Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರು ಸಮೇತ ಪತಿಯನ್ನೇ ಸುಟ್ಟು ಹಾಕಿದ್ಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕಾರು ಸಮೇತ ಪತಿಯನ್ನೇ ಸುಟ್ಟು ಹಾಕಿದ್ಳು

Chikkaballapur

ಕಾರು ಸಮೇತ ಪತಿಯನ್ನೇ ಸುಟ್ಟು ಹಾಕಿದ್ಳು

Public TV
Last updated: February 12, 2020 7:25 pm
Public TV
Share
3 Min Read
ckb copy 2
SHARE

– ಪತ್ನಿ ಕರೆದ್ಳು ಅಂತ ಮನೆಗೆ ಹೋಗಿದ್ದೆ ತಪ್ಪಾಯ್ತು
– ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಮಲಗಿಸಿದ್ಳು

ಚಿಕ್ಕಬಳ್ಳಾಪುರ: ಪತಿ ಮನೆ ಬಳಿ ಬಂದು ಗಲಾಟೆ, ಕಿರಿಕ್ ಮಾಡುತ್ತಾನೆ. ಅಲ್ಲದೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಎರಡನೇ ಪತ್ನಿ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಸಜೀವವಾಗಿ ಕಾರು ಸಮೇತ ಸುಟ್ಟು ಹಾಕಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು ನಗರದ ಕಾಡುಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಧರ್ಮೆಂದ್ರ ಮೃತ ವ್ಯಕ್ತಿ. ಈತನ ಎರಡನೇ  ಪತ್ನಿ ಶಿಲ್ಪಾ ಕೊಲೆ ಮಾಡಿದ್ದಾಳೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೃತ ಧರ್ಮೇಂದ್ರನನ್ನು ಶಿಲ್ಪಾ ಬಿಟ್ಟು ಹೋಗಿದ್ದು, ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಅಂಜಿನಪ್ಪನ ಜೊತೆ ವಾಸಿಸುತ್ತಿದ್ದಳು. ಅಂಜಿನಪ್ಪ ಅಯ್ಯಪ್ಪನಗರದಲ್ಲಿ ಪ್ರಾವಿಜನ್ ಸ್ಟೋರ್ ಮಾಲೀಕನಾಗಿದ್ದನು. ಅಲ್ಲಿಗೆ ಹೋಗಿ, ಅಕ್ರಮ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಪತಿ ಕಿರಿಕ್ ಮಾಡಿ ಗಲಾಟೆ ಮಾಡುತ್ತಿದ್ದನಂತೆ. ಹೀಗಾಗಿ ಶಿಲ್ಪಾ, ಪ್ರಿಯಕರನ ಅಂಜಿನಪ್ಪ, ಕಾರು ಚಾಲಕ ಕಾಂತರಾಜು ಸೇರಿದಂತೆ ಮತ್ತೋರ್ವ ಅಭಿಷೇಕ್ ಜೊತೆ ಸೇರಿ ಕೃತ್ಯ ಎಸಗಿದ್ದಾರೆ. ಸದ್ಯಕ್ಕೆ ಪತ್ನಿ ಶಿಲ್ಪಾ, ಅಂಜಿನಪ್ಪ ಹಾಗೂ ಕಾಂತರಾಜುನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

1 copy

ಏನಿದು ಪ್ರಕರಣ?
ಧರ್ಮೆಂದ್ರ ಹಾಗೂ ಶಿಲ್ಪಾ ಮದುವೆಯಾಗಿ ಚೆನ್ನಾಗಿ ಸಂಸಾರ ನಡೆಸುತ್ತಿದ್ದರು. ಈ ದಂಪತಿಗೆ ಒಂದು ವರ್ಷದ ಗಂಡು ಮಗು ಸಹ ಇದೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಧರ್ಮೆಂದ್ರನ ಜೊತೆ ಸಂಸಾರ ಸಾಗಿಸಲಾಗದೆ 7- 8 ತಿಂಗಳ ಹಿಂದೆ ಪ್ರತ್ಯೇಕವಾಗಿ ವಾಸವಾಗಿದ್ದಳು. ಆದರೆ ಶಿಲ್ಪಾ ವಾಸವಾಗಿದ್ದ ಮನೆ ಬಳಿ ಹೋಗಿ ಕಿರಿಕ್ ಮಾಡಿ ಗಲಾಟೆ ಮಾಡ್ತಿದ್ದನಂತೆ. ಹೀಗಾಗಿ ಪ್ರಿಯಕರ ಅಂಜಿನಪ್ಪನ ಜೊತೆ ಸೇರಿ ಪತಿಯ ಕೊಲೆಗೆ ಪ್ಲಾನ್ ಮಾಡಿದ್ದಳು. ಫೋನ್ ಮೂಲಕ ಧರ್ಮೇಂದ್ರನ ಜೊತೆ ಟಚ್‍ನಲ್ಲಿದ್ದ ಶಿಲ್ಪಾ, ಬಹಳ ಬೇಜಾರಾಗಿದೆ ಬಾ ಅಂತ ಫೆಬ್ರವರಿ 07 ರಂದು ಮನೆಗೆ ಕರೆಸಿಕೊಂಡಿದ್ದಳು. ಆದರೆ ಪತ್ನಿ ಕೊಲೆ ಮಾಡಲು ಪ್ಲಾನ್ ಮಾಡಿದ್ದಾಳೆ ಎಂದು ತಿಳಿಯದೆ ಮನೆಗೆ ಹೋಗಿದ್ದ.

