Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಗಲೀಕರಣಕ್ಕೆ ಬಿಡುತ್ತಿಲ್ಲ ಹಿಡಿದಿರುವ ಗ್ರಹಣ – ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಸ್ತೆ ಅಗಲೀಕರಣಕ್ಕೆ ಬಿಡುತ್ತಿಲ್ಲ ಹಿಡಿದಿರುವ ಗ್ರಹಣ – ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ

Districts

ರಸ್ತೆ ಅಗಲೀಕರಣಕ್ಕೆ ಬಿಡುತ್ತಿಲ್ಲ ಹಿಡಿದಿರುವ ಗ್ರಹಣ – ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ

Public TV
Last updated: January 13, 2020 6:04 pm
Public TV
Share
2 Min Read
smg palike main
SHARE

ಶಿವಮೊಗ್ಗ: ರಸ್ತೆ ಅಗಲೀಕರಣಕ್ಕಾಗಿ ನಿಮ್ಮ ಮನೆಗಳನ್ನು ತೆರವುಗೊಳಿಸಿ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ ಹಿನ್ನೆಲೆಯಲ್ಲಿ ಮನೆಗಳು ಮತ್ತು ಕಟ್ಟಡಗಳನ್ನೇನೋ ಮಾಲೀಕರು ತೆರವುಗೊಳಿಸಿದ್ದಾರೆ. ಆದರೆ ಅದಕ್ಕೆ ಪರಿಹಾರದ ಹಣ ಸಿಗದೇ ಇದೀಗ ಪರಿತಪಿಸುತ್ತಿದ್ದಾರೆ. ಅತ್ತ ಮನೆಯೂ ಇಲ್ಲ, ಪರಿಹಾರವೂ ಇಲ್ಲ. ಇತ್ತ ರಸ್ತೆ ಅಗಲೀಕರಣ ಕೆಲಸ ಕೂಡ ಆಗಿಲ್ಲ.

ಇದು ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಮಿಳ್ಳಘಟ್ಟ ಬಡಾವಣೆಯ ಮುಖ್ಯ ರಸ್ತೆಯ ಕಥೆ. ಶಿವಮೊಗ್ಗ ಬಸ್ ನಿಲ್ದಾಣಕ್ಕೆ ತಾಗಿಕೊಂಡೇ ಹಿಂಭಾಗದಲ್ಲಿ ಈ ಬಡಾವಣೆ ಇದ್ದು, ಬಹಳ ಕಿರಿದಾಗಿದ್ದ ಈ ರಸ್ತೆಯನ್ನು ಅಗಲೀಕರಣಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಈ ಹಿಂದೆಯೇ ಪಾಲಿಕೆ ಸಭೆಯಲ್ಲಿ ನಿರ್ಧರಿಸಲಾಗಿತ್ತು. 2014ರಲ್ಲಿ ಈ ರಸ್ತೆ ಅಗಲೀಕರಣ ಕಾಮಗಾರಿಗೆ ತೀರ್ಮಾನಿಸಲಾಗಿದ್ದು, 2016ರಲ್ಲಿ ಇದಕ್ಕೆ ಚಾಲನೆ ಕೂಡ ನೀಡಲಾಗಿತ್ತು.

smg palike 4

ಕ್ರಮೇಣ ರಸ್ತೆ ಅಗಲೀಕರಣಕ್ಕೆ ಪಾಲಿಕೆ ಸಭೆಯಲ್ಲಿ ಅನುಮತಿ ಸಿಕ್ಕ ನಂತರದಲ್ಲಿ ಪರಿಹಾರ ಧನವಾಗಿ ಪ್ರತಿ ಚದರಡಿಗೆ 2 ಸಾವಿರ ರೂ. ನಿಗದಿಪಡಿಸಲಾಗಿತ್ತು. ನಿಮ್ಮ ಕಟ್ಟಡಗಳನ್ನ ಮತ್ತು ನಿಮ್ಮ ಮನೆಗಳನ್ನ ತೆರವುಗೊಳಿಸಿ ಜಾಗ ಖಾಲಿ ಮಾಡಿ ಎಂದು ಪಾಲಿಕೆ ಅಲ್ಲಿನ ನಿವಾಸಿಗಳಿಗೆ ನೋಟಿಸ್ ಕೂಡ ನೀಡಿತ್ತು. ಇದನ್ನು ನಂಬಿಕೊಂಡ ಸುಮಾರು 50ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡ ಮಾಲೀಕರು ಮತ್ತು 50ಕ್ಕೂ ಹೆಚ್ಚು ಮನೆ ಮಾಲೀಕರು ತಮ್ಮ ಕಟ್ಟಡ ಮತ್ತು ಮನೆಗಳನ್ನ ತೆರವುಗೊಳಿಸಿಕೊಂಡು ಪಾಲಿಕೆಯ ಪರಿಹಾರದ ಹಣಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

smg palike 5

ಇನ್ನುಳಿದ ನೂರಕ್ಕೂ ಹೆಚ್ಚು ಕಟ್ಟಡ ಮತ್ತು ಮನೆ ಮಾಲೀಕರು ಕೂಡ ತಮ್ಮ ಜಾಗ ತೆರವುಗೊಳಿಸಲು ಸಿದ್ಧವಿದ್ದರೂ ಕೂಡ ಪಾಲಿಕೆ ನಿರ್ಲಕ್ಷತೆಯಿಂದಾಗಿ ತ್ರಿಶಂಕು ಪರಿಸ್ಥಿತಿಯಲ್ಲಿದ್ದಾರೆ. ಯಾಕೆಂದರೆ ಕಟ್ಟಡವಾಗಲಿ ಮನೆಯಾಗಲಿ ತೆರವುಗೊಳಿಸದೇ ಪರಿಹಾರದ ಧನ ಸಿಗೋದಿಲ್ಲ. ಅಕಸ್ಮಾತ್ ತೆರವುಗೊಳಿಸಿಕೊಂಡರೂ ಕೂಡ ಪರಿಹಾರ ಧನ ಸಿಗುತ್ತೋ ಇಲ್ಲವೋ ಎಂಬ ಗೊಂದಲದಲ್ಲಿ ಇದ್ದೇವೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ.

