Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ

Districts

ಮಿಣಿ ಮಿಣಿ ಪೌಡರ್ ಹೇಳಿಕೆ ವೈರಲ್- ಹೆಚ್‍ಡಿಕೆ ಮೊದಲ ಪ್ರತಿಕ್ರಿಯೆ

Public TV
Last updated: January 27, 2020 5:41 pm
Public TV
Share
2 Min Read
hdk 5
SHARE

ರಾಮನಗರ: ಮಿಣಿ ಮಿಣಿ ಪೌಡರ್ ಎಂಬ ನನ್ನ ಹೇಳಿಕೆಯನ್ನು ವೈರಲ್ ಮಾಡಿರುವುದು ಬಿಜೆಪಿಗರ ವಿಕೃತ ಮನೋಭಾವನೆ ಸೂಚಿಸುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಇಂದು ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಈ ರೀತಿಯಲ್ಲಿ ವೈರಲ್ ಮಾಡುತ್ತಿರುವುದು, ಬಿಜೆಪಿಯವರ ವಿಕೃತ ಮನೋಭಾವನೆ ಮತ್ತು ಅವರಲ್ಲಿನ ಅಸಹ್ಯಕರವಾದ ಆಲೋಚನೆಗಳನ್ನ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಪಕ್ಷದವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

hd kumaraswamy

ಮಂಗಳೂರಿನಲ್ಲಿ ಜನವರಿ 19 ರಂದು ನಡೆದ ಬಾಂಬ್ ಪ್ರಕರಣದಲ್ಲಿ, ಅವರು ಹೇಳುವುದು ಬಾಂಬ್ ಎನ್ನುವಂತಹದ್ದು, ಆದರೆ ದಿನಪತ್ರಿಕೆಯಲ್ಲಿ ಮಂಗಳೂರು ವರದಿ ನೋಡಿ. ಆ ವರದಿಯಲ್ಲಿ ಬಂದಿರುವುದು ಪಟಾಕಿಯಲ್ಲಿ ಬಳಸುವ ಮಿಣಿಮಿಣಿ ಪುಡಿ ಪೌಡರ್ ಇತ್ತು ಅಂತಾ ಹೇಳಿದ್ದಾರೆ. ಆ ವರದಿಯನ್ನು ಆಧರಿಸಿ ನಾನು ಹೇಳಿಕೆ ನೀಡಿದ್ದೇನೆ. ಅದಕ್ಕೆ ದೊಡ್ಡಮಟ್ಟದಲ್ಲಿ ನನ್ನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ಕೊಡುತ್ತಿದ್ದಾರೆ. ನಾನು ನನ್ನ ಜೀವನದಲ್ಲಿ ಯಾವುದೇ ರೀತಿಯ ತಪ್ಪುಗಳನ್ನು ಮಾಡದೇ ಇರುವವನು. ತಪ್ಪು ಮಾಡಿದರೆ ಓಪನ್ ಆಗಿ ಹೇಳುವವನು ನಾನು, ಅದರಲ್ಲಿ ನನಗೆ ಯಾವುದೇ ಅಂಜಿಕೆಯಿಲ್ಲ ಎಂದು ಹೆಚ್‍ಡಿಕೆ ಗುಡುಗಿದ್ದಾರೆ.

ನನ್ನ ಬಗ್ಗೆ ಕೀಳುಮಟ್ಟದಲ್ಲಿ ಅವರು ಕೆಲವು ವಿಡಿಯೋ ವೈರಲ್ ಮಾಡಿಕೊಂಡು ಹೊರಟಿದ್ದಾರೆ. ಅವರ ಕೀಳು ಅಭಿರುಚಿ ಏನು, ಅವರ ಭಾವನೆಗಳೇನು? ಬಿಜೆಪಿ ಪಕ್ಷದ ಸಂಸ್ಕೃತಿ ಏನು ಅದನ್ನು ವ್ಯಕ್ತಪಡಿಸಿದ್ದಾರೆ ಎಂದರು. ಇದೇ ವೇಳೆ ಆ ವಿಡಿಯೋಗಳನ್ನು ಬಿಜೆಪಿಯವರೇ ವೈರಲ್ ಮಾಡುತ್ತಿದ್ದರಾ? ಎಂದು ಕೇಳಿದಾಗ, ಅವರಲ್ಲದೇ ಇನ್ಯಾರು ಮಾಡುತ್ತಾರೆ. ಬಿಜೆಪಿಯ ಅಭಿಮಾನಿಗಳೇ ತಾನೇ ವೈರಲ್ ಮಾಡಿರುವುದು. ಸಂತೋಷ ಮಾಡಿಕೊಳ್ಳಲಿ ನಾನು ಏನು ಅಂತಾ ಜನ ನೋಡಿದ್ದಾರೆ. ನನ್ನ ಜೀವನ, ನಡವಳಿಕೆ ಜನರಿಗೆ ಗೊತ್ತಿದೆ ಇವರ ಸರ್ಟಿಫಿಕೇಟ್ ನನಗೆ ಬೇಕಾ? ಎಂದು ಹೆಚ್‍ಡಿಕೆ ಪ್ರಶ್ನೆ ಮಾಡಿದ್ದಾರೆ.

HDKKumaraswamy 1

ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಹೇಳಿಕೆ ನೀಡಿಲ್ಲ. ಪ್ರಕರಣದ ದಿನ 9 ಗಂಟೆಗೆ ಆರಂಭವಾಗಿದ್ದು ಸಜೀವ ಬಾಂಬ್ ಅಂತಾ ನಂತರ 6 ಗಂಟೆಯ ತನಕ ಮಾಧ್ಯಮಗಳನ್ನು ದಾರಿ ತಪ್ಪಿಸಿದ್ದಾರೆ. ರಾಜ್ಯದ ಜನರ ಮುಂದೆ ಈ ವಿಚಾರ ಇಟ್ಟರೆ, ಅದನ್ನ ನೋಡಿದ ಜನರು ಮನಸ್ಥಿತಿ ಏನಾಗಬೇಕು. ಸರ್ಕಾರ ಏನು ಸಂದೇಶ ಕೊಡಲು ಹೊರಟಿದೆ. ಸರ್ಕಾರ ನಡೆಸುವವರು ಬಹಳ ಸೂಕ್ಷ್ಮವಾಗಿರಬೇಕು. ಸರ್ಕಾರ ಲೋಪದೋಷಗಳನ್ನ ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

ಅವನ್ಯಾರೋ ಡಿಜಿ ಕಚೇರಿಯಲ್ಲಿ ಬಂದು ಶರಣಾದನಲ್ಲ. ಅವತ್ತು ಲೋಕಲ್ ಪೊಲೀಸ್ ಹಿರಿಯ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಸಲ್ಫರ್ ಪೌಡರ್ ಇತ್ತು ಅಂತೇಳಿದ್ದಾರೆ. ಇದನ್ನು ನಾನು ಕಥೆ ಕಟ್ಟಿರುವುದಲ್ಲ ಇದು ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಸಾರ್ವಜನಿಕವಾಗಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದೇನೆ. ವಿಧಾನಸಭೆಯಲ್ಲೂ ಚರ್ಚೆ ಮಾಡುತ್ತೇನೆ. ಸರ್ಕಾರ ಹುಡುಕಾಟಿಕೆಗೆ ನಡೆಸಲು ಆಗಲ್ಲ. ಅವರ ಜವಾಬ್ದಾರಿ ನಿರ್ವಹಿಸಬೇಕಾದರೆ ಜನರಲ್ಲಿ ವಿಶ್ವಾಸದ ಭಾವನೆಯಿರಬೇಕು ಎಂದು ಹೇಳಿದರು.

mng blast aditya rao 1 1

ಜನರನ್ನು ಭಯಭೀತರನ್ನಾಗಿಸುವುದು ನೀವೆ ತೋರಿಸಿದ್ದೀರಿ. ಬಾಂಬ್ ಸಿಡಿಯುತ್ತೆ ಎಂದು ದೊಡ್ಡ ಕಂಟೈನರ್ ನಲ್ಲಿ ತೆಗೆದುಕೊಂಡು ಹೋದರು. ಡ್ರಾಮ ಅದೆಲ್ಲ ಬೇಕಿತ್ತಾ? ಅದಕ್ಕೆ ನಾನೇಳಿರುವುದು ಇವರು ಸಹಿಸದಿದ್ದರೆ ನಾನೇನು ಮಾಡೋಕೆ ಆಗುತ್ತೆ. ಯಾವುದೋ ಒಂದು ಸಮಾಜದ ಬಗ್ಗೆ ದೋಷ ಕೊಡಬೇಕು ಎಂಬ ಭಾವನೆ ಅವರಲ್ಲಿತ್ತು. ಈಗ ಅದು ಎಕ್ಸ್ ಪೋಸ್ ಆಗಿದೆ. ಮುಚ್ಚಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಈ ಕಥೆಗಳನ್ನ ಕಟ್ಟಿಕೊಂಡಿದ್ದಾರೆ ಎಂದು ಹೆಚ್‍ಡಿಕೆ ತಿಳಿಸಿದ್ದಾರೆ.

TAGGED:bjpKumaraswamyMangalore Bomb CaseMini mini powderPublic TVramanagaraಕುಮಾರಸ್ವಾಮಿಪಬ್ಲಿಕ್ ಟಿವಿಬಿಜೆಪಿಮಂಗಳೂರು ಬಾಂಬ್ ಪ್ರಕರಣಮಿಣಿ ಮಿಣಿ ಪೌಡರ್ರಾಮನಗರ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿಯಿಂದ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
6 minutes ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
19 minutes ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
47 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
47 minutes ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
Hassan Murder
Crime

ಹಾಸನ | 40 ವರ್ಷವಾದ್ರೂ ಮದ್ವೆ ಮಾಡಿಸಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?