Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಎಸ್‍ವೈ ಸಂಪುಟ ರಚನೆ- 10 ಮಂದಿ ಸಚಿವರಾಗಿ ಪ್ರಮಾಣ ವಚನ

Public TV
Last updated: February 6, 2020 8:38 pm
Public TV
Share
2 Min Read
CABINET BSY 1 copy
SHARE

ಬೆಂಗಳೂರು: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಚುನಾಯಿತರಾದ ವಲಸಿಗ ಶಾಸಕರು ಕೊನೆಗೂ ಸಚಿವರಾಗಿ ಗೆಲುವಿನ ನಗೆ ಬೀರಿದ್ದಾರೆ. ಇವತ್ತು ರಾಜಭವನದಲ್ಲಿ ನಡೆದ ಸರಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ 10 ಶಾಸಕರೂ ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಯಡಿಯೂರಪ್ಪನವರ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದಾರೆ. ಆ ಮೂಲಕ ರಾಜ್ಯ ಸಚಿವ ಸಂಪುಟ ಎರಡನೇ ಬಾರಿಗೆ ವಿಸ್ತರಣೆಯಾಗಿದೆ. ವಕಸಿಗರ ಸೇರ್ಪಡೆಯಿಂದ ರಾಜ್ಯ ಸಚಿವ ಸಂಪುಟದ ಸಂಖ್ಯಾಬಲ 28 ಕ್ಕೆ ಏರಿದೆ. ಅಲ್ಲದೆ, ರಾಜ್ಯ ಸಚಿವ ಸಂಪುಟದಲ್ಲಿ ಇನ್ನೂ ಆರು ಸ್ಥಾನಗಳು ಖಾಲಿ ಇವೆ.

CABINET BSY

ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್, ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಲಕ್ಷ್ಮಣ ರಾವ್ ಜಾರಕೀಹೊಳಿ, ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್, ಕೃಷ್ಣರಾಜಪುರ ಕ್ಷೇತ್ರದ ಶಾಸಕ ಬಿಎ ಬಸವರಾಜ್, ಯಲ್ಲಾಪುರ ಕ್ಷೇತ್ರದ ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಕ್ಷೇತ್ರದ ಬಸವನಗೌಡ ಚನ್ನಬಸವನಗೌಡ ಪಾಟೀಲ್, ಮಹಾಲಕ್ಷೀಪುರ ಕ್ಷೇತ್ರದ ಶಾಸಕ ಕೆ ಗೋಪಾಲಯ್ಯ, ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕ ಎಂ ಸಿ ನಾರಾಯಣಗೌಡ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಬಾಳಾ ಸಾಹೇಬ್ ಪಾಟೀಲ್ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಹಾಗೂ ಕಿಕ್ಕಿರಿದ ಸಮಾರಂಭದಲ್ಲಿ ನೆರೆದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಸಂಪುಟ ದರ್ಜೆ ಸಚಿವರಾಗಿ ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

CABINET copy

ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಎಲ್ಲಾ ಹತ್ತು ಸಚಿವರಿಗೆ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು. ಗುರುವಾರ ಬೆಳಿಗ್ಗೆ 10-30 ಗಂಟೆಗೆ ಪ್ರಾರಂಭವಾದ ಈ ಸಮಾರಂಭವು ಮೂವತ್ತು ನಿಮಿಷಗಳ ಕಾಲ ನಡೆಯಿತು.

ಕಾರ್ಯಕ್ರಮದ ವಿಶೇಷತೆಗಳು: ಪ್ರಮಾಣ ವಚನ ಸ್ವೀಕರಿಸಿದೊಡನೆಯೇ, ಎಲ್ಲಾ ಹತ್ತೂ ಸಚಿವರಿಗೂ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯವರು ಹೂಗುಚ್ಛ ನೀಡಿ ಅಭಿನಂದಿಸಿದರು. ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಆಕರ್ಷಕ ಅಂಶವಾಗಿತ್ತು. ಅಲ್ಲದೆ, ಶಿವರಾಮ್ ಹೆಬ್ಬಾರ್ ಅವರು ತಮ್ಮ ತಂದೆ-ತಾಯಿ ಹಾಗೂ ತಮ್ಮ ಕ್ಷೇತ್ರ ಜನತೆಯಲ್ಲಿಯೂ ಪ್ರಮಾಣ ವಚನ ಸ್ವೀಕರಿಸಿದರು. ನಂತರ, ಬಿ ಸಿ ಪಾಟೀಲ್ ಅವರೂ ತಂದೆ-ತಾಯಿ, ಕ್ಷೇತ್ರ ಜನತೆಯ ಜೊತೆಗೆ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿಪ್ರಮಾಣ ವಚನ ಸ್ವೀಕರಿಸಿದರು.

ರಮೇಶ್ ಜಾರಕಿಹೊಳಿ ಅವರು ಎಂದಿನಂತೆ ಸರಳ ಉಡುಪಿನಲ್ಲಿ ಆಗಮಿಸಿದ್ದರು. ಕೆ ಗೋಪಾಲಯ್ಯ ಅವರು ಸಾಂಪ್ರದಾಯಿಕ ರೇಷ್ಮೆ ವಸ್ತ್ರಧಾರಿಯಾಗಿ ಎಲ್ಲರ ಗಮನಸೆಳೆದರು.  ಎಸ್ ಟಿ ಸೋಮಶೇಖರ್, ಡಾ ಕೆ ಸುಧಾಕರ್, ಬಿ ಎ ಬಸವರಾಜ್, ಶಿವರಾಮ ಹೆಬ್ಬಾರ್, ಬಿ ಸಿ ಪಾಟೀಲ್, ಕೆ ಗೋಪಾಲಯ್ಯ, ಎಂ ಸಿ ನಾರಾಯಣಗೌಡ ಹಾಗೂ ಶ್ರೀಮಂತ ಪಾಟೀಲ್ ಅವರು ಪ್ರಪ್ರಥಮ ಬಾರಿಗೆ ರಾಜ್ಯ ಸಚಿವ ಸಂಪುಟವನ್ನು ಪ್ರವೇಶಿಸಿದ್ದಾರೆ. ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಅವರು ಈ ಮುನ್ನ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರು, ಸಂಸದರು ಹಾಗೂ ಶಾಸಕರೂ ಸೇರಿದಂತೆ ಹಲವು ಗಣ್ಯರು, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

 

TAGGED:bengaluruBSYeddyurappacabinetministersPublic TVಪಬ್ಲಿಕ್ ಟಿವಿಬಿಎಸ್‍ವೈಬೆಂಗಳೂರುಸಚಿವಸಂಪುಟ ವಿಸ್ತರಣೆ
Share This Article
Facebook Whatsapp Whatsapp Telegram

You Might Also Like

Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
13 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
27 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
32 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?