2 copy

ಅಲ್ಲಿಂದ ತನ್ನದೇ ಕಾರಲ್ಲಿ ಧರ್ಮೆಂದ್ರ, ಶಿಲ್ಪಾ ಹಾಗೂ ಶಿಲ್ಪಾಳ ಕಾರು ಚಾಲಕ ಹೊಸಕೋಟೆ ಕಡೆಯಿಂದ ಚಿಂತಾಮಣಿಗೆ ಬಂದಿದ್ದರು. ಇವರ ಹಿಂದೆ ಮತ್ತೊಂದು ಕಾರಿನಲ್ಲಿ ಶಿಲ್ಪಾಳ ಪ್ರಿಯಕರ ಅಂಜಿನಪ್ಪ ಹಾಗೂ ಅಭಿಷೇಕ್ ಬಂದಿದ್ದಾರೆ. ಮೊದಲೇ ಪ್ಲಾನ್ ಮಾಡಿದಂತೆ ಹೊಸಕೋಟೆ ಬಳಿ ಬಾರೊಂದರಲ್ಲಿ ಮದ್ಯ, ಊಟ ತಗೊಂಡು ಕಾರು ಹತ್ತಿದ್ದಾರೆ. ಕಾರಲ್ಲೇ ಮದ್ಯದ ವ್ಯಸನಿಯಾಗಿದ್ದ ಧರ್ಮೆಂದ್ರನಿಗೆ ಕಂಠಪೂರ್ತಿ ಕುಡಿಸಿದ್ದಾರೆ.

ಮೊದಲೇ ಮದ್ಯ ಹಾಗೂ ಊಟದಲ್ಲಿ ನಿದ್ರೆ ಮಾತ್ರೆ ಮಿಕ್ಸ್ ಮಾಡಿದ್ದರು. ಹೀಗಾಗಿ ನಶೆ ಹೆಚ್ಚಾಗಿ ಧರ್ಮೇಂದ್ರ ನಿದ್ರೆಗೆ ಜಾರಿದ್ದಾನೆ. ದಾರಿ ಮಧ್ಯೆ ಪೆಟ್ರೋಲ್ ಬಂಕ್‍ವೊಂದರಲ್ಲಿ 4 ಲೀಟರ್ ಪೆಟ್ರೋಲ್ ಖರೀದಿ ಮಾಡಿಕೊಂಡು ಪತಿ ಸಮೇತ ಚಿಂತಾಮಣಿ-ಬಾಗೇಪಲ್ಲಿ ರಸ್ತೆಯ ಕೇತನಾಯಕನಹಳ್ಳಿ ಬಳಿಯ ನೀಲಗಿರಿ ತೋಪಿಗೆ ಹೋಗಿದ್ದಾರೆ. ಅಲ್ಲಿ ಕಾರು ಸಮೇತ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದರು. ತದನಂತರ ಅಲ್ಲಿಂದ ಅಂಜಿನಪ್ಪ ಬಂದಿದ್ದ ಕಾರಲ್ಲಿ ನಾಲ್ವರು ಬೆಂಗಳೂರಿಗೆ ವಾಪಸ್ ಆಗಿದ್ದರು.

eef12e3d c6ee 4cbf b7b6 f4da8a64c46e

ಫೆಬ್ರವರಿ 08 ರಂದು ಸುಟ್ಟ ಕಾರು ಕಂಡು ಸ್ಥಳೀಯರು ಚಿಂತಾಮಣಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಕಾರಿನಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿ ತಲೆ ಬುರುಡೆ ಮಾತ್ರ ಇದ್ದ ಮೃತದೇಹ ಮಾತ್ರ ಪತ್ತೆಯಾಗಿತ್ತು. ಹೀಗಾಗಿ ತನಿಖೆಗಿಳಿದ ಪೊಲೀಸರು ಕಾರಿನ ಚಾರ್ಸಿ ನಂಬರ್ ಆಧರಿಸಿ ನಂಬರ್ ಪತ್ತೆ ಹಚ್ಚಿದ್ದಾರೆ. ಕಾಡುಗುಡಿ ಠಾಣೆಯಲ್ಲೂ ವಿಚಾರಿಸಿದಾಗ ಧರ್ಮೆಂದ್ರನ ಪೂರ್ವಾಪರ ಗೊತ್ತಾಗಿದೆ. ಈ ಸಂಬಂಧ ಎರಡನೇ ಪತ್ನಿಯ ವಶಕ್ಕೆ ಪಡೆದಾಗ ನಡೆದ ಘಟನೆಯ ಅಸಲಿ ಸತ್ಯ ಬಾಯ್ಬಿಟ್ಟಿದ್ದಾಳೆ.

