ಪ್ರೀತಿಯಿಂದ ಬಂದ್ರೆ ರಾಮ, ತಿರುಗಿ ಬಿದ್ರೆ ರಾವಣ ಎಂದ ‘ರಾಬರ್ಟ್’

Public TV
2 Min Read
ROBERT DARSHAN 1

ಬೆಂಗಳೂರು: ತಾಳ್ಮೆ, ಪ್ರೀತಿಯಿಂದ ಬಂದರೆ ರಾಮ, ಅದೇ ತಿರುಗಿ ಬಿದ್ದರೆ ಲಂಕಾಧಿಪತಿ ದಶಕಂಠ ರಾವಣ ಎಂದು ರಾಬರ್ಟ್ ಅವತಾರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಘರ್ಜಿಸಿದ್ದಾರೆ.

ಇಂದು 43ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದಾಸನಿಗೆ ಅಭಿಮಾನಿಗಳು ರಾತ್ರಿಯೇ ಶುಭಕೋರಿ ಬರ್ತ್ ಡೇ ಆಚರಿಸಿ ಖುಷಿಪಟ್ಟಿದ್ದಾರೆ. ಇದೇ ಸಂಭ್ರಮದ ನಡುವೆ ರಾಬರ್ಟ್ ಚಿತ್ರ ತಂಡ ದರ್ಶನ್ ಹುಟ್ಟುಹಬ್ಬದ ದಿನವೇ ದಾಸನ ಬಹುನಿರೀಕ್ಷಿತ ಚಿತ್ರ ರಾಬರ್ಟ್ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಡಿ ಬಾಸ್ ಹಾಗೂ ಅವರ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದಾರೆ. ಇದನ್ನೂ ಓದಿ: 43ನೇ ವಸಂತಕ್ಕೆ ಕಾಲಿಟ್ಟ ದರ್ಶನ್ – ಕೇಕ್ ಕತ್ತರಿಸದೆ ಸರಳವಾಗಿ ಡಿ ಬಾಸ್ ಹುಟ್ಟುಹಬ್ಬ

ROBERT DARSHAN 2

ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಅಭಿಮಾನಿಗಳೊಂದಿಗೆ ತಮ್ಮ ಹುಟ್ಟು ಹಬ್ಬವನ್ನ ಡಿ ದಾಸ್ ಆಚರಿಸಿಕೊಂಡರು. ಅಲ್ಲದೇ ಇದೇ ವೇಳೆ ರಾಬರ್ಟ್ ಟೀಸರ್ ಕೂಡ ಅಭಿಮಾನಿಗಳ ಎದುರೇ ಲಾಂಚ್ ಮಾಡಲಾಯ್ತು. ಟೀಸರ್ ನಲ್ಲಿ ಖಡಕ್ ಲುಕ್ಕು, ಡೈಲಾಗ್ ಅಭಿಮಾನಿಗಳ ಕುತೂಹಲ ಕೆರಳಿಸಿದೆ. ಟೀಸರ್ ಬಿಡುಗಡೆಯಾದ 7 ಗಂಟೆಗಳಲ್ಲೇ ಭರ್ತಿ 4 ಲಕ್ಷಕ್ಕೂ ಅಧಿಕ ವ್ಯೂವ್ ಆಗಿದೆ.

