Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪರಾಷ್ಟ್ರಪತಿಗಳಿಂದ ಬಿಆರ್‌ಟಿಸಿ ಲೋಕಾರ್ಪಣೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಉಪರಾಷ್ಟ್ರಪತಿಗಳಿಂದ ಬಿಆರ್‌ಟಿಸಿ ಲೋಕಾರ್ಪಣೆ!

Dharwad

ಉಪರಾಷ್ಟ್ರಪತಿಗಳಿಂದ ಬಿಆರ್‌ಟಿಸಿ ಲೋಕಾರ್ಪಣೆ!

Public TV
Last updated: February 1, 2020 8:16 pm
Public TV
Share
3 Min Read
HBL BRTS 1
SHARE

-ನವನಗರದಲ್ಲಿ ಹೈಟೆಕ್ ವ್ಯವಸ್ಥೆ

ಹುಬ್ಬಳ್ಳಿ: ಮಹಾನಗರಗಳಲ್ಲಿ ಸುಸ್ಥಿರ ನಗರ ಸಾರಿಗೆ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ, ರಾಜ್ಯದಲ್ಲಿ ಮೊದಲ ಬಾರಿಗೆ ಕೈಗೆತ್ತಿಕೊಳ್ಳಲಾದ ಹೆಚ್.ಡಿ.ಬಿ.ಆರ್.ಟಿ.ಎಸ್. ಹುಬ್ಬಳ್ಳಿ ಧಾರವಾಡ ಬಸ್ ತ್ವರಿತ ಸಂಚಾರ ವ್ಯವಸ್ಥೆ (ಬಿಆರ್‌ಟಿಸಿ) ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿ ನಿಂತಿದೆ.

ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಫೆ.02 ರಂದು ಬಸ್ ಸೇವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಲವು ವಿಶೇಷತೆಗಳಿಂದ ಕೂಡಿರುವ ತ್ವರಿತ ಬಸ್ ಸೇವೆ ಸಾರ್ವಜನಿಕ ವಲಯದ ಮೊದಲ ಅತ್ಯುತ್ತಮ ಪರಿಸರಸ್ನೇಹಿ ಹಾಗೂ ಜನಸ್ನೇಹಿ ವ್ಯವಸ್ಥೆ ಎಂಬ ಹೆಮ್ಮೆಯನ್ನು ತನ್ನದಾಗಿಸಿಕೊಂಡಿದೆ.

HBL BRTS 4

ಪ್ರಥಮ ಬಾರಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದು ತ್ವರಿತ ಬಸ್ ಸೇವೆಯನ್ನು ಅನುಷ್ಠಾನಗೊಳಿಸುತ್ತಿರುವುದು ಇದೇ ಮೊದಲು. ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ, ಸುಸ್ಥಿರ ನಗರ ಸಾರಿಗೆ ಯೋಜನೆ ಹಾಗೂ ಜಾಗತಿಕ ಪರಿಸರ ಸೌಲಭ್ಯ ಮತ್ತು ವಿಶ್ವ ಬ್ಯಾಂಕ್ ಜಂಟಿ ಯೋಜನೆಯಾಗಿ ಸುಮಾರು 970.87 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ಕರ್ನಾಟಕ ಸರ್ಕಾರದ 624.06 ಕೋಟಿ, ವಿಶ್ವ ಬ್ಯಾಂಕ್ ಸಾಲ 324.32 ಕೋಟಿ, 24.49ಕೋಟಿ ಜಿ.ಇ.ಎಫ್ ಅನುದಾನ ಒಳಗೊಂಡಿದೆ.

