Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಸಾಹಸ ಪಟ್ಟು 2018ರಲ್ಲಿ ಆದಿತ್ಯನನ್ನು ಹಿಡಿದಿದ್ರು ಬೆಂಗ್ಳೂರು ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಹರಸಾಹಸ ಪಟ್ಟು 2018ರಲ್ಲಿ ಆದಿತ್ಯನನ್ನು ಹಿಡಿದಿದ್ರು ಬೆಂಗ್ಳೂರು ಪೊಲೀಸರು

Chikkaballapur

ಹರಸಾಹಸ ಪಟ್ಟು 2018ರಲ್ಲಿ ಆದಿತ್ಯನನ್ನು ಹಿಡಿದಿದ್ರು ಬೆಂಗ್ಳೂರು ಪೊಲೀಸರು

Public TV
Last updated: January 22, 2020 5:02 pm
Public TV
Share
2 Min Read
ADITYA RAO app
SHARE

ಚಿಕ್ಕಬಳ್ಳಾಪುರ: ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಸದ್ಯ ಪೊಲೀಸರಿಗೆ ಶರಣಾಗಿರುವ ಆದಿತ್ಯ ರಾವ್, ಈ ಹಿಂದೆ 2018ರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದನು. ಆಗ ಈತನನ್ನು ಬೆಂಗಳೂರು ಪೊಲೀಸರು ಹರಸಾಹಸ ಪಟ್ಟು ಹಿಡಿದಿದ್ದರು.

ಉಡುಪಿ ಜಿಲ್ಲೆ ಮಣಿಪಾಲದ ಹುಡ್ಕೋ ಕಾಲೋನಿಯಲ್ಲಿ ವಾಸವಾಗಿದ್ದ ಆದಿತ್ಯ ರಾವ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಓದಿದ್ದ. ಉದ್ಯೋಗ ಸಂಬಂಧ ಬೆಂಗಳೂರಿಗೆ ತೆರಳಿದ್ದ ಆದಿತ್ಯ ರಾವ್ ವಿಮಾನ ನಿಲ್ದಾಣದಲ್ಲಿ ಕೆಲಸದ ಕನಸು ಹೊತ್ತಿದ್ದನು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತನಿಗೆ ಸೆಕ್ಯೂರಿಟಿ ಕೆಲಸ ಸಿಗದಿದ್ದಾಗ ಬಾಂಬ್ ಇಡುವುದಾಗಿ ಹುಸಿ ಕರೆ ಮಾಡಿ ಸಿಕ್ಕಿಬಿದ್ದು, 9 ತಿಂಗಳು ಚಿಕ್ಕಬಳ್ಳಾಪುರ ಕಾರಾಗೃಹದಲ್ಲಿದ್ದನು. ಇದನ್ನೂ ಓದಿ: ತಾಯಿಗೆ ಕ್ಯಾನ್ಸರ್ ಆಗಿದ್ರೂ ಸಹಾಯಕ್ಕೆ ಬಂದಿರಲಿಲ್ಲ ಆದಿತ್ಯ ರಾವ್!

mng blast aditya rao 1

ಪ್ರಕರಣದ ಹಿನ್ನೆಲೆ ಏನು?
2018ರಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಆದಿತ್ಯ ರಾವ್ ಸೆಕ್ಯೂರಿಟಿ ಕೆಲಸ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡಿದ್ದನು. ಆದರೆ ಆತನಿಗೆ ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಕೆಲಸ ಸಿಕ್ಕಿರಲಿಲ್ಲ. ಹೀಗಾಗಿ ಸೇಡು ತೀರಿಸಿಕೊಳ್ಳುವ ಸಂಚು ರೂಪಿಸಿದ್ದ ಆರೋಪಿ ಅಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡುವುದಾಗಿ ಹುಸಿ ಬಾಂಬ್ ಕರೆ ಮಾಡಿದ್ದನು. ಇದನ್ನೂ ಓದಿ: ನಾಲ್ಕು ಸಿಮ್ ಇಟ್ಕೊಂಡಿದ್ದ, ಲ್ಯಾಪ್‍ಟಾಪ್ ಕದ್ದಿದ್ದ – ಎಸಿ ಹಾಕ್ತಾರೆ ಎಂದು ಬ್ಯಾಂಕ್ ಕೆಲಸ ಬಿಟ್ಟ

kempegowda airport police

ಈ ಪ್ರಕರಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಆಗ ಈ ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಪಿಎಸ್‍ಐ ವರುಣ್ ಕುಮಾರ್ ಸಾಕಷ್ಟು ಹರಸಾಹಸ ಪಟ್ಟು ಆದಿತ್ಯನನ್ನು ಬಂಧಿಸಿದ್ದರು. ಹುಸಿ ಬಾಂಬ್ ಕರೆ ಮಾಡಿದ ಸ್ಥಳದ ಮಾಹಿತಿ ಕಲೆಹಾಕಿ, ರಾಮಮೂರ್ತಿ ನಗರದ ಬಳಿ ಇರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಆದಿತ್ಯ ಮುಖ ಪರಿಚಯ ಆಗಿತ್ತು. ಹೀಗಾಗಿ ಆತನ ಫೋಟೋ ಹಿಡಿದು ಪೊಲೀಸರು ಎಲ್ಲಾ ಕಡೆ ಹುಡುಕಾಟ ಆರಂಭಿಸಿದ್ದರು. ಕೊನೆಗೆ ಪೊಲೀಸರ ಕೈಗೆ ಆದಿತ್ಯ ಮೆಟ್ರೋ ರೈಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದನು. ಕೊನೆಗೆ ಆತನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದಲ್ಲಿ ನ್ಯಾಯಾಧೀಶರು ಆದಿತ್ಯನಿಗೆ ಸರಿಸುಮಾರು ಒಂದೂವರೆ ವರ್ಷ ಜೈಲುವಾಸ ಶಿಕ್ಷೆ ವಿಧಿಸಿದ್ದರು. ಇದನ್ನೂ ಓದಿ: ಬಾಂಬ್ ತಯಾರಿಸಲು ಉಗ್ರ ಸಂಘಟನೆಯ ಜೊತೆ ಸಂಪರ್ಕಕ್ಕೆ ಯತ್ನಿಸಿದ್ದ ಆದಿತ್ಯ ರಾವ್

ಆದರೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿ ಒಂಬತ್ತು ತಿಂಗಳು ಸೆರೆವಾಸವನ್ನು ಅನುಭವಿಸಿ ಇತ್ತೀಚೆಗಷ್ಟೇ ಆದಿತ್ಯ ಬಿಡುಗಡೆಯಾಗಿ ಉಡುಪಿ ಸೇರಿದ್ದನು. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಈಗ ಪೊಲೀಸರಿಗೆ ಶರಣಾಗಿದ್ದಾನೆ. ಇನ್ನು ಆದಿತ್ಯ ರಾವ್ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡು ಸೇಡು ತೀರಿಸಿಕೊಳ್ಳುವ ಮನೋಭಾವ ಹೊಂದಿರುವ ವ್ಯಕ್ತಿಯಾಗಿದ್ದು, ತನ್ನ ಹೆಸರು ಸದಾ ಪ್ರಚಲಿತದಲ್ಲಿರಬೇಕು, ತಾನು ಹೆಸರು ಮಾಡಬೇಕು ಎಂದು ಪದೇ ಪದೇ ಇಂತಹ ದುಷ್ಕೃತ್ಯಗಳನ್ನು ಎಸಗಿರಬಹುದು ಅಂತ ಪೊಲೀಸರು ಹೇಳಿದ್ದಾರೆ.

TAGGED:Aditya RaobengaluruChikkaballapurakempegowda international airportPublic TVಆದಿತ್ಯ ರಾವ್ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಚಿಕ್ಕಬಳ್ಳಾಪುರಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
3 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
11 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
13 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?