ಮಂಗಳೂರು: ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಸೋಮವಾರ ಶ್ರೀ ಮಹಾವಿಷ್ಣು ಯಾಗ ಪ್ರಾರಂಭಗೊಂಡಿತು. ಲೋಕ ಕಲ್ಯಾಣಾರ್ಥವಾಗಿ ಕೊಂಚಾಡಿ ಶ್ರೀ ಕಾಶೀಮಠದಲ್ಲಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಮಹಾವಿಷ್ಣು ಯಾಗ, ಕ್ಷೇತ್ರದ ಯಜ್ಞ ಮಂಟಪದಲ್ಲಿ ದೀಪ ಪ್ರಜ್ವಲನೆಯ ಮೂಲಕ ವಿದ್ಯುಕ್ತವಾಗಿ ನಡೆಯಲಿದೆ.
ಮಂಗಳೂರಿನ ವನಿತಾ ಅಚ್ಚುತ್ ಪೈ ಸಭಾಂಗಣದಲ್ಲಿ ಮೊಕ್ಕಾಂ ಮಾಡಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರನ್ನು ಸಕಲ ಗೌರವದೊಂದಿಗೆ ಯಜ್ಞ ಮಂಟಪಕ್ಕೆ ಕರೆತರಲಾಯಿತು. ಭವ್ಯವಾಗಿ ನಿರ್ಮಿಸಲಾದ ಯಜ್ಞ ಮಂಟಪದಲ್ಲಿ ಶ್ರೀಗಳವರು ದೀಪ ಪ್ರಜ್ವಲನೆ ನಡೆಸಿದರು ಬಳಿಕ ಶ್ರೀಗಳವರ ಅಗ್ರ ಪೂಜೆ ಸಮಿತಿಯ ಪದಾಧಿಕಾರಿಗಳಿಂದ ನಡೆಯಿತು.
ವಿವಿಧ ಕ್ಷೇತ್ರಗಳಿಂದ ಆಗಮಿಸಿದ ನಾನಾ ಗೋತ್ರೆಯ ವೈಧಿಕರಿಂದ ಯಜ್ಞ ಮಂಟಪದಲ್ಲಿ ಯಜ್ಞ ಪ್ರಾರಂಭವಾಯಿತು. ಮಧ್ಯಾಹ್ನ ಲಘು ಪೂರ್ಣಆಹುತಿ ಬಳಿಕ ಸಮಾರಾಧನೆ ನಡೆಯಿತು. ಈ ಮಹಾಯಾಗವು ಮೂರುದಿನಗಳ ಪರ್ಯಂತ ನಡೆಯಲಿದ್ದು, ಮೂರನೇ ದಿನದಂದು ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ಮಹಾ ಪೂರ್ಣಆಹುತಿ ನಡೆಯಲಿದೆ.