Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು: ವೀರೇಂದ್ರ ಹೆಗ್ಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು: ವೀರೇಂದ್ರ ಹೆಗ್ಗಡೆ

Dakshina Kannada

ವಾಸ್ತವಿಕ ವಿಚಾರ, ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹ ಇರಬೇಕು: ವೀರೇಂದ್ರ ಹೆಗ್ಗಡೆ

Public TV
Last updated: January 5, 2020 10:26 am
Public TV
Share
2 Min Read
mng sammelana 1
SHARE

ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕೆಯ ಜವಾಬ್ದಾರಿ ದೊಡ್ಡದು. ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೆ ಇರುವುದು ಉತ್ತಮ ವಿಚಾರ. ಇಂದು ಪತ್ರಿಕೆಗಳಲ್ಲಿ ಭಾಷಣದ ವಿಷಯವನ್ನು ಕುತೂಹಲ ಆಸಕ್ತಿಯಿಂದ ಓದುವಂತಹ ವಿಷಯಗಳು ಪ್ರಕಟವಾಗುತ್ತದೆ. ಆದರೆ ಪತ್ರಕರ್ತರು ಓದುಗರಿಗೆ ಮನದಟ್ಟು ಮಾಡುವಂತಹ ವರದಿಗಳನ್ನು ನೀಡುತ್ತಿದ್ದಾರೆ. ವಾಸ್ತವಿಕ ವಿಚಾರ ಮತ್ತು ಓದುಗರಲ್ಲಿ ಆಸಕ್ತಿ ಮೂಡಿಸುವ ಬರಹವಿದ್ದಾಗ ಓದುಗರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.

ಫೆಬ್ರವರಿಯಲ್ಲಿ ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಸಂತ ಮಹಲ್‍ನಲ್ಲಿ ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿರು. ಬಳಿಕ ಮಾತನಾಡಿ,ಪತ್ರಕರ್ತರಲ್ಲಿ ತಾಳ್ಮೆ, ಸಹನೆ ಇರಬೇಕು. ಪತ್ರಕರ್ತರಿಗೆ ಒತ್ತಡ ಇರುವುದು ಸಹಜ. ಓದುಗರಿಗೆ ನೀಡುವ ವರದಿಯು ಉಪಯುಕ್ತ ಮತ್ತು ಪರಿಣಾಮ ಬೀರುವಂತಾಗಬೇಕು. ಇಂದು ಸಾವಿರಾರು ಮಂದಿ ಪತ್ರಕರ್ತರು ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸಮಾಜಕ್ಕೆ ತಿಳಿಯಬೇಕು ಮತ್ತು ಅವರಿಗೆ ಸಿಗಬೇಕಾದ ವೇತನ, ಆರೋಗ್ಯ ಭದ್ರತೆ, ವೃದ್ಧಾಪ್ಯ ವೇತನ ಸರಿಯಾಗಿ ಸಿಗುವಂತಾಗಲು ಇಂತಹ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಗಳು ಸಹಕಾರಿಯಾಗಲಿ ಎಂದರು.

mng sammelana

ಇಂದಿನ ದಿನಪತ್ರಿಕೆಗಳ ಗುಣಮಟ್ಟ ಮತ್ತು ವರದಿಗಳನ್ನು ಒಂದು ತಿಂಗಳ ಬಳಿಕವೂ ಓದುವಂತಿರುತ್ತದೆ. ಹಿಂದೆ ದಿನಪತ್ರಿಕೆ ಎಂದರೆ ಒಂದೆರಡು ದಿವಸ ಓದಿ ಬಿಡುವಂತಾಗಿತ್ತು. ವರದಿ ನೀಡುವುದರ ಜೊತೆಗೆ ಪತ್ರಿಕೆ ಮಾರಾಟದ ಬಗ್ಗೆಯೂ ಕಾಳಜಿ ಅಗತ್ಯ ಎಂದು ಹೇಳಿದರು.

ಈ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಗೊಳ್ಳಲು ಪತ್ರಿಕೆ ಮತ್ತು ಪತ್ರಕರ್ತರ ಪ್ರಯತ್ನ ಕಾರಣ. ಇಂದು ರಾಜಕಾರಣಿಗಳ ಒಳಿತು, ಕೆಡುಕುಗಳನ್ನು ಹೇಳುವಂತಹ ಸಾಮಥ್ರ್ಯವಿರುವುದು ಪತ್ರಕರ್ತರಿಗೆ ಮಾತ್ರ. ಮಂಗಳೂರಿನಲ್ಲಿ ನಡೆಯುವಂತಹ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.

ರಾಜ್ಯಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಮಾಧ್ಯಮಗಳು ಜನರಲ್ಲಿ ಸಂಶಯ ಮೂಡುವಂತೆ ವರ್ತಿಸಬಾರದು. ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಕರಾವಳಿ ಭಾಗವು ಪತ್ರಿಕೆಗೆ ನೀಡಿದ ಕೊಡುಗೆ ಅಪಾರವಾದುದು. ಇದಕ್ಕಾಗಿಯೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಹಕಾರ ನೀಡುವ ಭರವಸೆ ನೀಡಿರುವುದು ಸಮ್ಮೇಳನಕ್ಕೆ ಶಕ್ತಿ ತುಂಬಿದಂತಾಗಿದೆ ಎಂದರು.

mng sammelana 2

ಇತ್ತ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಜಿಲ್ಲಾ ಪತ್ರಕರ್ತರ ಸಂಘವು ಪತ್ರಿಕಾ ವೃತ್ತಿಯೊಂದಿಗೆ ಸಾಮಾಜಿಕ ಚಿಂತನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪತ್ರಕರ್ತರ ಗ್ರಾಮವಾಸ್ತವ್ಯದ ಮೂಲಕ ಸರಕಾರಿ ಶಾಲೆ ಉಳಿಸುವ ಅಭಿಯಾನ, ಅಂತರ್ಜಲ ಹೆಚ್ಚಿಸುವ ಕಾರ್ಯಕ್ರಮ, ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ಮಾಡುತ್ತಿದೆಯಲ್ಲದೆ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಉಪಸ್ಥಿತರಿದ್ದರು. ಪತ್ರಕರ್ತ ಡಿ.ಪಿ ಹರೀಶ್ ರೈ ನಿರೂಪಿಸಿ, ಜಿಲ್ಲಾ ಪತ್ರಕರ್ತರ ಸಂಘದ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಬಳಿಕ ರಾಜ್ಯ ಪತ್ರಕರ್ತರ ಸಂಘ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

TAGGED:Journalists ConferenceMangaluruPublic TVVeerendra Hegdeಪತ್ರಕರ್ತರ ಸಮ್ಮೇಳನಪಬ್ಲಿಕ್ ಟಿವಿಮಂಗಳೂರುವೀರೇಂದ್ರ ಹೆಗ್ಗಡೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
4 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
4 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
4 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?