Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

Chitradurga

ಅಧಿಕಾರಿಗಳಿಗೆ ಶ್ರೀರಾಮುಲು ಕ್ಲಾಸ್- ಸಭೆಗೆ ಗೈರಾಗಿದ್ದ ಟಿಎಚ್‍ಓ ಸಸ್ಪೆಂಡ್‍ಗೆ ಸೂಚನೆ

Public TV
Last updated: January 7, 2020 11:38 pm
Public TV
Share
3 Min Read
CTD SRIRAMULU A
SHARE

ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಸಮಯಕ್ಕೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಅಷ್ಟೇ ಅಲ್ಲದೆ ಹಲವು ಸಭೆಗಳಿಗೆ ಪದೇ ಪದೇ ಗೈರು ಹಾಜರಾಗುತ್ತಿದ್ದ ಮೊಳಕಾಲ್ಮೂರಿನ ಟಿಎಚ್‍ಓ ತುಳಸಿ ರಂಗನಾಥ್ ಅವರನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದಾರೆ.

ಮೊಳಕಾಲ್ಮೂರು ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕುಂಟಿತವಾಗಲು ಎಇಇ ಶಿವಕುಮಾರ್ ಪವಾರ್ ಕಾರಣವಾಗಿದ್ದಾರೆ. ಅವರಿಗೆ ನೋಟಿಸ್ ನೀಡಬೇಕು ಎಂದು ಉನ್ನತ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಇದೇ ವೇಳೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿನ ಸಮಸ್ಯೆ ಕುರಿತು ತೀವ್ರ ಕಾಳಜಿವಹಿಸಿ, ಸಭೆಯಲ್ಲಿನ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜೊತೆಗೆ ಆಸ್ಪತ್ರೆಗೆ ಅಗತ್ಯವಿರುವ ರೇಡಿಯಾಲಜಿಸ್ಟ್, ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಫಿಸಿಯೋಥೆರಪಿಸ್ಟ್, 3 ಔಷಧ ವಿತರಕರು, 11 ಶುಶ್ರೂಷಕಿಯರು ಹಾಗೂ ಅತಿ ಮುಖ್ಯವಾಗಿ ಅಲ್ಟ್ರಾ ಸ್ಕ್ಯಾನಿಂಗ್ ಮೆಷಿನ್, ಪಲ್ಸ್ ಆಕ್ಸಿ ಮೀಟರ್, ಎಕ್ಸ್ ರೇ ಮೆಷಿನ್‍ಗಳನ್ನು ಆದಷ್ಟು ಬೇಗ ಒದಗಿಸಲು ಅಗತ್ಯವಿರುವ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

CTD SRIRAMULU B

ಸಚಿವ ಶ್ರೀರಾಮುಲು ಅವರು ಮೊಳಕಾಲ್ಮೂರು ಕ್ಷೇತ್ರದ ರಾಯಪುರದಲ್ಲಿ ಆಯುರ್ವೇದ ಮೆಡಿಕಲ್ ಕಾಲೇಜ್ ಹಾಗೂ ಹೋಮಿಯೋಪತಿ ಕಾಲೇಜ್ ಸಹ ಸ್ಥಾಪನೆ ಮಾಡುವ ಇಂಗಿತ ವ್ಯಕ್ತಪಡಿಸಿದರು. ಪಶುಸಂಗೋಪನೆ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆಗೂ ಸಭೆಯಲ್ಲಿ ಮನವಿ ಮಾಡಿದಾಗ, ಸಂಪುಟದಲ್ಲಿ ಈ ಬಗ್ಗೆ ಚರ್ಚಿಸುವ ಭರವಸೆ ನೀಡಿದರು.

ಶಾಲಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಂಗನವಾಡಿಗಳ ಬಳಿ ನೆಲ್ಲಿಕಾಯಿ, ಸೀಬೆಕಾಯಿ, ಹುಣಸೆ ಕಾಯಿ ಮರಗಳ ಸಸಿ ನೆಟ್ಟು ಬೆಳೆಸಲು ವೈದ್ಯರ ನೀಡಿದ ಸಲಹೆ ಹಾಗೂ ಮನವಿಯನ್ನು ಸಚಿವರು ಪಡೆದರು. ಬಳಿಕ ಅಂಗನವಾಡಿಗಳ ಬಳಿ ಕುಡಿಯುವ ನೀರಿನ ಸೌಲಭ್ಯ ಜೊತೆಗೆ ಗಿಡಮರಗಳನ್ನು ಬೆಳೆಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ಅಂಗನವಾಡಿಗಳಲ್ಲಿ ಶೌಚಾಲಯ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಅಂಗನವಾಡಿ ಸಿಬ್ಬಂದಿಗೆ ಗೌರವಧನ ಹಾಗೂ ಮೊಟ್ಟೆಗೆ ಹಣ ಬಿಡುಗಡೆಯಲ್ಲಿ ವಿಳಂಭವಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಅವರು ಗರಂ ಆದರು.

