Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಹೊಸ ವರ್ಷದಂದು ಮನೆಯಿಂದ ಹೊರ ಹೋಗಿದ್ದ ಯುವಕ ಸಂಕ್ರಾಂತಿಯಂದು ಶವವಾಗಿ ಪತ್ತೆ

Public TV
Last updated: January 16, 2020 12:30 pm
Public TV
Share
2 Min Read
klr youth death
SHARE

– ಪಾರ್ಟಿ ಮಾಡಿ ಸ್ನೇಹಿತರಿಂದಲೇ ಸುಹಾಸ್ ಕೊಲೆ?
– ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕೋಲಾರ: ಹೊಸ ವರ್ಷ ಆಚರಣೆಗಾಗಿ ಜೀವಂತವಾಗಿ ಮನೆಯಿಂದ ಹೊರ ಹೋಗಿದ್ದ ಯುವಕನೊಬ್ಬ ಸಂಕ್ರಾಂತಿ ಹಬ್ಬದಂದು ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೋಲಾರ ತಾಲೂಕಿನ ಶಾಪೂರು ಕ್ರಾಸ್‍ನ ಅಬ್ಬಣಿ ಗ್ರಾಮದ ಬಳಿ ನಡೆದಿದೆ.

ಸುಹಾಸ್(19) ಅನುಮಾನಸ್ಪದವಾಗಿ ಮೃತಪಟ್ಟ ಯುವಕ. ಬೇವಿನ ಮರಕ್ಕೆ ನೇಣು ಬಿಗಿದಿದ್ದು, ಕೊಳೆತ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ವೇಳೆ ಮೃತದೇಹ ಯಾರದ್ದು ಎಂದು ಹುಡುಕಾಟದಲ್ಲಿದ್ದವರಿಗೆ 15 ದಿನಗಳಿಂದ ಕಾಣೆಯಾಗಿದ್ದ ಸುಹಾಸ್ ನೆನಪಾಗಿದ್ದಾನೆ. ಮೃತದೇಹ ಪತ್ತೆಯಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಸುಹಾಸ್ ಪೋಷಕರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮೊಬೈಲ್ ಹಾಗೂ ಬಟ್ಟೆಯನ್ನು ಗುರುತಿಸಿ ಇವನೇ ಸುಹಾಸ್ ಎಂದು ಗುರುತು ಪತ್ತೆಹಚ್ಚಿದ್ದಾರೆ.

klr youth death e1579157900349
ಸುಹಾಸ್ ತಂದೆ ರವೀಂದ್ರ

ಕಳೆದ 2019 ಡಿಸೆಂಬರ್ 31ರಂದು ಹೊಸ ವರ್ಷ ಹಾಗೂ ಹುಟ್ಟುಹಬ್ಬ ಸಂಭ್ರಮಾಚರಣೆಗೆ ಸ್ನೇಹಿತರು ಕೇಕ್ ಕತ್ತರಿಸಲು ಫೋನ್ ಮಾಡುತ್ತಿದ್ದಾರೆ ಎಂದು ಮನೆಯಲ್ಲಿ ಹೇಳಿ ಹೋದ ಸುಹಾಸ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. 15 ದಿನಗಳ ನಂತರ ಅಂದರೆ ಬುಧವಾರ ಮದ್ಯಾಹ್ನ 1 ಗಂಟೆ ಸುಮಾರಿಗೆ ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗನದ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ.

Police Jeep 1

ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಪೋಷಕರು, ಆತನ ಮೂವರು ಸ್ನೇಹಿತರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 1ರಂದು ಹೊಸ ವರ್ಷದ ಜೊತೆಗೆ ಸುಹಾಸ್ ಹುಟ್ಟುಹಬ್ಬವಿತ್ತು. ಡಿ.31ರಂದು ರಾತ್ರಿ ಸುಹಾಸ್ ತನ್ನ ತಾಯಿ ಬಳಿ ಹೋಗಿ ಸ್ನೇಹಿತರು ಹೊಸ ವರ್ಷ ಹಾಗೂ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡಲಿದ್ದಾರೆ. ಅವರು ನನಗಾಗಿ ಹೊಸ ಬಟ್ಟೆ ತಂದಿದ್ದು, ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಲಿದ್ದಾರೆ ಎಂದು ಹೇಳಿ ಅಂದು ರಾತ್ರಿ 10 ಗಂಟೆ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದನು. ಹೊಸ ವರ್ಷ ಬಂದರೂ ಮಗ ಮನೆಗೆ ಬಂದಿಲ್ಲ ಎಂದು ಸಂಬಂಧಿಕರು ಸುಹಾಸ್ ಸ್ನೇಹಿತರನ್ನು ವಿಚಾರಣೆ ಮಾಡಿದ್ದರು. ಆದರೆ ಸುಹಾಸ್ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಹಾಗಾಗಿ ಸುಹಾಸ್ ತಂದೆ ರವೀಂದ್ರ ಅವರು ಈ ಹಿಂದೆಯೇ ಮಗ ಕಾಣೆಯಾಗಿದ್ದಾನೆ ಎಂದು ಕೋಲಾರ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದರು. ಆದರೆ ಈಗ ಮಗ ಶವವಾಗಿ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸುಹಾಸ್‍ನ ಹೊಸ ವರ್ಷ ಹಾಗೂ ಹುಟ್ಟುಹಬ್ಬದ ಪಾರ್ಟಿ ಹೇಗಾಯಿತು? ನಿಜಕ್ಕೂ ಅಲ್ಲಿ ಏನಾಗಿತ್ತು ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಗ್ರಾಮಾಂತರ ಪೊಲೀಸರು ಯುವಕನದ್ದು, ಸಹಜ ಸಾವೋ, ಕೊಲೆಯೋ ಎಂಬುದು ತನಿಖೆ ಕೈಗೊಂಡಿದ್ದಾರೆ.

TAGGED:birthdaycelebrationKolarNew YearPublic TVyouthಆಚರಣೆಕೋಲಾರಪಬ್ಲಿಕ್ ಟಿವಿಯುವಕಹುಟ್ಟುಹಬ್ಬಹೊಸ ವರ್ಷ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
13 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
14 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
17 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Manisha Thapa
Crime

Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

Public TV
By Public TV
28 minutes ago
Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
53 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
1 hour ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
2 hours ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?