Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು

Districts

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು

Public TV
Last updated: February 7, 2020 12:04 pm
Public TV
Share
2 Min Read
Anjanadri Hill Hampi Koppala
Anjanadri Hill Hampi Koppala
SHARE

ರಾಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ಹನುಮನಿರುವನು..ಹನುಮನ ಸ್ಮರಣೆ ಎಲ್ಲಿರುವುದೋ ಅಲ್ಲಿ ರಾಮನಿರುವನು..ಹೀಗೆ ರಾಮ ಮತ್ತು ಹನುಮ ಇಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಂತಹ ಆಪ್ತಮಿತ್ರರು, ಗುರು ಶಿಷ್ಯರು. ರಾಮನನ್ನ ಪೂಜಿಸುವುವರು ಹನುಮಂತನನ್ನ ಪೂಜಿಸುತ್ತಾರೆ. ಹನುಮಂತನನ್ನ ಪೂಜಿಸುವವರು ರಾಮನನ್ನ ಪೂಜಿಸೇ ಪೂಜಿಸುತ್ತಾರೆ. ಆದ್ರೆ, ರಾಮ ಹುಟ್ಟಿದ್ದು ಅಯೋಧ್ಯೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದ್ರೆ, ಹನುಮಂತ ಹುಟ್ಟಿದ್ದು ಎಲ್ಲಿ ಅನ್ನೋದು ಬಹಳಷ್ಟು ಜನರಿಗೆ ಗೊತ್ತಿಲ್ಲ. ಕೆಲವರಿಗೆ ಗೊಂದಲಗಳು ಇವೆ.

PUBLIC TOUR KARNATAKA TRAVEL GUIDE

ಆಂಜನೇಯ ಹುಟ್ಟಿದ್ದು ಕರ್ನಾಟಕದಲ್ಲಿ. ಅಂಜನಾದ್ರಿ ಪರ್ವತದಲ್ಲಿ ಅಂಜನಾದೇವಿ ಹನುಮಂತನಿಗೆ ಜನ್ಮ ನೀಡುತ್ತಾಳೆ. ರಾಮಾಯಣದ ಕಿಷ್ಕಿಂಧಾಕಾಂಡದಲ್ಲಿ ಇದರ ಉಲ್ಲೇಖವಿದೆ. ‘ಕಿಷ್ಕಿಂಧೆ’ ಎಂದರೆ ನಮ್ಮ ರಾಜ್ಯದ ಹಂಪೆಯ ಪ್ರದೇಶ. ಅಪ್ಸರೆಯಾಗಿದ್ದ ಅಂಜನಾ ಋಷಿಮುನಿಗಳ ಶಾಪದಿಂದ ಭೂಮಿಯ ಮೇಲೆ ವಾನರ ಕುಲದಲ್ಲಿ ಜನ್ಮತಾಳಬೇಕಾಯ್ತು. ಆದ್ರೆ, ಗಂಡು ಮಗುವಿಗೆ ಜನ್ಮ ಕೊಟ್ಟರೇ ಮಾತ್ರ ಅವಳ ಶಾಪ ವಿಮೋಚನೆಯಾಗುವಂತಿತ್ತು. ಈ ಸಂದರ್ಭದಲ್ಲಿ ಕೇಸರಿಯೊಂದಿಗೆ ಅಂಜನಾದೇವಿಯ ಮದುವೆಯಾಗುತ್ತೆ. ಆದ್ರೆ, ಅವಳ ಶಾಪ ವಿಮೋಚನೆ ಆಗುವುದಕ್ಕೆ ಗಂಡು ಮಗ ಜನಿಸಬೇಕಿತ್ತು. ಹಾಗಾಗಿ ಶಿವನ ಆರಾಧನೆ ಮಾಡಿ ವರ ಪಡೆದುಕೊಳ್ಳುತ್ತಾಳೆ. ಅದಾದ ಬಳಿಕ ಅತ್ಯಂತ ಬಲಶಾಲಿ ಆಂಜನೇಯನಿಗೆ ಅಂಜನಾದೇವಿ ಜನ್ಮ ನೀಡುತ್ತಾಳೆ. ಹನುಮನ ಜನ್ಮ ಬಗ್ಗೆ ಹಲವು ರೀತಿಯ ಕಥೆಗಳನ್ನ ಹೇಳಲಾಗುತ್ತೆ. ಒಂದು ಕಥೆಯ ಪ್ರಕಾರ ವಾಯುದೇವನೊಂದಿ ಮೋಹಿಸಿ ಅಂಜನಾದೇವಿ ವಾಯುಪುತ್ರನಿಗೆ ಜನ್ಮ ನೀಡಿದಳೆಂದು. ಇನ್ನೊಂದು ಕಥೆಯ ಪ್ರಕಾರ, ಪುತ್ರ ಕಾಮೇಷ್ಠಿಯಾಗ ಮಾಡಿ ಅದರ ಪ್ರಸಾದವನ್ನ ದಾಶ್ರತನು ತನ್ನ ಪತ್ನಿಯರಿಗೆ ನೀಡುವಾಗ ಕಾಗೆಯೊಂದು ಸ್ವಲ್ಪ ಭಾಗ ಕಿತ್ತುಕೊಂಡು ಹೋಗುತ್ತೆ. ಅದನ್ನ ತಪಸ್ಸು ಮಾಡುತ್ತಿದ್ದ ಅಂಜನಾದೇವಿಯ ಕೈಯಲ್ಲಿ ಬೀಳುವಂತೆ ವಾಯುದೇವ ಮಾಡುತ್ತಾನೆ. ಆಗ ಅಂಜನಾದೇವಿ ಗರ್ಭವತಿಯಾಗಿ ಆಂಜನೇಯನಿಗೆ ಅಂಜನಾದ್ರಿ ಬೆಟ್ಟದ ಮೇಲೆ ಜನ್ಮ ನೀಡುತ್ತಾಳೆ.

