Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪಘಾತವಾದ ಕಾರಿಗೆ ನಮ್ಗೂ ಸಂಬಂಧವಿಲ್ಲ: ಅಡ್ಡಗೋಡೆಯ ಮೇಲೆ ದೀಪವಿಟ್ಟ ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಪಘಾತವಾದ ಕಾರಿಗೆ ನಮ್ಗೂ ಸಂಬಂಧವಿಲ್ಲ: ಅಡ್ಡಗೋಡೆಯ ಮೇಲೆ ದೀಪವಿಟ್ಟ ಅಶೋಕ್

Bengaluru City

ಅಪಘಾತವಾದ ಕಾರಿಗೆ ನಮ್ಗೂ ಸಂಬಂಧವಿಲ್ಲ: ಅಡ್ಡಗೋಡೆಯ ಮೇಲೆ ದೀಪವಿಟ್ಟ ಅಶೋಕ್

Public TV
Last updated: February 13, 2020 1:17 pm
Public TV
Share
2 Min Read
R Ashok Son Car Accident
SHARE

– ಮಗ ಎಲ್ಲಿದ್ದಾನೆ ಪ್ರಶ್ನೆಗೆ ಉತ್ತರವಿಲ್ಲ
– ಜಾಣ ಉತ್ತರ ನೀಡಿ ಜಾರಿಕೊಂಡ ಸಚಿವರು
– ಎಫ್‍ಐಆರ್ ನಲ್ಲಿ ಮಗನ ಹೆಸರಿಲ್ಲ

ಬೆಂಗಳೂರು: ಬಳ್ಳಾರಿಯ ಭಾಗದಲ್ಲಿ ಅಪಘಾತವಾದ ಕಾರು ಮತ್ತು ಅದು ನೋಂದಣಿ ಹೊಂದಿರುವ ಸಂಸ್ಥೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಳೆದ ಮೂರು ದಿನದ ಹಿಂದೆ ಹಂಪಿಯಿಂದ ಬರಬೇಕಾದ್ರೆ ಬಳ್ಳಾರಿ ಭಾಗದಲ್ಲಿ ಅಪಘಾತವಾಗಿದೆ. ಮಾಧ್ಯಮಗಳಲ್ಲಿ ನನ್ನ ಹೆಸರು ಬಂದಿದ್ದರಿಂದ ಪ್ರತಿಕ್ರಿಯೆ ನೀಡಲು ಬಂದಿದ್ದೇನೆ. ಅಪಘಾತದ ಬಳಿಕ ಸಾವನ್ನಪ್ಪಿದ ಯುವಕನ ಕುಟುಂಬಸ್ಥರೇ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣ ತನಿಖಾ ಹಂತದಲ್ಲಿ ಇರೋದರಿಂದ ಮಂತ್ರಿಯಾಗಿರುವದರಿಂದ ಹೆಚ್ಚು ಮಾತನಾಡಬಾರದು. ತನಿಖೆ ವೇಳೆ ಹೇಳಿಕೆ ನೀಡಿದ್ರೆ ಕಾನೂನಿನ ಪ್ರಕಾರ ಸರಿ ಅಲ್ಲ. ಕಾನೂನು ಮೀರಿ ಯಾರು ಇಲ್ಲ. ತನಿಖೆ ವೇಳೆ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ.

ashok son sharth accident 2

ಅಪಘಾತವಾದ ಕಾರಿಗೂ ಹಾಗೂ ಅದು ನೋಂದಣಿ ಹೊಂದಿರುವ ಸಂಸ್ಥೆಗೂ ನಮಗೆ ಸಂಬಂಧವಿಲ್ಲ. ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು ಮತ್ತು ಎಲ್ಲರೂ ಗಾಯಗೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಎಲ್ಲವೂ ಬಹಿರಂಗವಾಗಲಿದೆ. ಹಾಗಾಗಿ ಅಪಘಾತಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಮಾತನಾಡಲ್ಲ. ಮಾಧ್ಯಮಗಳಲ್ಲಿ ನನ್ನ ಮಗ ಸಹ ಕಾರಿನಲ್ಲಿದ್ದ ಎಂದು ಬಿತ್ತರವಾಗುತ್ತಿದೆ. ಆದ್ರೆ ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಲಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ವಿಷಾದವಿದೆ ಎಂದರು.

ashok son sharth accident 3

ದಾಖಲಾಗಿರುವ ಎಫ್‍ಐಆರ್ ನಲ್ಲಿ ನನ್ನ ಮಗನ ಹೆಸರಿಲ್ಲ. ಅಪಘಾತವಾದ ಕಾರಿನಲ್ಲಿ ನನ್ನ ಮಗನಿದ್ದ ಎಂಬುದರ ಬಗ್ಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದ್ರೆ ತಮ್ಮ ಮಗ ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರ ನೀಡಲು ಸಚಿವರು ಹಿಂದೇಟು ಹಾಕಿದರು. ಈ ವೇಳೆ ಮಗನಿಗೆ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರ ನೀಡದೇ ಈಗ ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಮಾಧ್ಯಮಗಳ ಎಲ್ಲ ಪ್ರಶ್ನೆಗಳಿಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಜಾಣ ಉತ್ತರ ನೀಡಿದರು.

