ಕೆಪಿಸಿಸಿ ಅಧ್ಯಕ್ಷರ ವಿಚಾರ ಬಹಿರಂಗವಾಗಿ ಮಾತಾಡಬೇಡಿ: ದಿನೇಶ್ ಗುಂಡೂರಾವ್

Public TV
1 Min Read
DINESH GUNDU RAO

– ಬಿಜೆಪಿ ತನ್ನ ಸಮಸ್ಯೆ ಬಗೆಹರಿಸಿ ಕೊಳ್ಳಲಿ

ಮೈಸೂರು: ಕೆ.ಪಿ.ಸಿ.ಸಿ ಅಧ್ಯಕ್ಷ ಕಾರ್ಯಾಧ್ಯಕ್ಷರ ನೇಮಕಾತಿ ವಿಚಾರವಾಗಿ ಯಾರು ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ಮುಖಂಡರುಗಳಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಟ್ಟಪ್ಪಣೆ ಮಾಡಿದ್ದಾರೆ.

ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಇದು ಪಕ್ಷದ ಆಂತರಿಕ ವಿಚಾರ. ಈ ವಿಚಾರವಾಗಿ ಯಾರು ಕೂಡ ಬಹಿರಂಗವಾಗಿ ಮಾತನಾಡಬಾರದು. ನಾಲ್ಕು ಕಾರ್ಯಾಧ್ಯಕ್ಷರ ನೇಮಕವಾಗುತ್ತೆ ಅಂತ ಯಾರು ಕೂಡ ಹೇಳಿಲ್ಲ. ಅಧ್ಯಕ್ಷರ ನೇಮಕದ ಸಂದರ್ಭದಲ್ಲಿ ಕೆಲವರು ಕಾರ್ಯಾಧ್ಯಕ್ಷರ ನೇಮಿಸಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ ಎಂದರು.

KPCC

ಕಾರ್ಯಾಧ್ಯಕ್ಷರ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಾರ್ಯಾಧ್ಯಕ್ಷರ ನೇಮಕದಿಂದ ಪಕ್ಷ ಸಂಘಟನೆಗೆ ಅನುಕೂಲವಾಗುತ್ತೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ. ಕಾರ್ಯಾಧ್ಯಕ್ಷರ ನೇಮಕವನ್ನು ಮಾಡಬೇಕಾ, ಬೇಡ್ವಾ? ಮಾಡುವುದಾದರೆ ಇಬ್ಬರ ಅಥವಾ ಮೂವರೋ, ನಾಲ್ವರೋ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಮೈಸೂರಿನ ಸುತ್ತೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯವರು ಆದಷ್ಟು ಬೇಗಾ ತಮ್ಮ ಗೊಂದಲ ನಿವಾರಣೆ ಮಾಡಿಕೊಳ್ಳಬೇಕು. ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅವರ ಹೈಕಮಾಂಡ್ ಇದಕ್ಕೆ ಒಪ್ಪುತ್ತಿಲ್ಲ. ಇದರಿಂದ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ. ಸಚಿವರಿಲ್ಲದೆ ಇಲಾಖೆಯಲ್ಲಿ ಹಣ ಬಿಡುಗಡೆಯಾಗುತ್ತಿಲ್ಲ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *