Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

Dharwad

ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

Public TV
Last updated: January 6, 2020 6:34 pm
Public TV
Share
3 Min Read
HBL 3
SHARE

ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿ ಸಶಕ್ತಗೊಳಿಸುವುದು ಸೇರಿದಂತೆ ಅನೇಕ ಆರ್ಥಿಕ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸ್ಪಷ್ಟ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೃಷಿ ಮೇಲಿನ ಉದ್ಯೋಗ ಅವಲಂಬನೆ ಕಡಿಮೆಗೊಳಿಸಿ ಪರ್ಯಾಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಂಗ್ರಹಿಸಲಾಗಿರುವ ಬರುವ ಬುಧವಾರದ ಕೇಂದ್ರ ಸಚಿವ ಸಂಪುಟ ಸಭೆಯ ಒಳಗಾಗಿ ಕೇಂದ್ರ ಹಣಕಾಸು ಸಚಿವರಿಗೆ ತಲುಪಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಇಂದು ಕೇಂದ್ರ ಬಜೆಟ್ ಪೂರ್ವ ಪ್ರಸ್ತಾವನೆಗಳ ಕುರಿತು ಆರ್ಥಿಕ ತಜ್ಞರು ಮತ್ತು ಸಾರ್ವಜನಿಕರೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ 16 ವರ್ಷಗಳಿಂದ ನಿರಂತರವಾಗಿ ಬಜೆಟ್ ಪೂರ್ವ ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇನೆ. ಧಾರವಾಡ ಲೋಕಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಕೇಂದ್ರ ಸರ್ಕಾರದ ಸಚಿವನಾಗಿ ಸಭೆ ನಡೆಸುವ ಸದಾವಕಾಶ ದೊರೆತಿದೆ. ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿಸುವ ಮತ್ತು 1 ಲಕ್ಷ ಕೋಟಿ ರೂ.ಗಳನ್ನು ಬರುವ ಐದು ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿನಿಯೋಗಿಸುವ ಗುರಿ ಹೊಂದಲಾಗಿದೆ. ಬರುವ ಹತ್ತು ವರ್ಷಗಳಲ್ಲಿ ರೇಲ್ವೇ ವ್ಯವಸ್ಥೆಯ ಅಭಿವೃದ್ಧಿಗೆ 50 ಲಕ್ಷ ಕೋಟಿ ರೂ.ಬಳಸುವ ಗುರಿ ಹೊಂದಲಾಗಿದೆ ಎಂದರು.