ಸೂರ್ಯನನ್ನೆ ನುಂಗಲು ಹೋಗಿದ್ದು:
ಆಂಜನೇಯನು ಬಾಲ್ಯದಲ್ಲಿ ಸೂರ್ಯನನ್ನ ಕೆಂಪು ಹಣ್ಣು ಎಂದು ತಿನ್ನಲು ಹಾರಿ ಹೋಗಿದ್ದು ಇದೆ ಅಂಜನಾದ್ರಿ ಪರ್ವತದಿಂದ. ರಾವಣ ಸೀತೆಯನ್ನ ಅಪಹರಿಸಿದಾಗ, ಸೀತೆಯ ಸುಳಿವುಗಳನ್ನು ಹುಡುಕುತ್ತ ರಾಮ ಲಕ್ಷ್ಮಣರು ಆಗಮಿಸುವ ಸ್ಥಳ ಕಿಷ್ಕಿಂಧೆ. ಈ ಒಂದು ಸ್ಥಳದಲ್ಲಿಯೇ ರಾಮನಿಗೆ ಅವನ ಪರಮ ಭಕ್ತನಾದ ಆಂಜನೇಯನ ಭೇಟಿಯಾಗುತ್ತದೆ.

Anjanadri Hill Hampi Koppala 2

ಈಗಲೂ ಆಂಜನೇಯನ ದರ್ಶನವಾಗುತ್ತೆ:
ಕೆಲವು ಭಕ್ತರು ಹೇಳುವ ಪ್ರಕಾರ, ಈಗಲೂ ಅಂಜನಾದ್ರಿ ಬೆಟ್ಟದ ಮೇಲೆ ದೊಡ್ಡ ಕೋತಿಯೊಂದಿದೆ. ಅದು ಬೆಳಿಗ್ಗೆ ಮತ್ತು ಸಂಜೆ ದರ್ಶನ ನೀಡುತ್ತೆ. ಅಪರೂಪಕ್ಕೆ ಬಂದು ದರ್ಶನ ಕೊಡುತ್ತೆ. ಅದು ಸಾಕ್ಷಾತ್ ಆಂಜನೇಯನೇ ಅನ್ನೋದು ಭಕ್ತರ ನಂಬಿಕೆ.