ROBERT DARSHAN 3

ಇಷ್ಟು ದಿನ ಪೋಸ್ಟರ್ ಗಳ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದ ಚಿತ್ರತಂಡ, ಮೊದಲ ಬಾರಿಗೆ ಸಿನಿಮಾದ ದೃಶ್ಯವನ್ನು ಹಂಚಿಕೊಂಡಿದೆ. ಟೀಸರ್ ನಲ್ಲಿ ಎರಡ್ಮೂರು ಲುಕ್‍ಗಳು ಬಂದು ಹೋಗುತ್ತದೆ. ಅದರಲ್ಲೂ ಆ್ಯಕ್ಷನ್ ದೃಶ್ಯಗಳಂತೂ ಅಭಿಮಾನಿಗಳ ಗಮನ ಸೆಳೆದಿದೆ. ರಾಬರ್ಟ್ ಇಲ್ಲಿ ರಾಮನೂ ಆಗಿದ್ದಾರೆ, ರಾಮಣನೂ ಆಗಿದ್ದಾರೆ. ಟೀಸರ್ ಕ್ವಾಲಿಟಿ, ಮೇಕಿಂಗ್ ಸೂಪರ್ ಆಗಿದ್ದು, ‘ಹ್ಯಾಪಿ ಬರ್ತ್ ಡೇ ಬಾಸ್’ ಎಂದು ಚಿತ್ರತಂಡ ಶುಭಾಶಯ ತಿಳಿಸಿದೆ.

ROBERT DARSHAN

ಕೇವಲ 1.11 ನಿಮಿಷ ಇರುವ ಟೀಸರ್‍ನಲ್ಲಿ ದರ್ಶನ್ ಹೇಳೋದು ಒಂದೇ ಡೈಲಾಗ್. ಆದ್ರೆ ಆ ಖಡಕ್ ಡೈಲಾಗ್ ಟೀಸರ್ ನ ಹೈಲೈಟ್. ಹೌದು. ಅವನು ತಾಳ್ಮೆಯಲ್ಲಿ ಶ್ರೀರಾಮ, ಮಾತು ಕೊಟ್ಟ್ರೆ ದಶರಥ ರಾಮ, ಪ್ರೀತಿಯಿಂದ ಬಂದ್ರೆ ಜಾನಕಿ ರಾಮ ಎಂದು ರಾಬರ್ಟ್‍ನನ್ನು ವರ್ಣಿಸುವ ಡೈಲಾಗ್‍ನೊಂದಿಗೆ ಟೀಸರ್ ಆರಂಭವಾಗುತ್ತೆ. ಬಳಿಕ ದರ್ಶನ್ ಬೈಕ್ ಏರಿಬಂದು, ಫೈಟ್ ಮಾಡುವ ಆ್ಯಕ್ಷನ್ ದೃಶ್ಯದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಆದ್ರೆ ನಂತರ ಪ್ರೀತಿ ತೋರುವ ರಾಮ ತಿರುಗಿ ಬಿದ್ರೆ ರಾವಣ ಆಗ್ತಾನೆ ಎನ್ನೊಂದನ್ನ ಕೂಡ ಟೀಸರ್ ನಲ್ಲಿ ತಿಳಿಸಲಾಗಿದೆ. ಅದರಲ್ಲೂ ನಾನು ಲಂಕೇಶ್ವರ ದಶಕಂಠ ರಾವಣ ಎಂದು ದರ್ಶನ್ ಹೇಳುವ ಖಡಕ್ ಡೈಲಾಗ್ ಅಭಿಮಾನಿಗಳ ಮನಗೆದ್ದಿದೆ.

darshan 43rd birthday

ಸಂಜಯ್, ಅಕ್ಬರ್ ಹಾಗೂ ರಾಬರ್ಟ್ ಎಂದು ಮೂರು ಪಾತ್ರದಲ್ಲಿ ದರ್ಶನ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಶಾ ಭಟ್ ಸಿನಿಮಾದ ನಾಯಕಿಯಾಗಿದ್ದು, ಜಗಪತಿ ಬಾಬು ವಿಲನ್ ಆಗಿ ದರ್ಶನ್‍ಗೆ ಟಕ್ಕರ್ ಕೊಟ್ಟಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಸಿನಿಮಾದ ಆ್ಯಕ್ಷನ್ ಕಟ್ ಹೇಳಿದ್ದು, ಉಮಾಪತಿ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಸಂಗೀತ ಹಾಗೂ ಹಿನ್ನಲೆ ಸಂಗೀತ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *