Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ತುಮಕೂರು ಜಿ.ಪಂ- ಅತೃಪ್ತರಲ್ಲೇ ಭಿನ್ನಮತ

Public TV
Last updated: January 26, 2020 4:47 pm
Public TV
Share
3 Min Read
tumakuru JDS HDK
SHARE

ತುಮಕೂರು: ತುಮಕೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ರಗಳೆ ಸದ್ಯಕ್ಕಂತೂ ಬಗೆ ಹರಿಯುವ ಲಕ್ಷಣ ಕಾಣುತ್ತಿಲ್ಲ. ಹಾಲಿ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿರುವ ಸ್ವಪಕ್ಷ ಸದಸ್ಯರ ಭಿನ್ನಮತ ಶಮನಕ್ಕೆ ಮುಂದಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರವನ್ನ ಉಳಿಸಿಕೊಳ್ಳಲು ಜಾಣ ನಡೆ ಅನುಸರಿಸಿದ್ದಾರೆ. ಇತರೆ ಪಕ್ಷದ ಸದಸ್ಯರ ಬೆಂಬಲ ಪಡೆದು ಬಲ ಪ್ರದರ್ಶನ ಮಾಡಿದರೆ ಮಾತ್ರ ಹಾಲಿ ಅಧ್ಯಕ್ಷರ ರಾಜೀನಾಮೆಗೆ ಸೂಚಿಸುತ್ತೇನೆ ಎಂದು ಹೇಳುವ ಮೂಲಕ ಕುದುರೆ ವ್ಯಾಪಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

tumakuru zilla panchayat 1

ಹೌದು, ತುಮಕೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಗೊಂದಲದ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿಂದು ಪಕ್ಷದ ಜಿಲ್ಲಾ ಪಂಚಾಯ್ತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್, ಮಾಜಿ ಶಾಸಕ ಸುಧಾಕರ್ ಲಾಲ್ ಸೇರಿದಂತೆ 14 ಮಂದಿ ಸದಸ್ಯರು ಪಾಲ್ಗೊಂಡಿದ್ರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಎಲ್ಲಾ ಸದಸ್ಯರ ಅಭಿಪ್ರಾಯ ಸಂಗ್ರಹಿಸಿದ್ದು ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅಸಮಾಧಾನ, ಆಕ್ರೋಶ ಹೊರ ಹಾಕಿ ಕೆಳಗಿಳಿಸಬೇಕು, ಬದಲಾಗಿ ಶೆಟ್ಟಿಕೆರೆ ಕ್ಷೇತ್ರದ ಸದಸ್ಯ ಕಲ್ಲೇಶ್‍ರವರನ್ನ ಅಧ್ಯಕ್ಷರನ್ನಾಗಿ ಮಾಡಿ ಎಂದು ಬೇಡಿಕೆ ಇರಿಸಲಾಗಿದೆ. ಇದೇ ವೇಳೆ ಅಮೃತೂರು ಸದಸ್ಯೆ ಮಂಜುಳಾ ಶೇಷಗಿರಿ ನನಗೂ ಉಪಾಧ್ಯಕ್ಷ ಸ್ಥಾನ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಈ ವೇಳೆ ಅಧ್ಯಕ್ಷರನ್ನ ನಾಳೆಯೇ ರಾಜೀನಾಮೆ ಕೊಡಲು ಹೇಳುತ್ತೇನೆ, ಆದರೆ ಎಲ್ಲರನ್ನ ವಿಶ್ವಾಸಕ್ಕೆ ಕೊಂಡೊಯ್ಯುವ ಸದಸ್ಯರು ಬೇಕಲ್ಲವೇ. ಇಬ್ಬರೂ ಅಧ್ಯಕ್ಷ, ಉಪಾಧ್ಯಕ್ಷರಾಗುವುದಾದರೆ ನಾಳೆಯೇ ಅಧ್ಯಕ್ಷರ ರಾಜೀನಾಮೆ ಕೊಡಿಸುತ್ತೇನೆ. ಅದಕ್ಕೂ ಮೊದಲು ಅವಿಶ್ವಾಸ ಗೊತ್ತುವಳಿಗೆ ಸಹಿ ಹಾಕಿದ್ದಾರೆ ಎನ್ನಲಾದ ಕಾಂಗ್ರೆಸ್, ಬಿಜೆಪಿ ಸದಸ್ಯರು ನಿಮ್ಮ ಆಯ್ಕೆಗೆ ಬೆಂಬಲ ನೀಡ್ತಾರಾ ಅನ್ನೋದನ್ನ ಕನ್‍ಫರ್ಮ್ ಮಾಡಬೇಕು, ಅದೇನ್ ಮಾಡ್ತೀರೋ ಮಾಡಿ, ವಿಪ್ ಉಲ್ಲಂಘಿಸಿ ಬರುವವರನ್ನೂ ಕರೆ ತನ್ನಿ, ಅಲ್ಲಿವರೆಗೂ ಅವಿಶ್ವಾಸ ನಿರ್ಣಯ ತರಬಾರದು ಎಂದು ಕಲ್ಲೇಶ್‍ಗೆ ಟಾಸ್ಕ್ ನೀಡಿದ್ದಾರೆ ಎನ್ನಲಾಗ್ತಿದೆ.