CTD SRIRAMULU

ಮೊಳಕಾಲ್ಮೂರು ಕ್ಷೇತ್ರದಲ್ಲಿ 1.35 ಲಕ್ಷ ಬಿಪಿಎಲ್ ಕಾರ್ಡ್ ಗಳಿವೆ. ಆದರೆ ಸಂಪೂರ್ಣ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ನೀಡದ ಅಧಿಕಾರಿಗೆ ಸಚಿವರು ತರಾಟೆ ತೆಗೆದುಕೊಂಡರು. ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದರು. ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಬೇಡಿಕೆಗೂ ಸ್ಪಂದಿಸಿದ ಅವರು, ವಿದ್ಯಾರ್ಥಿಗಳ ಹಾಸ್ಟೆಲ್ ಪೂರ್ಣಗೊಂಡ ಬಳಿಕ ಆರಂಭಿಸುವ ಭರವಸೆ ನೀಡಿದರು.

ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮತ್ತೆ ಆರಂಭ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಈ ಹಿಂದೆ ಜಾರಿಗೆ ತರಲಾಗಿದ್ದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಸಚಿವರು ಪ್ರಶ್ನಿಸಿದರು. ಆಗ ಅವರ ಮಾತಿಗೆ ಉತ್ತರಿಸಿದ ಅಧಿಕಾರಿಗಳು, 2015-16ರಿಂದ ಈಚೆಗೆ ವಿತರಣೆ ಆಗಿರಲಿಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಬಾಂಡ್ ವಿತರಿಸುತ್ತಿರುವುದಾಗಿ ತಿಳಿಸಿದರು.

CTD SRIRAMULU C

ದೇವರಾಜ ಅರಸು ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಆಗಿದೆ. ಕೆಲಸ ಕೂಡ ನಡೆಯುತ್ತಿದ್ದು, ಉಳಿದ 50 ಲಕ್ಷ ರೂ. ಬಿಡುಗಡೆಗೆ ಅಧಿಕಾರಿಗಳಿಂದ ಮನವಿ ಸಲ್ಲಿಸಲಾಯಿತು. ಆಗ ಸಚಿವರು ತಕ್ಷಣ ಹಣ ಬಿಡುಗಡೆ ಮಾಡುವ ಭರವಸೆ ನೀಡಿದರು.

ಗಡಿಭಾಗದ ಅಧಿಕಾರಿಗಳು ನಿಷ್ಠೆ ಹಾಗೂ ಬದ್ಧತೆಯಿಂದ ಕೆಲಸ ಮಾಡಬೇಕು. ತಾಲೂಕು ಕೇಂದ್ರಗಳಲ್ಲಿರುವ ಅಧಿಕಾರಿಗಳು ಹೆಡ್ ಕ್ವಾರ್ಟರ್ಸ್ ನಲ್ಲಿಯೇ ಉಳಿಯಬೇಕು. ಒಂದು ವೇಳೆ ಸರಿಯಾಗಿ ಕೆಲಸ ಮಾಡಲು ಆಗದವರು ಹೊರಗಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು. ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಗಳು ಬಾರದ ರೀತಿ ಜನರಿಗೆ ಸ್ಪಂದಿಸಬೇಕು, ಜನರ ಕೆಲಸ ಮಾಡಬೇಕು ಎಂದು ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದರು.

TAGGED:B. SriramuluChitradurgamolakalmuruofficersPublic TVTaluk Panchayatಅಧಿಕಾರಿಗಳುಚಿತ್ರದುರ್ಗಟಿಎಚ್‍ಓಪಬ್ಲಿಕ್ ಟಿವಿಬಿ.ಶ್ರೀರಾಮುಲುಮೊಳಕಾಲ್ಮೂರು
Share This Article
Facebook Whatsapp Whatsapp Telegram

Cinema news

Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories

You Might Also Like

SUBBAREDDY
Latest

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
1 minute ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
22 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
51 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
1 hour ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?