ಯೋಜನೆಯ ದೊಡ್ಡ ಪಾಲಾಗಿ 445.59 ಕೋಟಿ ರೂಪಾಯಿಗಳನ್ನು ರಸ್ತೆ, ಬಸ್ ನಿಲ್ದಾಣ ಸೇರಿದಂತೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ಬಳಸಲಾಗಿದೆ. 356.82 ಕೋಟಿ ರೂಪಾಯಿಗಳನ್ನು ಭೂ ಸ್ವಾಧೀನ ಹಾಗೂ ಪುನರ್ವಸತಿ ಕಾರ್ಯಕ್ಕೆ ವಿನಿಯೋಗಿಸಲಾಗಿದೆ. 147.97 ಮತ್ತು 24.49 ಕೋಟಿ ರೂಪಾಯಿಗಳನ್ನು ಕ್ರಮವಾಗಿ ಸರಕು ಮತ್ತು ಯಂತ್ರಗಳ ಖರೀದಿ ಮತ್ತು ಸಲಹಾ ಸೇವೆಗಳಿಗೆ ವೆಚ್ಚ ಮಾಡಲಾಗಿದೆ.

HBL BRTS 2

ಹೆಚ್.ಡಿ.ಬಿ.ಆರ್.ಟಿಎಸ್ ಕಂಪನಿಯು ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆ (JNURM) ಅಡಿ 100 ಹವಾನಿಯಂತ್ರಿತ ಬಸ್ ಖರೀದಿಸಲಾಗಿದೆ. ಅವಳಿ ನಗರಗಳ ಮಧ್ಯ 32 ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಮಾರ್ಗದುದ್ದಕ್ಕೂ 6 ಪಾದಚಾರಿ ಮೇಲು ಸೇತುವೆಗಳು, ಹೊಸೂರಿನ 17 ಎಕರೆ ಪ್ರದೇಶದಲ್ಲಿ ಪ್ರಾದೇಶಿಕ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇಲ್ಲಿ ಇಂಟರ್ ಚೇಂಜ್, ಬಸ್ ಡಿಪೋ, ಕಚೇರಿ ಮತ್ತು ನಿಯಂತ್ರಣ ಕೇಂದ್ರಗಳಿವೆ. 2.5 ಎಕರೆ ಪ್ರದೇಶದಲ್ಲಿ ಉಪನಗರ ಸಾರಿಗೆ ಸೇವೆ ಒದಗಿಸಲು ಯೋಜಿಸಲಾಗಿದೆ. ಧಾರವಾಡ ಹೊಸ ಬಸ್ ನಿಲ್ದಾಣದಲ್ಲಿ 40 ಬಸ್ ಸಾಮರ್ಥ್ಯದ ಡಿಪೋ ಹಾಗೂ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ 113 ಬಸ್ ಸಾಮರ್ಥ್ಯದ ಡಿಪೋ ನಿರ್ಮಿಸಲಾಗಿದೆ.

ಐಟಿಎಸ್: ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಇಂಟಲಿಜೆಂಟ್ ಟ್ರಾನ್ಸ್ ಪೋರ್ಟ್ ಸಿಸ್ಟಮ್ ಜಾರಿಗೊಳಿಸಿದೆ. ಸ್ವಯಂಚಾಲಿತ ಟಿಕೆಟ್ ಸಂಗ್ರಹ, ಪ್ರಯಾಣಿಕರಿಗೆ ಬಸ್ ಸಂಚಾರದ ಕುರಿತಾದ ಮಾಹಿತಿ ವ್ಯವಸ್ಥೆ, ಸಿಸಿಟಿವಿ ವಿಡಿಯೋ ವಾಲ್‍ಗಳ ಬೃಹತ್ ಜಾಲ ಹೊಂದಿದೆ.

HBL BRTS 3

ಹಸಿರು ಹೆಚ್.ಡಿ.ಬಿ.ಅರ್.ಟಿ.ಎಸ್: ಯೋಜನೆ ಅನುಷ್ಠಾನಕ್ಕೆ ಸಾವಿರಾರು ಗಿಡಗಳನ್ನು ತೆರವುಗೊಳಿಸಿರುವುದಕ್ಕೆ ಬದಲಾಗಿ ಅವಳಿ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ 25 ಸಾವಿರಕ್ಕೂ ಅಧಿಕ ಗಿಡಗಳನ್ನು ಐದು ವರ್ಷದಲ್ಲಿ ಬೆಳೆಸುವ ಗುರಿ ಹೊಂದಿದೆ. ಈಗಾಗಲೇ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯ ಅನುಷ್ಠಾನಗೊಂಡಿದೆ.