Anjanadri Hill Hampi Koppala 3

ಎಷ್ಟು ದೂರವಿದೆ?
ಬೆಂಗಳೂರಿನಿಂದ 345 ಕಿ.ಮೀ ದೂರವಿದ್ದರೆ ಹಂಪಿಯಿಂದ 18 ಕಿ.ಮೀ., ಗಂಗಾವತಿಯಿಂದ 6 ಕಿಮೀ. ದೂರದಲ್ಲಿ ಅಂಜನಾದ್ರಿ ಪರ್ವತವಿದೆ. ಹಂಪಿಯಿಂದ ಅಂಜನಾದ್ರಿ ಬೆಟ್ಟ ಹತ್ತಿರದಲ್ಲೆ ಇರೋದ್ರಿಂದ 580 ಮೆಟ್ಟಿಲುಗಳನ್ನ ಏರಿ ಅಂಜನಾದ್ರಿ ಬೆಟ್ಟದ ಮೇಲೆ ತಲುಪಿದ ನಂತರ, ಮೆಟ್ಟಿಲು ಏರಿದ ಆಯಾಸವೆಲ್ಲ ಮಾಯವಾಗುತ್ತೆ. ಕಾರಣ, ಅಲ್ಲಿಂದ ಕಾಣುವ ತುಂಗಭದ್ರಾ ನದಿ ಹಾಗೂ ಹಂಪಿಯ ಕೆಲವು ದೇವಾಲಯಗಳು, ಪ್ರಕೃತಿಯ ಸೊಬಗು ಎಲ್ಲವನ್ನೂ ಮರೆಸುತ್ತೆ.

ಅಷ್ಟೇ ಅಲ್ಲದೇ ಇಲ್ಲಿ ಹಲವು ಗುಹೆಗಳು ಇವೆ. ಬೆಟ್ಟದ ಮೇಲೆ ಮಾರುತಿಯ ದೊಡ್ಡ ಸೈನ್ಯ ಕೂಡ ಇದೆ. ಆದ್ರೆ, ಯಾರಿಗೂ ಏನೂ ಮಾಡಲ್ಲ. ಇನ್ನು ಬೆಟ್ಟದ ಮೇಲೆ ಒಂದೇ ಒಂದು ಮರವಿದೆ. ಬೆಟ್ಟದ ಮೇಲೆ ಸೂರ್ಯಾಸ್ತ ನೋಡಿದ್ರೆ ಮನಸ್ಸಿಗೆ ಏನೋ ಆನಂದ ಸಿಗುತ್ತೆ. ನೀವು ಆಂಜನೇಯನ ಭಕ್ತರಾಗಿದ್ದರೇ ಮೊದಲು ಅಂಜನಾದ್ರಿ ಬೆಟ್ಟಕ್ಕೆ ಹೋಗಿ ಅಂಜನಾದೇವಿ, ಹಾಗೂ ಆಂಜನೇಯನ ದರ್ಶನ ಪಡೆಯಿರಿ. 

– ಅರುಣ್ ಬಡಿಗೇರ್

Anjanadri Hill Hampi Koppala 1

TAGGED:Anjanadri HillHanumankannada newskoppalatravelಅಂಜನಾದ್ರಿಆಂಜನೇಯಕೊಪ್ಪಳಹನುಮಂತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
10 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
25 minutes ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
49 minutes ago
Ballari Police Arrest A Minor Who Had Attacked 8 Children and Hostel Warden With Iron Rod
Bellary

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Public TV
By Public TV
53 minutes ago
Zameer Ahmed and SS Mallikarjun
Bengaluru City

SS ಮಲ್ಲಿಕಾರ್ಜುನ್‌ Vs ಜಮೀರ್ – ಟಿಕೆಟ್ ಕೇಳೋದು ನಮ್ಮ ಹಕ್ಕು: ಜಮೀರ್ ಟಾಂಗ್

Public TV
By Public TV
54 minutes ago
DK Shivakumar and Gaurav Gogoi
Karnataka

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?