ಇಲ್ಲಿನ ಮಿಳ್ಳಘಟ್ಟ ಬಡಾವಣೆಯ ಮುಖ್ಯ ರಸ್ತೆ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವುದಾಗಿದ್ದು ಅಗಲೀಕರಣವಾದರೇ ಒಳ್ಳೆಯದು ಎಂಬ ಆಶಾಭಾವನೆ ಸ್ಥಳೀಯರದ್ದಾಗಿದೆ. ಆದರೆ ಪಾಲಿಕೆ ನಿರಾಸಕ್ತಿಯಿಂದಾಗಿ ಇಲ್ಲಿನ ನಾಗರಿಕರು ತ್ರಿಶಂಕು ಪರಿಸ್ಥಿತಿಯಲ್ಲಿದ್ದಾರೆ. ಅಲ್ಲದೇ ಈ ರಸ್ತೆ ಕಿರಿದಾಗಿದ್ದು ಜನಸಂದಣಿ ಹೆಚ್ಚಾಗಿದೆ. ಈ ರಸ್ತೆಯಲ್ಲಿ ಪ್ರತಿ 2 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್‍ಗಳು ಸಂಚರಿಸುತ್ತವೆ. ಹೀಗಾಗಿ ಇಲ್ಲಿನ ನಿವಾಸಿಗಳು ಓಡಾಡಲು ತೊಂದರೆ ಪಡುವಂತಾಗಿದೆ. ಅಲ್ಲದೇ ಈ ರಸ್ತೆ ಪೂರ್ತಿ ಧೂಳಿನಿಂದ ಕೂಡಿದ್ದು ಜನರು ಪರಿತಪಿಸುವಂತಾಗಿದೆ.

smg palike 1

ಒಂದು ಸಾವಿರ ಮೀಟರ್ ರಸ್ತೆ ಅಗಲೀಕರಣದ ಪ್ರಸ್ತಾವನೆ ಇದ್ದು, ಇದರಲ್ಲಿ ಮೊದಲ ಹಂತದಲ್ಲಿ 500 ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ಸೂಚಿಸಲಾಗಿದೆ. ಈ ಸಂಬಂಧ ಈಗಾಗಲೇ ಇಲ್ಲಿನ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ ಎರಡೂವರೆ ವರ್ಷ ಕಳೆಯುತ್ತಾ ಬಂದಿದ್ದರೂ ಕೂಡ ರಸ್ತೆ ಅಗಲೀಕರಣದ ಕೆಲಸ ಮಾತ್ರ ಆಗುತ್ತಿಲ್ಲ. ಹೀಗಾಗಿ ಸ್ಥಳೀಯರು ಸೇರಿದಂತೆ ವಿವಿಧ ಸಂಘಟನೆ ಸದಸ್ಯರು, ಮಾಜಿ ಶಾಸಕ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಈ ಕೂಡಲೇ ಪಾಲಿಕೆ ಆಯುಕ್ತರು ಈ ಬಗ್ಗೆ ಗಮನ ಹರಿಸಿ ಎಂದು ಮನವಿ ಮಾಡಿದರು.

TAGGED:LocalsPalikePublic TVRoad Wideningshivamoggaಪಬ್ಲಿಕ್ ಟಿವಿಪಾಲಿಕೆರಸ್ತೆ ಅಗಲೀಕರಣಶಿವಮೊಗ್ಗಸ್ಥಳೀಯರು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

G Parameshwar
Bengaluru City

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್‌ ಬೇಸರ

Public TV
By Public TV
9 minutes ago
woman suicide husband also dies in accident in belagavi bailhongal
Belgaum

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಆಘಾತ – ಗಡಿಬಿಡಿಯಲ್ಲಿ ಬರುವಾಗ ಅಪಘಾತದಲ್ಲಿ ಪತಿಯೂ ಸಾವು

Public TV
By Public TV
23 minutes ago
Iran war
Latest

6 ಮಕ್ಕಳು ಸೇರಿ 34 ಮಂದಿ ಸಾವಿಗೆ ಇರಾನ್‌ ಪ್ರತೀಕಾರ – ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

Public TV
By Public TV
48 minutes ago
Drums Sweets Support Meerut Father Celebrates Daughters Divorce
Court

ಡಿವೋರ್ಸ್‌ ಬಳಿಕ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆಯಲ್ಲಿ ಮಗಳನ್ನು ಕರೆತಂದ ನಿವೃತ್ತ ಜಡ್ಜ್‌

Public TV
By Public TV
1 hour ago
325702249 1 6 1 e1566118011669
Latest

ಮಧ್ಯಪ್ರಾಚ್ಯದಲ್ಲಿ ಮುಗಿಯದ ಯುದ್ಧ – ಅಮೆರಿಕ ಕಚ್ಛಾ ತೈಲ ಬೆಲೆ ಬ್ಯಾರಲ್​ಗೆ 113 ಡಾಲರ್​ಗೆ ಏರಿಕೆ​

Public TV
By Public TV
1 hour ago
Kalaburagi Govt Teacher Murder
Crime

ಕಲಬುರಗಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?