3

ರೌಡಿಶೀಟರ್ ಧರ್ಮೇಂದ್ರ ಸಹ ಕೊಲೆ ಮಾಡಿದ್ದ:
ರೌಡಿಶೀಟರ್ ಧರ್ಮೇಂದ್ರ ಸಹ ಈ ಮೊದಲು ಕೊಲೆ ಮಾಡಿದ್ದ. ಮೊದಲು ಪುಟ್ಟಪರ್ತಿಗೆ ಆಗಮಿಸುವ ವಿದೇಶಿ ಭಕ್ತರಿಗೆ ಗೈಡ್ ಆಗಿ ಕೆಲಸ ಮಾಡುತ್ತಾ, ಚೆನ್ನಾಗಿ ದುಡ್ಡು ಸಂಪಾದನೆ ಮಾಡುತ್ತಿದ್ದನು. ಮೈ ಮೇಲೆ ಅರ್ಧ ಮುಕ್ಕಾಲು ಕೆಜಿ ಬಂಗಾರ ಹಾಕಿಕೊಂಡು ಏರಿಯಾದಲ್ಲಿ ಹವಾ ಮೈಂಟೇನ್ ಮಾಡುತ್ತಿದ್ದ. ನಂತರ ರಮಣಿಯನ್ನ ಮದುವೆಯಾಗಿದ್ದನು. ಈತ ರಮಣಿ ಮನೆಗೆ ಹೋದಾಗ ರಮಣಿ ತಾಯಿ ಜೊತೆ ಗಲಾಟೆ ಮಾಡಿಕೊಂಡಿದ್ದನಂತೆ. ಈ ವಿಚಾರದಲ್ಲಿ ರಮಣಿಯ ಸಹೋದರನನ್ನು ಮದ್ಯ ಕುಡಿಯೋಣ ಎಂದು ಕರೆದುಕೊಂಡು ಹೋಗಿದ್ದನು. ಆತನಿಗೆ ಮದ್ಯ ಕುಡಿಸಿ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದನಂತೆ. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿತ್ತು. ಈತನ ವಿರುದ್ಧ ಹಲವು ಕೇಸ್‍ಗಳು ದಾಖಲಾಗಿದ್ದವು.

87ac8a0b 1d9c 44eb a74d 7e8bc0ee7870

TAGGED:carChikkaballapurahusbandinvestigationloverpolicePublic TVWifeಕಾರುಚಿಕ್ಕಬಳ್ಳಾಪುರತನಿಖೆಪತಿಪತ್ನಿಪಬ್ಲಿಕ್ ಟಿವಿಪೊಲೀಸ್ಪ್ರಿಯಕರ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Tractor catches fire after touching electric wire while transporting sugarcane leaves jamkhandi
Bagalkot

ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್‌

Public TV
By Public TV
15 minutes ago
Sunetra Pawar Ajit Pawar
Latest

ಮಹಾರಾಷ್ಟ್ರ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್‌ ಪತ್ನಿ ಸುನೇತ್ರಾ ಹೆಸರು ಪ್ರಸ್ತಾಪಿಸಲು ಎನ್‌ಸಿಪಿ ಚಿಂತನೆ

Public TV
By Public TV
37 minutes ago
KJ George 1
Bengaluru City

ನಾನು ರಾಜೀನಾಮೆ ನೀಡಿಲ್ಲ, ಆ ಪ್ರಶ್ನೆಯೇ ಉದ್ಭವ ಆಗಿಲ್ಲ: ಕೆ.ಜೆ ಜಾರ್ಜ್ ಸ್ಪಷ್ಟನೆ

Public TV
By Public TV
55 minutes ago
India EU Trade Deal 1 1
Explainer

PublicTV Explainer: ಭಾರತ-ಇಯು ಡೀಲ್; ಐಷಾರಾಮಿ ಕಾರುಗಳು, ಬಿಯರ್‌, ವೈನ್‌, ಮೆಡಿಸಿನ್‌ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
58 minutes ago
Government Employees 1
Bengaluru City

ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ

Public TV
By Public TV
1 hour ago
Priyank Kharge V Sunil Kumar
Bengaluru City

ರಾಜ್ಯ ಸರ್ಕಾರದ ಯೋಜನೆಗೆ ಪಂಚಾಯತ್‌ಗಳು ವಿರೋಧಿಸಿ ಜಾಹೀರಾತು ನೀಡಿದ್ರೆ ಒಪ್ಪುತ್ತೀರಾ? – ಸದನದಲ್ಲಿ ಕೋಲಾಹಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?