tumakuru zilla panchayat 2

ಜೆಡಿಎಸ್ ವರಿಷ್ಠರು ಕಲ್ಲೇಶ್‍ಗೆ ಟಾಸ್ಕ್ ನೀಡಿರೋದು ಇದೀಗ ಅತೃಪ್ತ ಸದಸ್ಯರಲ್ಲೇ ಭಿನ್ನಮತ ಸೃಷ್ಟಿಸಿದೆ. ಜೆಡಿಎಸ್‍ನ ಭಿನ್ನಮತವನ್ನೇ ಲಾಭ ಮಾಡಿಕೊಂಡು ಅಧ್ಯಕ್ಷ ಗಾದಿಗೇರಬಹುದು ಎಂದುಕೊಂಡಿದ್ದ ಕಾಂಗ್ರೆಸ್‍ನ ವೈ.ಸಿ.ಸಿದ್ದರಾಮಣ್ಣ, ಜಿ.ಜೆ.ರಾಜಣ್ಣ ಸೇರಿದಂತೆ ಹಲವರು ಈಗ ಉಲ್ಟಾ ಹೊಡೆಯಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಸಹಿ ಸಂಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್‍ನ ಹುಳಿಯಾರು ವೈ.ಸಿ.ಸಿದ್ದರಾಮಣ್ಣ, ಸಿದ್ದಾಪುರ ಜಿ.ಜೆ.ರಾಜಣ್ಣ, ಜೆಡಿಎಸ್‍ನ ಪುರವರ ತಿಮ್ಮಣ್ಣ ಸೇರಿದಂತೆ ಕೆಲ ಸದಸ್ಯರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಇದೀಗ ಜೆಡಿಎಸ್‍ನ ಕಲ್ಲೇಶ್‍ಗೆ ಟಾಸ್ಕ್ ನೀಡಿರೋದು ಸಹಜವಾಗಿ ಅತೃಪ್ತರಲ್ಲಿ ಅಸಮಾಧಾನ ಮೂಡಿಸಿದ್ದು ಕಾಂಗ್ರೆಸ್ ಸೇರಿದಂತೆ ಉಭಯ ಪಕ್ಷಗಳ ವಿಶ್ವಾಸಗಳಿಸಲು ಕಲ್ಲೇಶ್ ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಲಾಗ್ತಿದೆ.