ಕಾರ್ಯಾಚರಣೆ: ಹೆಚ್.ಡಿ.ಬಿ.ಆರ್.ಟಿ.ಎಸ್ ಯೋಜನೆಯು 2018 ಅಕ್ಟೋಬರ್ 2 ರಿಂದ ಪ್ರಾಯೋಗಿಕವಾಗಿ ಜನರಿಗೆ ಸೇವೆ ಒದಗಿಸುತ್ತಿದೆ. ಹಂತ ಹಂತವಾಗಿ ನೂರು ಬಸ್‍ಗಳು ಪ್ರತಿನಿತ್ಯ 1,204 ಟ್ರಿಪ್‍ಗಳಲ್ಲಿ ಸುಮಾರು ಒಂದು ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿರುವುದರಿಂದ ನಗರದ ಸಂಚಾರ ದಟ್ಟಣೆ ತಗ್ಗಿದೆ. ಇದರಿಂದ ಪರಿಸರಕ್ಕೆ ಸಾಕಷ್ಟು ಲಾಭವಾಗುತ್ತಿದೆ. ಇಂಧನ ಬಳಕೆ ಇಳಿಮುಖವಾಗಿದೆ. ಈ ಸೇವೆಯಿಂದ ಸಾರ್ವಜನಿಕರಿಗೆ ಸಮಯ ಉಳಿತಾಯವಾಗುತ್ತಿದೆ. ಪತ್ರಿನಿತ್ಯ ಟಿಕೆಟ್ ಪಡೆಯುವುದನ್ನು ತಪ್ಪಿಸಲು ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ.

hbl 4

ಮೆಟ್ರೋಗಿಂತ ಕಡಿಮೆ ವೆಚ್ಚ: ಬಿ.ಆರ್.ಟಿ.ಎಸ್. ಹಲವು ವಿಚಾರದಲ್ಲಿ ಮೆಟ್ರೋ ಸೇವೆಗಿಂತ ಅತ್ಯಂತ ಕಡಿಮೆ ಖರ್ಚಿನದಾಗಿದೆ. ಮೆಟ್ರೋ ಯೋಜನೆಯಲ್ಲಿ ಪ್ರತಿ ಕಿ.ಮೀ.ಗೆ 250 ರಿಂದ 400 ಕೋಟಿ ರೂ. ವೆಚ್ಚ ತಗುಲಿದರೆ, ಬಿ.ಆರ್.ಟಿ.ಎಸ್ ನಲ್ಲಿ ಈ ವೆಚ್ಚ ಪ್ರತಿ ಕಿ.ಮೀ.ಗೆ 25 ರಿಂದ 30 ಕೋಟಿ ರೂಪಾಯಿಗಳಾಗುತ್ತಿದೆ. ನಿರ್ವಹಣಾ ವೆಚ್ಚವೂ ಮೆಟ್ರೋಗಿಂತ ಶೇ.90 ರಷ್ಟು ಕಡಿಮೆ. ಖಾಸಗಿ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಲಕ್ನೋ ನಗರದ ಬಿ.ಆರ್.ಟಿ.ಎಸ್. ಪ್ರತಿನಿತ್ಯ 60 ರಿಂದ 70 ಸಾವಿರ ಜನರಿಗೆ ಸೇವೆ ನೀಡುತ್ತಿದ್ದರೆ, ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದಲ್ಲಿ ಇರುವ ಹುಬ್ಬಳ್ಳಿ ಧಾರವಾಡ ಬಿ.ಆರ್.ಟಿ.ಎಸ್ 1 ಲಕ್ಷ ಜನರಿಗೆ ಸೇವೆ ಒದಗಿಸುತ್ತಿದೆ.

