Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪುಟ ರಚನೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಪುಟ ರಚನೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಅಸಮಾಧಾನ

Latest

ಸಂಪುಟ ರಚನೆ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಭುಗಿಲೆದ್ದ ಅಸಮಾಧಾನ

Public TV
Last updated: December 31, 2019 6:58 pm
Public TV
Share
3 Min Read
Uddhav Thackeray
SHARE

– ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸ್ವತಃ ಸಂಜಯ್ ರಾವತ್ ಗೈರು
– ರಾಗಾ ಭೇಟಿ ಮಾಡಿ ಅಳಲು ತೋಡಿಕೊಂಡ ಕಾಂಗ್ರೆಸ್ ನಾಯಕರು
– ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಎನ್‍ಸಿಪಿ ನಾಯಕ

ಮುಂಬೈ: ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆಯ ಬೆನ್ನಲ್ಲೇ ಅಸಮಾಧಾನ ಭುಗಿಲೆದ್ದಿದ್ದು, ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಿವ ಸೇನೆ ನಾಯಕ ಸಂಜಯ್ ರಾವತ್ ಅವರೇ ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಇದೀಗ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿದ್ದಾರೆ.

ಮಹಾರಾಷ್ಟ್ರದ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚೌವ್ಹಾಣ್ ಸೇರಿದಂತೆ ಹಲವು ನಾಯಕರು ಅಸಮಾಧಾನಗೊಂಡಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಚೌವ್ಹಾಣ್, ನಸೀಮ್ ಖಾನ್, ಪ್ರಣಿತಿ ಶಿಂಧೆ, ಸಂಗ್ರಾಮ್ ತೋಪ್ಟೆ, ಅಮಿನ್ ಪಟೇಲ್ ಹಾಗೂ ರೋಹಿದಾಸ್ ಪಾಟೀಲ್ ಅವರು ಸೋಮವಾರ ಸಂಜೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದರು. ಇದರ ಬೆನ್ನಲ್ಲೇ ದೆಹಲಿಯ ಅವರ ನಿವಾಸದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.

maharashtra congress leaders

ಸೋಮವಾರವಷ್ಟೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ಹಾಗೂ 34 ಇತರ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಮೂಲಕ ಸರ್ಕಾರ ರಚನೆಯಾಗಿ ಒಂದು ತಿಂಗಳ ನಂತರ ಸಚಿವ ಸಂಪುಟ ರಚನೆಯ ಪ್ರಹಸನಕ್ಕೆ ವಿರಾಮ ಬಿದ್ದಿತ್ತು. ಇದೀಗ ಕಾಂಗ್ರೆಸ್ ಹಾಗೂ ಸ್ವತಃ ಕೆಲ ಶಿವಸೇನೆ ನಾಯಕರಲ್ಲಿಯೇ ಅಸಮಾಧಾನ ಭುಗಿಲೆದ್ದಿದ್ದು, ಇದು ಸಿಎಂ ಉದ್ಧವ್ ಠಾಕ್ರೆಗೆ ಸವಾಲಾಗಿ ಪರಿಣಮಿಸಿದೆ.

ಈ ಮಧ್ಯೆ ತಮ್ಮ ಸಹೋದರನಿಗೆ ಸಂಪುಟದಲ್ಲಿ ಸ್ಥಾನ ನೀಡಿಲ್ಲ ಎನ್ನುವ ಕಾರಣಕ್ಕೆ ಶಿವಸೇನೆ ಸಂಸದ ಹಾಗೂ ಮಹಾ ವಿಕಾಸ್ ಅಘಾಡಿ ಮೈತ್ರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಜಯ್ ರಾವತ್ ಪ್ರಮಾಣ ವಚನ ಸಮಾರಂಭಕ್ಕೆ ಭಾಗವಹಿಸಿಲ್ಲ ಎಂದು ಹೇಳಲಾಗಿದೆ.

Sanjay Raut

ಕಾಂಗ್ರೆಸ್ ನಾಯಕರ ಪಟ್ಟಿಯಲ್ಲಿ ಸೋಮವಾರ ಅಶೋಕ್ ಚೌವ್ಹಾಣ್, ದಿಲೀಪ್ ವಾಸ್ಲೆ ಪಾಟೀಲ್, ಧನಂಜಯ್ ಮುಂಡೆ, ಸುನೀಲ್ ಛತ್ರಪಾಲ್ ಕೇದಾರ್ ಹಾಗೂ ಕೆ.ಸಿ.ಪಡ್ವಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೆ ಇವರಿಗೆ ಖಾತೆ ಹಂಚುವ ಕಸರತ್ತು ಸಹ ಇನ್ನೂ ನಡೆಯಬೇಕಿದೆ. ಇನ್ನು ಎರಡ್ಮೂರು ದಿನಗಳಲ್ಲಿ ಖಾತೆಗಳನ್ನು ಹಂಚಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಸರ್ಕಾರ ರಚನೆಯಾಗಿ ತಿಂಗಳ ನಂತರ ಸಿಎಂ ಸಚಿವ ಸಂಪುಟ ರಚನೆ ಮಾಡಿದ್ದು, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಅಳಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ ಕಳೆದ ತಿಂಗಳು ಬಿಜೆಪಿ ಜೊತೆಗೆ ತೆರಳಿ ಬೆಳಗಿನ ಜಾವವೇ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಬಹುಮತ ಸಾಬೀತಿಗೆ ಸೂಚಿಸಿದ ಕೆಲವೇ ಗಂಟೆಗಳ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

maha cabinet

ಇತ್ತ ಎನ್‍ಸಿಪಿಯ ಒಂದು ವಿಕೆಟ್ ಪತನವಾಗುವ ಹಂತ ತಲುಪಿದ್ದು, ಸಚಿವ ಸಂಪುಟ ರಚನೆಯಾದ ಕೆಲವೇ ಗಂಟೆಗಳ ನಂತರ ಎನ್‍ಸಿಪಿ ಶಾಸಕ ಪ್ರಕಾಶ್ ಸೋಳಂಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ನಾನು ರಾಜಕೀಯಕ್ಕೆ ಅರ್ಹನಲ್ಲ ಹೀಗಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪ್ರಚೋದನೆ ನೀಡುವ ದೃಷ್ಟಿಯಿಂದ ನಾನು ರಾಜೀನಾಮೆ ನೀಡುತ್ತಿಲ್ಲ. ಈ ಕುರಿತು ನಾನು ಎನ್‍ಸಿಪಿ ನಾಯಕರಿಗೆ ತಿಳಿಸಿದ್ದೇನೆ. ಸ್ಪೀಕರ್ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ನನ್ನ ರಾಜೀನಾಮೆಗೂ ಸಂಪುಟ ರಚನೆಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:cabinetcongressmaharashtraNCPPublic TVshiv senaUddhav Thackerayಉದ್ಧವ್ ಠಾಕ್ರೆಎನ್‍ಸಿಪಿಕಾಂಗ್ರೆಸ್ಪಬ್ಲಿಕ್ ಟಿವಿಮಹಾರಾಷ್ಟ್ರಶಿವಸೇನೆಸಚಿವ ಸಂಪುಟ ರಚನೆ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
29 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
49 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
50 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
55 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?