ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ಹಾಡಿ ಹೊಗಳಿದ್ದಾರೆ.
ಪ್ರತಾಪ್ ಸಿಂಹ ತಮ್ಮ ಫೇಸ್ಬುಕ್ ಹಾಗೂ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯ ಅವರ ಕೆಲಸವನ್ನು ಹೊಗಳಿ ಪೋಸ್ಟ್ ಮಾಡಿದ್ದಾರೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ನಿರ್ಮಾಣ ಮಾಡಿರುವ ಬಗ್ಗೆ ಸಿದ್ದರಾಮಯ್ಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ, ಸಿದ್ದರಾಮಯ್ಯರನ್ನು ಸಾಹೇಬ್ರು ಎಂದು ಉಲ್ಲೇಖಿಸಿದ್ದಾರೆ.
ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು,ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ. 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ @siddaramaiah ಸಾಹೇಬ್ರಿಗೆ,ಉತ್ತಮ ಸೇವೆ ನೀಡುತ್ತಿರುವ ಡಾ. ಮಂಜುನಾಥ್ ಧನ್ಯವಾದಗಳು. pic.twitter.com/WsUuusDuBE
— Prathap Simha (@mepratap) February 17, 2020
ಟ್ವೀಟ್ನಲ್ಲಿ ಏನಿದೆ?
ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು, ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ. 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬ್ರಿಗೆ, ಉತ್ತಮ ಸೇವೆ ನೀಡುತ್ತಿರುವ ಡಾ. ಮಂಜುನಾಥ್ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಅವರ ಜೊತೆಗೆ ಜಯದೇವ ಆಸ್ಪತ್ರೆ ಇರುವ ಚಾಮರಾಜ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವಾಸು, ಜಯದೇವ ಆಸ್ಪತ್ರೆ ನಿರ್ದೇಶಕರಾದ ಡಾ.ಮಂಜುನಾಥ್, ಡಾ.ಸದಾನಂದಗೌಡರಿಗು ಧನ್ಯವಾದ ಅರ್ಪಿಸಿದ್ದಾರೆ.

