೀರು ಮತ್ತು ನೀರಾವರಿ ರಾಜಕೀಯಕ್ಕೆ ಹೆಸರಾಗಿದೆ. ಇಲ್ಲಿನ ರಾಜಕಾರಣಿಗಳು ಪ್ರತಿ ಚುನಾವಣೆಯಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ ಅಸ್ತಂಗಳನ್ನು ಬಳಕೆ ಮಾಡಿಕೊಂಡು ಅಧಿಕಾರಕ್ಕೆ ಬರುತ್ತಾರೆ. ಆದರೆ ಈ ಕ್ಷೇತ್ರದ ಜನರಿಗೆ ಮಾತ್ರ ಶಾಶ್ವತವಾಗಿ ನೀರಾವರಿ ಸೌಲಭ್ಯವೂ ಕಲ್ಪಿಸಿಲ್ಲ. ಶಾಶ್ವತವಾಗಿ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಿಲ್ಲ ಎನ್ನುವ ಆರೋಪಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

kpl drinking water 2

ಭರವಸೆಯಲ್ಲಿಯೇ ಬೆಂದು ಹೋಗುತ್ತಿರುವ ಜನ ಗ್ರಾ.ಪಂಯಿಂದ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವರವರೆಗೂ ಜಿಲ್ಲೆಯ ಜನತೆಗೆ ಪ್ರತಿ ವರ್ಷ ಭರವಸೆಗಳನ್ನು ಕೊಟ್ಟು, ನಿಮ್ಮೂರಿನ ರೈತರಿಗೆ ನೀರಿವಾರಿ ಸೌಲಭ್ಯ ಕಲ್ಪಿಸ್ತಿವಿ. ನಿಮ್ಮೂರಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುತ್ತೇವೆ. ಹಾಗೇ ಹೀಗೇ ಎಂದು ಕೇವಲ ಭರವಸೆಗಳನ್ನೇ ಕೊಟ್ಟು ಈ ಭಾಗದ ಜನರನ್ನು ಭರವಸೆಯಲ್ಲಿಯೇ ಬೆಂದು ಹೋಗುವುಂತೆ ಮಾಡಿದ್ದಾರೆ. ತುಂಗಭದ್ರಾ ಹಿನ್ನೀರಿನಿಂದ ಬನ್ನಿಕೊಪ್ಪ ಕುಡಿಯುವ ನೀರಿನ ಯೋಜನೆ ಹಳ್ಳ ಹಿಡಿದಿದೆ. ನಾರಾಯಣಪುರ ಜಲಾಶಯದಿಂದ ಈ ಗ್ರಾಮಗಳಿಗೆ ತಲುಪಬೇಕಾಗಿದ್ದ 762 ಕೋಟಿ ರೂ. ವೆಚ್ಚದ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಅಲ್ಲದೇ ಈ ಗ್ರಾಮದಲ್ಲಿ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಯಾಗಿ ವರ್ಷ ಕಳೆದರೂ ಇದುವರೆಗೂ ಈ ಘಟಕವನ್ನು ರಿಪೇರಿ ಮಾಡಿಲ್ಲ ಎಂದು ಗ್ರಾಮಸ್ಥರಾದ ಮಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

kpl drinking water

ಇನ್ನಾದರೂ ಸಂಬಂಧ ಪಟ್ಟ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಕಾರಣ ಕಳೆದ ಮೂರು ತಿಂಗಳ ಹಿಂದೆ ಸುರಿದ ಮಳೆಯಿಂದ ಕೃಷಿ ಹೊಂಡಗಳಲ್ಲಿ ಸಂಗ್ರಹಗೊಂಡ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲ. 15 ದಿನಗಳಿಂದ ಇದೇ ನೀರನ್ನು ಕುಡಿಯುತ್ತಿರುವ ಈ ಗ್ರಾಮಸ್ಥರು, ಆರೋಗ್ಯದಲ್ಲಿ ಏರುಪೇರಾದರೆ ಜವಾಬ್ದಾರರು ಯಾರು ಎನ್ನುವ ಪ್ರಶ್ನೆಗೆ ಕೇವಲ ಗ್ರಾ.ಪಂ. ಮಾತ್ರವಲ್ಲ ಇಡೀ ಜಿಲ್ಲಾಡಳಿತವೇ ಉತ್ತರಿಸಬೇಕಾಗುತ್ತದೆ.

TAGGED:drinking waterkoppalaPublic TVsummer seasonvillagersಕುಡಿಯುವ ನೀರುಕೊಪ್ಪಳಗ್ರಾಮಸ್ಥರುಪಬ್ಲಿಕ್ ಟಿವಿಬೇಸಿಗೆ ಕಾಲ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
20 minutes ago
Pralhad Joshi
Latest

ಕಾಂಗ್ರೆಸ್‌ಗೆ ದೇಶದ ಹಿತಾಸಕ್ತಿ ಬೇಕಿಲ್ಲ, ಅವ್ಯವಸ್ಥೆ ಸೃಷ್ಟಿಸುವುದೇ ಅದರ ಗುರಿ: ಜೋಶಿ

Public TV
By Public TV
34 minutes ago
Vijay Thalapathy Tamil Nadu Karur Stampede
Latest

ಕರೂರು ಕಾಲ್ತುಳಿತ – ಮಾ.10ಕ್ಕೆ ವಿಚಾರಣೆಗೆ ಹಾಜರಾಗುವಂತೆ ವಿಜಯ್‌ಗೆ ಸಿಬಿಐ ಸಮನ್ಸ್

Public TV
By Public TV
50 minutes ago
T20 World Cup Final Varun Chakravarthy Mocks Pakistan With Another Tea Cup Photo
Cricket

ಟೀ ಕುಡಿಯುವ ಫೋಟೋ ಅಪ್ಲೋಡ್‌ ಮಾಡಿ ಪಾಕಿಸ್ತಾನವನ್ನು ಟ್ರೋಲ್‌ ಮಾಡಿದ ಚಕ್ರವರ್ತಿ

Public TV
By Public TV
1 hour ago
Chikkaballapura Death
Chikkaballapur

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವು

Public TV
By Public TV
2 hours ago
Mandya Suicide
Crime

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?