ಆನೇಕಲ್: ಕಳ್ಳತನ ಮಾಡೋರು ಆಗಾಗ ತಮ್ಮ ಕಸುಬಿನಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುತ್ತಾರೆ ಅನಿಸುತ್ತಿದೆ. ಇಷ್ಟು ದಿನ ಮನೆ ಮುಂದೆ ನಿಲ್ಲಿಸಿದ್ದ ಬೈಕ್, ಕಾರು ಕಳ್ಳತನ ಮಾಡ್ತಿದ್ದ ಕಳ್ಳರು ಇದೀಗ ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು ದುಬಾರಿ ಸೈಕಲ್ ಕಳ್ಳತನಕ್ಕೆ ಇಳಿದಿದ್ದಾರೆ.
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ಇತ್ತೀಚೆಗೆ ಮನೆಯ ಮುಂದೆ ನಿಲ್ಲಿಸಿರೋ ದುಬಾರಿ ಬೆಲೆಯ ಸೈಕಲ್ ಕಳ್ಳತನಕ್ಕೆ ಇಳಿದಿದ್ದಾರೆ. ಇಷ್ಟು ದಿನ ಬೈಕ್, ಕಾರು ಕಳ್ಳರಿಂದ ನೆಮ್ಮದಿ ಕಳೆದುಕೊಂಡಿದ್ದ ಜನ ಇದೀಗ ಮತ್ತೆ ತಲೆಕೆಡಿಸಿಕೊಳ್ಳುವಂತಾಗಿದೆ.
ಆನೇಕಲ್ ತಾಲೂಕಿನ ದೊಮ್ಮಸಂದ್ರ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ದುಬಾರಿ ಬೆಲೆಯ ಸೈಕಲ್ ಕಳ್ಳತನ ಮಾಡಲಾಗಿದೆ. ಈ ಕೃತ್ಯಕ್ಕೆ ಮಕ್ಕಳನ್ನು ಬಳಸಿಕೊಂಡಿದ್ದು, ಮಕ್ಕಳ ಮೂಲಕ ಕಳ್ಳತನಕ್ಕೆ ಇಳಿದಿದ್ದಾರೆ.
ಖತರ್ನಾಕ್ ಕಳ್ಳರು ಸೈಕಲ್ ಕದಿಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.