R Ashok Son Car Accident Son 1

ಏನಿದು ಪ್ರಕರಣ?: ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಇಬ್ಬರ ಬಲಿಯನ್ನು ತೆಗೆದುಕೊಂಡಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿಯ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಅವರಿಗೆ ಗುದ್ದಿದೆ. ನಂತರ ಕಾರು ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಬೆಂಜ್ ಕಾರು ತಳ್ಳಿಕೊಂಡು ಹೋಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ.

R Ashok Son Car Accident Son 2

ಕಾರು ಯಾರದ್ದು?
ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಉತ್ತರಹಳ್ಳಿ ಬ್ರಾಂಚ್‍ನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿ ಇದೆ. ಆರ್ ಟಿಓ ದಾಖಲೆಗಳಲ್ಲೂ ಇದೇ ಉಲ್ಲೇಖವಿದೆ.

ಆರೋಪಿ ಯಾರು?
ಬೆಂಗಳೂರಿನ ಶಾರದಾಂಬ ನಗರ, ಜಾಲಹಳ್ಳಿಯ ರಾಹುಲ್ (29) ಎ1 ಆರೋಪಿಯಾಗಿದ್ದಾನೆ. ಪೊಲೀಸರು ಈತ ಚಾಲನೆ ಮಾಡುತ್ತಿದ್ದಾಗ ಅಪಘಾತ ನಡೆದಿದೆ ಎಂದು ಪ್ರಕರಣ ದಾಖಲಿಸಿದ್ದಾರೆ. ಮಧ್ಯಮವರ್ಗದ ಕುಟುಂಬಸ್ಥ ರಾಹುಲ್ ತಂದೆ ಸಚಿವರ ಮಗನ ವ್ಯವಹಾರವನ್ನು ನೋಡಿಕೊಳ್ಳುತ್ತಾರೆ. ಈಗ ಅಶೋಕ್ ಮಗನನ್ನು ಪಾರು ಮಾಡಲು ತಮ್ಮ ಮಗನನ್ನೇ ಪ್ರಕರಣದಲ್ಲಿ ಸಿಲುಕಿಸಿದ್ರಾ? ಈ ಮೂಲಕ ಸಚಿವರ ಮಗನ ಋಣ ತೀರಿಸಿದ್ರಾ ಎನ್ನುವ ಪ್ರಶ್ನೆ ಎದ್ದಿದೆ.

TAGGED:policePublic TVR Ashok Son SharathR Asholsonಅಪಘಾತಆರ್ ಅಶೋಕ್ಪೊಲೀಸ್ಬಳ್ಳಾರಿಬೆಂಗಳೂರುಶರತ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
31 minutes ago
ಸಾಂದರ್ಭಿಕ ಚಿತ್ರ
Bengaluru City

ನಮ್ಗೂ ಅವಕಾಶ ಕೊಡಿ – ಸಚಿವ ಸಂಪುಟ‌ ಪುನಾರಚನೆಗೆ 31 ಹೊಸ ಶಾಸಕರ ಪತ್ರ

Public TV
By Public TV
36 minutes ago
Eshwar Khandre
Bengaluru City

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಈಶ್ವರ್ ಖಂಡ್ರೆ ಸೂಚನೆ

Public TV
By Public TV
40 minutes ago
IDFC First bank
Latest

IDFC First Bank ಒಂದೇ ಬ್ರ್ಯಾಂಚ್‌ನಲ್ಲಿ 590 ಕೋಟಿ ವಂಚನೆ – ನಾಲ್ವರು ಅಮಾನತು

Public TV
By Public TV
59 minutes ago
V Somanna Gajendra Singh Shekhawat
Districts

ಮಧುಗಿರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಸೋಮಣ್ಣ ಮನವಿ

Public TV
By Public TV
1 hour ago
Bhopal Boy Stabbed
Crime

ಶಾಲಾ ವಿದ್ಯಾರ್ಥಿ ಮೇಲೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕುವಿನಿಂದ ಇರಿದ ಅಪ್ರಾಪ್ತರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?