Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

Dharwad

ಆರ್ಥಿಕ ಸದೃಢತೆ ಸಾಧನೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಜೋಶಿ

Public TV
Last updated: January 6, 2020 6:34 pm
Public TV
Share
3 Min Read
HBL 3
SHARE

ಹುಬ್ಬಳ್ಳಿ: ಬರುವ ವರ್ಷಗಳಲ್ಲಿ ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿ ಸಶಕ್ತಗೊಳಿಸುವುದು ಸೇರಿದಂತೆ ಅನೇಕ ಆರ್ಥಿಕ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸ್ಪಷ್ಟ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕೃಷಿ ಮೇಲಿನ ಉದ್ಯೋಗ ಅವಲಂಬನೆ ಕಡಿಮೆಗೊಳಿಸಿ ಪರ್ಯಾಯ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇಂದಿನ ಸಭೆಯಲ್ಲಿ ಸಂಗ್ರಹಿಸಲಾಗಿರುವ ಬರುವ ಬುಧವಾರದ ಕೇಂದ್ರ ಸಚಿವ ಸಂಪುಟ ಸಭೆಯ ಒಳಗಾಗಿ ಕೇಂದ್ರ ಹಣಕಾಸು ಸಚಿವರಿಗೆ ತಲುಪಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಇಂದು ಕೇಂದ್ರ ಬಜೆಟ್ ಪೂರ್ವ ಪ್ರಸ್ತಾವನೆಗಳ ಕುರಿತು ಆರ್ಥಿಕ ತಜ್ಞರು ಮತ್ತು ಸಾರ್ವಜನಿಕರೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಕಳೆದ 16 ವರ್ಷಗಳಿಂದ ನಿರಂತರವಾಗಿ ಬಜೆಟ್ ಪೂರ್ವ ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದೇನೆ. ಧಾರವಾಡ ಲೋಕಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ ಕೇಂದ್ರ ಸರ್ಕಾರದ ಸಚಿವನಾಗಿ ಸಭೆ ನಡೆಸುವ ಸದಾವಕಾಶ ದೊರೆತಿದೆ. ಭಾರತವನ್ನು 5 ಟ್ರಿಲಿಯನ್ ಅರ್ಥವ್ಯವಸ್ಥೆಯ ರಾಷ್ಟ್ರವಾಗಿಸುವ ಮತ್ತು 1 ಲಕ್ಷ ಕೋಟಿ ರೂ.ಗಳನ್ನು ಬರುವ ಐದು ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿನಿಯೋಗಿಸುವ ಗುರಿ ಹೊಂದಲಾಗಿದೆ. ಬರುವ ಹತ್ತು ವರ್ಷಗಳಲ್ಲಿ ರೇಲ್ವೇ ವ್ಯವಸ್ಥೆಯ ಅಭಿವೃದ್ಧಿಗೆ 50 ಲಕ್ಷ ಕೋಟಿ ರೂ.ಬಳಸುವ ಗುರಿ ಹೊಂದಲಾಗಿದೆ ಎಂದರು.

HBL 2

ಜಿಎಸ್ ಟಿ ತೆರಿಗೆಯು ಸರಳ ಮತ್ತು ಸುಲಭ ವಿಧಾನವಾಗಿದೆ ಎಂಬುದು ಬಹುತೇಕ ಚಾರ್ಟರ್ಡ್ ಅಕೌಂಟೆಂಟ್ ಗಳ ಅಭಿಪ್ರಾಯವಾಗಿದೆ. 60 ದಿನಗಳಲ್ಲಿ ಜಿಎಸ್‍ಟಿ ಮರುಪಾವತಿ ಮಾಡಲಾಗುವುದು. ದೇಶದ ಸಮಗ್ರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಎಲ್ಲರ ಸಲಹೆ ಪಡೆಯಲು ಈ ಸಭೆ ಆಯೋಜಿಸಲಾಗಿದೆ. ರಚನಾತ್ಮಕ ಸಲಹೆಗಳನ್ನು ಕ್ರೂಢೀಕರಿಸಿ ಕೇಂದ್ರದ ಹಣಕಾಸು ಸಚಿವರು ಮತ್ತು ಪ್ರಧಾನ ಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಉದ್ಯಮಿಗಳು, ಸಾರ್ವಜನಿಕರ ಅಭಿಪ್ರಾಯಗಳು:
ಸಂವಾದದಲ್ಲಿ ಭಾಗವಹಿಸಿದ ವಿವಿಧ ಕೈಗಾರಿಕೋದ್ಯಮಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಿಯಾಗಿರುವ ಅಂಶಗಳನ್ನು ಪರಿಹರಿಸಬೇಕು. ಮಂಗಳೂರು-ವಿಜಯಪುರ ರೈಲನ್ನು ಖಾಯಂಗೊಳಿಸಬೇಕು. ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಶ್ರೀ ಸಿದ್ದಾರೂಢರ ಹೆಸರಿಡಬೇಕು. ಧಾರವಾಡ ರೇಲ್ವೇ ಸ್ಟೇಷನ್ ಹತ್ತಿರ ಕಲ್ಯಾಣ ನಗರಕ್ಕೆ ತೆರಳುವ ಮಾರ್ಗದಲ್ಲಿ ರೇಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ತೆರಿಗೆ ನೀತಿಯ ಪರಿಷ್ಕರಣೆ, 2005 ರವರೆಗೂ ಗ್ರಾಮೀಣ ಬ್ಯಾಂಕುಗಳಿಗೆ ತೆರಿಗೆ ವಿಧಿಸುತ್ತಿರಲಿಲ್ಲ. 2005 ರ ನಂತರ ಗ್ರಾಮೀಣ ಬ್ಯಾಂಕುಗಳು ರಾಷ್ಟ್ರೀಕೃತ ಬ್ಯಾಂಕುಗಳಿಗಿಂತ ಅಧಿಕ ತೆರಿಗೆ ಪಾವತಿಸುತ್ತಿವೆ. ಈ ವ್ಯತ್ಯಾಸ ಸರಿಪಡಿಸಬೇಕು. ಸಹಕಾರಿ ರಂಗದ ಬ್ಯಾಂಕುಗಳು ಉತ್ತೇಜನಕ್ಕೆ ಕ್ರಮಗಳನ್ನು ಅಳವಡಿಸಬೇಕು. ವಿಮಾ ವಲಯದ ಮೇಲೆ ವಿಧಿಸುತ್ತಿರುವ ಜಿಎಸ್‍ಟಿ ತೆರಿಗೆ ಕಡಿತಗೊಳಿಸಿ. ಇದೇ ಸಂದರ್ಭದಲ್ಲಿ ಪೂರ್ಣಪ್ರಜ್ಞ ಎಂಬ ಯುವ ವಿದ್ಯಾರ್ಥಿಯೊಬ್ಬ ಮಾತನಾಡಿ, ಉನ್ನತ ಶಿಕ್ಷಣದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಾಮಥ್ರ್ಯ ಹೆಚ್ಚಿಸಲು ಶಿಕ್ಷಣದ ಹೂಡಿಕೆಯ ಪ್ರಮಾಣ ಹೆಚ್ಚಿಸಬೇಕು. ಉನ್ನತ ಗುಣಮಟ್ಟದ ಎಂ.ಬಿ.ಎ ಮತ್ತಿತರ ವೃತ್ತಿಪರ ಸ್ನಾತಕೋತ್ತರ ಶಿಕ್ಷಣ ಸಂಸ್ಥೆಗಳು ತಲೆ ಎತ್ತಬೇಕು ಎಂದರು.

HBL 1

ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ದೀಪಾ ಚೋಳನ್, ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ ಸತೀಶ್, ಆದಾಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಮ್ಯಾಥ್ಯೂ, ನೈಋತ್ಯ ರೇಲ್ವೇ ವಲಯದ ಎಡಿಜಿಎಂ ಎ.ಕೆ.ಮಿಶ್ರಾ, ಅಶೋಕ್ ಗಡಾದ ಮತ್ತಿತರರು ವೇದಿಕೆಯಲ್ಲಿದ್ದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಮಹೇಂದ್ರ ಲದ್ದಡ ಸ್ವಾಗತಿಸಿದರು. ಶೇಷಗಿರಿ ಕುಲಕರ್ಣಿ ನಿರೂಪಿಸಿದರು. ಮಲ್ಲಿಕಾರ್ಜುನಗೌಡ ಪಾಟೀಲ ವಂದಿಸಿದರು. ಕೈಗಾರಿಕೋದ್ಯಮಿಗಳು, ಚಾರ್ಟರ್ಡ್ ಅಕೌಂಟೆಂಟ್‍ಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

TAGGED:hubballiprahlad joshiPublic TVಪಬ್ಲಿಕ್ ಟಿವಿಪ್ರಹ್ಲಾದ್ ಜೋಶಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
2 minutes ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
33 minutes ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
51 minutes ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
52 minutes ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?