ಇನ್ನು ಜೆಡಿಎಸ್‍ಗೆ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನ ನೀಡಲು ಟಾಸ್ಕ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರ ಕಣ್ಣು ಕೆಂಪಾಗಿಸಿದೆ. ಬದಲಾಗಿ ತಮ್ಮದೇ ಸಮುದಾಯದ ಅಧ್ಯಕ್ಷರ ವಿರುದ್ಧ ಸಿಡಿದೆದ್ದಿದ್ದ ವೈ.ಸಿ.ಸಿದ್ದರಾಮಣ್ಣ, ಪುರವರ ತಿಮ್ಮಣ್ಣ, ಚೆನ್ನಮಲ್ಲಪ್ಪ , ಹೊನ್ನವಳ್ಳಿ ನಾರಾಯಣ್, ನೊಣವಿನಕೆರೆ ಮೈಲಾರಪ್ಪ ಲತಾ ರವಿಕುಮಾರ್ ಪರ ನಿಲ್ಲಲು ಕುರುಬ ಸಮಾಜದ ಮುಖಂಡರು ಒತ್ತಡ ಹೇರುತ್ತಿದ್ದಾರೆ, ಯಾಕಂದ್ರೆ ಇನ್ನೊಂದು ವರ್ಷ ಕಳೆದರೆ ಲತಾ ರವಿಕುಮಾರ್ ಐದು ವರ್ಷ ಸಂಪೂರ್ಣ ಅಧಿಕಾರ ಅನುಭವಿಸಿದ ಏಕೈಕ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಹೀಗಾಗಿ ಕ್ಯಾಸ್ಟ್ ಕಾರ್ಡ್ ಕೂಡ ಇಲ್ಲಿ ಪ್ಲೇ ಆಗುತ್ತಿದೆ.

tumakuru zilla panchayat 3

ಮೂಲಗಳ ಪ್ರಕಾರ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಲತಾ ರವಿಕುಮಾರ್ ಬೆನ್ನಿಗೆ ನಿಂತಿದ್ದು ಬದಲಾವಣೆ ಮಾಡದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ. ಹೀಗಾಗಿಯೇ ತಮ್ಮ ಮೂಲಗಳಿಂದ ತರಿಸಿಕೊಂಡ ವರದಿ ಪಡೆದ ಕುಮಾರಸ್ವಾಮಿ ಅತೃಪ್ತರ ನಡುವೆಯೇ ಭಿನ್ನಮತ ಸೃಷ್ಠಿಸುವ ಮೂಲಕ ಹಾಲಿ ಅಧ್ಯಕ್ಷರನ್ನ ಮುಂದುವರೆಸಲು ಜಾಣ ನಡೆ ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಕಾಂಗ್ರೆಸ್‍ನಲ್ಲಿ ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಬೆಂಬಲಿಗ ಸದಸ್ಯರ ನಡುವೆಯೇ ಕೋಲ್ಡ್ ವಾರ್ ನಡೆಯುತ್ತಿದ್ದು, ಪರಂ ಬೆಂಬಲಿಗ ಸದಸ್ಯರು ಮಾತ್ರ ಅವಿಶ್ವಾಸ ನಿರ್ಣಯಕ್ಕೆ ಸಹಿ ಮಾಡಿದ್ದಾರೆ. ಬಿಜೆಪಿಯಲ್ಲೂ ಅಧ್ಯಕ್ಷರನ್ನ ಬದಲಾವಣೆ ಮಾಡಿದರೆ ಉಪಾಧ್ಯಕ್ಷರನ್ನೂ ಬದಲಾವಣೆ ಮಾಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿ ಮುಂದುವರೆಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಅತೃಪ್ತ ಆಟ ಅಂತ್ಯವಾಗುತ್ತಾ ಅಥವ ಕುದುರೆ ವ್ಯಾಪಾರದ ಮೂಲಕ ಸಕ್ಸಸ್ ಆಗುತ್ತಾ ಅನ್ನೋದೆ ಕುತೂಹಲ.

TAGGED:jdsPublic TVtumkurzilla panchayatಜಿಲ್ಲಾ ಪಂಚಾಯ್ತಿಜೆಡಿಎಸ್ತುಮಕೂರುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
41 minutes ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
4 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
5 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
5 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
17 minutes ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
2 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
10 minutes ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
29 minutes ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
51 minutes ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?