Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವಾರ ತುಮಕೂರಿಗೆ ಮೋದಿ – ಎಷ್ಟು ಗಂಟೆಗೆ ಭೇಟಿ? ಎಲ್ಲಿ ಏನು ಕಾರ್ಯಕ್ರಮ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗುರುವಾರ ತುಮಕೂರಿಗೆ ಮೋದಿ – ಎಷ್ಟು ಗಂಟೆಗೆ ಭೇಟಿ? ಎಲ್ಲಿ ಏನು ಕಾರ್ಯಕ್ರಮ?

Karnataka

ಗುರುವಾರ ತುಮಕೂರಿಗೆ ಮೋದಿ – ಎಷ್ಟು ಗಂಟೆಗೆ ಭೇಟಿ? ಎಲ್ಲಿ ಏನು ಕಾರ್ಯಕ್ರಮ?

Public TV
Last updated: December 31, 2019 10:32 pm
Public TV
Share
2 Min Read
modi teaches
SHARE

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2 ರಂದು ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಪರಿಶೀಲನೆ ಬಳಿಕ ಪ್ರವಾಸಿಮಂದಿರದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಿಎಂ, ಅಧಿಕಾರಿಗಳು ಹಾಗೂ ಮುಖಂಡರ ಜೊತೆ ಮಾತನಾಡಿದ್ದೇನೆ. 1.50 ಲಕ್ಷ ಜನ ಭಾಗವಹಿಸಲಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

bsy 5

ಪ್ರಧಾನಿ ಮೋದಿ ಮಧ್ಯಾಹ್ನ ಮಧ್ಯಾಹ್ನ 2.15ಕ್ಕೆ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದು, ಗದ್ದುಗೆ ದರ್ಶನ ಪಡೆದು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿದ್ದಾರೆ. ಅಲ್ಲದೆ ಸಿದ್ದಗಂಗಾ ಮಠದಲ್ಲಿ ಸ್ವಾಮೀಜಿ ಅವರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಸಹ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3.30 ರಿಂದ 5ರ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ರಸ್ತೆಗಳಲ್ಲಿ ಎಲ್‍ಇಡಿ, ಧ್ವನಿ ವರ್ಧಕ ಇರಲಿದೆ. ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರ ನೀಡಲಿದ್ದಾರೆ, ದೇಶದ 7 ರಾಜ್ಯದ 28 ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಮಣಿಪುರ, ಜಾರ್ಖಂಡ್ ಸಿಎಂ ಹಾಗೂ ಉತ್ತರಾಖಂಡ್ ರಾಜ್ಯಪಾಲರು ಆಗಮಿಸುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ಯೊಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

vlcsnap 2019 12 31 22h29m38s298

ಪ್ರಧಾನಿ ಮೋದಿಗೆ-ಜನರ ಅಹವಾಲು
ತುಮಕೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಹಲವಾರು ಸವಾಲುಗಳು ಎದುರಾಗಿವೆ. ಪ್ರಧಾನಿ ಮೋದಿಯೇ ಶಂಕುಸ್ಥಾಪನೆ ಮಾಡಿದ್ದ ಎಚ್‍ಎಎಲ್ ಘಟಕ ಇನ್ನೂ ಕಾರ್ಯಾರಂಭ ಮಾಡಿಲ್ಲ. ಮೋದಿಯವರೇ ಉದ್ಘಾಟಿಸಿದ್ದ ಫುಡ್ ಪಾರ್ಕಿನಲ್ಲಿ ಅರಾಜಕತೆ ಉಂಟಾಗಿದೆ. ಹೀಗೆ ಹಲವು ಸಮಸ್ಯೆಗಳು ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿವೆ. ಇದಕ್ಕೆಲ್ಲ ಪ್ರಧಾನಿ ಮೋದಿ ಉತ್ತರ ನೀಡುತ್ತಾರಾ ಎಂದು ಜಿಲ್ಲೆಯ ಜನತೆ ಎದುರು ನೋಡುತಿದ್ದಾರೆ.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಮೂರನೇ ಬಾರಿ ತುಮಕೂರಿಗೆ ಆಗಮಿಸುತ್ತಿದ್ದಾರೆ. ಪ್ರತಿ ಬಾರಿ ಬಂದಾಗಲೆಲ್ಲ ಒಂದೊಂದು ಆಶ್ವಾಸನೆ ಕೊಟ್ಟು ಹೋಗಿದ್ದಾರೆ. ಯಾವ ಆಶ್ವಾಸನೆಯೂ ಸಂಪೂರ್ಣವಾಗಿ ಇಡೇರಿಲ್ಲ. ಅದರಲ್ಲಿ ಪ್ರಮುಖವಾಗಿ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ನಲ್ಲಿ ಹೆಲಿಕಾಪ್ಟರ್ ಉತ್ಪಾದನಾ ಘಟಕವನ್ನು 2016 ಜನವರಿ 3 ರಂದು ಸ್ವತಃ ಮೋದಿಯವರೇ ಶಂಕುಸ್ಥಾಪನೆ ಮಾಡಿದ್ದರು. 2018ರಲ್ಲಿ ಕಾಮಗಾರಿ ಪೂರ್ಣಗೊಂಡು ಹೆಲಿಕಾಪ್ಟರ್ ಹಾರಾಡಲಿದೆ ಎಂದು ಭರವಸೆ ನಿಡಿದ್ದರು. ಆದರೆ 2020 ಸಮೀಪಿಸಿದರೂ ಎಚ್‍ಎಎಲ್ ಘಟಕ ಕಾರ್ಯಾರಂಭಗೊಂಡಿಲ್ಲ. ಇದರ ಜೊತೆಗೆ ಜಿಲ್ಲೆಯ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಹಿಂದಿನ ಎಚ್.ಎಮ್.ಟಿ ಕಾರ್ಖಾನೆ ಪ್ರದೇಶದಲ್ಲಿ ತಲೆ ಎತ್ತುತ್ತಿರುವ ಇಸ್ರೋ ಸಂಸ್ಥೆಯ ಘಟಕದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿದ್ದಾರೆ.

vlcsnap 2019 12 31 22h29m49s033

ಈ ಹಿಂದೆ ಪ್ರಧಾನಿ ಮೋದಿಯವರೇ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಉದ್ಘಾಟಿಸಿದ್ದ ಫುಡ್ ಪಾರ್ಕ್ ಅವ್ಯವಹಾರಗಳ ತಾಣವಾಗಿದೆ. ರೈತರ ಬೆಳೆಗಳನ್ನು ಸಂಸ್ಕರಣ ಮಾಡಿ, ಸ್ಥಳೀಯರಿಗೆ ಉದ್ಯೋಗ ಕೊಡಲಾಗುವುದು ಎಂದಿದ್ದರು. ಆದರೆ ಇಲ್ಲಿ ರೈತರ ಬೆಳೆಗಳು ಸಂಸ್ಕರಣವಾಗುತ್ತಿಲ್ಲ. ಕನ್ನಡಿಗರಿಗೆ ಡಿ ದರ್ಜೆಯ ಉದ್ಯೋಗ ಮಾತ್ರ ಸಿಗುತ್ತಿದ್ದು, ಮೇಲ್ದರ್ಜೆಯ ಉದ್ಯೋಗಗಳು ಗುಜರಾತಿಗಳ ಪಾಲಾಗುತ್ತಿದೆ ಎಂಬ ಆರೋಪ ಇದೆ. ಹಲವಾರು ಉದ್ಯಮಿಗಳು ಸಬ್ಸಿಸಿಡಿಗೋಸ್ಕರ ಕಾರ್ಖಾನೆ ತೆರೆಯುವ ನಾಟಕ ಆಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

vlcsnap 2019 12 31 22h27m35s347 e1577811752989

TAGGED:Kisan Samman Projectprime minister narendra moditumkurYediyurappaಕಿಸಾನ್ ಸಮ್ಮಾನ್ ಯೋಜನೆತುಮಕೂರುಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
1 hour ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
1 hour ago
01 12
Big Bulletin

ಬಿಗ್‌ ಬುಲೆಟಿನ್‌ 19 December 2025 ಭಾಗ-1

Public TV
By Public TV
2 hours ago
02 10
Big Bulletin

ಬಿಗ್‌ ಬುಲೆಟಿನ್‌ 19 December 2025 ಭಾಗ-2

Public TV
By Public TV
2 hours ago
03 10
Big Bulletin

ಬಿಗ್‌ ಬುಲೆಟಿನ್‌ 19 December 2025 ಭಾಗ-3

Public TV
By Public TV
2 hours ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?