ರಾಜ್ಯದಲ್ಲಿ ಉತ್ತಮ ಸಾರಿಗೆ ಸೇವೆಯನ್ನು ಬಿ.ಆರ್.ಟಿ.ಎಸ್ ಮೂಲಕ ಜನರಿಗೆ ನೀಡಲಾಗುತ್ತಿದೆ. ಬಿ.ಎಂ.ಟಿ.ಸಿ ನಗರ ಸಾರಿಗೆಯಲ್ಲಿ ಎ.ಸಿ. ಬಸ್‍ಗಳಲ್ಲಿ ಪ್ರತಿ ಕಿ.ಮೀ.ಗೆ 3 ರೂಪಾಯಿ 72 ಪೈಸೆ ದರ ವಿಧಿಸಲಾಗುತ್ತಿದೆ. ಬಿ.ಆರ್.ಟಿ.ಎಸ್‍ನಲ್ಲಿ ಪ್ರತಿ ಕಿ.ಮೀ. 1 ರೂಪಾಯಿ 18 ಪೈಸೆ ದರ ನಿಗದಿ ಮಾಡಲಾಗಿದೆ. ಅತಿ ಕಡಿಮೆ ದರದಲ್ಲಿ ಜನರಿಗೆ ಉತ್ತಮ ಸಾರಿಗೆ ಸೇವೆ ಲಭಿಸುತ್ತಿದೆ. ಸಾರ್ವಜನಿಕ ಸಾರಿಗೆ ಸಂಸ್ಥೆಗಳನ್ನು ಯಾವುದೇ ನಷ್ಟ ಹಾಗೂ ಲಾಭಗಳಿಲ್ಲದೆ ನಡೆಸಲಾಗುತ್ತಿದೆ.

TAGGED:BR TCdharwadhubliPublic TVvice presidentVice President Venkaiah Naiduಉಪರಾಷ್ಟ್ರಪತಿಧಾರವಾಡಪಬ್ಲಿಕ್ ಟಿವಿಬಿಆರ್ ಟಿಸಿವೆಂಕಯ್ಯನಾಯ್ಡುಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories

You Might Also Like

Siddaramaiah 5
Bengaluru City

ಮುಡಾ ಹಗರಣದಲ್ಲಿ ಸಿಎಂ ಕಳಂಕ ಮುಕ್ತ; ಲೋಕಾಯುಕ್ತ ಸಲ್ಲಿಸಿದ್ದ ʻಬಿ ರಿಪೋರ್ಟ್‌ʼ ಒಪ್ಪಿದ ಕೋರ್ಟ್‌

Public TV
By Public TV
15 minutes ago
Ajith Pawar and dk shivakumar
Bengaluru City

ಅಜಿತ್ ಪವಾರ್ ಒಳ್ಳೆಯ ಪ್ರೋಗ್ರೆಸಿವ್ ಲೀಡರ್, ಇಂದು ನಮ್ಮಿಂದ ದೂರ ಆಗಿದ್ದಾರೆ – ಡಿಕೆಶಿ ಸಂತಾಪ

Public TV
By Public TV
37 minutes ago
Nepali
Bengaluru City

ಬೆಂಗಳೂರಿನ ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ – ಮನೆಗೆಲಸದವರಿಂದಲೇ ಕಳ್ಳತನ!

Public TV
By Public TV
46 minutes ago
Couple arrested for stealing womens gold
Bengaluru City

ರೋಡ್ ರೋಡಲ್ಲಿ ತಲೆ ಕೂದಲಿಗೆ ಪಿನ್ನು, ಬಳೆ ಅಂತಾ ಮಾರುತ್ತಿದ್ದ ದಂಪತಿಯಿಂದ ಕನ್ನ

Public TV
By Public TV
59 minutes ago
CK Ramamurthy 1
Bengaluru City

ಜಯನಗರ ಶಾಸಕ ಸಿ.ಕೆ ರಾಮಮೂರ್ತಿಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ

Public TV
By Public TV
1 hour ago
kalaburagi brothers
Kalaburagi

ಕಲಬುರಗಿ| ಸಾವಿನಲ್ಲೂ ಒಂದಾದ ಸಹೋದರರು; ಅಣ್ಣನ ಅಂತ್ಯಕ್ರಿಯೆ ಮುಗಿದ ಮರುದಿನವೇ ತಮ್ಮ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?