ಸಾಹುಕಾರ್​ಗೆ ಚೆಕ್‍ಮೇಟ್ ಕೊಟ್ಟ ಬಿಜೆಪಿ ಹೈಕಮಾಂಡ್!

Public TV
1 Min Read
ramesh jarakiholi

ಬೆಂಗಳೂರು: ಮಿತ್ರ ಮಂಡಳಿಯ ನಾಯಕ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಈ ಕುರಿತು ಸಿಎಂ ಯಡಿಯೂರಪ್ಪರಿಗೆ ಖಡಕ್ ಸಂದೇಶವನ್ನು ರವಾನಿಸಿದೆ ಎಂದು ತಿಳಿದು ಬಂದಿದೆ.

Disqualified MLA Ramesh Jarkiholi

ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ತಮಗೆ ಜಲಸಂಪನ್ಮೂಲ ಖಾತೆಯೇ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಸಿಎಂ ಸಹ ಹೈಕಮಾಂಡ್ ಮುಂದೆ ರಮೇಶ್ ಜಾರಕಿಹೊಳಿಯವರ ಬೇಡಿಕೆಯ ಪಟ್ಟಿಯನ್ನು ಇರಿಸಿದ್ದರು. ಪಟ್ಟಿಯನ್ನು ಪರಿಶೀಲಿಸಿದ ಹೈಕಮಾಂಡ್ ಯಾವುದೇ ಕಾರಣಕ್ಕೂ ಜಲಸಂಪನ್ಮೂಲ ಖಾತೆ ನೀಡಬಾರದು. ಅದರ ಬದಲಾಗಿ ಬೇರೆ ಯಾವುದಾದರೂ ಒಂದು ಖಾತೆಯನ್ನು ನೀಡಿ ಎಂಬ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ನಿರ್ವಹಿಸುತ್ತಿದ್ದ ಖಾತೆಯನ್ನು ಪಡೆಯಬೇಕೆಂಬ ಹಂಬಲ ಹೊಂದಿದ್ದ ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆಗೆ ಸಿಗೋದು ಅನುಮಾನ ಎನ್ನಲಾಗುತ್ತಿದೆ.

Disqualified MLAs

ಹೈಕಮಾಂಡ್ ಕಳುಹಿಸಿದ ಸಂದೇಶ ನೋಡಿ ಸಿಎಂ ಸಹ ಮೌನಕ್ಕೆ ಜಾರಿದ್ದಾರೆ ಎನ್ನಲಾಗ್ತಿದೆ. ಒಂದು ವೇಳೆ ಜಲಸಂಪನ್ಮೂಲ ಖಾತೆ ಸಿಗದಿದ್ರೆ ರಮೇಶ್ ಜಾರಕಿಹೊಳಿಯವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಕಮಲ ಅಂಗಳದಲ್ಲಿ ಹುಟ್ಟಿಕೊಂಡಿದೆ. ಮತ್ತೆ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸ್ತಾರಾ ಅಥವಾ ಕೊಟ್ಟ ಖಾತೆ ಪಡೆದು ಸುಮ್ಮನಾಗ್ತಾರಾ ಎಲ್ಲದಕ್ಕೂ ಗುರುವಾರ ಸ್ಪಷ್ಟ ಉತ್ತರ ಸಿಗಲಿದೆ.

Share This Article
Leave a Comment

Leave a Reply

Your email address will not be published. Required fields are marked *