HBL 2

ಜಿಎಸ್ ಟಿ ತೆರಿಗೆಯು ಸರಳ ಮತ್ತು ಸುಲಭ ವಿಧಾನವಾಗಿದೆ ಎಂಬುದು ಬಹುತೇಕ ಚಾರ್ಟರ್ಡ್ ಅಕೌಂಟೆಂಟ್ ಗಳ ಅಭಿಪ್ರಾಯವಾಗಿದೆ. 60 ದಿನಗಳಲ್ಲಿ ಜಿಎಸ್‍ಟಿ ಮರುಪಾವತಿ ಮಾಡಲಾಗುವುದು. ದೇಶದ ಸಮಗ್ರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಎಲ್ಲರ ಸಲಹೆ ಪಡೆಯಲು ಈ ಸಭೆ ಆಯೋಜಿಸಲಾಗಿದೆ. ರಚನಾತ್ಮಕ ಸಲಹೆಗಳನ್ನು ಕ್ರೂಢೀಕರಿಸಿ ಕೇಂದ್ರದ ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಉದ್ಯಮಿಗಳು, ಸಾರ್ವಜನಿಕರ ಅಭಿಪ್ರಾಯಗಳು:
ಸಂವಾದದಲ್ಲಿ ಭಾಗವಹಿಸಿದ ವಿವಿಧ ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಿಯಾಗಿರುವ ಅಂಶಗಳನ್ನು ಪರಿಹರಿಸಬೇಕು. ಮಂಗಳೂರು-ವಿಜಯಪುರ ರೈಲನ್ನು ಖಾಯಂಗೊಳಿಸಬೇಕು. ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢರ ಹೆಸರಿಡಬೇಕು. ಧಾರವಾಡ ರೇಲ್ವೇ ಸ್ಟೇಷನ್ ಹತ್ತಿರ ಕಲ್ಯಾಣ ನಗರಕ್ಕೆ ತೆರಳುವ ಮಾರ್ಗದಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ತೆರಿಗೆ ನೀತಿಯ ಪರಿಷ್ಕರಣೆ, 2005 ರವರೆಗೂ ಗ್ರಾಮೀಣ ಬ್ಯಾಂಕುಗಳಿಗೆ ತೆರಿಗೆ ವಿಧಿಸುತ್ತಿರಲಿಲ್ಲ. 2005 ರ ನಂತರ ಗ್ರಾಮೀಣ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಅಧಿಕ ತೆರಿಗೆ ಪಾವತಿಸುತ್ತಿವೆ. ಈ ವ್ಯತ್ಯಾಸ ಸರಿಪಡಿಸಬೇಕು. ಸಹಕಾರಿ ರಂಗದ ಬ್ಯಾಂಕುಗಳು ಉತ್ತೇಜನಕ್ಕೆ ಕ್ರಮಗಳನ್ನು ಅಳವಡಿಸಬೇಕು. ವಿಮಾ ವಲಯದ ಮೇಲೆ ವಿಧಿಸುತ್ತಿರುವ ಜಿಎಸ್‍ಟಿ ತೆರಿಗೆ ಕಡಿತಗೊಳಿಸಿ. ಇದೇ ಸಂದರ್ಭದಲ್ಲಿ ಪೂರ್ಣಪ್ರಜ್ಞ ಎಂಬ ಯುವ ವಿದ್ಯಾರ್ಥಿಯೊಬ್ಬ ಮಾತನಾಡಿ, ಉನ್ನತ ಶಿಕ್ಷಣದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಾಮಥ್ರ್ಯ ಹೆಚ್ಚಿಸಲು ಶಿಕ್ಷಣದ ಹೂಡಿಕೆಯ ಪ್ರಮಾಣ ಹೆಚ್ಚಿಸಬೇಕು. ಉನ್ನತ ಗುಣಮಟ್ಟದ ಎಂ.ಬಿ.ಎ ಮತ್ತಿತರ ವೃತ್ತಿಪರ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಗಳು ತಲೆ ಎತ್ತಬೇಕು ಎಂದರು.

HBL 1

ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ ಸತೀಶ್, ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಮ್ಯಾಥ್ಯೂ, ನೈಋತ್ಯ ರೇಲ್ವೇ ವಲಯದ ಎಡಿಜಿಎಂ ಎ.ಕೆ.ಮಿಶ್ರಾ, ಅಶೋಕ್ ಗಡಾದ ಮತ್ತಿತರರು ವೇದಿಕೆಯಲ್ಲಿದ್ದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ ಸ್ವಾಗತಿಸಿದರು. ಶೇಷಗಿರಿ ಕುಲಕರ್ಣಿ ನಿರೂಪಿಸಿದರು. ಮಲ್ಲಿಕಾರ್ಜುನಗೌಡ ಪಾಟೀಲ ವಂದಿಸಿದರು. ಕೈಗಾರಿಕೋದ್ಯಮಿಗಳು, ಚಾರ್ಟರ್ಡ್ ಅಕೌಂಟೆಂಟ್‍ಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

TAGGED:hubballiprahlad joshiPublic TVಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Accident 2 1
Bengaluru City

ಹೊಸಕೋಟೆ ಬಳಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – 7 ಜನ ಸ್ಥಳದಲ್ಲೇ ದುರ್ಮರಣ

Public TV
By Public TV
14 minutes ago
Wild elephant captured in Moleyur Range of Saraguru taluk
Districts

ಮೈಸೂರು | ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Public TV
By Public TV
19 minutes ago
ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
8 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
9 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
9 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?