ಗಲ್ಲು ಶಿಕ್ಷೆಗೂ ಮುನ್ನ ಕಡೆಯ ಕಾನೂನು ಹೋರಾಟ – ನಿರ್ಭಯ ದೋಷಿಗಳ ಕ್ಯುರೆಟಿವ್ ಅರ್ಜಿ ಇಂದು ವಿಚಾರಣೆ

Public TV
1 Min Read
Supreme COurt 1 e1573638410470

ನವದೆಹಲಿ: ನಿರ್ಭಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದೋಷಿಗಳಿಗೆ ಈಗಾಗಲೇ ಗಲ್ಲು ಶಿಕ್ಷೆ ಖಾಯಂ ಆಗಿದೆ. ಜನವರಿ 22ಕ್ಕೆ ನೇಣುಗಂಬ ಏರಲಿದ್ದು, ಈ ನಡುವೆ ಇಬ್ಬರು ಆರೋಪಿಗಳು ಕಟ್ಟ ಕಡೆಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಪ್ರಕರಣದಲ್ಲಿ ದೋಷಿಗಳಾದ ವಿನಯ್ ಕುಮಾರ್ ಶರ್ಮಾ ಮತ್ತು ಮುಖೇಶ್ ಕ್ಯುರೆಟಿವ್ ಅರ್ಜಿ ಸಲ್ಲಿಸಿದ್ದು, ಇಂದು ಸುಪ್ರೀಂಕೋರ್ಟ್ ಈ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ. ನ್ಯಾ. ಎನ್.ವಿ ರಮಣ ನೇತೃತ್ವದ ಐದು ಮಂದಿ ನ್ಯಾಯಧೀಶರ ಸಾಂವಿಧಾನಿಕ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದ್ದು, ಇಂದೇ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.

nirbhaya case

ಈ ಹಿಂದೆ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ ಆದ ಬಳಿಕ ಪಟಿಯಾಲ ಹೌಸ್ ಕೋರ್ಟ್ ಜನವರಿ 22 ಬೆಳಗ್ಗೆ ಏಳು ಗಂಟೆಗೆ ಡೆತ್ ವಾರೆಂಟ್ ಜಾರಿ ಮಾಡಿತ್ತು. ಇದರ ಬೆನ್ನಲ್ಲೇ ಕ್ಯುರೆಟಿವ್ ಅರ್ಜಿ ಸಲ್ಲಿಸಿರುವ ಇಬ್ಬರು ದೋಷಿಗಳು ಡೆತ್ ವಾರೆಂಟ್ ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇಂದು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದ್ದು, ಅರ್ಜಿ ಪುರಸ್ಕೃರಿಸದ್ದಲ್ಲಿ ಗಲ್ಲು ಶಿಕ್ಷೆಗೆ ತಡೆ ಬೀಳಲಿದ್ದು ತಿರಸ್ಕಾರವಾದಲ್ಲಿ ಹಿಂದಿನ ಆದೇಶದಂತೆ ನಾಲ್ವರು ದೋಷಿಗಳು ಜನವರಿ 22ಕ್ಕೆ ನೇಣಿಗಂಭ ಏರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *