Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತದ ಸುತ್ತ ಅನುಮಾನ: ಅಶೋಕ್ ಮಗ ಕೃತ್ಯ ಎಸಗಿ ಪರಾರಿ?ಪೊಲೀಸರಿಂದಲೇ ಬಚಾವ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತದ ಸುತ್ತ ಅನುಮಾನ: ಅಶೋಕ್ ಮಗ ಕೃತ್ಯ ಎಸಗಿ ಪರಾರಿ?ಪೊಲೀಸರಿಂದಲೇ ಬಚಾವ್?

Bengaluru City

ಅಪಘಾತದ ಸುತ್ತ ಅನುಮಾನ: ಅಶೋಕ್ ಮಗ ಕೃತ್ಯ ಎಸಗಿ ಪರಾರಿ?ಪೊಲೀಸರಿಂದಲೇ ಬಚಾವ್?

Public TV
Last updated: February 13, 2020 12:42 pm
Public TV
Share
3 Min Read
ashok son sharth accident copy
SHARE

– ಹೊಸಪೇಟೆ ಬಳಿ ಕಾರು ಅಪಘಾತಕ್ಕೆ ಇಬ್ಬರು ಬಲಿ
– ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿರುವ ಕಾರು

ಬೆಂಗಳೂರು: ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಈ ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದೆ.

ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ರಸ್ತೆ ಬದಿ ನಿಂತಿದ್ದ ಪಾದಾಚಾರಿ, ರಸ್ತೆಯಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣದ ಸಂಬಂಧ ಸಾಕ್ಷ್ಯಗಳು ಸಿಕ್ಕಿದ್ದರೂ ಪೊಲೀಸರು ಅಶೋಕ್ ಪುತ್ರನನ್ನು ರಕ್ಷಿಸಲು ಮುಂದಾಗುತ್ತಿದ್ದಾರಾ ಎನ್ನುವ ಅನುಮಾನ ಎದ್ದಿದೆ.

ashok son sharth accident 2

ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿಯ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದೆ. ನಂತರ ಕಾರು ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಬೆಂಜ್ ಕಾರು ತಳ್ಳಿಕೊಂಡು ಹೋಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ.

ಕಾರು ಯಾರದ್ದು?
ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಉತ್ತರಹಳ್ಳಿ ಬ್ರಾಂಚ್‍ನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಇದೆ. ಆರ್‌ಟಿಓ ದಾಖಲೆಗಳಲ್ಲೂ ಇದೇ ಉಲ್ಲೇಖವಿದೆ.

ashok son sharth accident 2 car

ಆರೋಪಿ ಯಾರು?
ಬೆಂಗಳೂರಿನ ಶಾರದಾಂಬ ನಗರ, ಜಾಲಹಳ್ಳಿಯ ರಾಹುಲ್ (29) ಎ1 ಆರೋಪಿಯಾಗಿದ್ದಾನೆ. ಪೊಲೀಸರು ಈತ ಚಾಲನೆ ಮಾಡುತ್ತಿದ್ದಾಗ ಅಪಘಾತ ನಡೆದಿದೆ ಎಂದು ಪ್ರಕರಣ ದಾಖಲಿಸಿದ್ದಾರೆ. ಮಧ್ಯಮವರ್ಗದ ಕುಟುಂಬಸ್ಥ ರಾಹುಲ್ ತಂದೆ ಸಚಿವರ ಮಗನ ವ್ಯವಹಾರವನ್ನು ನೋಡಿಕೊಳ್ಳುತ್ತಾರೆ. ಈಗ ಅಶೋಕ್ ಮಗನನ್ನು ಪಾರು ಮಾಡಲು ತಮ್ಮ ಮಗನನ್ನೇ ಪ್ರಕರಣದಲ್ಲಿ ಸಿಲುಕಿಸಿದ್ರಾ? ಈ ಮೂಲಕ ಸಚಿವರ ಮಗನ ಋಣ ತೀರಿಸಿದ್ರಾ ಎನ್ನುವ ಪ್ರಶ್ನೆ ಎದ್ದಿದೆ.

ashok son sharth accident 2 car 222

4 ದಿನಗಳ ಪ್ರವಾಸ:
5 ಮಂದಿ ಯುವಕರು ಗೋವಾ, ಉತ್ತರ ಕರ್ಣಾಟಕ ಪ್ರವಾಸ ಕೈಗೊಂಡಿದ್ದರು. ಗುರುವಾರ ರಾತ್ರಿ ಬೆಂಗಳೂರಿನಿಂದ ಗೋವಾಕ್ಕೆ ತೆರಳಿ ಎರಡು ದಿನ ವಾಸ್ತವ್ಯ ಹೂಡಿದ್ದರು. ಶನಿವಾರ ರಾತ್ರಿ ಹಂಪಿ ಪಕ್ಕದಲ್ಲಿ ಇರುವ ಕಿಸ್ಕಿಂದಾದಲ್ಲಿ ವಾಸ್ತವ್ಯ ಹೂಡಿದ್ದರು. ಸೋಮವಾರ ಮಧ್ಯಾಹ್ನ ಎರಡು ಗಂಟೆಗೆ ಹೋಟೆಲ್ ಹೊರಟ ಯುವಕರು ಹೊಸಪೇಟೆ ಬೈಪಾಸ್‍ನಿಂದ ಮರಯಮ್ಮನಹಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರು. ಮಧ್ಯಾಹ್ನ 2:10 ನಿಮಿಷಕ್ಕೆ ಹೋಟೆಲಿನಿಂದ ಚೆಕೌಟ್ ಆದ ಕಾರು ಮಧ್ಯಾಹ್ನ 2:30 ನಿಮಿಷಕ್ಕೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು.

ashok son sharth accident 3

ಇದೇ ಸಮಯದಲ್ಲಿ ಬೈಕ್ ಪಂಚರ್ ಆದ ಹಿನ್ನೆಲೆ ರವಿನಾಯಕ್ ಮತ್ತು ಸಹೋದರ ಪಂಚರ್ ಹಾಕಿಸಲು ಬೈಕ್ ಪಂಚರ್ ಶಾಪ್‍ನಲ್ಲಿ ಬಿಟ್ಟಿದ್ದರು. ಅಲ್ಲಿಂದ ಅಣತಿ ದೂರ ದಲ್ಲಿರುವ ಟೀ ಕುಡಿಯುತ್ತಿದ್ದಾಗ ಅಪಘಾತ ಸಂಭವಿಸಿತ್ತು.

‘ಪಬ್ಲಿಕ್’ ಪ್ರಶ್ನೆಗಳೇನು?
– ಉತ್ತರಹಳ್ಳಿಯ ನ್ಯಾಷನಲ್ ಪಬ್ಲಿಕ್ ಸ್ಕೂಲಿಗೆ ಸೇರಿದ್ದ ಕಾರು ಆರೋಪಿ ರಾಹುಲ್ ಕೈಗೆ ಸೇರಿದ್ದೇಗೆ?
– ಆರೋಪಿ ರಾಹುಲ್‍ಗೂ ಉತ್ತರಹಳ್ಳಿಯ ಸ್ಕೂಲ್ ಕಾರಿಗೂ ಸಂಬಂಧವೇನು?
– ಉತ್ತರಹಳ್ಳಿಯ ಆ ಸ್ಕೂಲ್ ಜೊತೆಗೆ ಸಚಿವರಿಗೆ ಪಾಲುದಾರಿಕೆ ಇದ್ಯಾ?
– ಮಧ್ಯಮ ವರ್ಗದ ರಾಹುಲ್‍ಗೆ ಒಂದೂವರೆ ಕೋಟಿ ಬೆಂಜ್ ಕಾರು ಇಟ್ಟುಕೊಳ್ಳುವಷ್ಟು ಶ್ರೀಮಂತನಾ?
– ಕಾರಿನಲ್ಲಿದ್ದವರೆಲ್ಲರೂ ಬೆಂಗಳೂರಿನ ಜಾಲಹಳ್ಳಿ ಮೂಲದವರು…ಜಾಲಹಳ್ಳಿಗೂ ಸಚಿವರಿಗೂ ಒಡನಾಟ ಇದ್ಯಾ?
– ಪ್ರಭಾವಿ ಸಚಿವರ ಮಗನನ್ನು ಪಾರು ಮಾಡೋಕೆ ಮುಂದಾದ್ರ ಪೊಲೀಸರು?
– ಬೆಂಗಳೂರಿನ ಸಚಿವರ ಮಗನ ಬದಲು ಇನ್ಯಾರನ್ನೋ ಕೇಸಲ್ಲಿ ಸಿಲುಕಿಸಿದ್ರಾ?
– ಸುಳ್ಳು ದಾಖಲೆಗಳನ್ನು ಪೊಲೀಸರೇ ಸೃಷ್ಠಿ ಮಾಡಿದ್ರಾ?
– ಕಾರು ಓಡಿಸುತ್ತಿದ್ದ ಆರೋಪಿ ರಾಹುಲ್‍ಗೆ ಈ ಕಾರು ಕೊಟ್ಟವರ್ಯಾರು?
– ನಿಜಕ್ಕೂ ಆರೋಪಿ ರಾಹುಲ್ ಕಾರು ಡ್ರೈವಿಂಗ್ ಮಾಡುತ್ತಿದ್ನಾ?

BJP Minister's Son
🔸Kills two people in a hit & run case
🔸Cops don't mention him in FIR
🔸BJP is quiet. Media not even mentioning the incident

Bidar's School Child
🔸Kids interrogated 5 times for a play
🔸Mother arrested with sedition charge
🔸No bail for 14 days now

Justice? pic.twitter.com/y3o5E1XTxL

— Srivatsa (@srivatsayb) February 13, 2020

 

 

TAGGED:accidentbellarybengalurupolicer ashokಅಪಘಾತಆರ್ ಅಶೋಕ್ಪೊಲೀಸ್ಬಳ್ಳಾರಿಬೆಂಗಳೂರುಶರತ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
1 minute ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?