ಭ್ರಷ್ಟ ಅಧಿಕಾರಿಗಳ ವಿರುದ್ಧ ಧೈರ್ಯವಾಗಿ ದೂರು ನೀಡುವಂತೆ ಎಸಿಬಿ ಮನವಿ

Public TV
1 Min Read
YDR ACB

ಯಾದಗಿರಿ: ಸರ್ಕಾರ 2016ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ ರಚಿಸಿದ್ದು, ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಎಸಿಬಿಗೆ ದೂರು ನೀಡಿ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಯಾದಗಿರಿ ನಗರದ ತಹಶೀಲ್ದಾರ್ ಕಾರ್ಯಾಲಯ ಆವರಣದಲ್ಲಿ ಇಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ವತಿಯಿಂದ ಜನಸಂಪರ್ಕ ಸಭೆ ಮತ್ತು ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿಎಸ್‍ಸಿ ಡಾ.ಸಂತೋಷ ಕೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡಿ ಮಾತನಾಡಿದರು.

ಸಾರ್ವಜನಿಕ ನೌಕರರು ತಮ್ಮ ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿಗಳಿಕೆ ಮಾಡಿರುವ ಹಾಗೂ ಜನರಿಂದ ಯಾವುದೇ ರೀತಿಯ ಲಂಚದ ಬೇಡಿಕೆ ಇಟ್ಟಲ್ಲಿ, ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿ ಮಾನಸಿಕ ಕಿರುಕುಳ ನೀಡಿದರೆ ಎಸಿಬಿಗೆ ಧೈರ್ಯದಿಂದ ದೂರು ನೀಡಿ ಎಂದು ಮನವಿ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *